ಪುತ್ತೂರಿನಲ್ಲಿ ರಿಕ್ಷಾ-ಕಾರು ಢಿಕ್ಕಿ: ರಿಕ್ಷಾ ಚಾಲಕ ಸಹಿತ ಮೂವರಿಗೆ ಗಾಯ
ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ.ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಯಸ್. ಐ. ರಾಮ ನಾಯ್ಕ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.