ಬಂಟ್ವಾಳದ ಮಂಡಾಡಿಯಲ್ಲಿ ಭಗವಧ್ವಜ, ಹನುಮಾನ ಚಿತ್ರಕ್ಕೆ ಹಾನಿ : ಪ್ರಕರಣ ದಾಖಲು
ಬಂಟ್ವಾಳದ ಎಸ್ಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆಹಾಗೂ ಅದರಲ್ಲಿದ್ದ ಭಗವಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ
ಮಾಡಿದ ಘಟನೆ ನಡೆದಿದೆ.
ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು, ಕಳೆದ ಕೆಲವು ದಿನಗಳ ಹಿಂದೆ ವಿಶ್ವಹಿಂದೂಪರಿಷತ್ ಮಂಡಾಡಿ ಶಾಖೆಯು ನವೀಕರಣಗೊಳಿಸಿತ್ತು. ಇದನ್ನು ಸಹಿಸದ ದುಷ್ಕರ್ಮಿಗಳು ನಿನ್ನೆ ತಡರಾತ್ರಿ 2 ಗಂಟೆ ಸುಮಾರಿಗೆ ಒಡೆದು ಹಾಕಿ, ಭಗವಧ್ವಜವನ್ನು ಕಿತ್ತೊಯ್ದಿದ್ದಾರೆ. ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ರಿಟ್ಸ್ ಕಾರು ಸಂಚರಿಸಿದ್ದು, ಸಿಸಿಟಿವಿಯಲ್ಲಿ ದಾಖಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಗೆ ಬಂಟ್ವಾಳ ವಿಹಿಂಪ ನ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ, ದೀಪಕ್ ಬಂಟ್ವಾಳ, ಸಂತೋಷ್ ಸರಪಾಡಿ, ಶಿವಪ್ರಸಾದ್ ತುಂಬೆ, ಅನಿಲ್ ಮಂಡಾಡಿ ದೂರು ನೀಡಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಸದ್ಯ ಪೊಲೀಸರು ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಮಾರ್ಗಸೂಚಿ ಕಟ್ಟೆಯು ಮೂಡಬಿದ್ರೆ, ಮಂಡಾಡಿ, ಬಿಸಿರೋಡ್ಗೆ ರಸ್ತೆ ಮಾರ್ಗವನ್ನು ಸೂಚಿಸುತಿತ್ತು.