ಮಂಗಳೂರು ಮಹಾನಗರಪಾಲಿಕೆ ತಿರುವೈಲ್ ವಾರ್ಡಿನ ಮಾಜಿ ಸದಸ್ಯರುವಾಮಂಜೂರಿನ ಸದಾಶಿವ ನಗರ ಬಡಾವಣೆಯ ನಿವಾಸಿ ಶ್ರೀಮತಿ ಮೀರಾ ಅಶೋಕ್ ರವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇದೆ ಮಾರ್ಚ್ ತಿಂಗಳ 19ನೇ ತಾರೀಖಿನಭಾನುವಾರದಂದು ನಗರದ ಕೆ .ಎಂ .ಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು .ಮಂಗಳೂರು ಮಹಾನಗರಪಾಲಿಕೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದು ಮಾತರವಲ್ಲದೆವಿವಿಧ
Month: March 2023
ಬಂಟ್ವಾಳ: ಕರ್ನಾಟಕವನ್ನು ಸಾಮಾಜಿಕ ಸಾಮರಸ್ಯದ, ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲು ಕಾಂಗ್ರೆಸ್ ಆಡಳಿತದ ಸರಕಾರವನ್ನು ಆಯ್ಕೆ ಮಾಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ನಡೆಯುತ್ತಿರುವ ಕರಾವಳಿ ಪ್ರಜಾಧ್ವನಿ ಯಾತ್ರೆ ಪ್ರಯುಕ್ತ ಬಂಟ್ವಾಳ
ಭಾರ್ಗವಿ ಬಿಲ್ಡರ್ಸ್ ಅವರಿಂದ ಕೊಟ್ಟಾರದ ಮಾಲೆಮಾರ್ ಬಳಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ‘ಕೈಲಾಶ್’ ವಸತಿ ಸಮುಚ್ಚಯದಲ್ಲಿ ಗುಣನಾಥ-ಶಿಲ್ಪಾ ದಂಪತಿಯ ಮೋಕ್ಅಪ್ ಫ್ಲ್ಯಾಟ್ ಉದ್ಘಾಟನೆಯ ಬಳಿಕ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಸಮುಚ್ಚಯದಲ್ಲಿ ಶೇ.75ರಷ್ಟು ಫ್ಲ್ಯಾಟ್ಗಳು ಬುಕ್ಕಿಂಗ್ ಆಗಿವೆ. ಬುಕ್ಕಿಂಗ್ ಮಾಡಿದವರುತಮ್ಮ ಸ್ನೇಹಿತರು,
ಪುತ್ತೂರು: ಪುತ್ತೂರು ನಗರದ ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದರು. ರೈಲ್ವೇ ಮೇಲ್ಸೇತುವೆಯ ಬಳಿ ತೆಂಗಿನ ಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು ಅವರು
ಪುತ್ತೂರು: ಜಿಲ್ಲೆಯ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಪುತ್ತೂರಿನ ಬಸ್ಸು ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸ ಮಾಡಲಾಗಿದೆ. ಸರ್ಕಾರವು ಅವಳಿ ವೀರರ ನಾಮಕರಣ ಮಾಡಿ ಅವರಿಗೆ ಮಾನ್ಯತೆಯನ್ನು ನೀಡುವ ಕಾರ್ಯ ಮಾಡಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಭಾನುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ
ಕೆ ಕಮಲಾಕ್ಷ ಪೈ (91 ವ) ನಗರದ ಮಣ್ಣಗುಡ್ಡೆಯಲ್ಲಿರುವ ತಮ್ಮ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಶನಿವಾರ (ಮಾ 25)ನಿಧನ ಹೊಂದಿದರು. ಎಳವೆಯಿಂದಲೇ ವ್ಯವಹಾರಿಕವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಏಳುವರೆ ದಶಕಗಳ ಕಾಲ ತಮ್ಮ ವ್ಯವಹಾರ ಸಂಸ್ಥೆಯನ್ನು ಮುನ್ನಡೆಸಿಕೊಂಡು ಬಂದಿದ್ದರು. ಅವರು ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ 12ನೇ ವಾರ್ಡಿನ ಹಳೆ ಪೊಲೀಸ್ ಠಾಣೆಯ ಬಳಿ ರೂ 9.50 ಲಕ್ಷ ಪುರಸಭಾ ನಿಧಿಯಿಂದ ಮಾಡಿರುವ ಅಭಿವೃದ್ಧಿ ಕಾಮಗಾರಿಗಳಾದ ರಸ್ತೆ ಅಗಲೀಕರಣ ಮತ್ತು ಇಂಟರ್ ಲಾಕ್ ಅಳವಡಿಕೆ, ಚರಂಡಿ ಹಾಗೂ ಹೈ ಮಾಸ್ಟ್ ದೀಪವನ್ನು ಶನಿವಾರ ಸಂಜೆ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಪುರಸಭಾ
ಮೂಡುಬಿದಿರೆ: 2022-23 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ಬಂಧಿತ ಅನುದಾನದಡಿ 14,ಮಂದಿ ಫಲಾನುಭವಿಗಳಿಗೆ ದ್ವಿಚಕ್ರ ವಾಹನ, ವೀಲ್ ಚೆರ್ ಹಾಗೂ ಶ್ರವಣ ಸಾಧನಗಳನ್ನು ಮಾನ್ಯ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಶನಿವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿತರಿಸಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ ಈ ಸಂದರ್ಭದಲ್ಲಿದ್ದರು.
ಮೂಳೂರು ವೆಸ್ಟ್ ಕೋಸ್ಟ್ ನರ್ಸರಿ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಧಾರುಣವಾಗಿ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ಸಂಜೆಯ ವೇಳೆ ನಡೆದಿದೆ. ಪಲ್ಸರ್ ಬೈಕ್ ಮತ್ತು ಟ್ಯಾಂಕರ್ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆ
ಸುಳ್ಯ: ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸುಳ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯದ ಪೇಟೆ ಸಮೀಪದ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ಘಟನೆ ನಡೆದಿದೆ. ಖಾಸಗಿ ವ್ಯಕ್ತಿಯೋರ್ವರು ತಮ್ಮ ಮನೆ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಪಿಲ್ಲರ್ ಕಾಮಗಾರಿ




























