ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಬಾಕಿಮಾರು ಅಂಗನವಾಡಿ ಕಟ್ಟದ ಶಿಲಾನ್ಯಾಸ ಕಾರ್ಯಕ್ರಮವು ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಭಾಕರ ಐಗಳ್ ರವರ ಉಪಸ್ಥಿತಿಯಲ್ಲಿ ಇತ್ತೀಚಿಗೆ ಜರಗಿತು. ಶಿಲಾನ್ಯಾಸವನ್ನು ನಿವೃತ್ತ ಶಿಕ್ಷಕರಾದ ದಾಮೋದರ್ ರಾವ್ ಸಂಗಬೆಟ್ಟು ನೆರೆವೇರಿಸಿದರು.ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್
Month: January 2024
ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು,ಜನಪರ ಪರ್ಯಾಯ ನೀತಿಗಳನ್ನು ಜಾರಿಗೊಳಿಸಬೇಕು ಹಾಗೂ ದುಡಿಯುವ ವರ್ಗದ ಹಕ್ಕನ್ನು ಸಂರಕ್ಷಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ದೇಶಾದ್ಯಂತ ವ್ಯಾಪಕ ಪ್ರಚಾರಾಂದೋಲನ ನಡೆಸಬೇಕೆಂಬ CITU ಅಖಿಲ ಭಾರತ ಸಮಿತಿಯ ಕರೆಯ
ಉಳ್ಳಾಲ: ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ ರೂ. 2 ಲಕ್ಷ ರೂ ನೀಡುವಂತೆ ಆದೇಶ ನೀಡಿದೆ.2019ರ ಜೂ.28 ರಂದು ದೇರಳಕಟ್ಟೆಯ ಬಗಂಬಿಲ ರಸ್ತೆಯಲ್ಲಿನ ಶಾಂತಿಧಾಮ ಬಳಿ ಆರೋಪಿ ಸುಶಾಂತ್ ಯಾನೆ ಶಾನ್ (31) ಕಾಲೇಜಿನಿಂದ ಬರುತ್ತಿದ್ದ
ಮೂಡುಬಿದಿರೆ: ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಉಷಾ ಎಸ್. ಆರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಸ್ನಾಚ್ ವಿಭಾಗದಲ್ಲಿ 91 ಕೆ.ಜಿ, ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ118 ಕೆ.ಜಿ ಒಟ್ಟು 209 ಕೆಜಿ ಭಾರ
ಮೂಡುಬಿದಿರೆ: ಮೂರು ವರ್ಷಗಳ ಹಿಂದೆ ಕಡಂದಲೆ ಗ್ರಾಮೀಣ ಅಂಚೆ ಕಚೇರಿಯಲ್ಲಿ ಗ್ರಾಹಕರ ಸುಮಾರು ರೂ 13.50 ಲಕ್ಷ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಅಂಚೆ ಪಾಲಕ ಅಶೋಕ್ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ.2010ರಿಂದ 2021ರ ಅವಧಿಯಲ್ಲಿ ಅಶೋಕ್ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಸುಮಾರು 22 ಅಂಚೆ ಗ್ರಾಹಕರ ಉಳಿತಾಯ ಖಾತೆ
ಬಂಟ್ವಾಳ: ಬಂಟರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ಕಲ್ಲಡ್ಕ ವಲಯವು ಸತತ ಮೂರು ವರ್ಷಗಳಿಂದಲೂ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವುದು ಹೆಮ್ಮೆಯ ವಿಷಯವಾಗಿದೆ.ಸಮಗ್ರ ಪ್ರಶಸ್ತಿಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಕೆ.ಪದ್ಮನಾಭ ರೈ, ಕಾರ್ಯದರ್ಶಿ ಗಣೇಶ್
ಬೆಳ್ತಂಗಡಿ: ತಾಲೂಕಿನ ಬಜಿರೆ ಗ್ರಾಮದ ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 265ನೇ ಕಾರ್ಯಕ್ರಮವಾಗಿ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗಾಗಿ ಸಸ್ಯರಾಶಿಗಳ ಮಹತ್ವ ಎಂಬ ಘೋಷಣೆಯಡಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಮಕ್ಕಳೊಂದಿಗೆ ಸಂವಾದ
ಮಂಗಳೂರು : ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಟ್ರೋಫಿ-2024 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಹರಾಜು ಪ್ರಕ್ರಿಯೆ ಕೃಷ್ಣಾಪುರದ ಎಮ್ಜೆಎಮ್ ಹಾಲ್ನಲ್ಲಿ ನಡೆಯಿತು. ಜನವರಿ 12 ರಿಂದ 21ರ ವರೆಗೆ 32ತಂಡಗಳ ಮದ್ಯೆ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟವು ಕೃಷ್ಣಾಪುರದ ಪ್ಯಾರಡೈಸ್ ಮೈದಾನದಲ್ಲಿ ನಡೆಯಲಿದ್ದು, ಅದರ ಬಿಡ್ಡಿಂಗ್ ಪ್ರಕ್ರಿಯೆಯು ಗಣ್ಯರ
ಮಹಾರಾಷ್ಟ್ರ ವಿಧಾನ ಸಭೆಯ ಸಭಾಪತಿ ರಾಹುಲ್ ನಾರ್ವೇಕರ್ ಅವರು ಮುಖ್ಯಮಂತ್ರಿ ಏಕನಾಥ ಶಿಂಧೆಯವರ ಬಣವೇ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದರು. ಇದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಮಾಜೀ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಹೇಳಿದರು. ಬಿಜೆಪಿ ಪರ ಶಿವಸೇನೆಯನ್ನು ಒಡೆದು ಏಕನಾಥ ಶಿಂಧೆ ಮುಖ್ಯಮಂತ್ರಿ ಆದವರು. ಆಗ ಮಹಾ ಅಘಾಡಿ ಮೈತ್ರಿ
ದೆಹಲಿಯಲ್ಲಿ ನಡೆದ 67ನೇ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2023-24ರ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ನ ಚಿಂತನ್ ಎಸ್. ಶೆಟ್ಟಿ ಅವರು, 1 ಚಿನ್ನ ಹಾಗೂ 4 ಬೆಳ್ಳಿ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜನವರಿ 3ರಿಂದ 9ರ ವರೆಗೆ ದೆಹಲಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಈಜು




























