ಉಡುಪಿ : ತಂತಿಬೇಲಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
![](http://v4news.com/wp-content/uploads/2024/06/WhatsApp-Image-2024-06-23-at-08.48.37-960x620.jpeg)
ಉಡುಪಿ : ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ನಡೆದಿದೆ.
![](https://v4news.com/wp-content/uploads/2024/06/WhatsApp-Image-2024-06-23-at-08.48.36-2-768x1024.jpeg)
ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಯಲ್ಲಿ ಸುಮಾರು 4-5 ವರ್ಷ ಪ್ರಾಯದ ಗಂಡು ಚಿರತೆಯೊಂದು ಸಿಲುಕಿಕೊಂಡಿತ್ತು. ತಂತಿಯು ಚಿರತೆಯ ಸೊಂಟದ ಭಾಗಕ್ಕೆ ಉರುಳು ಬಿದ್ದಿದ್ದ ಕಾರಣ ಚಿರತೆ ನರಳಾಡುತ್ತಿತ್ತು. ಚಿರತೆಯನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು.
![](https://v4news.com/wp-content/uploads/2024/06/WhatsApp-Image-2024-06-23-at-08.48.36-1-768x1024.jpeg)
ಬೋನಿನೊಂದಿಗೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಮಂಗಳೂರಿನ ಅರವಳಿಕೆ ತಜ್ಞರಿಗೆ ಮಾಹಿತಿ ನೀಡಿದರು. ಅರವಳಿಕೆ ತಜ್ಞರಾದ ಯಶಸ್ವಿ ನಾರಾವಿ ಹಾಗೂ ಅಕ್ಷಯ್ ಶೇಟ್ ಆಗಮಿಸಿ ಉರುಳಿನಲ್ಲಿ ಸಿಲುಕಿದ ಚಿರತೆಗೆ ಶೂಟ್ ಮಾಡಿ ಅರವಳಿಕೆ ಔಷಧ ನೀಡಿದರು.
![](https://v4news.com/wp-content/uploads/2024/06/WhatsApp-Image-2024-06-23-at-08.48.36-768x1024.jpeg)
ಇದರಿಂದ ಪ್ರಜ್ಞೆ ತಪ್ಪಿದ ಚಿರತೆಯನ್ನು ಬೋನಿನೊಳಗೆ ಹಾಕಿ, ನಿಗಾದಲ್ಲಿ ಇರಿಸಲಾಯಿತು. ಬಳಿಕ ಚಿಕಿತ್ಸೆ ನೀಡಿ ಅದನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.
ಈ ಕಾರ್ಯಾಚರಣೆಯಲ್ಲಿ ಹೆಬ್ರಿ ವಲಯ ಅರಣ್ಯಾಧಿಕಾರಿ ಸಿದ್ಧೇಶ್ವರ ಕುಂಬಾರ, ಉಪವಲಯ ಅರಣ್ಯಾಧಿಕಾರಿಗಳಾದ ಪ್ರಮೋದ್, ನವೀನ್ ಡಿ.ಎನ್., ಗಸ್ತು ಅರಣ್ಯ ಪಾಲಕರಾದ ಅರುಣ್, ಶ್ರೀಕಾಂತ್, ಪ್ರವೀಣ್, ಅರಣ್ಯ ವೀಕ್ಷಕರಾದ ಸಂಕ, ಸುಧರ್ಶನ್, ಪೊಲೀಸ್ ಹಿರಿಯಡ್ಕ ಎಸ್ಸೈ ಮಂಜುನಾಥ್ ಪಾಲ್ಗೊಂಡಿದ್ದರು.
![add - tandoor .](http://v4news.com/wp-content/uploads/2024/06/tandoor.jpeg)