ನಟ ಶಿವರಾಜ್ ಕುಮಾರ್ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕನ್ನಡ ಚಿತ್ರ ನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಹಿತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾಜ್ ಕುಮಾರ್ ಕುಟುಂಬ ಅಗಮಿಸಿದ್ದು ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ ರಾಜ್ ಕುಮಾರ್, ನಿವೇದಿತ ರಾಜ್ ಕುಮಾರ್ ಜೊತೆಗಿದ್ದರು.ಧರ್ಮಸ್ಥಳದ ಪಾರ್ಶ್ವನಾಥ್ , ಲಕ್ಷ್ಮೀ ನಾರಾಯಣ್ ದೇವರ ದರ್ಶನಕ್ಕೆ ಸಹಕರಿಸಿದರು.