ಶ್ರಮದಾನದ ಮೂಲಕ ರಸ್ತೆಗೆ ಚೆಲ್ಲಿದ್ದ ಮರಳು : ಅಲೋಶಿಯಸ್ ಐಟಿಐ ಕಾಲೇಜಿನ ವಿದ್ಯಾರ್ಥಿಗಳಿಂದತೆರವು ಕಾರ್ಯ

ನಗರದ ಅಲೋಶಿಯಸ್ ಐಟಿಐ ಕಾಲೇಜಿನ ರಸ್ತೆಯಲ್ಲಿ ಮರಳು ಸಾಗಾಟ ಲಾರಿಯಿಂದ ಮರಳು ರಸ್ತೆಗೆ ಚೆಲ್ಲಿದ್ದು ಇದರಿಂದ ದ್ವಿಚಕ್ರ ವಾಹನದಲ್ಲಿ ಚಲಿಸುವ ಸವಾರರು ಅಪಘಾತಕ್ಕೊಳಗಾಗುತ್ತಿದ್ದರು.

ಇದನ್ನು ಗಮನಿಸಿದ ಅಲೋಶಿಯಸ್ ಕಾಲೇಜಿನ ಐಟಿಐ ವಿದ್ಯಾರ್ಥಿಗಳು ರಸ್ತೆಗೆ ಚೆಲ್ಲಿದ್ದ ಮರಳನ್ನು ತೆರವು ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವಿದ್ಯಾರ್ಥಿಗಳ ಸೇವಾ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
