ಬೇಲೂರು ತಾಲೂಕಿನ ಮಲೆನಾಡು ಪ್ರದೇಶವಾದ ಅರೆಹಳ್ಳಿ ಮತ್ತು ಬಿಕ್ಕೋಡು ಹೋಬಳಿಯ ಸುತ್ತಮುತ್ತಲ ಹಳ್ಳಿಗಳಲ್ಲಿ ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸುಂಡೆಕೆರೆ ಹಾಗೂ ನಾರ್ವೆ ಪೇಟೆ ಸಂಪರ್ಕಿಸುವ ಸೇತುವೆ ಮುಳುಗಡೆ ಯಾಗಿದೆ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಹಾಗೂ
ಬಂಟ್ವಾಳ ತಾಲೂಕಿನ ವಿಟ್ಲದ ಕೊಳ್ನಾಡು ಗ್ರಾಮದ ಮದಕ, ಪಡಾರು, ಮಾದಕಟ್ಟೆ, ಬಾರೆಬೆಟ್ಟು, ಮುಂಡತ್ತಜೆ ಮತ್ತು ತಾಳಿತ್ತನೂಜಿ ಸುತ್ತಮುತ್ತ ಕಳೆದ ಎರಡು ತಿಂಗಳಿಂದ ಮಿತಿಮೀರಿದ ಚಿರತೆಗಳ ಕಾಟದಿಂದ ಬೇಸತ್ತ ಸಾರ್ವಜನಿಕರು ಬೋನು ಅಳವಡಿಸಿದ್ದಾರೆ. ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಒಂದು ಬಾರಿ ಮಾತ್ರ ಸ್ಥಳಕ್ಕಾಗಮಿಸಿ ಹರಕೆ ತೀರಿಸಿದ್ದಾರೆ. ಬೋನು ತಂದಿಟ್ಟು ಚಿರತೆ ಹಿಡಿಯುವಂತೆ ಸ್ಥಳೀಯರು ಅಂಗಲಾಚಿದ್ದರೂ ತಂದಿರಿಸುತ್ತೇವೆಂದು ತಿಳಿಸಿದ್ದರು. ಅದಾದ ಬಳಿಕ
ಮಂಗಳೂರು: ಕಾಂಗ್ರೆಸ್ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ವಿಶ್ವಪ್ರೀಯ ತಿರ್ಥ ಸ್ವಾಮೀಜಿ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ರು. ಇದೇ ವೇಳೆ ಆಸ್ಕರ್ ಕುಟುಂಬಿಕರಿಗೆ ಧೈರ್ಯ ತುಂಬಿದರು. ಅದಮಾರು ಮಠ, ಗುರುಗಳು ಅಂದರೆ ಅಸ್ಕರ್ ಅವರಿಗೆ ಬಹಳ ಗೌರವ, ಇವರ ತಂದೆಯವರು ನಮ್ಮ ಗುರುಗಳಿಗೆ ಹೆಡ್ ಮಾಸ್ಟರ್ ಅಗಿದ್ದವರು. ಆಸ್ಕರ್ ಅವರು ಮಾಡಿದ ಸಮಾಜ ಸೇವೆ ಅನನ್ಯ.
ಕಡಬ: ಆರ್ಥಿಕವಾಗಿ ಶಕ್ತರಾಗಿರುವವರು ಸಮಾಜಕ್ಕೆ ಸಹಾಯವಾಗುವ ರೀತಿಯಲ್ಲಿ ಕೊಡುಗೆ ನೀಡಿ ಸಮಾಜದ ಋಣ ತೀರಿಸಬೇಕು ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಕಾರ್ಡಿಯಾಲಾಜಿ ಎಟ್ ಡೋರ್ ಸ್ಟೆಪ್ಸ್ ಫೌಂಡೇಷನ್ ಟ್ರಸ್ಟ್ , ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಭಾರತೀಯ ಜನೌಷಧಿ ಕೇಂದ್ರ ಇದರ ಸಹಯೋಗದಲ್ಲಿ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯ ಕಾರ್ಡಿಯಾಲಾಜಿ
ಕುಂದಾಪುರ: ಉತ್ತರಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಮುರ್ಡೇಶ್ವರದ 21 ವರ್ಷದ ಯುವತಿ ಯಮುನಾ ನಾಯ್ಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಧಾರವಾಡದ ಉಚ್ಚ ನ್ಯಾಯಾಲಯದ ಪೀಠ ಮಹತ್ವದ ತೀರ್ಪು ನೀಡಿದೆ. ಅತ್ಯಾಚಾರ, ಕೊಲೆ ಪ್ರಕರಣ ನಡೆದು ಸುಮಾರು 11 ವರ್ಷಗಳ ಬಳಿಕ ಮರು ತನಿಖೆ ನಡೆಸುವಂತೆ ನ್ಯಾಯಾಲಯ ತೀರ್ಪು ನೀಡಿದ್ದು ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವೆಂಕಟೇಶ್ ಹರಿಕಾಂತ್ ಎನ್ನುವ ವ್ಯಕ್ತಿ
ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಮಂಗಳೂರು ಇದರ ಆಶ್ರಯದಲ್ಲಿ ’ಬ್ಯಾರಿ ದಫ್, ಕೋಲ್ಕಲಿ, ಒಪ್ಪನೆ ಪಾಟ್, ಕೈಕೊಟ್ಟ್ ಪಾಟ್ ಜಾನಪದ ಕಲೆಗಳ ಕೋರ್ಸ್ ತರಬೇತಿಯ ಪ್ರಮಾಣ ಪತ್ರ ವಿತರಣಾ ಹಾಗೂ ಪ್ರತಿಭಾ ಪ್ರದರ್ಶನ ಸಮಾರಂಭ ಕಾರ್ಯಕ್ರಮವು ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಮಾಫೇಯಿ ಸೆಂಟರ್ ಏರಿಕ್ ಮಥಾಯಸ್ ಸಭಾಂಗಣದಲ್ಲಿ ನಡೆಯಿತು. ದಫ್, ಕೋಲ್ಕಲಿ ಬಾರಿಸೋ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ದ.ಕ. ಜಿಲ್ಲೆಯಾದ್ಯಂತ ಹಾಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿರುವ ಪೊಲೀಸ್ ಶ್ವಾನ ’ಸುಧಾ’ ಕೊನೆಯುಸಿರೆಳೆದಿದೆ. ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಸುಧಾಗೆ ಭಾವಪೂರ್ಣ ಅಂತಿಮ ನಮನವನ್ನು ಸಲ್ಲಿಸಲಾಯಿತು. ಬಿಳಿ ವಸ್ತ್ರದಲ್ಲಿ ಶ್ವಾನ ಸುಧಾಳ ಮೃತದೇಹವನ್ನು ಸುತ್ತಿ, ಹೂವಿನಿಂದ ಅಲಂಕರಿಸಿ ಪೊಲೀಸ್ ವಾದ್ಯ, ತೋಪು ಹಾರಿಸುವಿಕೆ
ಸುರತ್ಕಲ್ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಬಗ್ಗೆ ಸಿಸಿಟಿ ಪೂಟೇಜ್ ಹಾಗೂ ಬೇರೆ ಆಯಾಮದಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭದಲ್ಲಿ ಒರ್ವ ವ್ಯಕ್ತಿಯ ಸುಳಿವು ಸಿಕ್ಕಿತ್ತು. ಆ
ಹಾಸನ: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಹಾಸನ ಸಕಲೇಶಪುರದಲ್ಲಿ ಅಪಾರ ಹಾನಿ ಸಂಭವಿಸಿದ್ದು, ಇಂದು ಕಂದಾಯ ಸಚಿವ ಆರ್ ಆಶೋಕ್ ಮತ್ತು ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಭೇಟಿ ನೀಡಿ ಅತಿವೃಷ್ಠಿ ಪ್ರದೇಶವನ್ನು ಪರಿಶೀಲಿಸಿದರು. ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್ 75 ರಲ್ಲಿ ಆಗಿರುವ ಭೂ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಆದಷ್ಟು ಶೀಘ್ರವಾಗಿ ರಸ್ತೆ ದುರಸ್ತಿ ಪಡಿಸುವಂತೆ ಸೂಚಿಸಿದರು. ಅತೀವೃಷ್ಠಿ
ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಆಸ್ಕರ್ ಅವರ ಆರೋಗ್ಯ ವಿಚಾರಿಸಿದ ಹೆಗ್ಗಡೆಯವರು ಮಂಜುನಾಥ ಸ್ವಾಮಿಯ ಪ್ರಸಾದ ಹಾಕಿದರು. ಆಸ್ಕರ್ ರನ್ನ ಕಂಡ ಬಳಿಕ ಕುಟುಂಬಿಕರ ಜೊತೆ ಮಾತನಾಡಿ ಧೈರ್ಯ ತುಂಬಿದರು. ಅಲ್ಲದೆ ಕೆಲ ಕಾಲ ಆಸ್ಪತ್ರೆಯ ವೈದ್ಯರ ಜೊತೆ ಮಾತುಕತೆ


















