Home Articles posted by v4news (Page 132)

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಲು ಆಗ್ರಹ : ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ

ಸರ್ಕಾರಿ ಹಾಸ್ಟೆಲ್‍ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು

ಬಸ್ ಚಲಾಯಿಸುವಾಗಲೇ ಕುಸಿದ ಚಾಲಕ : ತಪ್ಪಿದ ದುರಂತ

ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕನಿಗೆ ರಕ್ತ ಒತ್ತಡ ಕಡಿಮೆಯಾದ ಪರಿಣಾಮ ಸ್ಟೇರಿಂಗ್ ಮೇಲ್ಗಡೆಯೇ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್ ವೇ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಅಡ್ಯಾರ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಕಣ್ಣು ಮಂಜಾಗಿದ್ದು ತಕ್ಷಣ ಬಸ್

ದಲಿತ್ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸೇಸಪ್ಪ ಬೆದ್ರಕಾಡು ರಾಜೀನಾಮೆ

ಕಳೆದ 15 ವರ್ಷಗಳಿಂದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ಅಧ್ಯಕ್ಷನಾಗಿದ್ದು, ಇದೀಗ ನನ್ನ ಅವಧಿ ಆ.15 ಕ್ಕೆ ಪೂರ್ಣಗೊಳ್ಳಲಿದ್ದು, ದ.ಕ.ಜಿಲ್ಲಾ ಕಾರ್ಯದರ್ಶಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಳೆದ ೧೫ ವರ್ಷಗಳ ಕಾಲ ಅಧ್ಯಕ್ಷನಾಗಿ ಸಂಘವನ್ನು ಕಟ್ಟಿ, ಬೆಳೆಸಿ, ಸಂಘದ, ಸಮುದಾಯದವರಿಗೆ ಪ್ರತಿಯೊಂದು ವಿಚಾರದಲ್ಲೂ ನ್ಯಾಯ ಒದಗಿಸಿಕೊಟ್ಟು

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ: ಸಚಿವ ಸುರೇಶ್ ಕುಮಾರ್ ಮಾಹಿತಿ

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾರಂಭ ಮಾಡುವ ಹಿನ್ನೆಲೆಯಲ್ಲಿ ಸಾಧಕ ಬಾಧಕಗಳ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಅಧ್ಯಯನ ನಡೆಸುತ್ತಿದ್ದು,

ಹುತಾತ್ಮರ ದಿನಾಚರಣೆ ಆಚರಿಸಿ ವಾಪಸ್ಸಾಗುತ್ತಿದ್ದಾಗ ಅಪಘಾತ: ರೈತ ಮುಖಂಡರಿಬ್ಬರು ಮೃತ್ಯು

ಹುತಾತ್ಮ ದಿನಾಚರಣೆಯ ಅಂಗವಾಗಿ ಐತಿಹಾಸಿಕ ನರಗುಂದ ಬಂಡಾಯದ ಹೋರಾಟ ಮುಗಿಸಿ ವಾಪಸ್ ಹಾಸನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ ಮತ್ತು ಚನ್ನಪಟ್ಟಣ ರಾಮಣ್ಣನವರು ನಿಧನರಾಗಿದ್ದಾರೆ. ಚಿಕ್ಕಮಗಳೂರು ಬಳಿ ಅಪಘಾತ ಸಂಭವಿಸಿದ್ದು ತಕ್ಷಣವೇ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.ಅವರೊಡನಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರವಿಕಿರಣ್ ಪುಣಚರವರಿಗೆ 

ಸಕಲೇಶಪುರದ ದೋಣಿಗಾಲ್ ಎಂಬಲ್ಲಿ ಭೂಕುಸಿತ:ಗುಂಡ್ಯ ಚೆಕ್ ಪೋಸ್ಟ್‌ನಲ್ಲಿ ವಾಹನಗಳಿಗೆ ತಡೆ

ಗುಂಡ್ಯ: ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತವಾಗಿದೆ. ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಪ್ರಸಿದ್ದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ, ಸೌತ್ತಡ್ಕ ಕ್ಷೇತ್ರಕ್ಕೆ ಭೇಟಿ ನೀಡುವ ವಾಹನದ ಚಾಲಕರು ಪರಾಡುತ್ತಿರುವ ಮಾಹಿತಿ ಲಭಿಸಿದೆ. ಇನ್ನು ಮುಂಜಾಗೃತವಾಗಿ ಗುಂಡ್ಯ ಚೆಕ್ ಪೋಸ್ಟ್ ಗಳಲ್ಲಿಯೇ ವಾಹನಗಳಿಗೆ ತಡೆ

ಕಾರ್ಕಳದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ನಿಂದ ಆಹಾರ ಕಿಟ್ ವಿತರಣೆ

ಕಾರ್ಕಳ: ಮಲಬಾರ್ ಗೋಲ್ಡ್ ವತಿಯಿಂದ ಕಾರ್ಕಳದ ಶಾಸಕರ ಭವನದಲ್ಲಿ ತಾಲೂಕಿನ ಅರ್ಹ ಬಡ ವರ್ಗದವರಿಗೆ ರೇಷನ್ ಕಿಟ್  ಗಳನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿತರಿಸಿದರು. ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ನ ಮ್ಯಾನೇಜರ್ ರಾಘವೇಂದ್ರ ನಾಯಕ್ ಅಜೆಕಾರ್ ಅವರು ಬಡ ಜನತೆಗೆ ಇರುವ ಮಲಬಾರ್ ಗೋಲ್ಡ್ ನ ಸಾಮಾಜಿಕ ಸೌಲಭ್ಯಗಳ ಬಗ್ಗೆ ವಿವರಣೆಗಳನ್ನು ನೀಡಿದರು.ಕಾರ್ಕಳ ನಗರ ಬಿಜೆಪಿ ಅಧ್ಯಕ್ಷರು ಮಹಾವೀರ್ ಜೈನ್, ತಾಲೂಕು ಪಂಚಾಯತ್ ಅಧ್ಯಕ್ಷರು ಮಾಲಿನಿ ಜೆ ಶೆಟ್ಟಿ,

ರಾಜೀನಾಮೆ ಸುಳಿವು ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ಕೇಂದ್ರದ ವರಿಷ್ಠರು ನೀಡುವ ಆದೇಶವನ್ನು ಚಾಚು ತಪ್ಪದೆ ಪಾಲಿಸುತ್ತೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದಾರೆ. ಇಡೀ

ಮಂಗಳೂರು: ಭಜನಾ ಮಂದಿರಕ್ಕೆ ನುಗ್ಗಿ ಕಾಣಿಕೆ ಡಬ್ಬಿ ಕಳವು; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಮಂಗಳೂರು: ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಭಜನಾ ಮಂದಿರದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಭಜನಾ ಮಂದಿರದ ಮುಂಭಾಗಕ್ಕೆ ನಸುಕಿನ ವೇಳೆ 1.45ರ ಸುಮಾರಿಗೆ ಆಗಮಿಸಿರುವ ಕಳ್ಳರು ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ‌. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ

ಯುಪಿಸಿಎಲ್ ಅವಾಂತರ, ಕೃಷಿ ಚಟುವಟಿಕೆಗಳು ನಾಶ:ಉಚ್ಚಿಲ ಬಡಾ ಗ್ರಾಮಸ್ಥರಿಂದ ಪ್ರತಿಭಟನೆ ಎಚ್ಚರಿಕೆ

ನಿರಂತರವಾಗಿ ಜನರಿಗೆ ತೊಂದರೆ ನೀಡುತ್ತಾ ಬಂದಿರುವ ಯುಪಿಸಿಎಲ್ ಕಂಪನಿಯ ಅವಾಂತರದಿಂದಾಗಿ ಕೃಷಿ ಚಟುವಟಿಕೆ ನಡೆಸಿದ ಗದ್ದೆಯಲ್ಲಿ ನೀರು ನಿಂತು ಕೃಷಿ ನಾಶವಾಗುತ್ತಿದ್ದು, ಈ ಬಗ್ಗೆ ಸ್ಥಳೀಯಾಢಳಿತ ಸಹಿತ ಯುಪಿಸಿಎಲ್ ಕಂಪನಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ, ಆ ನಿಟ್ಟಿನಲ್ಲಿ ನಮ್ಮ ಬದುಕಿಗಾಗಿ ಪ್ರತಿಭಟಿಸುವುದು ಅನಿವಾರ್ಯ ಎಂಬುದಾಗಿ ಉಚ್ಚಿಲ ಬಡಾ ಗ್ರಾಮದ ಸಂತ್ರಸ್ಥ ರೈತರು ಎಚ್ಚರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಆಕ್ರೋಶ ವ್ಯಕ್ತ ಪಡಿಸಿದ