ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ
ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ,
ಮೂಡುಬಿದಿರೆ : ಸಾಂಪ್ರಾದಾಯಿಕ ಕಂಬಳಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಕಂಬಳಗಳಲ್ಲಿ ಬೆಳಿಗ್ಗೆ 9.೦೦ಗಂಟೆಗೆ ಕೋಣಗಳನ್ನು ಕರೆಗೆ ಇಳಿಸಿ 24 ಗಂಟೆಗಳೊಳಗೆ ಮುಗಿಸುವ ಸಂಪೂರ್ಣ ಜವಾಬ್ದಾರಿ ಮತ್ತು ಹೊಣೆಗಾರಿಕೆಯನ್ನು ಆಯಾಯ ಸ್ಥಳಿಯ ಕಂಬಳದ ವ್ಯವಸ್ಥಾಪಕರು ಶಿಸ್ತನ್ನು ಕೈಗೊಳ್ಳುವ ಬಗ್ಗೆ ಹಾಗೂ ಕಂಬಳದ ಪ್ರತಿ ಓಟಗಾರರು ಮೂರು ಜತೆ ಕೋಣಗಳನ್ನು ಮಾತ್ರ ಆಯಾಯ ಕಂಬಳಗಳಲ್ಲಿ ಓಡಿಸಬಹುದು. ಆದರೆ 2 ಜತೆ (ಎ,ಬಿ) ಕೋಣಗಳ ಯಜಮಾನರ ಇಬ್ಬರು ಓಟಗಾರರ ಪೈಕಿ ಒಬ್ಬರಿಗೆ ಗಂಭೀರ
ಕುಂದಾಪುರ: ಉದಯ್ ಗಾಣಿಗ ಕೊಲೆ ಪ್ರಕರಣವನ್ನು ಖಂಡಿಸಿ ನಾನು ಹಲವು ಸಂದರ್ಭಗಳಲ್ಲಿ ಧ್ವನಿ ಎತ್ತಿದ್ದೇನೆ. ಇದನ್ನು ಸಹಿಸದ ಬಿಜೆಪಿ ಮುಖಂಡರು ನನ್ನ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡಿದರು. ನಾನು ಪುತ್ತೂರಿನವನು ಹಾಗೂ ಹಿಂದೂ ವಿರೋಧಿ ಎಂದು ಜರಿದರು. ಈ ಜಿಲ್ಲೆಯ ಜನ ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ಇಲ್ಲಿನ ಜನರ ಋಣ ನನ್ನ ಮೇಲಿದೆ. ಈ ಮುಗ್ಧ ಜನರಿಗೆ ಅನ್ಯಾಯಗಳಾದರೆ ನಾನು ಧ್ವನಿ ಎತ್ತುತ್ತಲೇ ಇರುತ್ತೇನೆ. ನನ್ನ ಧ್ವನಿ ಅಡಗಿಸುವ
ಕಳೆದ ಸುಮಾರು ವರ್ಷಗಳಿಂದ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರು ಲಯನ್ಸ್ ಕ್ಲಬ್ ಇಂಟರ್ನ್ಯಾಶನಲ್ ಇದರ ಲಯನ್ಸ್ ಕ್ಲಬ್ ಮಂಗಳೂರು ಕಂಕನಾಡಿ, ಪಡೀಲ್ ಡಿಸ್ಟ್ರಿಕ್ಟ್ 317ಡಿ ಇದರ 2021-22ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಲಯನ್ಸ್ ಸೇವಾ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 2021-22ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಲಯನ್ ವೇಣಿ ಮರೋಳಿಯವರಿಗೆ ಫಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಲಯನ್.ಎಂ.ಅರುಣ್ ಶೆಟ್ಟಿ
ಮಂಜೇಶ್ವರ: ಮಂಜೇಶ್ವರ ವರ್ಕಾಡಿ ಪಂಚಾಯತಿಗೆ ಒಳಪಟ್ಟ ಆನೆಕ್ಕಲ್ಲು ಕತ್ತರಕೋಡಿ ಬೋರ್ಕಳ ಮಾರ್ಗವಾಗಿ ಉಪ್ಪಳಕ್ಕೆ ಹೋಗುವ ರಸ್ತೆಯ ಸ್ಥಿತಿ ತುಂಬಾ ಶೋಚನೀಯವಾಗಿದೆ. ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಹಾಗೂ ನೂರಾರು ಕಾಲ್ನಡಿಗೆ ಯಾತ್ರಿಕರು ಆಶ್ರಯಿಸುವ ಏಕೈಕ ರಸ್ತೆಯಾಗಿದೆ. ಜನರು ನಡೆದು ಹೋಗಲು ಅಥವಾ ತುರ್ತು ಸಮಯಗಳಲ್ಲಿ ರೋಗಿಗಳನ್ನು ಕೊಂಡೊಯ್ಯಲು ಬೇರೆ ದಾರಿಯಿಲ್ಲ ಏಕೆಂದರೆ ಈ ಮಳೆಗಾಲದಲ್ಲಿ ಜನರು ನಡೆಯುವುದು ತುಂಬಾ ಕಷ್ಟದಿಂದ ಹಾಗೂ ವಾಹನಗಳ ಸಂಚಾರವೂ
ಪುತ್ತೂರು ತಾಲೂಕು ಬನ್ನೂರು ಗ್ರಾಮದ ಕಜೆ ಎಂಬಲ್ಲಿಯ ನಿವಾಸಿ ಸಂತೋಷ್ ಎಂಬವರ ಮನೆಯ ದಕ್ಷಿಣ ಭಾಗದ ಮಣ್ಣನ್ನು ಪಕ್ಕದ ಮನೆಯವರು ಅವೈಜ್ಞಾನಿಕವಾಗಿ ಅಗೆದ ಕಾರಣ ವಿಪರೀತ ಮಳೆಯಿಂದ ಮಣ್ಣು ಕುಸಿಯುತ್ತಿದೆ. ಕೆಲವೇ ಅಡಿಗಳ ಅಂತರದಲ್ಲಿ ಸಂತೋಷ್ ಅವರ ಮನೆಯು ಇರುವುದರಿಂದ ಮತ್ತು ಪಕ್ಕದ ಮನೆ ಸುಮಾರು 30 ಅಡಿಗಳಷ್ಟು ಆಳದಲ್ಲಿ ಇರುವುದರಿಂದ ಎರಡೂ ಮನೆಯವರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ್
ಮಂಗಳೂರು: ರಾಜ್ಯದ ಕೋವಿಡ್ ಸಂತ್ರಸ್ತರ ಕುಟುಂಬದ 81ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಮಂಗಳೂರಿನ ಕೊಡಿಯಾಲ್ಬೈಲ್ನಲ್ಲಿರುವ ಎಸ್ಸಿಡಿಸಿಸಿ ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡ ’ರೈತ ಸ್ಪಂದನ’ ಕಾರ್ಯಕ್ರಮದಲ್ಲಿ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ಕೃಷಿಕರಿಗೆ ವಿವಿಧ ರೀತಿಯ ಸಾಲ ವಿತರಿಸಿದರು. ಬಳಿಕ ಮಾತನಾಡಿದ್ರು, ಕೋವಿಡ್ ಸಂತ್ರಸ್ತ
ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ನಡೆದಿದೆ. ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆಯನ್ನು ಏಕಾಏಕಿ ಏರಿಕೆಯನ್ನು
ಮೂಡುಬಿದಿರೆ: ಜುಲೈ 23ರಿಂದ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷಿ ಹಾಗೂ ಶುಭ ಇವರು 4*400 ಮಿಕ್ಸಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.


















