Home Articles posted by v4news (Page 7)

ಮೂಡುಬಿದಿರೆ : ಅಕ್ರಮ ಗ್ರಾನೈಟ್ ಕಲ್ಲು ಕೋರೆಗೆ ದಾಳಿ

ತಾಲೂಕಿನ ಪಡುಮಾರ್ನಾಡು ಗ್ರಾ.ಪಂಚಾಯತ್ ವ್ಯಾಪ್ತಿಯ ತಂಡ್ರಕೆರೆ ಗಂಪದಡ್ಕ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗ್ರಾನೈಟ್ ಕಲ್ಲಿನ ಕೋರೆಗೆ ಮೂಡುಬಿದಿರೆ ತಹಶೀಲ್ದಾರ್ ಅವರು ಸಾರ್ವಜನಿಕರ ಸಹಕಾರದೊಂದಿಗೆ ದಾಳಿ ನಡೆಸಿ ಗ್ರಾನೈಟ್ ತುಂಬಿದ ಲಾರಿ, ಹಿಟಾಚಿ ಮತ್ತು ಕಲ್ಲು ಕೊರೆಯುವ ಯಂತ್ರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ 20 ದಿನಗಳಿಂದ ಇಲ್ಲಿ ಅಕ್ರಮವಾಗಿ

ಹಳೆಯ ನೋಟು ಬದಲಾವಣೆಗೆ ಕಮೀಷನ್ ನೀಡುವುದಾಗಿ ಮಹಿಳೆಯೋರ್ವರಿಂದ ವಂಚನೆ: ಪುತ್ತೂರಿನ ಓರ್ವನ ಸಹಿತ ಐವರ ಬಂಧನ

ಪುತ್ತೂರು: ವಿಲೇವಾರಿಗೆ ಕಷ್ಟವಾಗಿರುವ ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30 ಶೇ. ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಲ್ಲಿ ರೆಂಜದ ಅರಂತನಡ್ಕ ನಿವಾಸಿ ಸಹಿತ ಐವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ತಮ್ಮ ಬಳಿ ದೇವಸ್ಥಾನಗಳ ಹುಂಡಿಯಲ್ಲಿ ಭಕ್ತರು ಹಾಕಿದ್ದ ರೂ.100 ಮುಖ ಬೆಲೆಯ ರೂ.10 ಲಕ್ಷ ಮೌಲ್ಯದ ನೋಟುಗಳಿದ್ದು, ಆವುಗಳನ್ನು ವಿಲೇವಾರಿ ಮಾಡಲು

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿ ನಿಧನ

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿಯವರು ನಿನ್ನೆ ರಾತ್ರಿ ನಿಧನ ಹೊಂದಿರುತ್ತಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಕಾಂಗ್ರೆಸ್ ನಾಯಕ ಗಣೇಶ್ ಪೂಜಾರಿ ಸಹಿತ 4 ಗಂಡು ಮತ್ತು 2 ಹೆಣ್ಣು ಮಕ್ಕಳನ್ನು ಅಗಲಿರುತ್ತಾರೆ.ಶ್ರೀಯುತರು ಸುಮಾರು 18 ವರ್ಷಗಳ ಕಾಲ ಗಂಜಿಮಠ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮತ್ತು ಸುಮಾರು 30 ವರ್ಷಗಳ ಕಾಲ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ದ. ಕ. ಜಿಲ್ಲಾ

ಮಂಗಳೂರು: ಅಪ್ರಾಪ್ತ ಬಾಲಕಿಯ ಶವ ಚರಂಡಿಯಲ್ಲಿ ಪತ್ತೆ

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೊಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ

ಕನ್ನಡ ಸಾಹಿತ್ಯ ಪರಿಷತ್‌ ದ.ಕ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ  ಡಾ.ಎಂ.ಪಿ.ಶ್ರೀನಾಥ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಉಪನ್ಯಾಸಕ  ಹಾಗೂ ಲೇಖಕ ಡಾ.ಎಂ.ಪಿ.ಶ್ರೀನಾಥ್ ಅವರು ಆಯ್ಕೆಯಾಗಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕೇಂದ್ರಗಳಲ್ಲಿ ಮತದಾನ ನಡೆದಿದ್ದು, ಶೇ.44.8ರಷ್ಟು ಸದಸ್ಯರು ಮತದಾನ ಮಾಡಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕೇಂದ್ರಗಳಲ್ಲಿ ಮತದಾನ ನಡೆದಿದ್ದು, ಶೇ.44.8ರಷ್ಟು ಸದಸ್ಯರು ಮತದಾನ ಮಾಡಿದ್ದಾರೆ.

ಸೋಮ್ ಭಾಯ್ ಮೋದಿ ಅವರಿಂದ ಉಡುಪಿ ಪ್ರಸಾದ್ ನೇತ್ರಾಲಯದ ಕಣ್ಣಿನ ನೂತನ ಚಿಕಿತ್ಸಾ ಸೌಲಭ್ಯ ವಿಭಾಗಗಳ ಉದ್ಘಾಟನೆ

ಉಡುಪಿಯಲ್ಲಿರುವ ಪ್ರಸಾದ್ ನೇತ್ರಾಲಯದ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ನೂತನ ಚಿಕಿತ್ಸಾ ಸೌಲಭ್ಯ ವಿಭಾಗಗಳ ಉದ್ಘಾಟನಾ ಕಾರ್ಯಕ್ರಮವು ನ.21ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡುವರು. ವಿದ್ವಾನ್ ಕಬಿಯಾಡಿ ಜಯರಾಮ್ ಅಚಾರ್ಯ ಶುಭಾಂಸನೆಗೈಯಲಿದ್ದಾರೆ. ಅರ್ಥಾಪ್ಟಿಕ್ ಕ್ಲಿನಿಕ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರ ಅಣ್ಣ ಗುಜರಾತ್ ವಾಡ್‍ನಗರದ ಸರ್ವೋದಯ ಸೇವಾ

ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಡಾ ಎಂ. ಎನ್. ರಾಜೇಂದ್ರ ಕುಮಾರ್

ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಹಿಂದೆ ಸರಿದಿದ್ದಾರೆ. ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು. ಕಳೆದ 35 ವರ್ಷಗಳಿಂದ ಸಹಕಾರ ರಂಗದಲ್ಲಿದ್ದೇನೆ. ರಾಜಕೀಯ ಬೇಡ, ಸಹಕಾರಿ ಕ್ಷೇತ್ರಕ್ಕೂ ರಾಜಕೀಯ ತರುವುದಿಲ್ಲ ಎಂದು

ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ

ಮಂಗಳೂರು, ನ.20(ಕ.ವಾ):- ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ,

ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಜನಸ್ವರಾಜ್ ಸಮಾವೇಶ

ಮಂಗಳೂರು: ಮುಂಬರುವ 25 ಸ್ಥಾನಗಳಿಗೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಗರಿಷ್ಠ ಸಂಖ್ಯಾಬಲವನ್ನು ಹೊಂದಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಅಡ್ಯಾರ್ ಗಾರ್ಡನ್ ಸಭಾಂಗಣ ದಲ್ಲಿಂದು ಹಮ್ಮಿಕೊಂ ಡ ಜನಸ್ವರಾಜ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಮಸೂದೆ ಅಂಗೀಕಾರ ವಾಗಬೇಕಾ ದರೆ.ಎರಡೂ

ಉಳ್ಳಾಲ: ಎಸ್‍ಡಿಪಿಐ ಪಕ್ಷದ ಕಚೇರಿ, ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ

ಉಳ್ಳಾಲ. ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಳಾಂತರಿತ ಪಕ್ಷದ ಕಚೇರಿ ಮತ್ತು ಮಾಹಿತಿ ಸೇವಾ ಕೇಂದ್ರ ಉದ್ಘಾಟನೆಗೊಂಡಿತು.ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ನೂತನ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.ಎಸ್ ಡಿಪಿಐ ದ.ಕ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಎಸ್ ಡಿಪಿಐ ಉಳ್ಳಾಲ ನಗರ ಸಮಿತಿ ಕಚೇರಿಯನ್ನು ಉದ್ಘಾಟಿಸಿದರು.ಎಸ್ ಡಿಪಿಐ ರಾಜ್ಯ ಪ್ರ.ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ದಿಕ್ಸೂಚಿ