Home Articles posted by v4news (Page 90)

ಆಲೂರಿನ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾದ ಮದ್ಯ ಮಾರಾಟ: ಗ್ರಾಮಸ್ಥರ ಆಕ್ರೋಶ

ಆಲೂರು : ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿ ಮಾರಾಟವಾಗುತ್ತಿರುವುದರಿಂದ ಮದ್ಯ ಸೇವನೆಯಿಂದ ತಾಲೂಕಿನಲ್ಲಿ ಒಂದೇ ತಿಂಗಳಿಗೆ 3 ಜನ ಅಮಾಯಕರು ಮೃತಪಟ್ಟಿರುವ ಘಟನೆ ತಾಲೂಕಿನ ಕೆ.ಹೊಸಕೋಟೆ ಹೊಬಳಿ ಮಲಗಳಲೆ ಗ್ರಾಮದಲ್ಲಿ ನಡೆದಿದೆ. ಅಬಕಾರಿ ಇಲಾಖೆ ಭ್ರಷ್ಟ ಅಧಿಕಾರಿಗಳ ಹಾಗೂ ಉಳ್ಳವರ ಶಕ್ತಿಯಿಂದ ಮದ್ಯ ಮಾರಾಟ ಮಾಡುತ್ತಿದ್ದು, ಗ್ರಾಮೀಣ

ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಂತೆ ದ.ಕ. ಜಿಲ್ಲಾ ಶ್ರೀರಾಮ ಸೇನೆ ಒತ್ತಾಯ

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಸರ್ಕಾರ ಅವಕಾಶ ನೀಡದಿದ್ದರೆ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆಯ ಆನಂದ ಶೆಟ್ಟಿ ಅಡ್ಯಾರ್ ಎಚ್ಚರಿಕೆ ನೀಡಿದರು. ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಎಲ್ಲರ ಜೀವನ ಸಾಮಾನ್ಯ ಸ್ಥಿತಿಗೆ ಮರಳಿದ್ದರೂ ನಿರ್ಬಂಧ ವಿಧಿಸಿದ್ದು ಖಂಡನಾರ್ಹ. ಈ ಹಬ್ಬವನ್ನೇ ಅವಲಂಬಿಸಿರುವ

ದೇರಳಕಟ್ಟೆಯಲ್ಲಿ ಗೂಡ್ಸ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ದೇರಳಕಟ್ಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಕುತ್ತಾರು ನಿತ್ಯಾನಂದನಗರ ಬಳಿ ಇಂದು ನಡೆದಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹಣ್ಣುಹಂಪಲುಗಳನ್ನು ಸಾಗಾಟ ನಡೆಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರಳಿದೆ. ಟೆಂಪೋದಲ್ಲಿ ಚಾಲಕ ಮಾತ್ರ ಇದ್ದು, ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ,ಅಡ್ಡಿಯುಂಟಾಗಿದ್ದ ರಸ್ತೆ ಸಂಚಾರವನ್ನು

ಪತ್ರಕರ್ತ ಧೀರಜ್ ಪೊಯ್ಯಕಂಡ “ಪರಾಶರ” ಕಾದಂಬರಿ ಬಿಡುಗಡೆ

ಮಂಗಳೂರು: ಪತ್ರಕರ್ತ ಧೀರಜ್ ಪೊಯ್ಯಕಂಡ ಅವರ ಎರಡನೇ ಕಾದಂಬರಿ ’ಪರಾಶರ’ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಂಡಿತು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಹಾಗೂ ಗುರು ಬೆಳದಿಂಗಳು ಸಂಸ್ಥೆಯ ಅಧ್ಯಕ್ಷ ಪದ್ಮರಾಜ್ ಆರ್. ಅವರು ಕಾದಂಬರಿಯನ್ನು ಬಿಡುಗಡೆಗೊಳಿಸಿದರು. ಲೇಖಕ ಧೀರಜ್ ಪೊಯ್ಯಕಂಡ ಅವರು ಮಾತನಾಡಿ, ಸೋಶಿಯಲ್ ಮಿಡಿಯಾಗಳ ದುರ್ಬಳಕೆ ಹಾಗೂ ಅದರಿಂದಾಗುವ ದುಷ್ಪರಿಣಾಮದ ಎಳೆಯನ್ನಿಟ್ಟುಕೊಂಡು ಈ ಕೈಂ, ಸಸೆನ್ಸ್ ಕಾದಂಬರಿ ರಚಿಸಲಾಗಿದೆ. ಪ್ರಸ್ತುತ

ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ: 2021 ನೇ ಸಾಲಿನ ನೊಂದಾವಣಿ ಪ್ರಕ್ರಿಯೆ ಪ್ರಾರಂಭ

ಮಂಗಳೂರು: ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ 2021ನೇ ಸಾಲಿನ ದಾಖಲಾತಿಯು ಪ್ರಾರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅತ್ತಾವರ ಕೆ.ಎಂ.ಸಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಜಾನ್ ರಾಮಪುರಮ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯು ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ

ಭೈರಪ್ಪ ಹುಟ್ಟೂರು ಅಭಿವೃದ್ಧಿಗೆ ಸರ್ಕಾರ ಬದ್ಧ -ಸಚಿವ ಸುನಿಲ್ ಕುಮಾರ್

ಮೈಸೂರು:  ಡಾ. ಎಸ್ ಎಲ್ ಭೈರಪ್ಪ ಅವರ ಹುಟ್ಟೂರಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಹಾಗು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಡಾ.ಎಲ್ ಎಲ್ ಭೈರಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದರು.ಎಸ್ಎಲ್ ಭೈರಪ್ಪ ಅವರ ಜೊತೆ ಸೌಹಾರ್ದಯುತ ಮಾತುಕತೆ ನಡೆಸಿದ ಸಚಿವ ಸುನಿಲ್ ಕುಮಾರ್ ನಾಡಿನ ಕಲೆ ಸಾಹಿತ್ಯ ಹಾಗೂ ಸಂಸ್ಕೃತಿ ಕುರಿತಂತೆ ವಿಚಾರ ವಿನಿಮಯ

ಅಘ್ಫಾನ್‌ನಲ್ಲಿ ಮಂಗಳೂರಿಗರು ಬಾಕಿಯಾಗಿದ್ದಲ್ಲಿ ನೆರವಿಗೆ ಕ್ರಮ : ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ 

ಮಂಗಳೂರು ಕಮೀಷರೇಟ್ ವ್ಯಾಪ್ತಿಯ ಒಟ್ಟು 7 ಮಂದಿ ಅಘ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ.  ಕಳೆದ ಕೆಲ ಸಮಯದಿಂದ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗಳ ಹಿನ್ನೆಲೆಯಲ್ಲಿ ಕಾಬೂಲ್‌ನಿಂದ ದಿಲ್ಲಿಗೆ ಏರ್‌ಲಿಫ್ಟ್ ಆಗಿ ಕಳೆದರಡು ದಿನಗಳಿಂದ ತಮ್ಮ ಮನೆಗಳಿಗೆ ಆಗಮಿಸಿರುವ ಏಳು ಮಂದಿ ಮಂಗಳೂರಿಗರ ಜತೆ ತಮ್ಮ ಕಚೇರಿಯಲ್ಲಿ ಅವರ ಕುಶೋಲಪರಿ ನಡೆಸಿದರು. ಪ್ರಸಾದ್ ಆನಂದ್, ದಿನೇಶ್

ಗಂಗೊಳ್ಳಿಯಲ್ಲಿ ಗಾಂಜಾ ಹಂಚಿಕೆಯಲ್ಲಿ ತೊಡಗಿದಾತನ ಬಂಧನ

ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಹಂಚಿಕೆಯಲ್ಲಿ ತೊಡಗಿಸಿಕೊಂಡಿದ್ದ ರವಿರಾಜ್ ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ಎಸ್ಪಿ, ಡಿಎಸ್ಪಿ, ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ನಂಜಾ ನಾಯ್ಕ ಹಾಗೂ ಎಎಸ್ಐ ರಘುರಾಮ್ ಮತ್ತು ಪೊಲೀಸ್ ಸಿಬ್ಬಂದಿಗಳ ಜಂಟಿ ಕಾರ್ಯಾಚರಣೆಯಲ್ಲಿ ಆಪಾದಿತ ರವಿರಾಜ್ ಎಂಬಾತನನ್ನು ಬಂಧಿಸಿ ಮಾರಾಟ ಮಾಡುತ್ತಿದ್ದ ಗಾಂಜಾವನ್ನು ವಶ ಪಡಿಸಿಕೊಂಡು ಪ್ರಕರಣವನ್ನು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ

ಮೈಸೂರಿನಲ್ಲಿ ವಿದ್ಯಾರ್ಥಿ ಮೇಲೆ ಗ್ಯಾಂಗ್‌ರೇಪ್ ನಡೆದಿರುವ ಶಂಕೆ..!

ಮೈಸೂರು:  ಮೈಸೂರಿನಲ್ಲಿ ಅಪರಾಧ ಕೃತ್ಯಗಳು ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾಂಸ್ಕೃತಿಕ ನಗರಿ ಜನತೆಯ ನಿದ್ದೆಗಡಿಸಿದೆ. ಇದೀಗ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗಿದ್ದು ಜನತೆಯನ್ನು ಆತಂಕಕ್ಕೆ ನೂಕಿದೆ. ಹಾಡುಹಗಲಲ್ಲೇ ಯುವಕನಿಗೆ ಗುಂಡು ಹಾರಿಸಿ ಜ್ಯುವೆಲಲ್ಲರಿ ಶಾಪ್ ದರೋಡೆ, ಯುವತಿಗೆ ಚಾಕುವಿನಿಂದ ಇರಿತ ಪ್ರಕರಣಗಳು ಮಾಸುವ ಮುನ್ನವೇ ಬೆಚ್ಚಿ ಬೀಳಿಸುವ ಸುದ್ದಿಯೊಂದು ಹೊರಬಿದ್ದಿದೆ. ಮೈಸೂರು ನಿವಾಸಿ ಖಾಸಗಿ

ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬಂಟ್ವಾಳ: ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಬ್ರಹ್ಮರಕೂಟ್ಲು ಹಾಗೂ ಕಳ್ಳಿಗೆ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಶಾಲೆಯಲ್ಲಿ ನಡೆಯಿತು. ಮಾಜಿ ಸಚಿವ, ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಸಾಂಕೇತಿಕವಾಗಿ ಪುಸ್ತಕ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು ಶಿಕ್ಷಣ ಪ್ರಗತಿಯ ಸಂಕೇತ ಆದರೆ ಹಿಂದೆಲ್ಲಾ ಎಲ್ಲರಿಗೂ ಶಿಕ್ಷಣ ಪಡೆಯುವ