Home Articles posted by v4team (Page 207)

ಭದ್ರಾವತಿಯ ಯುವಕನ ಪತ್ತೆಗಾಗಿ ತೀವ್ರ ಹುಡುಕಾಟ: ಡ್ರೋನ್ ಕ್ಯಾಮರಾದಿಂದ ಶೋಧ ಕಾರ್ಯ

ಬೈಂದೂರು ಸಮೀಪದ ಕೊಲ್ಲೂರಿನ ಅರಶಿನಗುಂಡಿ ಎಂಬಲ್ಲಿ ಜಲಪಾತದ ಹರಿಯುವ ನೀರಿನಲ್ಲಿ ನಾಪತ್ತೆಯಾದ ಭದ್ರಾವತಿಯ ಯುವಕನ ಪತ್ತೆಗಾಗಿ ಡ್ರೋನ್ ಕ್ಯಾಮೆರಾ ಮೂಲಕ ಶೋಧ ಕಾರ್ಯ ನಡೆಯುತ್ತಿದೆ.   ಭಾನುವಾರ ಮಧ್ಯಾಹ್ನ ಕೊಲ್ಲೂರು ಸಮೀಪದ ಅರಸಿನಗುಂಡಿ ಜಲಪಾತದಲ್ಲಿ ಕಾಲುಜಾರಿ ಬಿದ್ದು ನಾಪತ್ತೆಯಾಗಿರುವ ಭದ್ರಾವತಿ ತಾಲ್ಲೂಕಿನ ಸುಣ್ಣದ ಹಳ್ಳಿಯ ಕೆ.ಎಚ್.ನಗರದ ಯುವ ಉದ್ಯಮಿ ಶರತ್

ಪಡುಬಿದ್ರಿ: ಶಾಲಾ ಸೆಕ್ಯೂರಿಟಿ ಗಾರ್ಡ್ ಬಾವಿಗೆ ಹಾರಿ ಆತ್ಮಹತ್ಯೆ

ಎರ್ಮಾಳು ಬಡಾ ದೇವಸ್ಥಾನ ಬಳಿಯ ನಿವಾಸಿ ಅದಮಾರು ವಿದ್ಯಾಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಾಹಿಸುತ್ತಿದ್ದ ವ್ಯಕ್ತಿ ಇಂದು ಮುಂಜಾನೆ ಕುಂಜೂರಿನ ಮನೆಯೊಂದರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಆತ್ಮಹತ್ಯೆ ಮಾಡಿಕೊಂಡವರು ನವೀನ್ ಬಂಗೇರ (53), ಅವಿವಾಹಿತರಾಗಿದ್ದ ಇವರು ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದು ಕಳೆದ ಸುಮಾರು ಮೂರು ವರ್ಷಗಳಿಂದ ಅದಮಾರು ವಿದ್ಯಾಸಂಸ್ಥೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಾಹಿಸುತ್ತಿದ್ದು,

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4: ಸಂತ ಆಲೋಶಿಯಸ್ ಕಾಲೇಜಿನಲ್ಲಿ ಚಾಲನೆ

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4 ಗೆ ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ಸಂಭ್ರಮದ ಚಾಲನೆ ದೊರೆತಿದೆ.    V4 ನ್ಯೂಸ್ ಮತ್ತು ಮಂಗಳೂರಿನ ಸಂತ ಆಲೋಸಿಯಸ್ ಕಾಲೇಜಿನ ಪತ್ತಿಕೋಧ್ಯಮ, ಸಮೂಹ ಸಂವಹನ ಹಾಗೂ ದೃಶ್ಯ ಸಂವಹನ ವಿಭಾಗದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪತ್ರಿಕಾ ಕ್ಷೇತ್ರದ ಸಾಧಕರಾದ ಮನೋಹರ್ ಪ್ರಸಾದ್, ಕ್ರೀಡಾಕ್ಷೇತ್ರದ ಸಾಧಕರಾದ ದಿನೇಶ್ ಕುಂದರ್, ವ್ಯಂಗಚಿತ್ರ ಸಾಧಕರಾದ

ಪುತ್ತೂರು : ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಪುತ್ತೂರು: ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ. ಮಾಹಿತ ಆಧಾರದಲ್ಲಿ ಸ್ಥಳಕ್ಕೆ ಬಂದ ಪೊಲೀಸ್ರು ಪರಶೀಲನೆ ನಡೆಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹವನ್ನು ಸಾಗಿಸುವಲ್ಲಿ ನಗರದ ಆದರ್ಶ ಆಸ್ಪತ್ರೆ ಅಂಬ್ಯುಲೆನ್ಸ್ ಚಾಲಕ ದಯಾನಂದ್ ಮತ್ತು ಸ್ಥಳೀಯರು ಸಹಕರಿಸಿದ್ದಾರೆ. ಮೃತದೇಹ ಯಾರದೆನ್ನುವ ಬಗ್ಗೆ

ಬೈಂದೂರು : ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ, ಶಾಲೆಗೆ ರಜೆಯಿದ್ದ ಕಾರಣ ತಪ್ಪಿದ ದೊಡ್ಡ ದುರಂತ

ಬೈಂದೂರು ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಡುವರಿ ಗ್ರಾ.ಪಂ ವ್ಯಾಪ್ತಿಯ ತಾರಾಪತಿ ಶಾಲೆಯ ಮೇಲ್ಚಾವಣೆ ಕುಸಿದು ಬಿದ್ದಿದೆ. ಶಾಲೆಗೆ ರಜೆ ಇದ್ದ ಕಾರಣದಿಂದ ಪ್ರಾಣಹಾನಿ ಸಂಭವಿಸಿಲ್ಲ. ಕನ್ನಡ ಮಾಧ್ಯಮ ಶಾಲೆಯ ಅಭಿವೃದ್ದಿಗೆ ಸರಕಾರ ಹಲವು ಯೋಜನೆಗಳನ್ನು ನೀಡುವ ಭರವಸೆ ನೀಡಿದರೂ ಕೂಡ ಅಧಿಕಾರಿಗಳ ನಿರ್ಲಕ್ಷತನದಿಂದ ಇಂತಹ ಘಟನೆಗಳು ನಡೆಯುತ್ತಿರುವುದು ಪಾಲಕರಿಗೆ ಆತಂಕ ಉಂಟು ಮಾಡುತ್ತಿದೆ. ಕುಸಿದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತ

ಪಡುಬಿದ್ರಿ: ಐದರ ಹರೆಯದ ಹಸುಳೆಗೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್

ಐದರ ಹರೆಯದ ಬಾಲೆಯನ್ನು ಬಿಸ್ಕೆಟ್ ಆಸೆ ತೋರಿಸಿ ತನ್ನ ಕೋಣೆಗೆ ಕರೆದು ಲೈಂಗಿಕ ದೌರ್ಜನ್ಯ ನಡೆಸಿದ ಕೃತ್ಯ ಪಡುಬಿದ್ರಿ ಕಾಮಗಾರಿ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವಿಕೃತ ಮನಸ್ಸಿನ ಕಾಮುಖ ಆರೋಪಿ ಕಲ್ಕತ್ತ ವೆಸ್ಟ್ ಬೆಂಗಾಲ್ ಮುರ್ಶಿದಾಬಾದ್ ನಿವಾಸಿ ಮಾಫಿಜುಲ್ ಶೇಖ್ಈತ ಪಡುಬಿದ್ರಿ ಅಂಚೆ ಕಛೇರಿ ಪಕ್ಕದ ನಿರ್ಮಾಣ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕಾರ್ಮಿಕನಾಗಿ

ರಾಜಕೀಯ ಒತ್ತಡವಿಲ್ಲದೆ ಕೋಮು ಪ್ರಭಾವವಿಲ್ಲದೆ ತನಿಖೆ : ಖುಷ್ಬೂ

ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡವಿಲ್ಲದೆ ಕೋಮು ಪ್ರಭಾವವಿಲ್ಲದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಒಂದುವರೆ ಗಂಟೆಗಳ ಕಾಲ ಎಸ್ ಪಿ ಹಾಗೂ ಡಿಸಿ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ಇಂದು ರಾತ್ರಿ ವೇಳೆ ಮಾಧ್ಯಮದವರಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಮಹಿಳಾ ಆಯೋಗ ಪ್ರತಿಭಟನೆ ಮಾಡಲು ಇರುವ ಸಂಸ್ಥೆ ಅಲ್ಲ.

ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕರ ಬಂಧನ ವಿಚಾರ : ಕರಾವಳಿ ಭಾಗದಲ್ಲಿ ಕಟ್ಟೆಚ್ಚರ

ಬೆಂಗಳೂರಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ ಬಳಿಕ ಕರಾವಳಿಯಲ್ಲಿ ವಿದ್ವಂಸಕ ಚಟುವಟಿಕೆ ಮೇಲೆ ಹದ್ದಿನ ಕಣ್ಣಿರಿಸಿರುವ ಪೊಲೀಸರು ಜನ ನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ದೇವಸ್ಥಾನ, ಪ್ರವಾಸಿ ಕೇಂದ್ರ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಶ್ವಾನ ದಳ, ಮಸೂರ ದರ್ಶಕದಿಂದ ತಪಾಸಣೆ ನಡೆಸಲರಾಂಭಿಸಿದ್ದಾರೆ. ಈಗಾಗಲೇ ಉಡುಪಿ ಕೃಷ್ಣ ಮಠ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ, ಆಟಿ ಮಾರಿಪೂಜೆ ಸಂಭ್ರಮದಲ್ಲಿರುವ ಕಾಪುವಿನ

ಕಾರ್ಕಳ ಬಸ್ ನಿಲ್ದಾಣ : ಒಳಚರಂಡಿ ನೀರು ಸೋರಿಕೆಯಾಗಿ ಜನಸಾಮಾನ್ಯರಿಗೆ ತೊಂದರೆ

ಕಾರ್ಕಳ ಪುರಸಭೆ ವ್ಯಾಪ್ತಿಯ ಬಂಡಿಮಠ ಬಸ್ಸು ನಿಲ್ದಾಣದ ಎದುರು ಒಳಚರಂಡಿಯ ಮಲಿನ ನೀರು ಸೋರಿಕೆಯಾಗಿ ಉಂಟಾಗುವ ಅವಾಂತರಗಳು ಹೇಳತಿರದು. ಇಲ್ಲಿಯ ಕೊಳಚೆ ನೀರು ಸೋರಿಕೆ ಹೊರಚಿಮ್ಮಿ ರಸ್ತೆ ಮೇಲೆ ಹರಿಯುತ್ತಿರುವುದಲ್ಲದೆ ಪರಿಸರ ಮಾಲಿನ್ಯಗೊಂಡು ಸುತ್ತಮುತ್ತಲಿನ ಪ್ರದೇಶ ಗಬ್ಬೆದ್ದು ನಾರುತಿದೆ. ಬಂಡಿಮಠ ಬಸ್ ನಿಲ್ದಾಣ ಮುಂಭಾಗ ಹೆದ್ದಾರಿಯಲ್ಲಿ ಎರಡು ಕಡೆ ಚರಂಡಿಯಿಂದ ನೀರು ಸೋರಿಕೆಯಾಗುತ್ತದೆ. ಹೆದ್ದಾರಿಯಲ್ಲಿ ಸಹಸ್ರಾರು ವಾಹನಗಳು ನಿತ್ಯ ಓಡಾಟ ನಡೆಸುತ್ತವೆ.

ಮಣಿಪುರದಲ್ಲಿ ಹಿಂಸಾಚಾರ ಪ್ರಾಯೋಜಿತ ಕಾರ್ಯಕ್ರಮ : ಶಾಸಕ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ: ಮಣಿಪುರ ರಾಜ್ಯದಲ್ಲಿ ಹಲವಾರು ದಿನಗಳಿಂದ ಹಿಂಸಾಚಾರ, ಅತ್ಯಾಚಾರ, ಅನಾಚಾರಗಳು ನಡೆಯುತ್ತಿದ್ದು, ಇದು ಸರಕಾರದ ಹೆಸರನ್ನು ಕೆಡಿಸಲು ವಿಪಕ್ಷಗಳು ಮಾಡಿರುವ ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದರು. ಅವರು ಮಣಿಪುರ ಘಟನೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಮಣಿಪುರ ರಾಜ್ಯದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ, ಮಾದಕ ವಸ್ತುಗಳನ್ನು ಬೆಳೆಸುತ್ತಿದ್ದಾರೆ ಇದನ್ನು ಸರಕಾರ