Home Articles posted by v4team (Page 357)

ಕಡಬ: ಮಳೆ ಬರುತ್ತಿದ್ದ ಹಿನ್ನೆಲೆ – ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ಪಲ್ಟಿ

ಕಡಬ :ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಪಲ್ಟಿಯಾಗಿದೆ.

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಪಾರ್ಥ’ ಪುರುಷರ ಆಭರಣಗಳ ವಿಶೇಷ ಸಂಗ್ರಹ ಅನಾವರಣ

ಪ್ರತಿಷ್ಟಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ‘ಪಾರ್ಥ’ ಪುರುಷರ ಆಭರಣಗಳ ಅತೀ ದೊಡ್ಡ ಹಾಗೂ ವಿಶೇಷ ಸಂಗ್ರಹವನ್ನು ನಾಯರ್ ಕನ್ಸ್ಟ್ರಕ್ಷನ್ ಮಾಲಕರಾದ ಸೂರಜ್ ನಾಯರ್ ಅವರು ಅನಾವರಣಗೊಳಿಸಿದರು. ಬಳಿಕ ಮಾತನಾಡಿ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಉತ್ತಮ ಸೇವೆ ಹಾಗೂ ವಿಫುಲವಾದ ಸಂಗ್ರಹ ಇದೆ. ನಾನು ಇಲ್ಲಿನ ಸಂತೃಪ್ತ ಗ್ರಾಹಕನಾಗಿದ್ದೇನೆ. ‘ಪಾರ್ಥ ಸಂಗ್ರಹದಿಂದ ಜಿಎಲ್ ಸಂಸ್ಥೆಯು ಯಶಸ್ವಿಯಾಗಲಿ ಎಂದು‌ ಶುಭಹಾರೈಸಿದ್ರು. ಈ ವೇಳೆ ಜಿಎಲ್

ಮಂಗಳೂರು|| ಕೇರಳದಲ್ಲಿ ಪ್ರಾರ್ಥನಾ ಮಂದಿರದಲ್ಲಿ ಸ್ಪೋಟ ಹಿನ್ನೆಲೆ: ಕರ್ನಾಟಕ ಗಡಿಭಾಗದಲ್ಲಿ ಹೈ ಅಲರ್ಟ್

ಕೇರಳ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಪೋಟ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಅಲರ್ಟ್ ಆಗಿರಲು ಸೂಚನೆ ನೀಡಲಾಗಿದೆ. ಈ ಬಗ್ಗೆ ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಕೇರಳ ಗಡಿ ಭಾಗದಲ್ಲಿ ಭದ್ರತೆ, ನಿಗಾ ಹೆಚ್ಚಿಸಲಾಗುವುದು ಎಂದು ಮಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ದಸರಾ ಸಂದರ್ಭದಲ್ಲಿ ಮೈಸೂರು, ಕೊಡಗು

ಕೇರಳ : ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ

ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಕಾರಣ ತಿಳಿದು ಬಂದಿಲ್ಲ, ಪೊಲೀಸರು, ಅಗ್ನಿಶಾಮಕ ದಳ ಹಾಗೂ ಆರೋಗ್ಯ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟು ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಸಚಿವ

ಮಂಗಳೂರು: ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸಿದರು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಮಿಥುನ್ ರೈ, ಡಿಐಜಿ ಡಾ. ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಡಿಸಿಪಿ ದಿನೇಶ್ ಕುಮಾರ್, ಮನೋಜ್ ಕುಮಾರ್, ನಿರೀಕ್ಷಕ ಸಂದೀಪ್ ಮತ್ತಿತರರು

ಮಂಗಳೂರು: ಕೊಟ್ಟಾರ ಶ್ರೀ ವಿದ್ಯಾ ಸರಸ್ವತಿ ದೇವಿ ಹಸ್ತಕ್ಕೆ ಬೆಳ್ಳಿಯ ವೀಣೆ ಸಮರ್ಪಣೆ

ಮಂಗಳೂರಿನ ಕೊಟ್ಟಾರದಲ್ಲಿರುವ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ, ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜಾ, ಅಕ್ಷರಭ್ಯಾಸ ಪೂಜೆ, ಮಹಿಳಾ ಬೃಂದದಿಂದ ಸರಸ್ವತಿ ಕೀರ್ತನೆ, ಮೃತ್ಯುಂಜಯ ಶಾಂತಿ ಹೋಮ, ನವಗ್ರಹ ಶಾಂತಿ ಹೋಮ, ಮಹಿಳಾ ವೃಂದದಿಂದ ಕುಂಕುಮರ್ಚನೆ ಸೇವೆ ಹಾಗೂ ಸಪ್ತಸ್ವರ ಬಳಗದವರಿಂದ ಭಕ್ತಿಗೀತೆ, ರಾತ್ರಿ ದಿನ ಅನ್ನ ಸಂತರ್ಪಣೆ ಬಹಳ

ಸಜೀಪಮುನ್ನೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಿಂದ ಅಧಿಕಾರ ದುರುಪಯೋಗ: ಕಾನೂನು ಕ್ರಮಕ್ಕೆ ಎಸ್‌ಡಿಪಿಐ ಬೆಂಬಲಿತ ಸದಸ್ಯರ ಆಗ್ರಹ

ಬಂಟ್ವಾಳ: ಸಜೀಪಮುನ್ನೂರು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಯು ಅಧಿಕಾರ ದುರುಪಯೋಗ ಪಡಿಸುತ್ತಿದ್ದು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಕರ್ತವ್ಯದಿಂದ ವಜಾಗೊಳಿಸುವಂತೆ ಸಜೀಪಮುನ್ನೂರು ಗ್ರಾ.ಪಂ.ನ ಎಸ್‌ಡಿಪಿಐ ಬೆಂಬಲಿತ ಸದಸ್ಯರು ಆಗ್ರಹಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಸ್ಥಳೀಯ ನಾಯಕ ಮುಬಾರಕ್ ಕಾರಾಜೆ ಮಾತನಾಡಿ ಎಸ್‌ಡಿಪಿಐ ಬೆಂಬಲಿತ ೮ ಮಂದಿ ಸದಸ್ಯರನ್ನು ಪಂಚಾಯತಿ ಕಾರ್ಯ ಚಟುವಟಿಕೆಯಲ್ಲಿ  ಯಾವುದೇ

ಹಾಸನ: ನ.2ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ: ಐಜಿ ಡಾ. ಬೋರಲಿಂಗಯ್ಯ ಭೇಟಿ, ಪರಿಶೀಲನೆ

ಹಾಸನ: ನವೆಂಬರ್ 2ರಿಂದ ಆರಂಭವಾಗುವ ಹಾಸನಾಂಬೆ ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ಐಜಿ ಡಾ. ಬೋರಲಿಂಗಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.        ಹಾಸನ ಜಿಲ್ಲೆಯ ಡಿಸಿ ಸಿ. ಸತ್ಯಭಾಮ ಮತ್ತು ಎಸ್ಪಿ ಮಹಮದ್ ಸುಜೀತಾ ಹಾಗೂ ಉಪವಿಭಾಗಧಿಕಾರಿ ಮಾರುತಿ ಅವರಿಂದ ಮಾಹಿತಿ ಪಡೆದ ಮೈಸೂರು ದಕ್ಷಿಣ ವಲಯ ಐ.ಜಿ ಅವರು, ದೇವಸ್ಥಾನದ ಸರತಿ ಸಾಲು, ವಾಹನಗಳ ಪಾರ್ಕಿಂಗ್, ಭಕ್ತರು ಬಂದು ಹೋಗುವ ಸ್ಥಳ ಸೇರಿದಂತೆ ಇತರೆ ವ್ಯವಸ್ಥೆಯನ್ನು

ಮಂಗಳೂರು: .30ರಂದು ಶಾಸಕ ಅಶೋಕ್ಕುಮಾರ್ ರೈ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆ.30ರಂದು ಬೆಳಗ್ಗೆ 10.45ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ  ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ದೈಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ

ಬ್ಯಾಂಕ್ ಆಫ್ ಬರೋಡಾದಿಂದ ಬಾಬ್ ಲೈಟ್ ಉಳಿತಾಯ ಖಾತೆಯ ಪರಿಚಯ – ಜೀವಮಾನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಖಾತೆ

ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ “ಬಾಬ್ ಕಿ ಸಂಗ್, ತ್ಯೋಹಾರ್ ಕಿ ಉಮಂಗ್” ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ- ಜೀವಮಾನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಬ್ಯಾಂಕ್ ಖಾತೆಯನ್ನು ಪರಿಚಯಿಸಿದೆ. ಗ್ರಾಹಕರಿಗೆ ಯಾವುದೇ ಕನಿಷ್ಟ ಬ್ಯಾಲೆನ್ಸ್ ಅಗತ್ಯವಿಲ್ಲದ ಬ್ಯಾಂಕಿಂಗ್ ಅನುಭವವನ್ನು ನೀಡುತ್ತದೆ. ಇದಲ್ಲದೆ, ವಿವಿಧ ಗ್ರಾಹಕರ ವಿಭಾಗಗಳ ಅಗತ್ಯತೆಗಳನ್ನು ಪೂರೈಸಲು, ಖಾತೆಯಲ್ಲಿ ನಾಮಮಾತ್ರ