Home Articles posted by v4team (Page 383)

ಮಂಗಳೂರು: ಮಾಂಡವಿ ಮೋಟಾರ್ಸ್ ನೆಕ್ಸಾ || ಮುದ್ದು ಕೃಷ್ಣ ಆನ್‍ಲೈನ್ ಫೋಟೋ ಸ್ಪರ್ಧೆ, ವಿಜೇತರಿಗೆ ಬಹುಮಾನ ವಿತರಣೆ

ಮಂಗಳೂರಿನ ಏಪೋರ್ಟ್ ರಸ್ತೆಯಲ್ಲಿರುವ ಮಾಂಡವಿ ಮೋಟಾರ್ಸ್ ನೆಕ್ಸಾ ಕಾರು ಶೋರೂಂ ವತಿಯಿಂದ ಮುದ್ದು ಕೃಷ್ಣ ಆನ್‍ಲೈನ್ ಫೋಟೋ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಕಾರು ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ತನ್ನದೇ ಆದ ಚಾಪು ಮೂಡಿಸಿರುವ ನಗರದ ಏರ್ಪೋರ್ಟ್ ರಸ್ತೆಯಲ್ಲಿರುವ ನೆಕ್ಸಾ ಕಾರು

ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಯಿಂದ 30-09-2023 ರಂದು ಮಾದಕ ದೃವ್ಯ ಜಾಗೃತಿ ಜಾಥಾ

ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಪದವಿ, ಪದವಿ ಪೂರ್ವ, ಪ್ರೌಢ ಹಾಗೂ ಪ್ರಾಥಮಿಕ ವಿಭಾಗಗಳ ಜಂಟಿ ಆಶ್ರಯದಲ್ಲಿ “ಮಾದಕದೃವ್ಯ ಜಾಗೃತಿ ಜಾಥಾ”ವನ್ನು ಶನಿವಾರ, ಸಪ್ಟೆಂಬರ್ 30, 2023 ರಂದು ಬೆಳಗ್ಗೆ 9.15 ಕ್ಕೆ ಆಯೋಜಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕೋರ್ಟ್ ವಾರ್ಡಿನ ಕಾರ್ಪೊರೇಟರ್ ಶ್ರೀ ಎ ಸಿ ವಿನಯರಾಜ್ ಇವರು ಜಾಥಾಕ್ಕೆ ಚಾಲನೆ ನೀಡಲಿರುವರು. ಮಂಗಳೂರಿನ ಸಹಾಯಕ ಪೆÇೀಲಿಸ್ ಆಯುಕ್ತರಾದ ಶ್ರೀ ಎಸ್. ಮಹೇಶ್ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ

ಬ್ರಹ್ಮಾವರ : ರಾಜ್ಯ ಸರ್ಕಾರದ ವಿರುದ್ಧ ಧೋರಣೆ ಖಂಡಿಸಿ, ಲಾರಿ ಮತ್ತು ಟೆಂಪೋ ಚಾಲಕರಿಂದ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯ ಸರ್ಕಾರದ ವಿರುದ್ಧ ಧೋರಣೆಗಳನ್ನು ಖಂಡಿಸಿ ಲಾರಿ ಮತ್ತು ಟೆಂಪೋ ಚಾಲಕರು ಮುಷ್ಕರ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ನೂರಾರು ಲಾರಿ ಹಾಗೂ ಟೆಂಪೊಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅನಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಬ್ರಹ್ಮಾವರ ಭಾಗದಲ್ಲಿ ಐನೂರಕ್ಕೂ ಹೆಚ್ಚು ಲಾರಿ, ಟೆಂಪೋಗಳನ್ನು ರಸ್ತೆ ಬದಿ ಸಾಲಾಗಿ ನಿಲ್ಲಿಸಿ ಮುಷ್ಕರ ನಡೆಸುತ್ತಿದ್ದಾರೆ.

ಬೆಂಗಳೂರು: ಎನ್‍ಬಿಯ ಮಿಸ್ಟರ್, ಮಿಸ್, ಟೀನ್ ಕರ್ನಾಟಕ-2023ರ ಸೀಸನ್-4

ಎನ್‍ಬಿಯ ಮಿಸ್ಟರ್, ಮಿಸ್, ಟೀನ್ ಕರ್ನಾಟಕ-2023ರ ಸೀಸನ್ 4 ಬೆಂಗಳೂರಿನ ಫಾಕ್ಸ್‍ಗ್ಲೋವ್ ಇಂಟರ್‍ನ್ಯಾಶನಲ್ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಈ ಸ್ಪರ್ಧೆಗೆ ಕರ್ನಾಟಕದ ವಿವಿಧ ಭಾಗಗಳಿಂದ 35 ಸ್ಪರ್ಧಿಗಳು 3 ವಿಭಿನ್ನ ವಿಭಾಗಗಳಲ್ಲಿ ಸ್ಪರ್ಧಿಸಿದ್ದರು. ಎನ್‍ಬಿಯ ಮಿಸ್ಟರ್ ಕರ್ನಾಟಕದಲ್ಲಿ ವಿನ್ನರ್ ಆಗಿ ವಚನ ಎಸ್, 1ನೇ ರನ್ನರ್ ಅಪ್ ಸಂತೋಷ್ ಗೌಡ, ಎರಡನೇ ರನ್ನರ್ ಅಪ್ ಆಗಿ ಪ್ರಜ್ವಲ್ ಆಯ್ಕೆಯಾದರು. ಎನ್‍ಬಿಯ ಮಿಸ್

ಮಂಗಳೂರು: ಘನತ್ಯಾಜ್ಯ ನಿರ್ವಹಣೆ ಪ್ಯಾಕೇಜ್ ರದ್ದು, ಪ್ಯಾಕೇಜ್ ಅವೈಜ್ಞಾನಿಕವಾಗಿದೆ ಎಂದ ವಿಪಕ್ಷ ಸದಸ್ಯರು

ಮಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಗುತ್ತಿಗೆ ನೀಡಿರುವ ಹೊಸ ಪ್ಯಾಕೇಜ್ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ಮೊದಲೇ ರದ್ದು ಮಾಡುವ ಮಹತ್ವದ ತೀರ್ಮಾನವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಭೆ ನಿರ್ಣಯ ಕೈಗೊಂಡಿದೆ. ವೈಜ್ಞಾನಿಕ ಟೆಂಡರ್, ಅಧಿಕಾರಿಗಳ ಲೋಪ, ಹಿಂದಿನ ಟೆಂಡರ್‍ಗಿಂತ ಹಲವು ವಿಷಯ ಕೈಬಿಟ್ಟಿರುವ ಹಿನ್ನಲೆಯಲ್ಲಿ ಟೆಂಡರ್ ರದ್ದುಪಡಿಸಿ ಏಳು ವರ್ಷಗಳ ಅವಧಿಗೆ ಟೆಂಡರ್ ನೀಡಲು ಹೊಸ ಡಿಪಿಆರ್ ಮಂಡಿಸಲು ಮಹತ್ವದ ಸಭೆ

ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಉಳ್ಳಾಲ:ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚಚ್೯ ಬಳಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತೊಕ್ಕೊಟ್ಟು, ಕೃಷ್ಣ ನಗರ,ಲಚ್ಚಿಲ್ ನಿವಾಸಿ ನಾಗೇಶ್ (62)ಆತ್ಮ ಹತ್ಯೆಗೈದ ದುರ್ದೈವಿ.ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.ಇಂದು ಬೆಳಿಗ್ಗೆ

ಕಾರ್ಕಳ: ಈದ್ ಮಿಲಾದ್ ಹಬ್ಬವನ್ನು ಶಾಂತಿಯಿಂದ ಆಚರಿಸಿ, ಡಿವೈಎಸ್ಪಿ ಅರವಿಂದ ಕಲಗಜ್ಜಿ

ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ. ಯಾರೂ ಕೂಡ ಶಾಂತಿ ಕದಡುವ ಕೆಲಸ ಮಾಡಬೇಡಿ ಎಂದು ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗಜ್ಜಿ ಹೇಳಿದರು. ಅವರು ಕಾರ್ಕಳ ನಗರ ಠಾಣೆ ಮತ್ತು ಗ್ರಾಮಾಂತರ ಠಾಣೆ ವ್ಯಾಪ್ತಿಯ ಎಲ್ಲಾ ಮಸೀದಿಯ ಧರ್ಮಗುರುಗಳು ಮತ್ತು ಮಸೀದಿಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದರು. ಈದ್ ಮಿಲಾದ್ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸಂಪೂರ್ಣವಾದ ಭದ್ರತೆಯನ್ನು ಕೊಡುತ್ತೇವೆ. ಸಮಯದೊಳಗಡೆ ಸಭೆ, ಸಮಾರಂಭಗಳನ್ನು ಮುಕ್ತಾಯಗೊಳಿಸಬೇಕು ಎಂದರು. ಈ ಸಂದರ್ಭ

ಉಳ್ಳಾಲ: ರೋಹಿಣಿ ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನ ಬಿಡುಗಡೆ

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸಲಹಾ ಸಮಿತಿಯ ಹಿರಿಯ ಸದಸ್ಯೆ, ಮುಂಬಯಿಯ ಹೈಕೋರ್ಟ್ ನ್ಯಾಯವಾದಿ ರೋಹಿಣಿ ಜೆ.ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನವನ್ನು ಬಿಡುಗಡೆ ಹಾಗೂ ಕೃತಿಯ ಅರ್ಪಣೆ ಕಾರ್ಯಕ್ರಮ ಮಂಗಳೂರಿನ ಹೊಯಿಗೆಬೈಲ್ ರತ್ನಾ ನಿವಾಸದಲ್ಲಿ ನಡೆಯಿತು. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ಸಲಹಾ ಸಮಿತಿ ಸದಸ್ಯ ನ್ಯಾಯವಾದಿ ಬಿ.ಮೋಹಿದ್ಧೀನ್ ಮುಂಡ್ಕೂರು ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿ, ಧ್ಯೇಯೋದ್ದೇಶಗಳು ಚೆನ್ನಾಗಿದ್ದರೆ

ಉಳ್ಳಾಲ: ಡ್ರೈನೇಜ್ ನೀರಿನಲ್ಲಿ ತೊಕ್ಕೊಟ್ಟು ರಿಕ್ಷಾ ಚಾಲಕರ ಬದುಕು- ಪ್ರತಿಭಟನೆಗೆ ನಿರ್ಧಾರ

ಉಳ್ಳಾಲ: ಉಳ್ಳಾಲ ತಾಲೂಕಿನಲ್ಲೇ ಅತಿ ಹೆಚ್ಚು ರಿಕ್ಷಾ ಚಾಲಕರಿರುವ ತೊಕ್ಕೊಟ್ಟು ರಿಕ್ಷಾ ಚಾಲಕರು ಕಳೆದ ಎರಡೂವರೆ ತಿಂಗಳಿನಿಂದ ಸಂಡಾಸು ನೀರಿನ ಮೇಲೆಯೇ ನಿಂತು ದುಡಿಯುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಕಟ್ಟಡದ ಮಾಲೀಕರು ತ್ಯಾಜ್ಯ ನೀರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೆ ಸಮಸ್ಯೆ ನಿರ್ಮಾಣವಾಗಿದೆ. ದಿನದಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು, ವೃದ್ಧರು ಸೇರಿದಂತೆ ಲಕ್ಷದಷ್ಟು ಮಂದಿ ನಡೆದುಕೊಂಡು ಹೋಗುವ ರಸ್ತೆಯಲ್ಲೇ ತ್ಯಾಜ್ಯ ನೀರು ಹರಿದಾಡಿದರೂ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಮೂಡುಬಿದಿರೆ : 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಮೊದಲ ಬಾರಿ ಆಯ್ಕೆಯಾಗಿದೆ. ತಾಲೂಕಿನ ಎರಡನೇ ಅತೀ ದೊಡ್ಡ ಗ್ರಾಮವಾಗಿರುವ ಪುತ್ತಿಗೆ ಗ್ರಾಮ ಪಂಚಾಯತ್ ಜನರ ಗುಣಮಟ್ಟವನ್ನು ಹೆಚ್ಚಿಸಲು ಕೈಗೊಂಡ ಕಾರ್ಯಕ್ರಮಗಳು, ಹಣಕಾಸಿನ ವಿಷಯದಲ್ಲಿ ಶಿಸ್ತುಬದ್ಧ ಕ್ರಮಗಳು, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ, ಉತ್ತಮ ಆಡಳಿತ, ಗ್ರಾ.ಪಂಚಾಯತ್ ಸೇವೆಗಳನ್ನು ಕ್ಲಪ್ತ ಸಮಯದಲ್ಲಿ ಗ್ರಾಮದ ನಾಗರಿಕರಿಗೆ