ಮೂಡುಬಿದಿರೆ: ಪೌರಕಾರ್ಮಿಕರ ದಿನದಂದು ಪುರಸಭೆಯು ಪೌರಕಾರ್ಮಿಕರಿಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಅವರ ಮನಸನ್ನು ಒಂದು ದಿನದ ಮಟ್ಟಿಗೆ ರಿಲಾಕ್ಸ್ ಆಗುವಂತೆ ನೋಡಬೇಕಾಗಿತ್ತು ಆದರೆ ಮೂಡುಬಿದಿರೆ ಪುರಸಭೆಯ ಪೌರಕಾರ್ಮಿಕರು ಮಾತ್ರ ಈ ದಿನದಂದು ಸ್ವಚ್ಛತಾ ಕಾರ್ಯವನ್ನು ಕೈಗೊಂಡು ಗಮನ ಸೆಳೆದಿದ್ದಾರೆ. ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ವತಿಯಿಂದ
ಕಾಮಾಕ್ಷಿ ಎಂಟರ್ಪ್ರೈಸಸ್ ವತಿಯಿಂದ ಅಪ್ಸರಾ ಐಸ್ಕ್ರೀಂನ ಪ್ರಾಂಚೈಸಿ ಸೆಪ್ಟಂಬರ್ 29ರಂದು ಶುಭಾರಂಭಗೊಳ್ಳಲಿದೆ. ಮಂಗಳೂರಿನ ಕದ್ರಿಯ ಸಿಟಿ ಗೇಟ್ ಕಮರ್ಶಿಯಲ್ ಕಾಂಪ್ಲೆಕ್ಸ್ನಲ್ಲಿ ಕಾರ್ಯಾರಂಭಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ 9076097410ಗೆ ಸಂಪರ್ಕಿಸಬಹುದು.
ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಸೆ.24 ರಂದು ಸಂಜೆ ಮನೆಯಿಂದ ಹೊರಟವರು ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ,ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ತೆರಳಿ ಅಲ್ಲಿ ರೈಲ್ವೇ ಹಳಿಯಲ್ಲಿ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರಾವಳಿಯ ಪ್ರತಿಷ್ಠಿತ ಸುದ್ದಿ ವಾಹಿನಿ ವಿ4 ನ್ಯೂಸ್ ಮತ್ತು ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ವಿ4 ನ್ಯೂಸ್ನ ಕಾಮಿಡಿ ಪ್ರೀಮಿಯರ್ ಲೀಗ್ಗೆ ಅದ್ಧೂರಿ ಚಾಲನೆ ದೊರೆಯಿತು. ಸಭಾ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್ನ ಪ್ರಬಂಧಕರಾದ ಶಿವಪ್ರಸಾದ್ ರೈ ಶಿಬರೂರು
ಮನೆಯಿಂದ ಹೊರಗೆ ತೆರಳಿದ ಯುವಕನೋರ್ವ ವಾರಗಳ ಬಳಿಕ ನಾಯಿಯ ಸಹಾಯದಿಂದ ಮನೆಗೆ ಮರಳಿದ ಘಟನೆ ಉಡುಪಿಯ ಅಮವಾಸೆ ಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮಟ್ಟಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ನಿವಾಸಿ ಶೀನ ನಾಯ್ಕ ಅವರ ಮಗ ವಿವೇಕಾನಂದ (28) ನಾಪತ್ತೆಯಾಗಿದ್ದ ಯುವಕ. ವಿವೇಕಾನಂದ ಸೆಪ್ಟೆಂಬರ್ 16 ರಂದು ಮನೆಯಿಂದಲೇ ನಾಪತ್ತೆಯಾಗಿದ್ದ. ಮನೆಯಿಂದ ಹೊರಡುವಾಗ ಮನೆಯ ನಾಯಿ ಕೂಡು ವಿವೇಕಾನಂದ ಅವರ ಜೊತೆ ತೆರಳಿತ್ತು. ವಾರಗಳ ಕಾಲ ಕಾಡಿನಲ್ಲಿ ಅಲೆದಾಡಿದ್ದ
ಕಾರ್ಕಳ: ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ ಕರ್ನಾಟಕ ಮೊದಲ ರಾಜ್ಯವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಹೇಳಿದರು. ಅವರು ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದರು. 1993 ರಲ್ಲಿಯೆ ಮಹಿಳೆಯರಿಗೆ ಮೀಸಲಾತಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ನಲ್ಲಿ 50% ಮೀಸಲಾತಿ ಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿತ್ತು. ಅಂದಿನ
ಎಂ.ಸಿ.ಸಿ. ಬ್ಯಾಂಕಿನ ವಾರ್ಷಿಕ ಮಹಾಸಭೆಯು ಮಂಗಳೂರಿನ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೋ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ ಮತ್ತು ವೃತ್ತಿಪರ ನಿರ್ದೇಶಕ ಸಿ.ಜಿ.ಪಿಂಟೊ ಇವರು ದೀಪ ಬೆಳಗಿಸುವ ಮೂಲಕ ಸಭೆಯನ್ನು ಆರಂಭಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ, ಸದಸ್ಯರಾದ ಆಲನ್ ಸಿ ಪಿರೇರಾ
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ
ಕನ್ನಡ ಸಂಘ ಬಹರೈನ್ದಿಂದ ಯಕ್ಷ ವೈಭವ –2023ರ ಅಂಗವಾಗಿ ಸಂಘದ ಯಕ್ಷಗಾನ ಕಲಾವಿದರಿಂದ ನಾಟ್ಯಗುರು ದೀಪಕ್ ರಾವ್ ಪೇಜಾವರ ನಿರ್ದೇಶನದಲ್ಲಿ ಶ್ರೀಕೃಷ್ಣ ಲೀಲಾಮೃತ ಎಂಬ ಯಕ್ಷಗಾನ ಪ್ರದರ್ಶನದ ಪೂರ್ವ ತಯಾರಿಗೆ ಮುಹೂರ್ತ ಪೂಜೆಯು ನೆರವೇರಿತು. ಸೆಪ್ಟೆಂಬರ್ 29 ರಂದು ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿರುವ ಈ ಯಕ್ಷಗಾನ ಪ್ರದರ್ಶನದ ಪೆÇೀಸ್ಟರ್ ಬಿಡುಗಡೆ ಕಾರ್ಯಕ್ರಮವೂ ಇದೇ ಸಂದರ್ಭದಲ್ಲಿ ನೆರವೇರಿತು. ನಾಟ್ಯಗುರು ಶ್ರೀ ದೀಪಕ್ ರಾವ್ ಪೇಜಾವರ, ಸಂಘದ ಹಿರಿಯ
ಕಡಬ, ಸೆ. 24: ಚಲಿಸುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿನಿಂದ ವ್ಯಕ್ತಿಯೊಬ್ಬರು ಕೆಳಕ್ಕೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಕಡಬ ಪೇಟೆಯ ಅಂಚೆ ಕಛೇರಿ ಬಳಿ ರವಿವಾರ ಸಂಜೆ ನಡೆದಿದೆ. ಕಡಬ ಸಮೀಪದ ಕಳಾರ ಕುದ್ಕೊಳಿ ನಿವಾಸಿ ಅಚ್ಚುತ ಗೌಡ (63) ಮೃತ ಪಟ್ಟವರು. ಕಡಬದಿಂದ ಮಂಗಳೂರಿನಿಂದ ತೆರಳುತ್ತಿದ್ದ ಬಸ್ಸು ಏರಿ ಮನೆಯ ಕಡೆ ಹೊರಟ ಬಸ್ಸು ಕಡಬ ಅಂಚೆ ಕಛೇರಿ ಬಳಿ ತಲುಪುತ್ತಿದ್ದoತೆಯೇ ತಿರುವಿನಲ್ಲಿ ಆಯತಪ್ಪಿ ಕೆಳಕ್ಕೆ ಎಸೆಯಲ್ಪಟ್ಟಿದ್ದಾರೆ. ಅವರೊಂದಿಗೆ ಬಲ್ಯದ ದೇರಾಜೆ




























