ಮಂಜೇಶ್ವರ ಕುಳೂರು ಸಂತಡ್ಕದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರದ ಪರಿಸರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ ಗಣಪತಿಯ ಪ್ರತಿಷ್ಠಾಪನೆಗೊಂಡು, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಂತರ ಮೆರವಣಿಗೆ ವಾದ್ಯ ಘೋಷಣೆ ಭಜನಾ ತಂಡಗಳ
ರಾಜ್ಯದಲ್ಲಿ ಹುಕ್ಕಾ ಬಾರ್ಗಳಿಂದ ತೊಂದರೆ ಆಗುತ್ತಿದೆ. ಸಾರ್ವಜನಿಕರಿಗೆ ಆನಾರೋಗ್ಯ ಕಾಡುತ್ತಿದೆ. ಕಾಯ್ದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧದ ಬಗ್ಗೆ ಚಿಂತನೆ ನಡೆಸಲಾಗಿದೆ. ಹುಕ್ಕಾ ಬಾರ್ಗಳಿಂದ ಬೇರೆ ಬೇರೆ ದುಷ್ಪಾರಿಣಾಮಗಳು ಉಂಟಾಗುತ್ತಿದೆ. ಸಾರ್ವಜನಿಕ
ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡುಬಿದಿರೆಯ ಕಡಲಕೆರೆ ಬಳಿಯಿರುವ ಸೃಷ್ಠಿ ಗಾರ್ಡನ್ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆಯಿತು. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರುಗಳಿಗೆ, ವ್ಯವಸ್ಥಾಪಕರಿಗೆ ಹಾಗೂ ತೀರ್ಪುಗಾರರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿದ ಡಾ.ದೇವಿಪ್ರಸಾದ್ ಶೆಟ್ಟಿ
ಮಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗಣೇಶೋತ್ಸವಕ್ಕೆ ಕೇಳಿಬಂದ ಅಪಸ್ವರಗಳ ನಡುವೆಯೂ ಅದೇ ಸ್ಥಳದಲ್ಲಿ ಉಪಕುಲಪತಿಗಳ ಸಮಕ್ಷಮದಲ್ಲಿ ಪರಿಸರಪೂರಕ ಗಣೇಶನ ವಿಗ್ರಹವನ್ನಿಟ್ಟು ಗಣೇಶೋತ್ಸವ ಆಚರಣೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಕೊಣಾಜೆ ವಿಶ್ವವಿದ್ಯಾನಿಲಯದ ಕ್ಯಾಂಪಸ್ ಸುತ್ತ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ನಸುಕಿನ ಜಾವ ಬಂದೋಬಸ್ತ್ ನಡುವೆ ಗಣೇಶನ ವಿಗ್ರಹವನ್ನು ಮಂಗಳ ಸಭಾಂಗಣಕ್ಕೆ ತರಲಾಯಿತು. ಪರಿಸರ
ಉಳ್ಳಾಲ : ಉಡುಪಿಯ ರವಿ ಕಟಪಾಡಿ ಮಾದರಿಯಲ್ಲಿ ಉಳ್ಳಾಲ ಧರ್ಮನಗರ ಜ್ಯೂನಿಯರ್ ಬಾಯ್ಸ್ ನ ಯುವಕರ ತಂಡ ಎರಡರ ಮಗುವಿನ ಚಿಕಿತ್ಸೆಗೆ ವಿಭಿನ್ನ ರೀತಿಯ ವೇಷತೊಟ್ಟು ಸಂಗ್ರಹಿಸಿದ ನಗದನ್ನು ಹೆತ್ತವರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಉಳ್ಳಾಲ ತೆಂಗಿನಹಿತ್ಲು ರಾಹುಗುಳಿಗ ಬನದ ಅರ್ಚಕ ಭಾಸ್ಕರ್ ತೆಂಗಿನಹಿತ್ಲು ಅವರು ಬಂಟ್ವಾಳ ತಾಲೂಕಿನ ಮಂಕುಡೆಕೋಡಿ ನಿವಾಸಿ ಎರಡರ ಹರೆಯದ ನ್ಯೂರೋಬ್ಲಾಸ್ಟೋಮಾ (ಕ್ಯಾನ್ಸರ್) ಕಾಯಿಲೆಯಿಂದ ಬಳಲುತ್ತಿರುವ ಹೇಮಂತ್
ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇರ್ವತ್ತೂರುಪದವು ಆಶ್ರಯದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಇರ್ವತ್ತೂರು ಗಣೇಶನ ಕಟ್ಟೆಯ ಬಳಿ ನಡೆಯಿತು. ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ರಾಮಕೃಷ್ಣ ಎಸ್. ಧ್ವಜಾರೋಹಣ ನೆರವೇರಿಸಿದರು. ಆಟೋಟ ಸ್ಪರ್ಧೆ ಹಾಗೂ ಸಭಾ ಕಾರ್ಯಕ್ರಮಕ್ಕೆ ಇರ್ವತ್ತೂರು ಗ್ರಾ.ಪಂ. ಅಧ್ಯಕ್ಷರಾದ ಮಾಲತಿ ಚಾಲನೆ ನೀಡಿದರು. ಇರ್ವತ್ತೂರು ಗ್ರಾ.ಪಂ. ಉಪಾಧ್ಯಕ್ಷರಾದ
ಶ್ರೀ ಗಣೇಶೋತ್ಸವ ಹಬ್ಬದ ಪ್ರಯುಕ್ತ ಸೋನಾ ಟಿವಿಎಸ್ ವತಿಯಿಂದ ವಿಶೇಷ ಆಫರ್ಗಳನ್ನು ನೀಡುತ್ತಿದ್ದಾರೆ. ಬಿ.ಸಿ ರೋಡ್, ತೊಕ್ಕೊಟ್ಟು, ಮುಡಿಪು ಸಿದ್ಧಕಟ್ಟೆಯ ಸೋನಾ ಟಿವಿಎಸ್ನ ಶೋರೂಂಗೆ ಭೇಟಿ ನೀಡಿ ವಿಶೇಷ ಆಫರ್ಗಳ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9449920789, 9606903065 ಸಂಪರ್ಕಿಸಬಹುದು.
ಮಂಗಲ್ಪಾಡಿ ಮುಟ್ಟಂ ನವೋದಯ ಮಿತ್ರ ವೃಂದದ ವತಿಯಿಂದ 32ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಮುಟ್ಟಂನಲ್ಲಿ ಜರುಗಿತು. ಧಾರ್ಮಿಕ ಕಾರ್ಯಕ್ರಮದಂಗವಾಗಿ ಚಂದ್ರಶೇಖರ ನಾವಡ ಬಜಕೊಡ್ಲು ಅವರ ಪೌರೋಹಿತ್ಯದದಲ್ಲಿ ಬೆಳಿಗ್ಗೆ ಶ್ರೀ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಗಣಹೋಮ, ಪ್ರತಿಷ್ಠೆ ಪೂಜೆ, ಸಾಮೂಹಿಕ ಪ್ರಾರ್ಥನೆ ನೆರವೇರಿತು. ಸೀರೆ ಶ್ರೀ ಶಂಕರನಾರಾಯಣ ಭಜನಾ ಸಂಘ ಶಿರಿಯ ವತಿಯಿಂದ ಮತ್ತು ಅಡ್ಕ ಶ್ರೀ ಭಗವತೀ ಮಹಿಳಾ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ ನಡೆಯಿತು.
ಬೈಂದೂರಿನ ಬವಳಾಡಿ- ಗಂಟಿಹೊಳೆಯ ವಿವೇಕಾನಂದ ಯುವಕ ಮಂಡಳಿಯ ಆಶ್ರಯದಲ್ಲಿ 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕÀ ಗುರುರಾಜ್ ಗಂಟಿಹೊಳೆ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ನಡೆಯಿತು. ಗುರುರಾಜ್ ಗಂಟಿಹೊಳೆ ಯವರು ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬವಳಾಡಿಯಲ್ಲಿಯೂ, ಪ್ರೌಢ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದದಲ್ಲಿಯೂ ಹಾಗೂ ಕಾಲೇಜು ಶಿಕ್ಷಣವನ್ನು ಸರಕಾರಿ
ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿಚಾರದಲ್ಲಿ ವಿನಾಕಾರಣ ಉಂಟಾಗಿದ್ದ ಗೊಂದಲಕ್ಕೆ ಸಂಬಂಧಿಸಿ “ಈ ಹಿಂದಿನಂತೆ ಗಣೇಶೋತ್ಸವ ಮುಂದುವರಿಸಿಕೊಂಡು ಹೋಗುವಂತೆ ಬಂದಿರುವ ಆದೇಶವು ಇಷ್ಟು ದಿನ ವಿವಾದ ಸೃಷ್ಟಿಸಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದ್ಧವರಿಗೆ ಸ್ಪಷ್ಟ ಸಂದೇಶವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಯಾವುದೇ ಗೊಂದಲಕ್ಕೂ ಆಸ್ಪದ ನೀಡದೇ ಈ ಹಿಂದಿನಂತೆ ಗಣೇಶೋತ್ಸವ ನಡೆಸುವ ಬಗ್ಗೆ ಬಂದಿರುವ ಆದೇಶವು ಇಡೀ ಹಿಂದೂ ಸಮಾಜದ ಹೋರಾಟಕ್ಕೆ




























