ವೈದ್ಯನಾಥೇಶ್ವರ ಯಕ್ಷಗಾನ ನಾಟ್ಯ ಕಲಾ ಕೇಂದ್ರದ ವತಿಯಿಂದ ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಯಕ್ಷಗಾನ ನಾಟ್ಯ ತರಬೇತಿ ತರಗತಿಯು ಸೆ.17ರಂದು ದೀಪ ಪ್ರಜ್ವಲನೆಯ ಮೂಲಕ ಯಕ್ಷಗಾನ ನಾಟ್ಯ ತರಬೇತಿ ತರಗತಿನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ವೇದಮೂರ್ತಿಬಾಲಕೃಷ್ಣ ಕೆದಿಲಾಯ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ
ಬ್ರಹ್ಮಾವರದಲ್ಲಿ 41ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಗಣಪತಿ ವಿಗ್ರಹ ಮತ್ತು ಅಲಂಕಾರ ಈ ಬಾರಿ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ವತಿಯಿಂದ ನಡೆಯಲಿದೆ. ಬೈಟ್: ಶೇಖರ ದೇವಾಡಿಗ ಅಧ್ಯಕ್ಷರು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ವಿಭಿನ್ನ ಕಾರ್ಯಕ್ರಮವನ್ನು ನಡೆಸಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ನಿರ್ಧರಿಸಿದ್ದಾರೆ. ಗಣಪತಿಗೆ ಕಿರೀಟವನ್ನು ಮತ್ತು ಚೌತಿಯ ಸಮಯದಲ್ಲಿ ಅಲಂಕಾರವನ್ನು ತಿರುಪತಿ ತಿಮ್ಮಪ್ಪನ ಮಾದರಿಯಲ್ಲಿ ಗಣಪತಿ ಮೂರ್ತಿಯನ್ನು ಸಿಂಗರಿಸುವ ಹೊಸ
ಬ್ರಹ್ಮಾವರ ಬಿಲ್ಲವ ಸಮಾಜ ಸೇವಾ ಸಂಘದಿಂದ ಬ್ರಹ್ಮಾವರ ನಾರಾಯಣ ಗುರು ಸಭಾ ಭವನದ ಬಳಿ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಸೋಲೂರು ಮಠದ ವಿಖ್ಯಾತಾನಂದ ಸ್ವಾಮೀಜಿ ಅವರು ಶಿಲಾನ್ಯಾಸ ನೆರವೇರಿಸಿದರು. ಸಭಾ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಮಹಾ ಪುರುಷರ ದಿನಾಚರಣೆಗೆ ಸರಕಾರಿ ರಜೆ ನೀಡಿದಲ್ಲಿ ಮಹಾಪುರಷರನ್ನು ಮರೆತು ರಜೆಯ ಮಜಾ ಹೆಚ್ಚುತ್ತದೆ.
ಉಳ್ಳಾಲ: ಬೈಕಿನಲ್ಲಿ ಬಂದು ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಹಣಕ್ಕಾಗಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೋಲಿಸ್ರ ತಂಡ ಬಂಧಿಸಿದ್ದಾರೆ. ತ್ರಿಶೂರ್ ವಡಕಂಚೇರಿ ನಿವಾಸಿ ಶೇಕ್ ತನ್ಸಿರ್ (20) ಮತ್ತು ಕೋಝಿಕ್ಕೋಡ್ ಕಡಮೇರಿ ನಿವಾಸಿ ಸಾಯಿಕೃಷ್ಣ ( 19) ಬಂಧಿತರು. ಇಬ್ಬರಿಂದ 2.77 ಗ್ರಾಂ ತೂಕದ ನಿಷೇಧಿತ ಎಂಡಿಎಂಎ, ಎರಡು ಮೊಬೈಲ್ ಹಾಗೂ ರೂ. 50,000 ಬೆಲೆಬಾಳುವ ಎಫ್ ಝೆಡ್ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ
ಒವರ್ ಟೇಕ್ ಭರಾಟೆಯಿಂದ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಗದ್ದೆಗೆ ಉರುಳಿದ ಘಟನೆ ಪಡುಬಿದ್ರಿಯ ಅಲಂಗಾರು ಬಳಿ ನಡೆದಿದೆ. ಕುಂದಾಪುರ ಮೂಲದ ಐ ಟೆನ್ ಕಾರು ಹಾಗೂ ಕೋಟ ಮೂಲದ ಶಿಪ್ಟ್ ಕಾರು ಅಪಘಾತಕ್ಕೆ ತುತ್ತಾಗಿದೆ. ಎರಡೂ ಕಾರುಗಳಲ್ಲೂ ಚಾಲಕರು ಮಾತ್ರ ಇದ್ದು ಶಿಪ್ಟ್ ಕಾರಿನ ಚಾಲಕ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಭಾಗದಲ್ಲಿ ಹೆದ್ದಾರಿ ಬಹಳ ಅಪಾಯಕಾರಿ ತಿರುವು
ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಿಜೆಪಿ ಬೈಂದೂರು ಮಂಡಲ ವತಿಯಿಂದ ದೇಶದಾದ್ಯಂತ ನಡೆಯುತ್ತಿರುವ ಸೇವಾ ಪಾಕ್ಷಿಕ ದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಬೈಂದೂರಿನ ಅಂಬಿಕಾ ಇಂಟರ್ನ್ಯಾಷನಲ್ ಹೋಟೆಲ್ ನ ಶಾರದಾ ಸಭಾಂಗಣದಲ್ಲಿ ನಡೆಯಿತು. ಚಿತ್ತೂರು ಮತ್ತು ತ್ರಾಸಿಯಲ್ಲಿ ಚಾ ಫೆ ಚರ್ಚಾ ಕಾರ್ಯಕ್ರಮವು ನಡೆಯಿತು.
ಕುಂದಾಪುರ: ದಲಿತ ಸಮುದಾಯದ ಮನೆಗಳೇ ಇಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಾಗಿದ್ದು, ದಲಿತರು ಭವನವನ್ನು ಬಳಸಬಾರದು ಎನ್ನುವ ದೃಷ್ಠಿಯಲ್ಲಿ ನಿರ್ಮಿಸಿದಂತಿದೆ. ಅಂಬೇಡ್ಕರ್ ಭವನ ನಿರ್ಮಾಣದ ಹಿಂದಿನ ಉದ್ದೇಶವೇನು? ಯಾರ ಲಾಭಕ್ಕಾಗಿ ಈ ಕಟ್ಟಡ ನಿರ್ಮಾಣ ಮಾಡಲಾಗಿದೆ ಎನ್ನುವುದರ ಕುರಿತು ಸಮಗ್ರ ತನಿಖೆ ನಡೆಯಲಿ ಎಂದು ದಸಂಸ ಮುಖಂಡ ರಾಜು ಬೆಟ್ಟಿನಮನೆ ಆಗ್ರಹಿಸಿದ್ದಾರೆ. ಗೋಪಾಡಿ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಮಾತನಾಡಿದ
ಕಮ್ಯುನಿಟಿ ಹೆಲ್ತ್ ನರ್ಸಿಂಗ್ ವಿಭಾಗದ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ನ ಸಹಾಯಕ ಪ್ರಾಧ್ಯಾಪಕರಾದ ಶೈಸಿಲ್ ಮ್ಯಾಥ್ಯೂ ಇವರು “ಜೀವನಶೈಲಿ ಅಭ್ಯಾಸಗಳು, ಹದಿಹರೆಯದವರ ಬಾಡಿ ಮಾಸ್ ಇಂಡೆಕ್ಸ್ನಿಂದ ಅಧಿಕ ತೂಕ ಮತ್ತು ಸ್ಥೂಲಕಾಯದ ಬಗ್ಗೆ ಪೋಷಕರನ್ನು ಒಳಗೊಂಡಿರುವ ಬಹು-ಘಟಕ ಮಧ್ಯಸ್ಥಿಕೆ ಕಾರ್ಯಕ್ರಮ” ಎಂಬುದರ ಬಗ್ಗೆ ತಮ್ಮ ತನ್ನ ಪಿಎಚ್ಡಿ ಪ್ರಬಂಧವನ್ನು ಮಂಗಳವಾರ, ಸೆಪ್ಟೆಂಬರ್ 12, 2023 ರಂದು ಮಂಡಿಸಿದ್ದರು. ಇದು ಜೀವನಶೈಲಿಯ ಅಭ್ಯಾಸಗಳ
ದುಬಾಯಿಯಲ್ಲಿ ಗೀಸೈಸ್ನ ಮದಿನ ಹೈಪರ್ ಮಾರುಕಟ್ಟೆ ಸಮೀಪದಲ್ಲಿರುವ ಆಕ್ಸ್ಫರ್ಡ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಸಂಭ್ರಮದಿಂದ ಆಚರಿಸಿದರು. ಬೆಳಿಗ್ಗೆ ಗಂಟೆ 9.೦೦ ಕ್ಕೆ ಪೂಜಾ ಸಂಕಲ್ಪದಿಂದ ಆರಂಭವಾಗಿ ಸಂಜೆ 5.೦೦ ಗಂಟೆಗೆ ತನಕ, ಭಜನೆ, ವಿಷ್ಣು ಸಹಸ್ರನಾಮ, ಶ್ರೀಕೃಷ್ಣ ವೇಷ ಸ್ಪರ್ಧೆ, ಜಾನಪದ ಆಟೋಟಗಳು, ಮುಂತಾದ ಅನೇಕ ವೈಶಿಷ್ಯಗಳ ಜೊತೆ ಮಹಾಮಂಗಳಾರತಿ, ವೈಭವದ ವಿಠಲ ಪಿಂಡಿ, ಮೊಸುರುಕುಡಿಕೆ, ಮೆರವಣಿಗೆ ಹೀಗೆ
ಉಪ್ಪಳ: ಕಲಾವಿದ, ನಿರ್ದೇಶಕ, ಪ್ರಸ್ತುತ ಅಧ್ಯಾಪಕರಾಗಿರುವ ಮೂಲತಃ ಉಪ್ಪಳ ಐಲ ನಿವಾಸಿಯೂ ಇದೀಗ ಮಂಗಳೂರು ಬಿಕರ್ಣಕಟ್ಟೆಯಲ್ಲಿ ವಾಸಿಸುತಿದ್ದ ನವೀನ್ ಚಂದ್ರ ಐಲ (54) ಹೃದಯಾಘಾತಗೊಂಡು ರಾತ್ರಿ ಸ್ವ-ಗೃಹದಲ್ಲಿ ನಿಧನರಾದರು. ಉಪ್ಪಳ, ಐಲ ಬೋವಿ ಶಾಲಾ ಬಳಿಯ ಶ್ರೀ ಗುತ್ಯಮ್ಮ ಭಗವತೀ ಕ್ಷೇತ್ರ ಸಮೀಪ ನಿವಾಸಿಯಾಗಿರುವ ದಿ.ಕಣ್ಣ ಪೂಜಾರಿ – ದಿ. ಲಕ್ಷ್ಮಿ ದಂಪತಿ ಪುತ್ರರಾಗಿರುವ ನವೀನ್ ಚಂದ್ರ ಐಲರವರು ಮಂಗಳೂರಿನ ಬಿಕರ್ಣಕಟ್ಟೆಯಲ್ಲಿ ಕಳೆದ 9 ವರ್ಷಗಳಿಂದ




























