Home Articles posted by v4team (Page 393)

ಮಂಗಳೂರು: ಸೆ.16ರಂದು ಫಿಜ್ಜಾ ಬೈ ನೆಕ್ಸಸ್ ಮಾಲ್‍ನಲ್ಲಿ ಅಜ್ಜ ಅಜ್ಜಿಯರ ದಿನಾಚರಣೆ || BEST DRESSED GRANDPARENT CONTEST

ಮೋಮ್ ವತಿಯಿಂದ ಇಎಲ್‍ಸಿ ಮತ್ತು ಸಿಎಫ್‍ಎಎಲ್ ಸಹಯೋಗದೊಂದಿಗೆ ಸೆ.16ರಂದು ಅಜ್ಜ ಅಜ್ಜಿಯರ ದಿನದ ಆಚರಣೆ ಕಾರ್ಯಕ್ರಮವು ನಗರದ ಫಿಜ್ಜಾ ಬೈ ನೆಕ್ಸಸ್ ಮಾಲ್‍ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಪ್ರಾಯೋಜಕರಾಗಿ ಆಯನ್, ಸಹ ಪ್ರಾಯೋಜಕರಾಗಿ ಮರಿಯನ್, ಮೀಡಿಯಾ ಪಾರ್ಟನರ್ ಆಗಿ ವಿ4 ನ್ಯೂಸ್, ಸೋಶಿಯಲ್ ಮೀಡಿಯಾ ಪಾರ್ಟನರ್ ಆಗಿ ಮ್ಯಾಂಗಲೂರು ಮೇರಿ

ಅಕ್ಟೋಬರ್ 22 : ಫಾದರ್ ಮ್ಯಾಥ್ಯು ವಾಸ್ ರವರ ಸ್ಮರಣಾರ್ಥ ಇಂಟರ್ ಪ್ಯಾರಿಶ್ ಫುಟ್‌ಬಾಲ್ (ಪುರುಷರಿಗೆ) ಮತ್ತು ತ್ರೋಬಾಲ್ (ಮಹಿಳೆಯರಿಗೆ) ಟೂರ್ನಮೆಂಟ್

ಸಮಾಜ ಮತ್ತು ಕಥೊಲಿಕ್ ಸಭೆಗಾಗಿ ನಿಸ್ವಾರ್ಥ ಸೇವೆ ನೀಡಿದ ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟಿನ ಸ್ಥಾಪಕ ಟ್ರಸ್ಟಿ, ಫಾದರ್ ಮ್ಯಾಥ್ಯು ವಾಸ್ ಇವರ ಸ್ಮರಣಾರ್ಥವಾಗಿ ಕಮ್ಯುನಿಟಿ ಎಂಪವರ್‌ಮೆಂಟ್ ಟ್ರಸ್ಟ್(ರಿ) ಮಂಗಳೂರು, ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಶಿಯೇಶನ್ ಮಂಗಳೂರು, ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಮತ್ತು ಕೆಥೊಲಿಕ್ ಸಭಾ, ಉಡುಪಿ ಪ್ರದೇಶ (ರಿ) ಇವರ ಸಹಯೋಗದಲ್ಲಿ ಇಂಟರ್ ಪ್ಯಾರಿಶ್ ಫುಟ್‌ಬಾಲ್ (ಪುರುಷರಿಗೆ) ಮತ್ತು ತ್ರೋಬಾಲ್ (ಮಹಿಳೆಯರಿಗೆ)

ಉಡುಪಿ: ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಕಂಟೇನರ್ ಲಾರಿಯಲ್ಲಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆಯ ತೊಟ್ಟಂನಲ್ಲಿ ನಡೆದಿದೆ.ಮೃತರನ್ನು ಒರಿಸ್ಸಾ ಮೂಲದ ಬಾಬುಲ್ಲ (38) ಹಾಗೂ ಭಾಸ್ಕರ್ (40) ಎಂದು ಗುರುತಿಸಲಾಗಿದೆ. ತೊಟ್ಟಂನಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಮನೆಗೆ ಗ್ರಾನೈಟ್ ತರಲಾಗಿತ್ತು.ಕಂಟೇನರ್ ಲಾರಿಯಲ್ಲಿದ್ದ ಗ್ರಾನೈಟ್ ಇಳಿಸುವಾಗ ಆಕಸ್ಮಿಕವಾಗಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಬೊಮ್ಮಾಯಿ

ಚೈತ್ರಾ ಕುಂದಾಪುರ ಪ್ರಕರಣದ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ.ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ಯಾರೇ ಇದ್ದರೂ ಉಗ್ರ ಶಿಕ್ಷೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಟಕೆಟ್ ಕೊಡಿಸುತ್ತೇವೆಂದು ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧವಿಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡುತ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ

ಬರ ಪೀಡಿತ ಪ್ರದೇಶಗಳ ಘೋಷಣೆಗೆ ಸರ್ಕಾರದ ಮೀನಾಮೇಷ: ಬೊಮ್ಮಾಯಿ ಆರೋಪ

ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಘೋಷಣೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ವಸ್ತುಸ್ಥಿತಿ ವರದಿಯಲ್ಲಿಯೇ ಸರ್ಕಾರ ಮಗ್ನವಾಗಿದೆ. ಕೂಡಲೇ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿ ಬೆಳೆ ನಷ್ಟ ಪರಿಹಾರವನ್ನು ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಬೇಕು ಎಂಬ ಮನೋಭಾವ ಈಗಿನ ಸರ್ಕಾರಕ್ಕಿಲ್ಲ. ಜನಪರ ಆಡಳಿತ ಮಾಡುವ ಧೋರಣೆಯೂ ರಾಜ್ಯದ ಸರ್ಕಾರಕ್ಕಿಲ್ಲ.

ವಿಟ್ಲ: ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದ ಸಮುದಾಯ ಭವನಕ್ಕೆ ಶಿಲಾನ್ಯಾಸ

ದಕ್ಷಿಣ ಕನ್ನಡ ಜಿಲ್ಲೆಗೆ ಗೃಹ ಲಕ್ಷ್ಮಿ ಯೋಜನೆಗಾಗಿ 60ಕೋಟಿ ರೂಪಾಯಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ತುಂಬುವ ಮೂಲಕ ಕುಟುಂಬವನ್ನು ಸದೃಢವಾಗಿಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದಲ್ಲಿ ಸಮುದಾಯ ಭವನದ ಶಿಲಾನ್ಯಾಸವನ್ನು ನಡೆಸಿ ಮಾತನಾಡಿದರು. ಕ್ರೈಸ್ತ ಅಕಾಡೆಮಿಯ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಚರ್ಚ್ ಬಳಿಯ ಇಂಟರ್ ಲಾಕ್ ಅಳವಡಿಕೆಗೆ ಹಾಗೂ ಸಮುದಾಯ ಭವನಕ್ಕೆ

ಮಂಗಳೂರು: ಸೆ.27ರಿಂದ 30ರ ವರೆಗೆ ದಿ. ಲೋಕನಾಥ್ ಬೋಳಾರ್ ಸ್ಮರಣಾರ್ಥ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ, ಆಮಂತ್ರಣ ಪತ್ರಿಕೆ ಬಿಡುಗಡೆ

ಕರ್ನಾಟಕ ರಾಜ್ಯ ಮತ್ತು ದ.ಕ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್‍ನ ಸಹಯೋಗದಲ್ಲಿ ದಿವಂಗತ ಲೋಕನಾಥ್ ಬೋಳಾರ್ ಸ್ಮರಣಾರ್ಥ ಸೆಪ್ಟಂಬರ್ 27ರಿಂದ 30ರ ವರೆಗೆ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನಲ್ಲಿ ಜರಗಿತು. ಮುಂಬೈಯ ಮೊಗವೀರ ವ್ಯವಸ್ಥಾಪಕ ಮಂಡಳಿ, ದಕ್ಷಿಣ ಕನ್ನಡ ಮತ್ತು ಉಡುಪಿ ಶಾಖೆ, ಮಂಗಳೂರು ಬಂದರ್ ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನೇತೃತ್ವದಲ್ಲಿ

ಬೆಳ್ತಂಗಡಿ: ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ದ್ರವ ಸಾರ ಜನಕ ಜಾಡಿಗಳ ವಿತರಣೆ

ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಧರ್ಮಸ್ಥಳದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ದ್ರವ ಸಾರ ಜನಕ ಜಾಡಿಗಳ ವಿತರಣಾ ಕಾರ್ಯಕ್ರಮ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಪ್ರಸಕ್ತ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡದಲ್ಲಿ ಹಾಲಿನ ಉತ್ಪಾದನೆಯಲ್ಲಿ ಹೆಚ್ಚಿಸಿ ಕೊಳ್ಳಬೇಕಾದ ಅನಿವಾರ್ಯತೆಯಿದೆ.

ಮಂಗಳೂರು : ಬೀದಿಬದಿ ವಾಸಿಸುವ ನಿರ್ಗತಿಕರಿಗೆ ಬ್ಲೂ ಸ್ಟಾರ್ ಕ್ರಿಕೆಟರ್ಸ್ ವತಿಯಿಂದ ಆಹಾರ ವಿತರಣೆ

ಮಂಗಳೂರು : ಶಕ್ತಿನಗರದಲ್ಲಿ ಸುಮಾರು ೧೨ ವರ್ಷಗಳ ಹಿಂದೆ ಪ್ರಾರಂಭವಾದಂತಹ ಬ್ಲೂ ಸ್ಟಾರ್ ಕ್ರಿಕೆಟರ್ಸ್ ತಂಡವು ಇಂದಿಗೂ ’ಒನ್ ಟೀಮ್ ಒನ್ ಡ್ರೀಮ್’ ಧ್ಯೇಯದೊಂದಿಗೆ ಮುನ್ನಡೆಯುತ್ತಿದೆ. ಬ್ಲೂ ಸ್ಟಾರ್ ಕ್ರಿಕೆಟರ್ಸ್ ತಂಡವು ಶಕ್ತಿನಗರದಲ್ಲಿ ಪ್ರತಿವರ್ಷ ಅದ್ದೂರಿಯಾಗಿ ನಡೆಯುವಂತಹ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಹಾಗೂ ಮೊಸರು ಕುಡಿಕೆ ಉತ್ಸವಕ್ಕೆ ಕೈಜೋಡಿಸಿ, ಇನ್ನೂ ಸಂಭ್ರಮದಿಂದ ಆಚರಿಸುವಂತೆ ಸಹಕರಿಸುತ್ತಿದ್ದಾರೆ. ಈ ಬಾರಿ ಸಂಭ್ರಮವನ್ನು ಇನ್ನೂ ವಿನೂತನ

ನೆಲ್ಯಾಡಿ: ಇಚಿಲಂಪಾಡಿ ನೇರ್ಲದ ಸರ್ಕಾರಿ ಶಾಲೆ – ಪ್ರತಿಭಾ ಕಾರಂಜಿ

ನೆಲ್ಯಾಡಿ: ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಇಚಿಲಂಪಾಡಿ ನೇರ್ಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕೌಕ್ರಡಿ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಬಾಣಜಲು ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಸಂತ ಬಿಜೇರು ರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಕಡಬ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಂಗಳೂರು ಇದರ ಕಾರ್ಯದರ್ಶಿಗಳಾದ ವಿಮಲ್,