Home Articles posted by v4team (Page 397)

ಮಂಗಳೂರು: ಸ್ಟಾರ್ ಸುವರ್ಣದಲ್ಲಿ “ಸರ್ಕಸ್” ತುಳು ಚಿತ್ರದ ಪ್ರಸಾರ

ತುಳು ಚಿತ್ರರಂಗದಲ್ಲಿ ಹಲವಾರು ದಾಖಲೆಗಳನ್ನು ಬರೆದ ಸರ್ಕಸ್ ಸಿನಿಮಾ ಸೆಪ್ಟಂಬರ್ 10ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣದಲ್ಲಿ ಪ್ರಸಾರಗೊಳ್ಳಲಿದೆ. ಕೋಸ್ಟಲ್‌ವುಡ್‌ನಲ್ಲಿ ಸಿನಿ ಪ್ರೇಕ್ಷಕರನ್ನು ಮೋಡಿ ಮಾಡಿದ ಸಿನಿಮಾ ಎಂದರೆ ಅದು ಸರ್ಕಸ್ ಸಿನಿಮಾ. ಬಿಗ್‌ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅಭಿನಯದ ತುಳು ಸಿನಿಮಾವಾಗಿದ್ದು, ಯಶಸ್ವಿಯನ್ನು ಕಂಡಿದೆ. ಇದೀಗ ಅದೇ

ಕಡಬ: ಪಂಚಾಯತ್ ಸಂಪರ್ಕ ರಸ್ತೆ ಬಂದ್ ಮಾಡಿ ದಿಗ್ಬಂಧನ: ತಹಶೀಲ್ದಾರರಿಂದ ತೆರವು

ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಬದನೆ ಎಂಬಲ್ಲಿ ಪಂಚಾಯತ್ ರಸ್ತೆಗೆ ಸಂಪರ್ಕಿಸುವ ರಸ್ತೆಯನ್ನು ವೆಂಕಪ್ಪ ಪೂಜಾರಿ ಮತ್ತು ರೂಪೇಶ್ ಕುಮಾರ್ ಅವರು ಬಂದ್ ಮಾಡಿರುವ ಬಗ್ಗೆ ಇಚ್ಲಂಪಾಡಿ ಗ್ರಾಮದ ಬದನೆ ನಿವಾಸಿ ಶ್ರೀನಿವಾಸ್ ಪೂಜಾರಿಯವರು, ಪುತ್ತೂರು ಸಹಾಯಕ ಆಯುಕ್ತರು, ಕಡಬ ತಹಶೀಲ್ದಾರರು, ಗ್ರಾಮ ಪಂಚಾಯತ್ ಹಾಗೂ ಪೋಲಿಸ್ ಇಲಾಖೆಗೆ ದೂರು ನೀಡಿದ್ದಾರೆ. ಕಡಬ ತಹಶೀಲ್ದಾರರಾದ ಪ್ರಭಾಕರ ಕಜುರೆ, ಕಂದಾಯ ನಿರೀಕ್ಷಕರಾದ ಪೃಥ್ವಿರಾಜ್ ಘಟನಾ ಸ್ಥಳಕ್ಕೆ ಭೇಟಿ ನೀಡಿ

ಮೂಡುಬಿದಿರೆ: ಮೊಸರು ಕುಡಿಕೆ ಉತ್ಸವದಲ್ಲಿ ಗುಣಪಾಲ ಕಡಂಬರಿಗೆ “ಶ್ರೀ ಕೃಷ್ಣ ಪ್ರಶಸ್ತಿ” ಪ್ರದಾನ

ಮೂಡುಬಿದಿರೆ: ಮೂಡುಬಿದಿರೆಯಲ್ಲಿ ಕರ್ಮ ಜೀವನ ಆರಂಭಿಸಿ 50 ವರ್ಷ ತುಂಬಿರುವ ಈ ಸುಸಂದರ್ಭದಲ್ಲಿ ತನ್ನ ಅಧ್ಯಾಪನ, ಆಡಳಿತ, ಕಂಬಳ, ಕೃಷಿ, ಧಾರ್ಮಿಕ ಸೇವಾನುಭವವನ್ನು ಗುರುತಿಸಿ ನೀಡಿರುವ ಗೌರವವನ್ನು ಸಂತೃಪ್ತಿ, ಸಂತೋಷದಿಂದ ಸ್ವೀಕರಿಸಿದ್ದೇನೆ, ಎಲ್ಲ ರಂಗಗಳಲ್ಲೂ ಪ್ರಾಮಾಣಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟವರೆಲ್ಲರನ್ನೂ ಕೃತಜ್ಞತಪೂರ್ವಕ ನೆನೆಯುತ್ತೇನೆ ಎಂದು ಜೈನ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ, ಕಂಬಳ ವಿದ್ವಾಂಸ ಕೆ. ಗುಣಪಾಲ ಕಡಂಬ ಹೇಳಿದರು.

ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಸಚಿವ ಬೋಸರಾಜು

ಸಣ್ಣ ನೀರಾವರಿ ಸಚಿವ ಭೋಸರಾಜು ಅವರು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯ ಮುಖಂಡ ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಕೆಲಸ ನಿರ್ವಹಿಸುವುದಾಗಿ ಎನ್.ಎಸ್. ಬೋಸರಾಜು ತಿಳಿಸಿದರು.

ಮಂಗಳೂರು: ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ

ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮವು ನಗರದ ಡಾ. ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕರಾದ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ತದ ಬಳಿಕ ಮಾತನಾಡಿ ಅವರು, ಮಕ್ಕಳಿಗೆ ಶಿಕ್ಷಣದ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಕೆಲಸ ಸಾಕ್ಷರತೆಯ ಮೂಲಕ ನಡೆಯುತ್ತಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಡಯೆಟ್‍ನಾ ಪ್ರಾಂಶುಪಾಲಾರದ ರಾಜಲಕ್ಷ್ಮಿ, ಜನ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಶೀನ ಶೆಟ್ಟಿ, ವಯಸ್ಕರ ಶಿಕ್ಷಣಧಿಕಾರಿ

ಮಂಗಳೂರು: ಉಳ್ಳಾಲಕ್ಕೆ ಮೂಲಸೌಕರ್ಯ ಒದಗಿಸಲು ರೋಡ್ ಮ್ಯಾಪ್, ಸ್ಪೀಕರ್ ಯು.ಟಿ. ಖಾದರ್

ಉಳ್ಳಾಲ ಕ್ಷೇತ್ರವನ್ನು ಮುಂದಿನ 30-40 ವರ್ಷಗಳ ಜನಸಂಖ್ಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕುಡಿಯುವ ನೀರು, ರಸ್ತೆ, ವಿದ್ಯುತ್ ಮೂಲಭೂತ ಸೌಕರ್ಯವನ್ನು ಒದಗಿಸುವ ಮೂಲಕ, ಮಂಗಳೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೋಡ್ ಮ್ಯಾಪ್ ಸಿದ್ಧಪಡಿಸಲಾಗುವುದು ಎಂದು ವಿಧಾನ ಸಭೆಯ ಸ್ಪೀಕರ್, ಸ್ಥಳೀಯ ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಮಂಗಳೂರು ಕ್ಷೇತ್ರದಲ್ಲಿ ವಿದ್ಯುತ್

ಬೈಂದೂರು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ತಲ್ಲೂರು ಸರಕಾರಿ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ – ಬಾಲಕಿಯರ ತ್ರೋಬಾಲ್ ಪಂದ್ಯಾಟ ತಲ್ಲೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಿರೀಶ್ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-

ಬೈಂದೂರು: ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬೈಂದೂರು ಆಶ್ರಯದಲ್ಲಿ ಮೊಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೈಂದೂರು ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇವತಿ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,ಎಲ್ಲಾ ಶಾಲೆಯ ಮಕ್ಕಳಿಗೆ ಗೆಲ್ಲಲು ಸ್ಫೂರ್ತಿ ನೀಡುವ ಮಾತುಗಳೊಂದಿಗೆ ಮಕ್ಕಳಿಗೆ ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರು ಶ್ರೀಯುತ

ಪಡುಬಿದ್ರಿ: ಜಟಿಲಗೊಂಡ ನಂದಿಕೂರು ರೈಲ್ವೆ ಬ್ರಿಡ್ಜ್ ಸಮಸ್ಯೆ -ಸಾರ್ವಜನಿಕರು ಆಕ್ರೋಶ

ಬಹಳಷ್ಟು ವರ್ಷಗಳಿಂದ ನಂದಿಕೂರು ರೈಲ್ವೆ ಬ್ರಿಡ್ಜ್ ರಸ್ತೆ ಹೊಂಡಮಯವಾಗಿ ಜನರ ಪ್ರಾಣ ಹಿಂಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿ-ಕಾರ್ಕಳ ರಾಜ್ಯ ರಸ್ತೆ ಇದ್ದಾಗಿದ್ದು, ದಿನವೊಂದಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ವಾಹನಗಳು ಹಾಗೇನೆ ಪಾದಚಾರಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆ ಇದಾಗಿದೆ. ಬಸ್ ಚಾಲಕರಂತೂ ಯಾವುದೇ ಮೂಲಾಜಿ ಇಲ್ಲದೆ ಈ

ಮಂಗಳೂರು: ಸೆ.15ರಂದು ಅಸ್ಮಿತಾಯ್ ಕೊಂಕಣಿ ಸಿನಿಮಾ ತೆರೆಗೆ

ಕೊಂಕಣಿಯ ಕಲೆ, ಸಾಹಿತ್ಯ, ಸಂಸ್ಕೃತಿಯ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ, ಗಿನ್ನೆಸ್ ದಾಖಲೆ ಬರೆದ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಬ್ಯಾನರ್ ಅಡಿಯಲ್ಲಿ ತಯಾರಾದ “ಅಸ್ಮಿತಾಯ್” ಚಲನಚಿತ್ರವು ಸೆಪ್ಟೆಂಬರ್ 15 ರಂದು ತೆರೆ ಕಾಣಲಿದೆ ಎಂದು ಚಿತ್ರ ಬರಹಗಾರ ಎರಿಕ್ ಒಝೆರಿಯೊ ತಿಳಿಸಿದಿದ್ದಾರೆ. ಎರಿಕ್ ಒಝೇರಿಯೊ ಬರೆದ ಮೂಲಕತೆಗೆ ಜೊಯೆಲ್ ಪಿರೇರಾ ಚಿತ್ರಕತೆ ಮತ್ತು ಸಂಭಾಷಣೆಯ, ಯುವ ನಿರ್ದೇಶಕ ವಿಲಾಸ್ ರತ್ನಾಕರ್ ಕ್ಷತ್ರಿಯ