Home Articles posted by v4team (Page 400)

ಕಾರ್ಕಳ: ಒಳ ಚರಂಡಿ ತ್ಯಾಜ್ಯ ನೀರು ರಸ್ತೆ ಮೇಲಿನಿಂದ ಹರಿಯುತ್ತಿದ್ದ ಸಮಸ್ಯೆಗೆ ಪರಿಹಾರ

ವಿ4 ವರದಿಗೆ ಸ್ಪಂದಿಸಿದ ಕಾರ್ಕಳ ಪುರಸಭಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ ನಾಗರಿಕರು ಕಾರ್ಕಳ ಗಾಂಧಿ ಮೈದಾನದ ಕ್ರೈಸ್ಟ್ ಕಿಂಗ್ ಚರ್ಚ್ ಮತ್ತು ಶಾಲೆಗಳಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಒಳ ಚರಂಡಿ ತ್ಯಾಜ್ಯ ನೀರು ರಸ್ತೆ ಮೇಲಿನಿಂದ ಹರಿದು ಎಲ್ಲರಿಗೂ ಸಮಸ್ಯೆಯಾಗುತ್ತಿದ್ದು ಇದೀಗ ಕಾರ್ಕಳ ಪುರಸಭೆಯವರು ಒಳ ಚರಂಡಿಯ ಕಾಮಗಾರಿಕೆಯನ್ನು ಪ್ರಾರಂಭಿಸಿ ಸಮಸ್ಯೆಗೆ

ಸೌಜನ್ಯ ಪ್ರಕರಣ ಮರುತನಿಖೆಗೆ ಅವಕಾಶವಿಲ್ಲ-ಬಿಜೆಪಿ ಶಾಸಕರ ನಿಯೋಗಕ್ಕೆ ಉತ್ತರಿಸಿದ ಸಿ.ಎಂ.

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭ ನಿಯೋಗದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯಳ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ

ಮಂಗಳೂರು: ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ನೇಮಕ

ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ವರನ್ನು ವರ್ಗಾವಣೆ ಮಾಡಲಾಗಿದ್ದು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕುಲದೀಪ್ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದು ಜನರ

ಸುಳ್ಯ: ಗ್ರಾ.ಪಂ ಗ್ರಂಥಾಲಯ, ಮಾಹಿತಿ ಕೇಂದ್ರಗಳಿಗೆ ಲ್ಯಾಪ್‍ಟಾಪ್, ಮೋನಿಟರ್ ಕೊಡುಗೆ

ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಪೌಂಡೇಶನ್ ಮತ್ತು ಡೆಲ್ ಟೆಕ್ನಲಾಜಿ ಸಹಭಾಗಿತ್ವದಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿ ಆಯ್ಕೆಯಾದ ಸುಳ್ಯ ತಾಲೂಕಿನ ಎಂಟು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಿಗೆ ಕೊಡುಗೆಯಾಗಿ ನೀಡುವ ಲ್ಯಾಪ್‍ಟಾಪ್, ಮೋನಿಟರ್‍ಗಳನ್ನು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಹಸ್ತಾಂತರಿಸಿದರು. ಸುಳ್ಯ ತಾಲೂಕು

ಬಿ.ಸಿ.ರೋಡಿನ ತಲಪಾಡಿಯಲ್ಲಿ ರಸ್ತೆಗೆ ಉರುಳಿ ಬಿದ್ದ ಗೂಡ್ಸ್ ಟೆಂಪೋ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಬಿ.ಸಿ.ರೋಡಿನ ತಲಪಾಡಿ ಬಳಿ ನಡೆದಿದೆ. ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಚಾಲಕನಿಗೆ ತರಚಿದ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಂ ಸಮಸ್ಯೆ ಉಂಟಾಗಿತ್ತು.

ಉಡುಪಿ: ಜಿಲ್ಲೆಯ ಜನತೆಯ ಪ್ರೀತಿಗೆ ಪಾತ್ರರಾಗಿದ್ದ ಎಸ್.ಪಿ. ಅಕ್ಷಯ್ ಮಚ್ಚಿಂದ್ರ ವರ್ಗಾವಣೆ

ಜಿಲ್ಲೆಯ ಜನತೆಯ ಪ್ರೀತಿಗೆ ಪಾತ್ರರಾಗಿದ್ದ ಉಡುಪಿ ಎಸ್.ಪಿ. ಅಕ್ಷಯ್ ಮಚ್ಚಿಂದ್ರರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದೆ. ಅ ಸ್ಥಾನಕ್ಕೆ ಗುಲ್ಭರ್ಗ ಪೆÇಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ.ಅರುಣ್ ಕೆ ಅವರನ್ನು ನೇಮಕಗೊಳಿಸಲಾಗಿದೆ. ಸದ್ಯ ಅಕ್ಷಯ್ ಹಾಕೆಗೆ ಯಾವುದೇ ಹುದ್ದೆಯನ್ನು ಸೂಚಿಸಲಾಗಿಲ್ಲ. ಉಡುಪಿಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಕ್ಷಯ್ ಮಚ್ಚಿಂದ್ರಉಡುಪಿಯಲ್ಲಿ ನಡೆಯುತ್ತಿದ್ದ ಅಕ್ರಮ ಇಸ್ಪೀಟ್ ಕ್ಲಬ್‍ಗಳು, ಗಾಂಜಾ

ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

ಪಟ್ರಮೆ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳೆ ಬದಿಗೆ ಬಿದ್ದ ಘಟನೆ ಸೆ.5 ರಂದು ಬೆಳಿಗ್ಗೆ ನಡೆದಿದೆ. ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಬಿದ್ದಿದೆ ಎನ್ನಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆಯ ಕಾರಾಗಿದ್ದು, ಕಾರಿನಲ್ಲಿ ಚಾಲಕ ಮಾತ್ರ ವಿದ್ದು, ಈತ ವಿಪರೀತ ಮದ್ಯಪಾನ ಸೇವಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಉತ್ತಮ ಆರೋಗ್ಯ ಸೇವೆ ನೀಡುವುದು ಮೋದಿ ಸರ್ಕಾರದ ಸಂಕಲ್ಪ- ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್

ಕೇಂದ್ರ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರ ಸಂಬಂಧಿಸಿದ ಶೈಕ್ಷಣಿಕ ಸಂಸ್ಥೆಗಳನ್ನು 70ಕ್ಕೆ ಏರಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವುದು ಮೋದಿ ಸರ್ಕಾರದ ಸಂಕಲ್ಪವಾಗಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಹೇಳಿದರು. ಅವರು ವಿವೇಕಾನಂದ ಕಾಲೇಜು ಕ್ಯಾಂಪಸ್‍ನ ಕೇಶವ ಸಂಕಲ್ಪ ಸಭಾಭವನದಲ್ಲಿ ಪುತ್ತೂರು

ಶಿರೂರು ಮಠದ ವತಿಯಿಂದ ಸುಮಾರು 4 ಲಕ್ಷ ರೂ. ನೋಟಿನ ಮಾಲೆಯಿಂದ ಕಲಾತಂಡಗಳಿಗೆ ಗೌರವಾರ್ಪಣೆ

ಈ ಬಾರಿಯ ಕೃಷ್ಣಜನ್ಮಾಷ್ಟಮಿಯ ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ಸುಮಾರು 4 ಲಕ್ಷ ರೂ. ನೋಟಿನ ಮಾಲೆಗಳನ್ನು ವಿವಿಧ ಕಲಾ ತಂಡಗಳಿಗೆ ನೀಡಿ ಗೌರವಿಸಲಾಗುವುದು ಎಂದು ಶಿರೂರು ಮಠಾಧೀಶ ಶ್ರೀ ವೇದವರ್ಧನತೀರ್ಥರು ತಿಳಿಸಿದ್ದಾರೆ. ಉಡುಪಿಯ ರಥಬೀದಿಯಲ್ಲಿರುವ ಶಿರೂರು ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥರು ಈ ಹಿಂದೆ ವಿಜೃಂಭಣೆಯಿಂದ ಕೃಷ್ಣಜನ್ಮಾಷ್ಟಮಿಯನ್ನು ಆಚರಿಸುತ್ತಿದ್ದರು. ಅವರಂತೆಯೇ

ಹಾಸನ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಂ ಎಸ್ ಮೊಹಮ್ಮದ್ ಸುಜೀತಾ IPS

ಹಾಸನ : ಬೆಂಗಳೂರು ನಗರದ ಸಂಚಾರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮೊಹಮ್ಮದ್ ಸುಜೀತಾ ಎಂ.ಎಸ್, ಐಪಿಎಸ್ (ಕೆಎನ್-2014) ರವರನ್ನು ಹಾಸನ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.ಹರಿರಾಮ್ ಶಂಕರ್ ಐಪಿಎಸ್ ವರ್ಗಾವಣೆ ಮಾಡಿದೆ.ಈ ಹಿಂದೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.