Home Articles posted by v4team (Page 449)

ಜೈನ ಮುನಿಯ ಹತ್ಯೆ ಪ್ರಕರಣ: ಹತ್ಯೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಅಭಯಚಂದ್ರ ಜೈನ್ ಆಗ್ರಹ

ಚಿಕ್ಕೋಡಿ ದಿಗಂಬರ ಜೈನ ಮುನಿಯ ಹತ್ಯೆಯನ್ನು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಖಂಡಿಸಿ, ಹತ್ಯೆ ಮಾಡಿರುವವರ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ. ಜೈನ ಮುನಿಗಳು ತ್ಯಾಗಮಯಿಗಳು. ಸರ್ವಸ್ವವನ್ನು ತ್ಯಾಗ ಮಾಡಿ ಮುನಿ ದೀಕ್ಷೆಯನ್ನು ತೆಗೆದುಕೊಂಡವರು. ಮುನಿಗಳ ಆಪ್ತರೇ ಕೊಲೆ ಮಾಡುವಂತಹ ಕೃತ್ಯಕ್ಕೆ ಕೈ ಹಾಕಿರುವುದು

ಸಿಎಎಸ್‍ಕೆ ಶತಮಾನೋತ್ಸವ ಟ್ರಸ್ಟ್ ಮತ್ತು ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ: 2023ನೇ ಸಾಲಿನ ಸ್ಕಾಲರ್‍ಶಿಪ್ ವಿತರಣಾ ಕಾರ್ಯಕ್ರಮ

1914ರಲ್ಲಿ ಸ್ಥಾಪನೆಯಾದ ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಹಿಂದಿನ ದಕ್ಷಿಣ ಕನ್ನಡದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಮೋಘ ಸೇವೆಯನ್ನು ನೀಡಿದೆ. ಸಿಎಎಸ್‍ಕೆ ಅನೇಕ ಪರಿಣಾಮಕಾರಿ ದತ್ತಿ ಮತ್ತು ಸಮುದಾಯ ಸೇವಾ ಯೋಜನೆಗಳನ್ನು ವಿಶೇಷವಾಗಿ ಕಳೆದ ಒಂದು ದಶಕದಲ್ಲಿ ಅನುಷ್ಠಾನಗೊಳಿಸುತ್ತಿದೆ. ಸಿಎಎಸ್‍ಕೆ ಮೂರು ವಿಭಾಗಗಳ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ. ಎಂಡೋಮೆಂಟ್ ಫಂಡ್‍ಗಳಿಂದ ಕೋವಿಡ್ ಬೆಂಬಲ

ಸೋರುತ್ತಿರುವ ಸುರತ್ಕಲ್ ವಲಯ ಮನಪಾ ಕಚೇರಿ || SURATKAL MCC POOR WORK: CRACKED WALLS AND WATER LEAK PROBLEM.

ಸುರತ್ಕಲ್‍ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ವಲಯ ಕಚೇರಿ ಸೋರುತ್ತಿದೆ. ಕಚೇರಿಯ ಗೋಡೆಗಳು ಬಿರುಸುರಕು ಬಿಟ್ಟಿದೆ. ಈ ರೀತಿ ಮಳೆ ನೀರು ಸೋರುತ್ತಿದ್ದರೆ ಕಚೇರಿಯಲ್ಲಿ ಕುಳಿತುಕೊಳ್ಳಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾದಂತಾಗಿದೆ. ಕಳೆದ ವರ್ಷ ಈ ಮಂಗಳೂರು ಪಾಲಿಕೆಯ ವಲಯ ಕಚೇರಿ ಸುರತ್ಕಲ್‍ನಲ್ಲಿ ಉದ್ಘಾಟನೆಗೊಂಡಿದ್ದು, ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಅವರು ಕಟ್ಟಡವನ್ನು ಉದ್ಘಾಟಿಸಿದರು. ಕಟ್ಟಡ ಉದ್ಘಾಟಿಸಿ ವರ್ಷ ಒಂದು

ಮಂಜೇಶ್ವರ : ತೋಟದ ಕೆಲಸಕ್ಕಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು || A MAN WHO WAS WORKING IN THE GARDEN COLLAPSED AND DIED

ಮಂಜೇಶ್ವರದ ವರ್ಕಾಡಿ ಕುಂಡಡ್ಕ ಎಂಬಲ್ಲಿ ರಬ್ಬರ್ ತೋಟದಲ್ಲಿ ಕೆಲಸಕ್ಕಿದ್ದ ತನಿಯ ಎಂಬ ವ್ಯಕ್ತಿ ದಿಢೀರ್ ಅಸೌಖ್ಯಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಜೀರ್ ಪಳ್ಳ ಟೌನ್ ಸೋಶಿಯಲ್ ವರ್ಕ್ ತಂಡದ ಅಧ್ಯಕ್ಷ ಮುಸ್ತಫಾ ಕಡಂಬಾರ್ ರವರ ನೇತೃತ್ವದ ಕಾರ್ಯಕರ್ತರು ವರ್ಕಾಡಿ ಸರಕಾರಿ ಆಸ್ಪತ್ರೆಗೆ ತಲುಪಿಸಿದ್ದಾರೆ. ಬಳಿಕ ವ್ಯಕ್ತಿಯ ವಿಳಾಸವನ್ನು ಪತ್ತೆ ಹಚ್ಚಿದ ಕಾರ್ಯಕರ್ತರು ಕಾಞಂಗಾಡಿನಲ್ಲಿರುವ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ

ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ || MP GURURAJ GANTIHOLE VISITED FLOOD AFFECTED AREAS.

ಬೈಂದೂರು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದ ಪರಿಣಾಮವಾಗಿ ಕೆಲವೆಡೆ ಅಪಾರ ಹಾನಿ ಸಂಭವಿಸಿದೆ. ಬೈಂದೂರಿನ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೃಷಿಗೂ ಹಾನಿ ಸಂಭವಿಸಿದೆ. ಇಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲನೆ ನಡೆಸಿದರು. ಕಳೆದ 5 ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೌಪರ್ಣಿಕಾ ನದಿ ನೀರಿನ ಮಟ್ಟ ಹೆಚ್ಚಾಗಿದೆ. ನದಿಯ ಅಕ್ಕ ಪಕ್ಕ ಪ್ರದೇಶಗಳಾದ

ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್ || Minister Dinesh Gundurao visited Dharamsthala

ದ.ಕ ಜಿಲ್ಲಾ ಪ್ರವಾಸ ಕೈಗೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡರು.ಸಚಿವರ ಜೊತೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕೂಡಾ ಇದ್ದರು.

 ಜೈನ ಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣ : ಇಬ್ಬರು ಪೊಲೀಸರ ವಶಕ್ಕೆ || Acharya Shri 108 Kamkumarnandi Maharaj

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನ ಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈನ ಮುನಿಗಳು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಜು.5ರ ರಾತ್ರಿ ಆಶ್ರಮದ ಕೋಣೆಯಲ್ಲಿದ್ದ ಮುನಿಗಳು, ಜು.6 ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಭಕ್ತರು ಜೈನ ಬಸದಿಯ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ, ಎಲ್ಲಿಯೂ ಪತ್ತೆಯಾಗದ ಹಿನ್ನಲೆ ಆಚಾರ್ಯ

ಬಜಪೆಯ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ  || LOKAYUKTA ARRESTED JYOTHI N POOJARY, CONVENOR OF NIRANJAN SWAMY SCHOOL MANAGEMENT IN BAJPE.

ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಶುಕ್ರವಾರ 5 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಅನುದಾನಿತ ಶಾಲಾ ಸಂಚಾಲಕಿಯನ್ನು ಲೋಕಾಯುಕ್ತ ಪೋಲಿಸ್ರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಬಜಪೆಯ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ. ಅದೇ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ

ಬಜೆಟ್ ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ, ಇತರ ನಗರದ ಜನರಿಗೆ ಅನ್ಯಾಯ : ಡಿವೈಎಫ್ಐನ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ಮಂಗಳೂರಿಗೆ ಸರಕಾರಿ ಮೆಡಿಕಲ್ ಕಾಲೇಜ್ ಘೋಷಣೆಯ ನಿರೀಕ್ಷೆ ಹುಸಿಯಾಯಿತು. ದ.ಕ ಜಿಲ್ಲೆಗೆ ನಿರ್ದಿಷ್ಟ ಕೊಡುಗೆ ಘೋಷಿಸದೆ ನಿರಾಸೆ ಉಂಟು ಮಾಡಿದ್ದಾರೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಯಾವುದೇ ಘೋಷಣೆಗಳಿಲ್ಲ, ಅತಿಥಿ ಶಿಕ್ಷಕರ, ಉಪನ್ಯಾಸಕರ ಖಾಯಮಾತಿಗೆ ಯಾವುದೇ ಚಕಾರ ಎತ್ತದ ಬಜೆಟ್ ಮಂಡಿಸಿದ್ದಾರೆ. ಬಿಬಿಎಂಪಿ ಚುನಾವಣೆಯ ದೃಷ್ಟಿಕೋನದಲ್ಲಿ ರಾಜಧಾನಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಕೊಟ್ಟು ಇತರ ನಗರದ

ದ.ಕ. ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಳಂಜದಲ್ಲಿ ಶನಿವಾರ ಬೆಳಿಗ್ಗೆ 8.30ರವರೆಗೆ 24 ಗಂಟೆಗಳಲ್ಲಿ 12.90 ಸೆಂ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲೇ ಅತ್ಯಧಿಕ. ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿಯಲ್ಲಿ, 10.40 ಸೆಂ.ಮೀ., ಕುಕ್ಕೇಡಿಯಲ್ಲಿ 10.25 ಸೆಂ.ಮೀ. ಪಡಂಗಡಿ, ಮಾಲಾಡಿ ಮತ್ತು ಲಾಯಿಲದಲ್ಲಿ ತಲಾ 9.50 ಸೆಂ.ಮೀ.ಮಳೆಯಾಗಿದೆ. ಮಂಗಳೂರು ತಾಲ್ಲೂಕಿನ ಬಾಳದಲ್ಲಿ 11.30 ಸೆಂಮೀ, ಕಿನ್ನಿಗೋಳಿಯಲ್ಲಿ 9.25, ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟುವಿನಲ್ಲಿ