ಬೃಹತ್ ಗಾತ್ರದ ಕಾಡುಕೋಣದ ಮೃತದೇಹವು ಕಡಬ ಸಮೀಪದ ಕೋಡಿಂಬಾಳದ ಪುಳಿಕುಕ್ಕು ಎಂಬಲ್ಲಿ ಶನಿವಾರದಂದು ಕಂಡುಬಂದಿದೆ. ಪುಳಿಕುಕ್ಕು ಸೇತುವೆಯ ಬಳಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಾಡುಕೋಣದ ಮೃತದೇಹವು ಕಂಡುಬಂದಿದ್ದು, ಸ್ಥಳೀಯರು ವೀಡಿಯೋ ಮಾಡಿದ್ದಾರೆ. ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅರಣ್ಯ ಇಲಾಖೆಯವರು ಕಾಡುಕೋಣದ ಮೃತದೇಹವನ್ನು
ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ
ಶುಭಾ ಶೆಟ್ಟಿ ಪ್ರೋಡಕ್ಷನ್ಸ್ ಬ್ಯಾನರ್ನಲ್ಲಿ ತಯಾರಾದ ಉಮೇಶ್ ಶೆಟ್ಟಿ ಮತ್ತು ಧನರಾಜ್ ಶೆಟ್ಟಿ ನಿರ್ಮಾಣದ “ಪಿಸುಮಾತು” ಕನ್ನಡ ಮ್ಯೂಸಿಕ್ ವಿಡಿಯೋದ ಬಿಡುಗಡೆ ಕಾರ್ಯಕ್ರಮವು ಪಡುಬಿದ್ರಿಯ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ನಡೆಯಿತು. ಈ ವಿನೂತನ ಕಥಾ ಹಂದರವನ್ನು ಹೊಂದಿರುವ ಮ್ಯೂಸಿಕ್ ವಿಡಿಯೋವನ್ನು ಕಾಪುವಿನ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಭವಾನಿ ಶಂಕರ್ ಹೆಗ್ಡೆ, ಸಂಜಯ್ ಕುಮಾರ್ ಶೆಟ್ಟಿ
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಚತುರ್ಮುಖ ಬಸದಿ ಬಳಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸ್ರು ಬಂಧಿಸಿದ್ದಾರೆ. ಕಸಬಾ ಗ್ರಾಮದ ಸಾಲ್ಮರ ಜರಿಗುಡ್ಡೆ ನಿವಾಸಿ ಮೊಹಮ್ಮದ್ ಅಶ್ಫಾನ್(20) ಹಾಗೂ ನಲ್ಲೂರು ಪೇರಲ್ಕೆ ನಿವಾಸಿ ರಜೀಮ್ (31) ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಕಾರ್ಕಳ ಚತುರ್ಮುಖ ಬಸದಿ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ರಿ. ಉಡುಪಿ ಆಶ್ರಯದಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖೆಯಲ್ಲಿ ಜಿಲ್ಲೆಯ ಹಿರಿಯ ವೈದ್ಯ ದಂಪತಿಗಳಿಗೆ ಹಾಗು ವೈದ್ಯರಿಗೆ ಗೌರವ ಪುರಸ್ಕಾರ -೨೦೨೩ ನೀಡಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಪ್ರಸಿದ್ಧ ವೈದ್ಯ ದಂಪತಿಗಳಾದ ಡಾ. ಹoಗ್ಳೂರು ರಾಘವೇಂದ್ರ ಹೆಬ್ಬಾರ್ ಹಾಗೂ ಡಾ.
ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯ ಪರವಾಗಿ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ದೇಶದ ಪ್ರಧಾನಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಮಾತನಾಡಿ, ಈಶಾನ್ಯ ಭಾರತದ
ವ್ಯಕ್ತಿಯೋರ್ವರು ಕಾಲುಸಂಕದಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಠದಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ಮಠದಬೆಟ್ಟು ತೋಡಿನಲ್ಲಿ ಸತೀಶ್ ಮೃತದೇಹ ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಮೇಲೆಕ್ಕೆತ್ತಿದ್ದಾರೆ. ಸಮಾಜ ಸೇವಕ
ಮತಾಂತರ ನಿಷೇಧ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಕಾಯ್ದೆ ವಾಪಸ್ ಪಡೆದಲ್ಲಿ ಸಮಾಜದಲ್ಲಿ ಅಶಾಂತಿ ಮೂಡಬಹುದು. ಸಂತರು ಸೇರಿಕೊಂಡು ಉಪವಾಸ ಸತ್ಯಾಗ್ರಹ ಮಾಡುವುದಕ್ಕೂ ರೆಡಿ ಇದ್ದೇವೆ. ಕಾಯ್ದೆ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವ, ರಾಜ್ಯಪಾಲರಿಗೆ ಮನವಿ ನೀಡುತ್ತೇವೆ ಎಂದು ಸಂತರು ತಿಳಿಸಿದ್ದಾರೆ.
ಚಿರತೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿಯ ಕಂಚಿಕರೆ ಎಂಬಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಗಣೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ನಿನ್ನೆ ತಡರಾತ್ರಿ ಗಣೇಶ್ ಅವರ ಮನೆಯ ಸಮೀಪವೇ ಚಿರತೆ ಕಂಡುಬಂದಿದ್ದು, ನಾಯಿಯ ಕೂಗಾಟ ಕೇಳಿ ಗಣೇಶ್ ಮನೆಯಿಂದ ಹೊರ ಬಂದಾಗ ಅವರ ಮೇಲೆ ಎರಗಿದೆ. ಗಂಭೀರ ಗಾಯಗೊಂಡಿದ್ದ ಗಣೇಶ್ ಅವರನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು.
ರಾಜ್ ಬಿ ಶೆಟ್ಟಿ ನಟನೆಯ ಹೊಸ ಸಿನಿಮಾ ಟೋಬಿಯ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಂಡಿದೆ. ವಿಭಿನ್ನ ಗೆಟಪ್ನಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಟೀಸರ್ ತುಂಬೆಲ್ಲ ರಕ್ತದ ಕೆಂಪು ರಾರಾಜಿಸುತಿದೆ. ಶೆಟ್ಟರ್ ಮೂಗಿನ ಹೊಳೆವ ಮೂಗುತಿಯ ಗುಟ್ಟು ಚಿತ್ರ ನೋಡಿಯೇ ತಿಳಿಯಬೇಕಿದೆ. ರಾಜ್ ಬಿ ಶೆಟ್ಟಿ ಅವರು ಯಾವುದೇ ಸಿನಿಮಾ ಮಾಡಿದರೂ ತುಂಬಾ ಕುತೂಹಲ ಉಂಟಾಗುವಂತೆ ಇರುತ್ತದೆ. ಅದಕ್ಕೆ ಸಾಕ್ಷಿಯೇ ಎಂಬುದಕ್ಕೆ `ಟೋಬಿ’ ಸಿನಿಮಾದ




























