ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಪಡಿತರ ವಿತರಣಾ ಕೇಂದ್ರದಲ್ಲಿ ಸರ್ವರ್ ಸಮಸ್ಯೆಯಿಂದ ಪಡಿತರ ವಿತರಿಸಲಾಗುತ್ತಿಲ್ಲ. ಕಳೆದ 4 ದಿನದಿಂದ ಪಡಿತರದಾರರು ಕಾದು ಕಾದು ಸುಸ್ತಾಗಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ 8 ಪಡಿತರ ವಿತರಣಾ ಕೇಂದ್ರದಲ್ಲಿ 8000 ಮಂದಿ ಪಡಿತರ ಕಾರ್ಡು ಹೊಂದಿದವರು ಇದ್ದಾರೆ. ಇಲ್ಲಿನ
ಪುತ್ತೂರು ತಾಲೂಕಿನ ಕೊಯಿಲದಲ್ಲಿ ನಿರ್ಮಾಣವಾದ ಪಶು ವೈದ್ಯಕೀಯ ಕಾಲೇಜಿಗೆ 2012-13ನೇ ಸಾಲಿನಲ್ಲಿ ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಬಜೆಟ್ ನಲ್ಲಿ ಪಶು ವೈದ್ಯಕೀಯ ಕಾಲೇಜು ಘೋಷಿಸಿ 145 ಕೋಟಿ ರೂ. ಮೀಸಲಿಟ್ಟಿದ್ದರು. ಬಳಿಕ ಸದಾನಂದ ಗೌಡ ಕನಸಿನ ಕೂಸಿಗೆ 2016 ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವ್ರು ಶಿಲಾನ್ಯಾಸ ನೆರವೇರಿಸಿದ್ದರು. ಆದ್ರೆ ಅಂದಿನಿಂದ ಇಂದಿನ ತನಕವೂ ಕಾಮಗಾರಿ ಕುಂಟುತ್ತಾ ಸಾಗಿ ಒಂದು ಹಂತಕ್ಕೆ ಬಂದು ನಿಂತಿದೆ.
ಉಳ್ಳಾಲ: ಎರಡು ಕಂಟೈನರ್ ಲಾರಿಗಳ ನಡುವೆ ಸಿಲುಕಿ ಲಾರಿ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ,.ಹೆ.66ರ ತಲಪಾಡಿ ಟೋಲ್ ಗೇಟ್ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಹರ್ಯಾಣ ಮೂಲದ ಶಮೀಮ್ (38) ಮೃತಪಟ್ಟ ಚಾಲಕ. ಹರಿಯಾಣದಿಂದ ಕೇರಳ ಕಡೆಗೆ ಒಂದೇ ಸಂಸ್ಥೆಗೆ ಸೇರಿದ , ಸಂಬಂಧಿ ಚಾಲಕರು ಎರಡು ಕಂಟೈನರ್ ಲಾರಿಗಳಲ್ಲಿ ಕೇರಳ ಕಡೆಗೆ ಸರಕು ಸಾಗಾಟ ನಡೆಸುತ್ತಿದ್ದರು. ತಲಪಾಡಿ ಟೋಲ್ ಸಮೀಪ ಒಂದು ಕಂಟೈನರ್ ಲಾರಿಯನ್ನು ಚಾಲಕ ಶಮೀಮ್ ಚಹಾ ಕುಡಿಯಲೆಂದು
ಕಡಬ: ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಜೂ.22ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಂತ್ ಅವರು ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಮತ್ತಷ್ಟೂ ಏರುಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಜೂ.22ರಂದು ರಾತ್ರಿ ನಿಧನರಾಗಿದ್ದಾರೆ.
ಕಾಸರಗೋಡು ಶಾಲೆಯಲ್ಲಿ ಕನ್ನಡಕ್ಕಾಗಿ ಹೋರಾಟ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾ ನೆನಪಿಸುವ ನೈಜ ದೃಶ್ಯ
ಕನ್ನಡ ಸರಿಯಾಗಿ ಬಾರದ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿರುವುದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಈ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಿಗೆ ಬೇರೆ ಶಾಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕೇರಳ ಶಿಕ್ಷಣ ಇಲಾಖೆ ಆ ಜಾಗಕ್ಕೆ ಹೊಸ ಶಿಕ್ಷಕಿಯೋರ್ವರನ್ನು ನೇಮಿಸಿದೆ. ಆದರೆ ಈ ಶಿಕ್ಷಕಿಗೆ ಕನ್ನಡ ಸರಿಯಾಗಿ
ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಭಾರತ್ ಮಾಲ್ ನ ಬಿಗ್ ಸಿನಿಮಾಸ್ನಲ್ಲಿ ಬಿಡುಗಡೆಗೊಂಡಿತು. ಸಿನಿಮಾ ಬಿಡುಗಡೆಗೂ ಮುನ್ನ ಅದ್ಧೂರಿ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪೆÇ್ರೀತ್ಸಾಹ
ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಖಿತ ಎಂಬ ವಿದ್ಯಾರ್ಥಿನಿಯ ಸಾವಿಗೆ ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರೇ ಕಾರಣ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಿಖಿತ ವಿಪರೀತ ವಾಂತಿಯಿಂದ ಬಳಲಿ ಅಸ್ವಸ್ಥಗೊಂಡು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ನಿಖಿತ ಮೃತ ಪಟ್ಟಿದ್ದಾರೆ. ನಿಖಿತ ಸಾವು ಪ್ರಕರಣ ವಿಚಾರವಾಗಿ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ
ವಾಂತಿ ಬಂದ ಹಿನ್ನೆಲೆಯಲ್ಲಿ ಉಡುಪಿ ಸಿಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋದ ನಮ್ಮ ಹತ್ತೊಂಬತ್ತರ ಹರೆಯದ ಮಗಳನ್ನು ಐದು ದಿನಗಳ ಕಾಲ ನೋವು ನೀಡಿ ವೈದ್ಯರು ಕೊಂದು ತಿಂದರು ಎಂಬುದಾಗಿ ಮೃತಳ ಚಿಕ್ಕಮ್ಮ ಶೈಲಜ ನೋವಿನಿಂದ ನುಡಿದಿದ್ದಾರೆ. ಕಾಪು ತಾಲೂಕಿನ ಕೆಮ್ಮುಂಡೇಲು ಬಂಡಸಾಲೆ ನಿವಾಸಿ ಜನಾರ್ದನ ಎಂಬವರ ಪುತ್ರಿ, ಮಂಗಳೂರು ಕೆಪಿಟಿ ಸಂಸ್ಥೆಯ ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ನಿಕಿತಾ(19) ಅನುಮಾಸ್ಪದ ಸಾವಿನ ಬಗ್ಗೆ ಮೃತಳ ಪೋಷಕರು
ಮಂಜೇಶ್ವರ ರಾಗಂ ಜಂಕ್ಷನ್ ಸಮೀಪದ ಕುನ್ನಿಲ್ ಜುಮಾ ಮಸೀದಿ ರಸ್ತೆ ಸಮೀಪದಲ್ಲಿ ವಾಸವಾಗಿರುವ ದಿವಂಗತ ಸಯ್ಯದ್ ಹಾದಿ ತಂಘಲ್ ರವರ ಪುತ್ರ ಹಮೀದ್ ತಂಘಲ್ ಎಂಬವರ ಮನೆಗೆ ಹಿಂಬಾಗದ ಬಾಗಿಲನ್ನು ಮುರಿದು ನುಗ್ಗಿದ ಕಳ್ಳರು ಮನೆಯೊಳಗಿನ ಕಪಾಟನ್ನು ಮುರಿದು 60 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂ. ನಗದನ್ನು ಕಳವುಗೈದಿದ್ದಾರೆ.ಹಮೀದ್ ತಂಘಲ್ ರವರು ಎರಡು ದಿವಸಕ್ಕೆ ಮೊದಲು ಕುಟುಂಬ ಸಮೇತರಾಗಿ ಏರ್ವಾಡಿಗೆ ತೆರಳಿದ್ದಾರೆನ್ನಲಾಗಿದೆ. ಗುರುವಾರ ಸಂಜೆ ಮರಳಿ ಬಂದಾಗ ಮನೆಯ
ಮಂಗಳೂರು: ಗುರುಪುರ ಜಂಕ್ಷನ್ ಬಳಿ ಜೂನ್ 22ರಂದು ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಶುಕ್ರವಾರ ಸ್ಥಳೀಯರು ಕೈಕಂಬ ಜಂಕ್ಷನ್ನಲ್ಲಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಬಸ್ ಢಿಕ್ಕಿಯಾಗಿ ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ಮೃತಪಟ್ಟಿದ್ದು ಈ ಘಟನೆಯನ್ನು ಖಂಡಿಸಿ ನೂರಾರು ಮಂದಿ ಪ್ರತಿಭಟನೆ ಸೇರಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದಾಗಿ ಕೈಕಂಬ ಜಂಕ್ಷನ್




























