Home Articles posted by v4team (Page 586)

ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ : ನಿಸ್ವಾರ್ಥ ಸಾಧಕ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ

ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ವೈದ್ಯರ ದಿನಾಚರಣೆ ಅಚ ವೈದ್ಯರ ದಿನಾಚರಣೆ ಪ್ರಯುಕ್ತ ನಿಸ್ವಾರ್ಥ ಸಾಧಕ ವೈದ್ಯ ಡಾ. ಗೋಪಾಲ್ ಅವರಿಗೆ ಸನ್ಮಾನಿಸಲಾಯಿತು. ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಚೇರ್ ಮೆನ್ ಯು.ಕೆ. ಮೋನು ಸನ್ಮಾನಿಸಿ ಮಾತನಾಡಿ, ಸನಾತನ ಧರ್ಮದಲ್ಲಿ ಅನೇಕ ಮಹಾತ್ಮರನ್ನು

ಚಾಲಕನ ನಿಯಂತ್ರಣ ತಪ್ಪಿದ ಬಸ್ : ಹೆಜಮಾಡಿಯ ರಾ.ಹೆ 66ರಲ್ಲಿ ಘಟನೆ

ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಸಂಭವಿಸಿದೆ.ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾವುದೇ ಸಾವು ನೋವು ಸಂಭವಿಸಿಲ್ಲ.ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ

ದ.ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ, ದ.ಬ್ಲಾಕ್ ಕಾಂಗ್ರೆಸ್ ನೇತೃತ್ವ : ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಗರದ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆಯಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜನರಿಗೆ ಮೋಸ ಮಾಡುತ್ತಿದೆ. ಜನರಿಗೆ ಅಲ್ಪ ಅವಧಿಯ ಸೇವೆಯನ್ನ ನೀಡುವ ಉದ್ದೇಶ ಏನೂ ಎಂದು ಪ್ರಶ್ನೆ ಮಾಡಿದರು. ದೇಶದಲ್ಲಿ ಅಗ್ನಿಪಥ್ ಯೋಜನೆಯನ್ನು

ಮೌಲಾನಾ ಅಝಾದ್ ಮಾದರಿ ಶಾಲಾ ಕಟ್ಟಡ ಉದ್ಘಾಟನೆ : ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಮಹತ್ವ ನೀಡುವ ನಿಟ್ಟಿನಲ್ಲಿ ಕ್ರಮ ಮಾದರಿ ಶಾಲೆ

ಶಿಕ್ಷಣ ಎಂಬುದು ಬದುಕಿಗೆ ಬೆಳಕು ನೀಡುವ ಕ್ಷೇತ್ರವಾಗಿದೆ. ಅಲ್ಪ ಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಮೌಲಾನಾ ಅಝಾದ್‍ನಂತಹ ಮಾದರಿ ಶಾಲೆಗಳನ್ನು ಸ್ಥಾಪಿಸಿ ಮುನ್ನಡೆಸುತ್ತಿದೆ ಎಂದು ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು , ಪುತ್ತೂರು ನಗರದ ಪಡೀಲ್‍ನಲ್ಲಿ ರೂ. 2.35 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಮೌಲಾನಾ ಆಝಾದ್ ಮಾದರಿ

ಪುತ್ತೂರಿನ ಪಂಜಳದಲ್ಲಿ ಶಿಫ್ಟ್, ಓಮ್ನಿ ಭೀಕರ ಅಪಘಾತ

ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವಾರು ಮಂದಿಗೆ ಗಾಯವಾಗಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣೆಯ ಯಸ್. ಐ. ರಾಮ ನಾಯ್ಕ್ ಹಾಗು ಸಿಬ್ಬಂದಿಗಳು ತನಿಖೆ ನಡೆಸಿ ಪುತ್ತೂರಿನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಬದಿಯ ಬೀದಿ ಬದಿಯ ಅಂಗಡಿಗಳ ತೆರವು : ಬೆಳ್ತಂಗಡಿಯಲ್ಲಿ ಸಿಪಿಐಎಂ ಪ್ರತಿಭಟನೆ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ರಾಜ್ಯ ಹೆದ್ದಾರಿಯ ಬದಿಯಲ್ಲಿ ಬೀದಿ ಬದಿ ವ್ಯಾಪಾರದಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಂಗಡಿಯನ್ನು ದ್ವಂಸ ಮಾಡಿದ್ದನ್ನು ವಿರೋಧಿಸಿ ಅಲ್ಲಿನ ವ್ಯಾಪಾರಸ್ಥರು ಹಾಗೂ ಕಮ್ಯುನಿಸ್ಟ್ ಪಾರ್ಟಿಯ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ನ್ಯಾಯವಾದಿಗಳಾದ ಬಿ. ಎಂ.ಭಟ್ ಮಾತನಾಡಿ ಕಾನೂನು ಹಾಗೂ ಸಂವಿಧಾನ ವಿರೋಧಿಸಿ ಸುಪ್ರೀಂ ಕೋರ್ಟಿನ ಆದೇಶವನ್ನು ಉಲ್ಲಂಘಿಸಿ pwd ಇಲಾಖೆ

ಕೋಟಿ ಕೋಟಿ ವೆಚ್ಚದಲ್ಲಿ ನಡೆದ ಸ್ಮಾರ್ಟ್ ಸಿಟಿ ಕಾಮಗಾರಿ : ಮಳೆಗೆ ಕೊಚ್ಚಿ ಹೋದ ರಸ್ತೆಯ ಇಂಟರ್ ಲಾಕ್

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬಂದಿರುವ ಸಾವಿರಾರು ಕೋಟಿ ರೂ.ಹಣವನ್ನು ಕೇವಲ ರಸ್ತೆ ಅಭಿವ್ರದ್ದಿಗೆ ವಿನಿಯೋಗಿಸಿದರೂ ರಸ್ತೆಗಳಿಗೆ ಮಾತ್ರ ಮುಕ್ತಿ ಸಿಕ್ಕಿಲ್ಲ. ಬಲ್ಮಠದ ಜಿಲ್ಲಾಧಿಕಾರಿಗಳ ನಿವಾಸದ ಪಕ್ಕದಲ್ಲೇ ಎಸ್.ಸಿ.ಎಸ್ ಆಸ್ಪತ್ರೆಯ ಕಡೆಗೆ ಹಾದು ಹೋಗುವ ಮುಖ್ಯ ರಸ್ತೆಯು ಕಳೆದ ಹಲವಾರು ತಿಂಗಳಿನಿಂದ ಶೋಚನೀಯ ಪರಿಸ್ಥಿತಿಯಲ್ಲಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಾಲಿಕೆ ಅಧಿಕಾರಿಗಳು ದಿವ್ಯ ಮೌನ ವಹಿಸಿರುವುದು ಶೋಚನೀಯವಾಗಿದೆ. ಮಳೆ ನೀರು ಹೋಗಲು

ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹೆರ್ಮನ್ ಮ್ಯೋಗ್ಲಿಂಗ್ ಸ್ಮರಣೆ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮವು ಮಂಗಳೂರು ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು. ಕನ್ನಡದ ಪ್ರಥಮ ಪತ್ರಿಕೆ ಮಂಗಳೂರ ಸಮಾಚಾರ ಪತ್ರಿಕೆಯ ಸಂಸ್ಥಾಪಕ ಸಂಪಾದಕ ರೆ.ಹೆರ್ಮನ್ ಮೋಗ್ಲಿಂಗ್ ಅವರ ಪ್ರತಿಮೆಗೆ ಮಾಜಿ ಶಾಸಕ ಜೆ.ಆರ್.ಲೊಬೋ ಅವರು ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜೆ.ಆರ್.ಲೋಬೋ ಅವರು,

ಪುತ್ತೂರಿನ ಹಾರಾಡಿ ಶಾಲೆಯಲ್ಲಿ ಆವರಣಗೋಡೆ ಕುಸಿತ : ಪುತ್ತೂರು ನಗರಸಭೆ ಅಧ್ಯಕ್ಷರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ

ಭಾರಿ ಮಳೆಗೆ ಪುತ್ತೂರು ನಗರ ಸಭಾ ವ್ಯಾಪ್ತಿಯ ಹಾರಾಡಿ ಸ.ಉ.ಹಿ.ಪ್ರಾ.ಶಾಲೆಯ ಆವರಣಗೋಡೆಯೊಂದು ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರಸಭೆ ಅಧ್ಯಕ್ಷರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದ್ದಾರೆ.ಹಾರಾಡಿಯ ಶಾಲೆಯ ಹಿಂಬದಿಯ ಪ್ರಯಾಣಿಕರ ತಂಗುದಾಣದ ಬಳಿಯಲ್ಲಿರುವ ಆವರಣಗೋಡೆ ಕುಸಿದಿದೆ. ಘಟನಾ ಸ್ಥಳಕ್ಕೆ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಸ್ಥಳೀಯ ಸದಸ್ಯೆ ಪ್ರೇಮಲತಾ ನಂದಿಲ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ಅವರು ಭೇಟಿ,ನೀಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಭೇಟಿ ನೀಡಿದರು.ಅವರಿಗೆ ಆಶ್ಲೇಷ ವಸತಿ ಗೃಹದ ಎದರು ಭಾಗದಲ್ಲಿ ಗೌರವವಂದನೆ ಸಲ್ಲಿಸಲಾಯಿತು. ಸಚಿವ ಎಸ್. ಅಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೆÇಲೀಸ್ ಆಯುಕ್ತ ಹೃಷಿಕೇಶ್ ಸೋನಾವಾಣೆ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ದ.ಕ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ