Home Articles posted by v4team (Page 746)

ಉಳ್ಳಾಲ ನಗರಸಭೆಯ ದುರಾಡಳಿತ ಮತ್ತು ಅವ್ಯವಹಾರದ ವಿರುದ್ಧ ನಗರಸಭಾ ಕಛೇರಿಗೆ ಮುತ್ತಿಗೆ : ಎಸ್ ಡಿಪಿಐ

ಉಳ್ಳಾಲ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಉಳ್ಳಾಲ ನಗರಸಭೆಯಲ್ಲಿ ಕಾಮಗಾರಿ, ಲೈಸೆನ್ಸ್ , ಡೋರ್ ನಂಬರ್, ತೆರಿಗೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದ್ದು ಇಲ್ಲಿನ ಆಡಳಿತ ಪಕ್ಷ ಮತ್ತು ಅಧಿಕಾರಿಗಳು ಬೇಕಾಬಿಟ್ಟಿ ಆಡಳಿತ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರದಲ್ಲಿ ಬಹಳಷ್ಟು ಚರ್ಚೆಗಳು

ವಿ4 ನ್ಯೂಸ್‍ನಲ್ಲಿ ನೀರಿನ ಘಟಕದ ದುರಸ್ತಿ ಕುರಿತು ವರದಿ ಬಿತ್ತರ : ಎಚ್ಚೆತ್ತ ಅಧಿಕಾರಿಗಳು

ಕಾರ್ಕಳದ ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರಿಗಾಗಿ ಸುಮಾರು ಒಂದು ಲಕ್ಷ ರೂಪಾಯಿಯ ವೆಚ್ಚದಲ್ಲಿ ನೀರಿನ ಘಟಕ ಅಳವಡಿಸಲಾಗಿತ್ತು. ಉದ್ಘಾಟನೆಗೊಂಡ ಒಂದೇ ತಿಂಗಳ ಅವಧಿಯಲ್ಲಿ ನೀರಿನ ಘಟಕ ಕೆಟ್ಟು ಹೋಗಿ ಅದನ್ನು ದುರಸ್ತಿ ಮಾಡುವ ಗೋಜಿಗೆ ಪುರಸಭೆಯಾಗಲಿ, ಸಂಬಂಧಪಟ್ಟ ಇಲಾಖೆ ತಲೆಕೆಡಿಸಿಕೊಂಡಿಲ್ಲ ಈ ಬಗ್ಗೆ ಸೆಪ್ಟಂಬರ್ 16ರಂದು ವಿ4 ನ್ಯೂಸ್‍ನಲ್ಲಿ

ದ.ಕ ಜಿಲ್ಲೆಯ ಹದಗೆಟ್ಟಿರುವ ಹೆದ್ದಾರಿಗಳನ್ನು ಶೀಘ್ರ ದುರಸ್ತಿ ಗೊಳಿಸಲು ಎಸ್‌ಡಿಪಿಐ ಒತ್ತಾಯ

ಮಂಗಳೂರು,:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹಲವು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ತೀವ್ರ ಹದಗೆಟ್ಟಿದ್ದು,ವಾಹನ ಸವಾರರಿಗೆ ಸಂಚರಿಸಲು ಅಯೋಗ್ಯವಾಗಿದೆ ಹಾಗಾಗಿ ಹತ್ತು ದಿನಗಳ ಒಳಗಾಗಿ ದುರಸ್ತಿ ಕಾರ್ಯ ಆರಂಬಿಸಬೇಕು ಇಲ್ಲದಿದ್ದಲ್ಲಿ ಪಕ್ಷದ ನೇತೃತ್ವದಲ್ಲಿ ಸಾರ್ವಜನಿಕರ ಸಹಭಾಗಿತ್ವ ದೊಂದಿಗೆ ಹೆದ್ದಾರಿ ಬಂದ್ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಸ್‌ಡಿಪಿಐ ದ.ಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪತ್ರಿಕಾ

ಕ್ರಿಮಿನಲ್ ಕೇಸ್ ದಾಖಲು : ಬಸ್ಸು ಮಾಲಕರ ಸಂಘದೊಂದಿಗೆ ಸಮಾಲೋಚನೆ

ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ನೇತೃತ್ವದಲ್ಲಿ ಉಳ್ಳಾಲ, ದೇರಳಕಟ್ಟೆ, ಮುಡಿಪು ಭಾಗದ ಬಸ್ಸು ಚಾಲಕ, ನಿರ್ವಾಹಕರ ನಿಯೋಗ ದ.ಕ. ಬಸ್ಸು ಮಾಲಕರ ಸಂಘದ ಕಚೇರಿಗೆ ಭೇಟಿ ನೀಡಿ ಮಾಲಕರ ಸಂಘದ ಮುಖಂಡರೊಂದಿಗೆ ಮಾತುಕತೆ ನಡೆಸಿತು.‌ ಇತ್ತೀಚೆಗೆ ಬಸ್ಸಿನಿಂದ ಆಕಸ್ಮಿಕವಾಗಿ ಪಿ ಯು ವಿದ್ಯಾರ್ಥಿ ಜಾರಿ ಬಿದ್ದು ಮೃತ ಪಟ್ಟ ಘಟನೆಯಲ್ಲಿ ಚಾಲಕ, ನಿರ್ವಾಹಕರ ಮೇಲೆ ಸೆಕ್ಷನ್ 304 ಹಾಕಿ ಜೈಲಿಗೆ ಕಳುಹಿಸಿದ ಪ್ರಕರಣದ ಕುರಿತು ಹಾಗೂ ಪೊಲೀಸರಿಂದ ಚಾಲಕ, ನಿರ್ವಾಹಕರಿಗೆ

ಅ.18 ರಂದು ಟೋಲ್ ಗೇಟ್ ತೆರವು ನೇರ ಕಾರ್ಯಾಚರಣೆ : ಸಭೆಯಲ್ಲಿ ದೃಢ ನಿರ್ಧಾರ.‌

“ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ಸಮಿತಿ ಸಭೆಯು ಸುರತ್ಕಲ್ ನ ಸ್ನೇಹ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಟೋಲ್ ಗೇಟ್ ತೆರವು ದಿನಾಂಕ ಪ್ರಕಟಿಸಲು ಒತ್ತಾಯಿಸಿ ಇತ್ತೀಚೆಗೆ ನಡೆದ ಸಾಮೂಹಿಕ ಧರಣಿ ಹಾಗೂ ಟೋಲ್ ತೆರವು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಸರಕಾರ ಸದನದಲ್ಲಿ ಪ್ರಕಟಿಸಿದ ಹೇಳಿಕೆಗಳ ಕುರಿತು ಸಭೆಯು ಚರ್ಚಿಸಿತು. ಸಾಮೂಹಿಕ ಧರಣಿಯ ಯಶಸ್ಸಿಗೆ ಕಾರಣಕರ್ತರಾದ ಸಮಾನ ಮನಸ್ಕ ಸಂಘಟನೆಗಳು ಹಾಗೂ ಜನತೆಗೆ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ದಿವಾಳಿ ಅಂಚಿಗೆ : ಭ್ರಷ್ಟಾಚಾರ, ಸೋರಿಕೆ ತಡೆಗಟ್ಟಿ, ಮಂಡಳಿ ಉಳಿಸಿ ಎಂದು ಬೃಹತ್ ಪ್ರತಿಭಟನೆ

ಬೆಂಗಳೂರು, ಸೆ, 21; ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪ್ರತಿ ವರ್ಷ 2000 ಸಾವಿರ ಕೋಟಿ ರೂಗಿಂತ ಹೆಚ್ಚು ಹಣ ಖರ್ಚು ಮಾಡಲು ಅನುಮೋದನೆ ನೀಡಿದ್ದು, ಇದರಿಂದ ಭಾರೀ ಸೋರಿಕೆ, ಕಮೀಷನ್ ವ್ಯವಹಾರ ಹೆಚ್ಚಾಗಲು ಕಾರಣವಾಗಿದೆ. ಮಂಡಳಿಯನ್ನು ದಿವಾಳಿ ಅಂಚಿಗೆ ಕೊಂಡೊಯ್ಯುವ ಪ್ರಯತ್ನವನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘ ಕಟ್ಟಡ ಕಾರ್ಮಿಕ ಮಂಡಳಿ ಎದುರು ಬೃಹತ್ ಪ್ರತಿಭಟನೆ ನಡೆಸಿತು. ಫ್ರೀಡಂ

ಸ್ವ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆಯೊಂದಿಗೆ ಸದೃಢ ಸಮಾಜ ನಿರ್ಮಾಣ : ಡಾ. ರಾಜೇಂದ್ರ ಕೆ.ವಿ.

ಆರ್ಥಿಕ ಸ್ವಾವಲಂಬನೆ ಸಾಧಿಸಲು ಸ್ವ ಉದ್ಯೋಗವನ್ನು ಸೂಕ್ತವಾದ ಮಾಹಿತಿ ಯೊಂದಿಗೆ ಮಾಡುವುದರಿಂದ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೋಟಗಾರಿಕಾ ಇಲಾಖೆ, ಮೀನುಗಾರಿಕಾ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಹಮ್ಮಿಕೊಂಡಿದ್ದ ಸ್ವ ಉದ್ಯೋಗ ಮಾಹಿತಿ ಶಿಬಿರವನ್ನು ನಗರದ ಬೆಂದೂರ್

ಸುಳ್ಯ : ಸರ್ಕಾರಿ ಜಾಗ ಅತಿಕ್ರಮಣಕ್ಕೆ ಮುಂದಾದವರ ವಿರುದ್ಧ ಕ್ರಮಕ್ಕೆ ಆಗ್ರಹ

ಸುಳ್ಯ ತಾಲೂಕಿನ ಜಯನಗರ ಮಿಲಿಟರಿ ಜಾಗಕ್ಕೆ ಸಂಬಂಧಿಸಿದ ಸರಕಾರಿ ಜಾಗವನ್ನು ಅತಿಕ್ರಮಣಕ್ಕೆ ಸ್ಥಳೀಯರೊಬ್ಬರು ಯತ್ನಿಸಿದ್ದು, ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರವುದನ್ನು ಖಂಡಿಸಿ, ಜಾಗ ಅತಿಕ್ರಮಣಕ್ಕೆ ಮುಂದಾದವರ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ತಿಳಿಸಿದ್ದಾರೆ.ನೀ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಜಯನಗರದ ಸರಕಾರಿ ಶಾಲೆಯ ಸಮೀಪ ಗೋಪಾಲ್ ನಾಯಕ್ ಎಂಬವರಿಗೆ

ಸೆ.23 : ಬಹರೈನ್ ದ್ವೀಪರಾಷ್ಟ್ರದ ಕನ್ನಡಿಗರ ಕನಸಿನ ಸೌಧ ಕನ್ನಡ ಭವನ ಉದ್ಘಾಟನೆ

ಬಹರೈನ್ ನ ಸಾವಿರಾರು ಕನ್ನಡಿಗರ ಕನಸಿನ ಕೂಸಾದ “ಕನ್ನಡ ಭವನ “ದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ಸೆಪ್ಟೆಂಬರ್ 23 ರಂದು ವಿದ್ಯುಕ್ತವಾಗಿ ಉದ್ಘಾಟನೆಗೊಳ್ಳಲಿದೆ. ದ್ವೀಪದ ಹೃದಯ ಭಾಗವಾದ ಮನಾಮಾದಲ್ಲಿ ಕನ್ನಡ ಸಂಘ ಬಹರೈನ್ ನೂತನವಾಗಿ ನಿರ್ಮಿಸಿರುವ ” ಕನ್ನಡ ಭವನ”ವನ್ನು ನ್ನು ಕರ್ನಾಟಕ ಘನ ಸರಕಾರದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ಲೋಕಾರ್ಪಣೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ

ಕೊಲ್ಯ : ಟೆಂಪೊ ರಿಕ್ಷಾ ಬೈಕ್ ನಡುವೆ ಅಪಘಾತ

ಉಳ್ಳಾಲ, ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ಟೆಂಪೊ ರಿಕ್ಷಾ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ನೀರುಮಾರ್ಗ ನಿವಾಸಿಗಳಾದ ಲೆನನ್ ಮತ್ತು ಶೋಧನ್ ಗಾಯಗೊಂಡಿದ್ದು, ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ವಿವರ : ತಲಪಾಡಿ ಕಡೆಯಿಂದ ಕೊಲ್ಯ ಕಡೆಗೆ ಟೆಂಪೋ ರಿಕ್ಷಾವೊಂದು ರಾಷ್ಟ್ರೀಯ ಹೆದ್ದಾರಿ ಕೊಲ್ಯ ಜಂಕ್ಷನ್ ಬಳಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಮಂಗಳೂರಿನಿಂದ ಕಾಸರಗೋಡು ಕಡೆ