Home Articles posted by v4team (Page 766)

ಪ್ರದಾನಿ ಆಗಮನದ ಹಿನ್ನೆಲೆ ಕೂಳೂರು, ಚೌಕಿ ವ್ಯಾಪ್ತಿಯಲ್ಲಿ ತುರ್ತುಪರಿಸ್ಥಿತಿ ವಾತಾವರಣ ಸಿಪಿಐ(ಎಂ) ಖಂಡನೆ.

ಸೆ 2ರ ಮೋದಿ ಸಮಾವೇಶಕ್ಕಾಗಿ ಕೂಳೂರು ವ್ಯಾಪ್ತಿಯಲ್ಲಿ ಭಯದ ವಾತಾವರಣವನ್ನು ನಿರ್ಮಿಸಲಾಗುತ್ತಿದೆ. ಎರಡು ದಿನದ ಬಂದ್ ಗೆ ಆಡಳಿತವೇ ಕರೆನೀಡಿದೆ. ಗೋಲ್ಡ್ ಪಿಂಚ್ ಮೈದಾನದ ಸುತ್ತಮುತ್ತಲಿನ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಶಾಲಾ ಕಾಲೇಜುಗಳಿಗೆ ಗಣೇಶೋತ್ಸವದ ನೆಪದಲ್ಲಿ ರಜೆ ಸಾರಲಾಗಿದೆ.. ಮೊದಲೇ ಕೊರೋನಾ, ನೆರೆ, ಬೆಲೆಏರಿಕೆಯಂತಹ ಸಮಸ್ಯೆಗಳಿಂದ

ಮಂಗಳೂರು : ಪ್ರಧಾನಿ ಮೋದಿ ಆಗಮನ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಅವರು ಇಂದು ನಗರದಲ್ಲಿರೋ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡುತ್ತಾ, ಈ ಕಾರ್ಯಕ್ರಮದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಸುಮಾರು ಒಂದುವರೆ ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಕೆಲವು ಫಲಾನಭವಿಗಳಿಗೆ ಯೋಜನೆಗಳ ಹಸ್ತಾಂತರ ನಡೆಯಲಿದೆ. ಮಧ್ಯಾಹ್ನ 1ಕ್ಕೆ ಕಾರ್ಯಕ್ರಮ ನಡೆಯಲಿರುವುದರಿಂದ ಸಾರ್ವಜನಿಕರು ಮುಂಚಿತವಾಗಿ ಭಾಗವಹಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ನಡೆಸಲಾಗುತ್ತಿದೆ

ಕಿನ್ನಿಮೂಲ್ಕಿ ಮೀನು ಮಾರಾಟ ಶೆಡ್ ನೆಲಸಮ

ಉಡುಪಿ: ನಗರದ ಕಿನ್ನಿಮೂಲ್ಕಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೀನು ಮಾರಾಟ ಶೆಡ್ ನ್ನು ನೆಲಸಮಗೊಳಿಸಿದ ಪ್ರಕರಣ ಇವತ್ತು ನಗರಸಭೆಯಲ್ಲಿ ಪ್ರತಿಧ್ವನಿಸಿತು.ಕೆಲಹೊತ್ತು ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಜಟಾಪಟಿಗೂ ಕಾರಣವಾಯಿತು.ಕೊನೆಗೆ ಮೀನು ಮಾರಾಟ ಶೆಡ್ ನ್ನು ಅನಧಿಕೃತವಾಗಿ ಮೀನುಗಾರ ಮಹಿಳೆಯರಿಗೆ ಕಟ್ಟಿಸಿ ಕೊಟ್ಟ ಕಾಂಗ್ರೆಸ್ ನಗರಸಭಾ ಸದಸ್ಯೆ ಅಮೃತಾ ಕೃಷ್ಣಮೂರ್ತಿ ಮತ್ತು ರಮೇಶ್ ಕಾಂಚನ್ ಸಭೆಯಲ್ಲೇ ವಿಷಾದ ವ್ಯಕ್ತಪಡಿಸಿದರು. ಐದು ದಿನಗಳ

ಮೂಡುಬಿದಿರೆ : ಸಿಸಿ ಕೆಮರಾ ಅಳವಡಿಸಿದ್ದಲ್ಲಿಯೇ ತ್ಯಾಜ್ಯದ ರಾಶಿ

ಮೂಡುಬಿದಿರೆ :ಪುರಸಭಾ ವ್ಯಾಪ್ತಿಯಲ್ಲಿ ಕಸದ ರಾಶಿ ಬೀಳುವುದನ್ನು ತಪ್ಪಿಸಲು ಹಾಗೂ ಯಾರು ಕಸವನ್ನು ತಂದು ಸುರಿಯುತ್ತಾರೆ ಎಂಬುದನ್ನು ಪತ್ತೆ ಹಚ್ಚಲು ಪುರಸಭೆಯ ವತಿಯಿಂದ ವಿವಿಧ ಕಡೆಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಆದರೆ ಸಿಸಿ ಕೆಮರಾದ ಬುಡದಲ್ಲಿಯೇ ಕಸದ ರಾಶಿ ತುಂಬುತ್ತಿದೆ. ಇದಕ್ಕೆ ಏನು ಕ್ರಮ ಕೈಗೊಳ್ಳುತ್ತೀರಿ ಈವರೆಗೆ ಯಾವ ಕ್ರಮವನ್ನು ಕೈಗೊಂಡಿದ್ದೀರಿ ಸಿಸಿ ಕೆಮರಾದ ಬಆಯೇ ಕಸದ ರಾಶಿ ಬೀಳುವುದಾದರೆ ಸಿಸಿ ಕೆಮರಾದ ಅಗತ್ಯವಿದೆಯೇ. ಪರಿಸರ

ದುಬೈನಲ್ಲಿ ಯಶಸ್ವಿಯಾಗಿ ನಡೆದ ‘ಸೌಹಾರ್ದ ಲಹರಿ’ ನೂತನ ಪದಗ್ರಹಣ ಕಾರ್ಯಕ್ರಮ

ಸೌಹಾರ್ದ ಲಹರಿಯ ನೂತನ ಪದಾಧಿಕಾರಿಗಳ ಉದ್ಘಾಟನ ಸಮಾರಂಭವು ಮಾರ್ಕೊ ಪೋಲೊ ಹೋಟೆಲ್ ದುಬೈ ತಾರೀಕು 20-08-2022 ರಂದು ವಿಜೃಂಭಣೆಯಿಂದ ನಡೆಯಿತು. ಸಂಘದ ಗೌರವ ಅಧ್ಯಕ್ಷರು ಶ್ರೀ ದಿನೇಶ್ ಸಿ ದೇವಾಡಿಗ ನೂತನ ಪದಾಧಿಕಾರಿಗಳಿಗೆ ಶುಭಾಶಯ ನೀಡಿದರು.ಸಂಘದ ಗೌರವ ಸಲಹೆಗಾರ ಶ್ರೀ ದಯಾ ಕಿರೋಡಿಯನ್ ಸಂಘದ ನಿರ್ಮಾಣ ಮತ್ತೆ ಸಂಘದ ಪೌಂಡರ್ ಸದಾಶಿವ ದಾಸ್ ಅವರ ಬಗ್ಗೆ ಮಾತಾಡಿ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದರು. ಸಂಘದ ನಿಕಟ ಪೂರ್ವ ಅಧ್ಯಕ್ಷರು ಶ್ರೀ ಅಶೋಕ್

ಮೂಡುಬಿದರೆ: ನಿವೃತ್ತ ಸುಬೇದಾರ್ ರಾಮಚಂದ್ರ ಭಟ್ ನಿಧನ

ಮೂಡುಬಿದರೆಯ: ಭಾರತೀಯ ಸೇನೆಯ ನಿವೃತ್ತ ಸುಬೇದಾರ್ ರಾಮಚಂದ್ರ ಭಟ್ ಮೂಡುಬಿದರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.ಮೂಡುಬಿದರೆಯ ಹನುಮಂತನಗರ ನಿವಾಸಿಯಾಗಿದ್ದಾರೆ,. 28ವರ್ಷಗಳ ಸುದೀರ್ಘ ಅವಧಿಯಲ್ಲಿ ಸೇನೆಯಲ್ಲಿ ಸೇವೆ, ಸಲ್ಲಿಸಿದ್ದರು, ಪಂಜಾಬ್, ಹರಿಯಾಣ, ಕೋಲ್ಕತ್ತಾ, ಬರೇಲಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿ ದೇಶಪ್ರೇಮ ಮೆರೆದಿದ್ದಾರೆ, ಪತ್ನಿ ದೇವಕಿ ಭಟ್ ಮೂಡುಬಿದರೆ ರೋಟರಿ ಆಂಗ್ಲ ಮಾಧ್ಯಮ

ಮೂಡುಬಿದರೆಯಲ್ಲಿ ಬೋರುಗುಡ್ಡೆಯಲ್ಲಿ ಸಂಜೀವಿನಿ ಮಾಸಿಕ ಸಂತೆ

ಮೂಡುಬಿದಿರೆ: ತಾವು ಮನೆಯಲ್ಲಿ ಬೆಳೆಸಿದ ತರಕಾರಿಗಳಾದ ಬಸಳೆ, ಹೀರೆಕಾಯಿ, ಸೌತೆಕಾಯಿ, ಅಮಟೆಕಾಯಿ, ಬಾಳೆಕಾಯಿ, ಸ್ವ ಉದ್ಯೋಗಕ್ಕಾಗಿ ತಯಾರಿಸಿದ ಉಪ್ಪಿನಕಾಯಿ, ಹಿಡಿಸೂಡಿಯ ಕಟ್ಟುಗಳು, ಬೀಳುಗಳಿಂದ ತಯಾರಿಸಿದ ಬುಟ್ಟಿಗಳು, ತೆಂಗಿನ ಗೆರಟೆಯನ್ನು ಬಳಸಿ ಮಾಡಿದ ಸೌಟುಗಳು, ವೇಸ್ಟ್ ಬಟ್ಟೆಗಳನ್ನು ಬಳಸಿ ಮಾಡಿದ ಬಣ್ಣ ಬಣ್ಣದ ಕಾಲು ಒರೆಸುವ ಬಟ್ಟೆಗಳು, ತಿಂಡಿ-ತಿನಿಸುಗಳು, ಮಾರಾಟಗಳೊಂದಿಗೆ ಮಹಿಳೆಯರು ಭರ್ಜರಿ ವ್ಯಾಪಾರ-ವಹಿವಾಟನ್ನು ಮಾಡುವ ಮೂಲಕ ಸ್ವಾವಲಂಬಿಗಳಾಗಿ

ಸುಭಾಷಿತನಗರ ರೆಸಿಡೆಂಟ್ಸ್ ವೆಲ್‍ಫೇರ್ ಅಸೋಸಿಯೇಶನ್‍ನ ವಾರ್ಷಿಕೋತ್ಸವ

ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್(ರಿ.) ಸುರತ್ಕಲ್ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಸಂಘೇ ಶಕ್ತಿ ಕಲೌಯುಗೇ ಅನ್ನೋ ಮಾತಿನಂತೆ ಕಲಿಯುಗದಲ್ಲಿ ಸಂಘಟನೆಯ ಶಕ್ತಿಯಿದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಇದನ್ನು ಅಕ್ಷರಶಃ

ಪುತ್ತೂರಿಗೆ ತೆರಳಿದ ರಾಜ್ಯಪಾಲರು

ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪುತ್ತೂರಿನ ವಿವೇಕಾನಂದ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ

ಮುಸ್ಲಿಮರ ವಿರುದ್ಧ ದ್ವೇಷ ಹರಡುವಿಕೆ ತಡೆಗೆ ಏಕತೆ ಮಂತ್ರ : ಚಿಂತಕ ಪ್ರೊ. ಅಪೂರ್ವಾನಂದ ಅಭಿಪ್ರಾಯ

ಹಿಂದೂಗಳಲ್ಲಿ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡುವ ಅಭಿಯಾನ ದೇಶದಲ್ಲಿ ದೇಶದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ಮಣಿಸಬೇಕಾದ ಐಕ್ಯತೆ ರೂಪಿಸುವ ಕಲೆಗಾರಿಕೆಯನ್ನು ರೂಢಿಸಿಕೊಳ್ಳಬೇಕಿದೆ ಎಂದು ಚಿಂತಕ ದೆಹಲಿ ವಿಶ್ವವಿದ್ಯಾಲಯದ ಪ್ರೊ. ಅಪೂರ್ವಾನಂದ ಅಭಿಪ್ರಾಯಪಟ್ಟರು. ನಗರದ ಬಲ್ಮಠದ ಬಿಷಪ್ ಜತ್ತನ್ನ ಸಭಾಂಗಣದಲ್ಲಿಂದು ಅವರು ಸಮದರ್ಶಿ ವೇದಿಕೆ, ಹೊಸತು ಪತ್ರಿಕೆ ಮತ್ತು ಎಂ.ಎಸ್.ಕೃಷ್ಣನ್ ಸ್ಮಾರಕ ಟ್ರಸ್ಟ್ ಸಹಯೋಗದೊಂದಿ