ತಾನು ಆರ್ಥಿಕವಾಗಿ ಬಲಹೀನನಾಗಿದ್ದರೂ ಬೇರೊಬ್ಬರ ಕಷ್ಟಕ್ಕೆ ವಿಡಿಯುವ ತುಡಿತ ಇರುವ ಮನುಷ್ಯ ಅಪರೂಪ.. ಆದರೆ ಅದಕ್ಕೆ ಅಪವಾದವೋ ಎಂಬಂತೆ ಕೂಲಿ ಕೆಲಸ ನಡೆಸಿ ಜೀವನ ಸಾಗಿಸುವ ಅಪ್ರತಿಮ ಅಪ್ಪಟ ಸಮಾಜ ಸೇವಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಕಟಪಾಡಿ ಎಂಬುದಾಗಿ ಗಮನಾರ್ಹ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ರವಿ ಕಟಪಾಡಿ ಅದೆಷ್ಟೋ ಬಡ ಕುಟುಂಬಗಳ ಕಷ್ಟಕ್ಕೆ
ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ಕಾಂಕ್ರಿಟ್ ರಸ್ತೆಯಂಚಿನಲ್ಲಿ ಹೊಂಡವಾಗಿ ದ್ವಿಚಕ್ರ ವಾಹನ ಸವಾರರು ಬೀಳುತ್ತಿದ್ದರೆ, ಪಾದಚಾರಿಗಳ ಕಾಲು ಸಿಲುಕುತ್ತಿದೆ. ಇದನ್ನು ದಿನನಿತ್ಯ ಗಮನಿಸುತ್ತಿರುವ ವಿದ್ಯಾರ್ಥಿಯೊಬ್ಬ ಪಕ್ಕದಿಂದ ಸಣ್ಣ ಕಲ್ಲುಗಳನ್ನು ಹೆಕ್ಕಿ ತಂದು ಹೊಂಡ ಮುಚ್ಚುವ ಪ್ರಯತ್ನ ಮಾಡಿದ್ದಾನೆ.ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಯ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ
ಕಾರು ಚಾಲಕನ ಅವಾಂತರದಿಂದಾಗಿ ರಸ್ತೆಯಂಚಿನಲ್ಲಿ ನಿಲ್ಲಿಸಿದ ಕಾರು ಸಹಿತ ಸ್ಕೂಟರ್ ತೀವ್ರ ಜಖಂ ಗೊಂಡು ಇಬ್ಬರು ಗಾಯಗೊಂಡ ಘಟನೆ ಕಟಪಾಡಿ ಪೇಟೆಯಲ್ಲಿ ರಾತ್ರಿ ಸಂಭವಿಸಿದೆ. ಉಡುಪಿ ಕಡೆಯಿಂದ ಕಟಪಾಡಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರು ರಸ್ತೆಯಂಚಿನಲ್ಲಿ ನಿಲ್ಲಿಸಿದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ನಿಲ್ಲದೆ ಸ್ಕೂಟರ್ ಗೆ ಡಿಕ್ಕಿಯಾಗಿ ಪಕ್ಕದ ಪಾಸ್ಟ್ ಫುಡ್ ಅಂಗಡಿಯೊಳಗೆ ನುಗ್ಗಿದೆ. ಅಂಗಡಿಯಾತನಿಗೆ ಹಾಗೂ ಆಹಾರ ಸೇವಿಸುತ್ತಿದ್ದ
ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆ:ಅವಿಭಜಿತ ದ.ಕ. ಜಿಲ್ಲೆಯ ಮೂವರಿಗೆ ಬಹುಮಾನ ,ಆಂಧ್ರ ಪ್ರದೇಶ ಪೋಟೋಗ್ರಫಿ ಅಕಾಡೆಮಿ ಆಜಾದಿಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು ಇವರ ಪೈಕಿ ಮೂವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಕಳುಹಿಸಿದ ಚಿತ್ರಕ್ಕೆ ಬಹುಮಾನ ಲಭಿಸಿದೆ. ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ
ದಕ್ಷಿಣ ಕನ್ನಡ ಜಿಲ್ಲಾ ಕೊರಗ ಸಂಘದ ವತಿಯಿಂದ ಕೊರಗರ ಭೂಮಿ ಹಬ್ಬ ’ನಮ್ಮ ಭೂಮಿ ನಮ್ಮ ಹಕ್ಕು’ ಕಾರ್ಯಕ್ರಮ ಕಿನ್ನಿಗೋಳಿ ಸಮೀಪದ ಬಳ್ಕುಂಜೆ ಕೊರಗರ ಬಲೆಪುವಿನಲ್ಲಿ ಗುರುವಾರ ನಡೆಯಿತು.ಬಳ್ಕುಂಜೆ ತಾಲ್ಯಾನ್ ಮನೆತನ ಗುರಿಕಾರರಾದ ಜಬ್ಬ ಕೊರಗ ಅವರು ಹಬ್ಬದ ಜ್ಯೋತಿ ಬೆಳಗಿಸಿ ಧ್ವಜಾರೋಹಣ ನೆವೇರಿಸಿದರು. ಕೊರಗ ಸಮುದಾಯದ ಹಿರಿಯ ಮಹಿಳೆ ಕಾಳಿ ಅವರು ಹಬ್ಬದ ಸಿಹಿಜೇನು ಹಂಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ
ಮಂಗಳೂರು:- ಸ್ವಾತಂತ್ರ್ಯದ ಅಮೃತೋತ್ಸವದ ಪ್ರಯುಕ್ತ ಮಂಗಳೂರು ಹೊರವಲಯದ ಅಡ್ಡೂರಿನಲ್ಲಿ ಸನ್ ಶೈನ್ ಫ್ರೆಂಡ್ಸ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಮುಖ್ಯ ಅತಿಥಿಗಳಾದ ಎಂ.ಜಿ ಹೆಗ್ಡೆ ( ಶಿಕ್ಷಣತಜ್ಞರು ) ಹಾಗೂ ಯು.ಪಿ ಇಬ್ರಾಹಿಂ ಇವರು ನೆರವೇರಿಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸನ್ ಶೈನ್ ಫ್ರೆಂಡ್ಸ್ ಅಡ್ಡೂರು ಇದರ ಅಧ್ಯಕ್ಷ ಎ ಕೆ ಹನೀಫ್ ಅವರು ವಹಿಸಿದ್ದರು. ಡಾ ಇ ಕೆ ಎ ಸಿದ್ದೀಕ್ ಅಡ್ಡೂರು, ಜನಾಬ್ ಅಹ್ಮದ್ ಬಾವ
ಭಾರತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಎಲ್ಲೆಡೆ ವಿಜ್ರಂಭಣೆಯಿಂದ ನಡೆದಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಗಸ್ಟ್ 15ರಂದು ಬೆಂಗಳೂರಿನಲ್ಲಿ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮುಲ್ಕಿ ಅವರ ನೇತೃತ್ವದಲ್ಲಿ ದ.ಕ. ಜಿಲ್ಲೆಯಿಂದ 15 ಬಸ್ಸು ಸಹಿತ ಇತರ ವಾಹನಗಳಲ್ಲಿ ಸಾವಿರಾರು ಕಾರ್ಯಕರ್ತರು ಬೆಂಗಳೂರಿಗೆ ತೆರಳಿ ಕಾರ್ಯಕ್ರಮದಲ್ಲಿ
ಉಜಿರೆ: ಕಲಾಭಿಮಾನಿಯಾಗಿ, ಕಲಾ ಪೋಷಕರಾಗಿದ್ದ ಡಾ.ಬಿ.ಯಶೋವರ್ಮ ಅವರು ಇಂದು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಚಿಂತನೆಗಳು ನಮ್ಮೆಲ್ಲರ ಪ್ರೇರಕ ಶಕ್ತಿ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಹೇಳಿದರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್ನಲ್ಲಿ ಡಾ.ಬಿ.ಯಶೋವರ್ಮ ಅವರ ಸ್ಮರಣಾರ್ಥ ಕನ್ನಡ ವಿಭಾಗ ಆಯೋಜಿಸಿದ್ದ ‘ಅರಿವಿನ ದೀವಿಗೆ’ ಉಪನ್ಯಾಸ ಮಾಲಿಕೆ
ಕುಂದಾಪುರ : ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದ ಶಂಕಿತ ನಕ್ಸಲ್ ವಾದಿಗಳಾದ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರ ಮೇಲಿನ 7 ಪ್ರಕರಣಗಳ ವಿಚಾರಣೆಯನ್ನು ಸೆಕ್ಷನ್ ನ್ಯಾಯಾಲಯಕ್ಕೆ ವರ್ಗಾಯಿಸಿ ಬುಧವಾರ ಆದೇಶ ಹೊರಡಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶವ್ ಯಡಿಯಾಳ ಕೊಲೆ ಪ್ರಕರಣವೂ ಸೇರಿದಂತೆ ಕುಂದಾಪುರ ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 11 ಪ್ರಕರಣಗಳಿದ್ದು, ಶಂಕರನಾರಾಯಣ ಠಾಣಾ ವ್ಯಾಪ್ತಿಯ 6 ಹಾಗೂ ಕೊಲ್ಲೂರು ಠಾಣೆ
ಉಜಿರೆ: ಜೀವನದಲ್ಲಿ ಎಲ್ಲಾ ರೀತಿಯ ಅನುಭವಗಳು ಅಗತ್ಯ. ಅನುಭವಗಳ ಕೊರತೆ ಇದ್ದಾಗ ಮಾತ್ರ ಸೋಲು ಎದುರಾಗುತ್ತದೆ. ಆದರೆ, ಅಂತಹ ಸೋಲುಗಳಿಂದ ಕಲಿತು ಜೀವನಕ್ಕೆ ಅಳವಡಿಸಿಕೊಳ್ಳುವುದು ಬಹಳಷ್ಟಿದೆ ಎಂದು, ಅಮೇಜಾನ್ ವೆಬ್ ಸರ್ವಿಸ್ ಸಂಸ್ಥೆಯ ಹಿರಿಯ ಪ್ರಧಾನ ಅಭಿಯಂತರ, ಮುರಳಿ ಕೃಷ್ಣ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಸಭಾಂಗಣದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಬಿ.ವೋಕ್



























