Home Articles posted by v4team (Page 789)

ತಲವಾರು ದಾಳಿ ವದಂತಿ ಪ್ರಕರಣ ಹಿಂದಿರುವ ಷಡ್ಯಂತ್ರ ಬಯಲಿಗೆಳೆಯುವಂತೆ ಎಸ್ಡಿಪಿಐ ಒತ್ತಾಯ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಗ್ರಾಮದ ಮುಳ್ಳುಗುಡ್ಡೆ ಎಂಬಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತ ಕಿಶೋರ್ ಯಾನೆ ಕಿಚ್ಚು ಎಂಬಾತ ಇಂದು ತನ್ನ ಮೇಲೆ ಮೂರು ಜನ ವ್ಯಕ್ತಿಗಳು ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿ ಈ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತು ಆತಂಕ ಸೃಷ್ಟಿಸಲು ಕಾರಣನಾಗಿದ್ದು ಈತ ವದಂತಿ ಹರಡಿರುವುದರ ಹಿಂದೆ ನಿಗೂಢ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಮಕ್ಕಳ ಅಸ್ಥಿ ಮಜ್ಜೆಯ ಕಸಿ ಸೇವೆಗಳು- ನೊಂದ ರೋಗಿಗಳಿಗೆ ಭರವಸೆಯ ಆಶಾಕಿರಣ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ ಕಾರ್ಯಕ್ರಮ ಮತ್ತು ಪತ್ರೀಕಾಘೋಷ್ಠಿಯನ್ನು ಇಂದು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಅವರು ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್ ನ ಮಾಹಿತಿ

ಕಾರ್ಕಳದ ಮಿಯಾರು ಗ್ರಾಮದಲ್ಲಿ ಕೈಗಾರಿಕೆ ಸ್ಥಾಪನೆಗೆ ವಿರೋಧ

ಕಾರ್ಕಳದ ಮಿಯಾರು ಗ್ರಾಮದಲ್ಲಿ ಜಾನ್ ಸಿಎನ್ ಎಸ್‍ಎಲ್ ಆಯಿಲ್ ಮತ್ತು ಶೆಲ್ ಘಟಕ ಪ್ರಾರಂಭಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಶೇಕ್ ಶಬ್ಬೀರ್ ಅವರು, ಕೈಗಾರಿಕಾ ಪ್ರದೇಶ ಸ್ಥಾಪಿಸಲು ಯೋಗ್ಯವಲ್ಲದ ಸ್ಥಳ ಇದಾಗಿದೆ. ಕೈಗಾರಿಕೆ ಪ್ರಾಂಗಾಣಕ್ಕೆ ಹೊಂದಿಕೊಂಡು ಸುಮಾರು 450 ಹೆಚ್ಚು ಬಡ ಕುಟುಂಬಗಳ ಗುಡಿಸಲುಗಳಿವೆ. ಕೂಗಳತೆಯ ದೂರದಲ್ಲಿ ಮುರಾಜಿ ದೇಸಾಯಿ ವಸತಿ

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಳದಲ್ಲಿ ಭಜನಾ ಸಪ್ತಾಹ

ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 2 ರಿಂದ ಆಗಸ್ಟ್ 9 ರವರೆಗೆ, 122 ನೇ ಭಜನಾ ಸಪ್ತಾಹ ಮಹೋತ್ಸವವು, ನಾಗರ ಪಂಚಮಿಯಂದು ಶುಭಾರಂಭಗೊಂಡು, ದ್ವಾದಶಿ ಪರ್ಯಂತ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಊರ ಪರವೂರ ಭಜನಾ ಮಂಡಳಿಗಳಿಂದ ಅಹೋರಾತ್ರಿ 7 ದಿನಗಳ ಕಾಲ, ನಿರಂತರ ಭಜನೆ ಈ ಮಹೋತ್ಸವದಲ್ಲಿ ನಡೆಯಲಿದೆ. ಈ ಪ್ರಯುಕ್ತ ನಡೆದ ದೀಪ ಸ್ಥಾಪನಾ ಕಾರ್ಯಕ್ರಮ ವೈಭವದಿಂದ ನೆರವೇರಿತು. ಈ ಶುಭ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು,

ಉಳ್ಳಾಲದಲ್ಲಿ ಯಾವುದೇ ಹಲ್ಲೆ ಘಟನೆ ಆಗಿಲ್ಲ, ವದಂತಿ ನಂಬಬೇಡಿ : ಕಮೀಷನರ್ ಶಶಿಕುಮಾರ್.ಎನ್.

ಉಳ್ಳಾಲದಲ್ಲಿ ಯುವಕ ಮೇಲೆ ಹಲ್ಲೆಗೆ ಯತ್ನ ಆಗಿದೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಪೊಲೀಸ್ ಕಮೀಷನರ್ ಶಶಿಕುಮಾರ್.ಎನ್. ಸ್ಪಷ್ಟನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಹಾಗೂ ಸುರತ್ಕಲ್‍ನಲ್ಲಿ ನಡೆದಿರುವ ಹತ್ಯೆ ಹಿನ್ನೆಲೆಯಲ್ಲಿ ಜಿಲ್ಲೆ ಇದೀಗ ಸೂಕ್ಷ್ಮ ಪ್ರದೇಶವಾಗಿ ಮಾರ್ಪಡಿಟ್ಟಿದೆ. ನಗರ ಹಾಗೂ ಜಿಲ್ಲೆಯಲ್ಲಿ ಮತ್ತೆ ಇಂತಹ ಕೃತ್ಯಗಳು ನಡೆದಂತೆ ಮುಂಜಾಗೃತ ಕ್ರಮವಹಿಸಲಾಗಿದೆ ಅಂತಾ ಹೇಳಿದರು.

ಕೊಕ್ಕಡ : ಗ್ರಾಮ ಲೆಕ್ಕಾಧಿಕಾರಿಯ ಕಾನೂನು ಬಾಹಿರ ಚಟುವಟಿಕೆಗೆ ಖಂಡನೆ

ಕರ್ನಾಟಕ ರಾಜ್ಯ ಸಂಘ ದಕ್ಷಿಣಕನ್ನಡ ಜಿಲ್ಲಾ ಯುವ ರೈತ ಘಟಕದ ವತಿಯಿಂದ ಕೊಕ್ಕಡ ಹೋಬಳಿ, ಕಣಿಯೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯ ಕಾನೂನು ಬಾಹಿರ ಚಟುವಟಿಕೆಯನ್ನು ಖಂಡಿಸಿ ನ್ಯಾಯಬದ್ಧವಾಗಿ ಕಾರ್ಯ ನಿರ್ವಹಿಸಲು ಬುದ್ಧಿವಾದ ಹೇಳಲಾಯಿತು. ಕಣಿಯೂರು ಗ್ರಾಮ, ಕೊಕ್ಕಡ ಹೋಬಳಿಯಲ್ಲಿ ರೈತ ಸಂಘದ ಯುವ ರೈತ ಘಟಕ ಮತ್ತು ಗ್ರಾಮಸ್ಥರು ಸಹ ರೈತರಿಗೆ ಆಗಿರುವ ಅನ್ಯಾಯದ ಕುರಿತು ಗ್ರಾಮ ಲೆಕ್ಕಾಧಿಕಾರಿಯನ್ನು ಪ್ರಶ್ನಿಸಲು ದನಿಗೂಡಿಸಿದರು. ಚರ್ಚಿಸುವ ಸಮಯದಲ್ಲಿ ಕೆಲವು

ಮಸೂದ್ ಮತ್ತು ಫಾಸಿಲ್ ಪ್ರಕರಣವನ್ನು ಎನ್ಐಎ ಗೆ ಕೊಟ್ಟು ಮುಖ್ಯಮಂತ್ರಿ ರಾಜ ಧರ್ಮ ಪಾಲಿಸಲಿ:-ಎಸ್‌ಡಿಪಿಐ

ದ.ಕ ಜಿಲ್ಲೆಯ ಬೆಳ್ಳಾರೆ ಸಮೀಪದ ಕಳಂಜ ಮಸೂದ್ ಮತ್ತು ಸುರತ್ಕಲ್‌ನ ಫಾಝಿಲ್ ಕೊಲೆ ಪ್ರಕರಣವನ್ನು ಕೂಡ ಪ್ರವೀಣ್ ಪ್ರಕರಣದಂತೆ ಎನ್‌ಐಎ ಗೆ ವಹಿಸಿ ಮುಖ್ಯ ಮಂತ್ರಿ ರಾಜ ಧರ್ಮ ಪಾಲಿಸಲಿ ಎಂದು ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಆಗ್ರಹಿಸಿದ್ದಾರೆ.ಯಾವುದೇ ಕೊಲೆಯು ಸಮರ್ಥನೀಯವಲ್ಲ ಮೂರು ಕೊಲೆಯು ಖಂಡನೀಯವಾಗಿದೆ.ಶಾಂತಿಯಾಗಿದ್ದ ದ.ಕ ಜಿಲ್ಲೆಯನ್ನು RSS ನ ಅಂಗ ಸಂಸ್ಥೆ ಭಜರಂಗದಳದ ಕಾರ್ಯಕರ್ತರು ಕಳಂಜದ ಮಸೂದ್ ನನ್ನು

ಸುಳ್ಯ SKSSF ಪರಿಹಾರ ಕಾರ್ಯಾಚರಣೆ

ಸುಳ್ಯ ತಾಲೂಕಿನ ‌ಸಂಪಾಜೆ ಗ್ರಾಮದಲ್ಲಿ ಜಲಸ್ಫೋಟದಿಂದ ಹಾನಿಯಾದ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಯಲ್ಲಿ SKSSF ವಿಖಾಯ ಕಾರ್ಯಕರ್ತರು ತೊಡಗಿದ್ದಾರೆ. ನೀರಿನಿಂದ ಮುಳುಗಿದ್ದ ಮನೆಗಳ ಸ್ವಚ್ಚತೆ, ಕರೆಂಟ್ ಲೈನ್ ದುರಸ್ತಿ , ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿರುವ ಮರಗಳ ತೆರವು, ಇನ್ನಿತರ ಪರಿಹಾರ ಕಾರ್ಯಗಳನ್ನು ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಜಿ.ಕೆ ಹಮೀದ್, ಪಿ.ಡಿ.ಓ ಸರಿತಾ ಡಿಸೋಜ, ಗ್ರಾ. ಪಂ. ಸದಸ್ಯರಾದ ಎಸ್.ಕೆ ಹನೀಫ಼್,

ಸಂಪಾಜೆ-ಕೊಯನಾಡು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಪಯಶ್ವಿನಿ ನದಿ

ಸಂಪಾಜೆ, ಕಲ್ಲುಗುಂಡಿ ಮತ್ತು ಕೊಯನಾಡು ಭಾಗದಲ್ಲಿ ನಿರಂತರ ಎರಡನೇ ದಿನವೂ ರಾತ್ರಿ ವೇಳೆ ಮಹಾಮಳೆ ಮುಂದುವರಿದಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಗೆ ಪಯಸ್ವಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡು ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು. ನದಿಪಾತ್ರದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ರಾತ್ರೋರಾತ್ರಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಕೊಯನಾಡಿನಲ್ಲಿ ಕೂಡ ನಿರಂತರ ಮಳೆಯಿಂದ