ಸೌತ್ ಇಂಡಿಯ ಗಾರ್ಮೆಂಟ್ಸ್ ಅಸೋಸಿಯೇಷನ್ ನಿಂದ 27 ನೇ ಮೂರು ದಿನಗಳ ಸೌತ್ ಇಂಡಿಯ ಗಾರ್ಮೆಂಟ್ಸ್ ಬಿ 2 ಬಿ ಮೇಳ: 100 ಕೋಟಿ ರೂ ವಹಿವಾಟು ನಿರೀಕ್ಷೆ – ಏಕರೂಪ ಜಿ.ಎಸ್.ಟಿ ದರ ನಿಗದಿಪಡಿಸುವಂತೆ ಒತ್ತಾಯ ಬೆಂಗಳೂರು, ಜು, 26; ಸೌತ್ ಇಂಡಿಯಾ ಗಾರ್ಮೆಂಟ್ಸ್ ಅಸೋಸಿಯೇಷನ್ ನಿಂದ ಮೂರು ದಿನಗಳ ಅತಿ ದೊಡ್ಡ ಗಾರ್ಮೆಂಟ್ಸ್ ಮೇಳ ಇಂದಿನಿಂದ ಆರಂಭವಾಗಿದ್ದು, ಬಿ2ಬಿ
ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಮುಕ್ತಾರ್ ಅಹಮದ್ ಆಯ್ಕೆಯಾಗಿದ್ದಾರೆ.ಗೌರವ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್, ಉಪಾಧ್ಯಕ್ಷರಾಗಿ ರಾಜು ಪೂಜಾರಿ, ಕಾರ್ಯದರ್ಶಿಯಾಗಿ ಭರತ್ ಜಿ. ಶೆಟ್ಟಿಗಾರ್, ಕೋಶಾಧಿಕಾರಿಯಾಗಿ ಶೇಕ್ ಲಿಯಾಕತ್, ಉಪ ಕೋಶಾಧಿಕಾರಿಯಾಗಿ ಅಬ್ದುಲ್ ನದೀಮ್ ಇವರನ್ನು ಅಟೋ ರಿಕ್ಷಾ ಚಾಲಕ ಮಾಲಕ ಸಂಘದ ವಾರ್ಷಿಕ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಎಂ.ಪಿ. ಸಿಲ್ಕ್ಸ್ ಮಳಿಗೆಯಲ್ಲಿ ಆಷಾಢ ಪ್ರಯುಕ್ತ ಬಿಗ್ ಸೇಲ್ನ್ನು ಹಮ್ಮಿಕೊಂಡಿದ್ದು, ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದ್ದು, ಉತ್ತಮ ಗುಣಮಟ್ಟದ ವಸ್ತ್ರಗಳು ಕೈಗೆಟಕುವ ದರದಲ್ಲಿ ಸಿಗಲಿದೆ. ವಿವಿಧ ವಿನ್ಯಾಸದ ಮತ್ತು ಉತ್ತಮ ಗುಣಮಟ್ಟವನ್ನು ಹೊಂದಿರುವ ವಸ್ತ್ರ ಮಳಿಗೆ ಎಂ.ಪಿ. ಸಿಲ್ಕ್ಸ್. ಈ ಬಾರಿಯ ಆಷಾಢ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿಯನ್ನು ಘೋಷಿಸಿದ್ದಾರೆ. ಸೂರತ್ ಸೀರೆ, ಫ್ಯಾನ್ಸಿ ಮತ್ತು ಕಾಟನ್
ಹೊಟೇಲ್ಗೆ ಹೋಗಿ ಗ್ರಾಹಕರನ್ನು ಹೊರಗೆ ಕಳುಹಿಸಿ ಗೂಂಡಾಗಿರಿ ಪ್ರದರ್ಶಿಸಲು ಆ ಸಂಘಟನೆಗೆ ಅಧಿಕಾರ ನೀಡಿದವರು ಯಾರು ಬಿಜೆಪಿ ಸರಕಾರವೇ ಇವರನ್ನು ಕಳುಹಿಸಿದ್ದೇ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಪ್ರಶ್ನಿಸಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಪಬ್ ದಾಳಿ ಆದಾಗಲೂ ರಾಜ್ಯದಲ್ಲಿ ಬಿಜೆಪಿ ಸರಕಾರವಿತ್ತು. ಈಗ ಮತ್ತೆ ಬಿಜೆಪಿ ಸರಕಾರ ಇರುವಾಗ ಚುನಾವಣೆ
ಹಾಸನದ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಕ್ಕಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ಶಾಲೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ನೀಡಿ, ಪರಿಶೀಲನೆ ನಡೆಸಿದ್ರು. ಅಡುಗೆ ಕೊಠಡಿ, ಸಾಮಗ್ರಿಗಳ ಕೊಠಡಿ, ಆಹಾರ ಪದಾರ್ಥಗಳನ್ನು ಪರೀಶೀಲನೆ ಮಾಡಿ, ಶಾಲಾ ಕೊಠಡಿಗಳು, ಸ್ನಾನಗೃಹಗಳು, ಶೌಚಲಯಕ್ಕೆ ಭೇಟಿ ನೀಡಿದ್ರು. ನಂತರ ಮಾತನಾಡಿದ ಅವರು ಸದ್ಯ ಈ ವಸತಿ ಶಾಲೆ ಕಟ್ಟಡದಲ್ಲಿ 204 ಮಕ್ಕಳು ಇದ್ದು 25 ಮಕ್ಕಳಿಗೆ ವಾಂತಿ ಬೇಧಿ ಸುಸ್ತು ಕಾಣಿಸಿಕೊಂಡಿದ್ದು.
ಮಂಜೇಶ್ವರ ಪಾವೂರು ಗೇರುಕಟ್ಟೆ ನಿವಾಸಿ ಪೈಂಟರ್ ಬಾವ ಎಂದೇ ಪರಿಚಿತರಾಗಿರುವ ಮೊಹಮ್ಮದ್ ಎಂಬವರಿಗೆ 1 ಕೋ.ರೂ. ಕೇರಳ ರಾಜ್ಯಲಾಟರಿ ಒಲಿದಿದೆ. ಡ್ರಾ ಆಗುವ ತಾಸುಗಳ ಮೊದಲು ಟಿಕೇಟ್ ತೆಗೆದ ಅದೃಷ್ಟವಂತನಾಗಿದ್ದಾನೆ. ಈತನಿಗೆ 5 ಮಕ್ಕಳ ಪೈಕಿ 2 ಮಕ್ಕಳನ್ನು ಮದುವೆ ಮಾಡಿಸಿ ಕೊಟ್ಟ ಬಳಿಕ 50ಲಕ್ಷ ರೂ. ಗಿಂತಲೂ ಮಿಕ್ಕ ಸಾಲದಲ್ಲಿ ಮುಳುಗಿ ಇದ್ದ ಮನೆಯನ್ನು ಕೂಡಾ ಮಾರಿ ಇನ್ನು ಮುಂದಕ್ಕೆ ಏನೆಂದು ತಿಳಿಯದೆ ಕೂತಿರುವಾಗ ದೇವರು ನನಗೆ ನೀಡಿದ
ಪಡುಬಿದ್ರಿ ಗ್ರಾಮದ ಪಾದೆಬೆಟ್ಟುವಿನಲ್ಲಿ ಬಹಳಷ್ಟು ವರ್ಷಗಳಿಂದ ಅನಧಿಕೃತವಾಗಿ ದಲಿತ ಕಾಲೊನಿಯಲ್ಲಿ ಸುತ್ತಲೂ ವಾಸದ ಮನೆಗಳಿರುವ ಪ್ರದೇಶದಲ್ಲಿ ಗ್ಯಾಸ್ ಗೋಡಾನ್ ಕಾರ್ಯಚರಿಸುತ್ತಿದ್ದರೂ ಈ ಬಗ್ಗೆ ಗ್ರಾ.ಪಂ. ಸಹಿತ ಸಂಬಂಧಿಸಿದ ಇಲಾಖಾಧಿಕಾರಿಗಳು ತೆರವುಗೊಳಿಸಲು ನಿರ್ಲಕ್ಷ್ಯ ಧೋರಣೆ ತಾಳಿದು, ಅನಿವಾರ್ಯ ಸ್ಥಿತಿ ಒದಗಿ ಬಂದರೆ ನಾವೆಲ್ಲರೂ ಒಂದಾಗಿ ಅಪಾಯಕಾರಿ ಗೋಡನ್ ದ್ವಂಸಗೊಳಿಸುವುದಾಗಿ ದಲಿತ ಮುಖಂಡ ಸುಂದರ್ ಮಾಸ್ತರ್ ಎಚ್ಚರಿಸಿದ್ದಾರೆ. ಗೋಡಾನ್ ಪ್ರದೇಶದಿಂದ
ಸುಖ ದುಃಖಗಳನ್ನು ಸಮತೋಲನದಲ್ಲಿಡಲು ಆಧ್ಯಾತ್ಮಿಕತೆ ಬೇಕು .ಸುಖ ವೆಂದರೆ ಮನಸ್ಸಿನ ಸ್ಥಿತಿ ಯಾಗಿದೆ ಮನಸ್ಸನ್ನು ಏಕಾಗ್ರತೆಯಲ್ಲಿಟ್ಟು ಆಧ್ಯಾತ್ಮಿಕದ ವಿಚಾರಧಾರೆಗಳನ್ನು ನಮ್ಮಲ್ಲಿ ಇರಿಸಿಕೊಂಡಾಗ ಧರ್ಮದ ಕಡೆಗೆ ನಮ್ಮ ನಡೆಯಲು ಸಾಧ್ಯವಾಗುತ್ತದೆ ತಾಯಂದಿರು ಮಕ್ಕಳಿಗೆ ಜ್ಞಾನದ ಬೆಳಕಾಗಬೇಕು ಯುವ ಸಮುದಾಯ ಜಾಗೃತರದಾಗ ದೇಶ ಸದೃಡ ವಾಗುತ್ತದೆ ಎಂದುಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಹೇಳಿದರು. ಶ್ರೀ ಗುರುದೇವದತ್ತ ಸಂಸ್ಥಾನಂ ಶ್ರೀಕ್ಷೇತ್ರ ಒಡಿಯೂರು ಇದರ
ಆ್ಯಂಕರ್: ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಮತ್ತು ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ಕುಮಾರ್ ಎಂ.ಕೆ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಬುದ್ಧಿಶಕ್ತಿ ಹೆಚ್ಚಳ, ಬೆಳವಣಿಗೆ, ದೈಹಿಕ ಮತ್ತು ಮಾನಸಿಕ ಸಮತೋಲನ
ದಿನಾಂಕ : 26-07-2022 ನೇ ಮಂಗಳವಾರದಂದು ಮೇರಿಹಿಲ್ ನ ಜಿಲ್ಲಾ ಗೃಹರಕ್ಷಕದಳ ಕಛೇರಿ ಇಲ್ಲಿ ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಕಾರ್ಗಿಲ್ ನಲ್ಲಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸುತ್ತಾ, 23 ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು. 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ ಸೈನಿಕರ ಆತ್ಮಗಳಿಗೆ


















