ಬಂಟ್ವಾಳ: ಬೆಂಕಿಗೆ ಸುಟ್ಟು ಕರಕಲಾದ ಕಾರು
ಬಂಟ್ವಾಳ: ಚಲಿಸುತ್ತಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಘಟನೆ ರಾಯಿ- ಕುದ್ಕೊಳಿಯ ಮಧ್ಯೆ ನಡೆದಿದ್ದು ಡಸ್ಟರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನ್ನಲಿಗೆಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ.
ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಅದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರನ್ನು ನಿಂತಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಹಾನಿಯಾಗಿಲ್ಲ.