ಬೆಳ್ತಂಗಡಿ : ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮ ದ ವೀಕ್ಷಣೆ ನಡೆಯಿತು. ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ಲಾಯಿಲ, ಉಜಿರೆ, ಧರ್ಮಸ್ಥಳ ಹಾಗೂ
ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಸಂವಾದದ ವೀಕ್ಷಣೆ ಮಾಡಲಾಯಿತು.
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀನಿವಾಸ ರಾವ್, ಗಣೇಶ್ ಗೌಡ ಇದ್ದರು