Home Blog Full WidthPage 795

ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್‍ನಿಂದ ಅಕ್ಕಿ ವಿತರಣೆ

ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ ಇದರ ಆಶ್ರಯದಲ್ಲಿ 3000 ಅರ್ಹ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮವು ದೇರಳಕಟ್ಟೆಯ ನೇತಾಜಿ ಸುಬಾಶ್ಚಂದ್ರಬೋಸ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಪೆÇೀಲಿಸ್ ಠಾಣೆಯ ಅಧಿಕ್ಷಕ ಮಲ್ಲಿಕಾರ್ಜುನ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ

ಕಲಾವಿದರಿಗೆ ಸಹಾಯ ಧನ: ವಯೋಮಿತಿ ಇಳಿಕೆಗೆ ಸಂಸದರಿಗೆ ನಾಟಕ ಕಲಾವಿದರ ಒಕ್ಕೂಟದಿಂದ ಮನವಿ

ಮಂಗಳೂರು: ಸರಕಾರ ಕಲಾವಿದರಿಗೆ ಆರ್ಥಿಕ ಸಹಾಯ ನೀಡಲು 35 ವರ್ಷದ ವಯೋಮಿತಿಯಿಂದ ಕಡಿಮೆ ವಯಸ್ಸಿನ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ವಯೋಮಿತಿಯನ್ನು ಕಡಿಮೆಗೊಳಿಸಬೇಕೆಂದು ತುಳು ನಾಟಕ ಕಲಾವಿದರ ಒಕ್ಕೂಟ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ ಶೆಟ್ಟಿ ನೇತೃತ್ವದಲ್ಲಿ ಮನವಿ ನೀಡಲಾಯಿತು. ಲಾಕ್ಡೌನ್ ನಿಂದಾಗಿ ನಾಟಕ ಪ್ರದರ್ಶನಗಳಿಲ್ಲದೆ ತೊಂದರೆ

ರಾಜ್ಯ ಸರ್ಕಾರ ನೀಡುವ ಪರಿಹಾರ ನಿಧಿಗೆ ಉಚಿತ ಅರ್ಜಿ ಸಲ್ಲಿಕೆ

ಬಂಗ್ರಕೂಳೂರಿನ ಮಂಗಳೂರಿನ ಪಾಲಿಕೆ ಸದಸ್ಯರ ಜನಸೇವಾ ಕೇಂದ್ರದಲ್ಲಿ ಕೋವಿಡ್ 2ನೇ ಅಲೆಯ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ನೀಡುವ 3000 ರೂ. ಪರಿಹಾರ ನಿಧಿಗೆ ಉಚಿತವಾಗಿ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.  

ಡಾ.ಡಿ.ವಿರೇಂದ್ರ ಹೆಗ್ಗಡೆಯವರಿಗೆ  ಏಷ್ಯಾಸ್ ಗ್ರೇಟೆಸ್ಟ್ ಲೀಡರ್ ಗೌರವ

ಪ್ರತಿಷ್ಠಿತ ಮ್ಯಾಗಝಿನ್‌ಗಳಲ್ಲಿ ಒಂದಾಗಿರುವ ’ಏಷ್ಯಾ ಒನ್’ ಕೊಡಮಾಡುವ ೨೦೨೦-೨೧ ನೇ ಸಾಲಿನ “ಏಷ್ಯಾದ ಮಾಹಾನ್ ನಾಯಕ” ಎನ್ನುವ ಬಿರುದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಪಾತ್ರರಾಗಿದ್ದಾರೆ.   ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಎಲ್ಲಾ ಕ್ಷೇತ್ರದ ಸಮಗ್ರ ಸಾಧನೆಯನ್ನು ಗುರುತಿಸಿ ’ಏಷ್ಯಾ ಒನ್’ “ಏಷ್ಯಾಸ್ ಗ್ರೇಟೆಸ್ಟ್ ಲೀಡರ್-2020-21” ಎನ್ನುವ

ಅವೈಜ್ಞಾನಿಕ ರಸ್ತೆ ಕಾಮಗಾರಿ : ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ

ಬೆಂಗಳೂರು -ಮಂಗಳೂರು ಹೆದ್ದಾರಿಯಿಂದ ಮಂಗಳೂರು – ಶಿವಮೊಗ್ಗ ಹೆದ್ದಾರಿಯನ್ನು ಜೋಡಿಸುವ ರಸ್ತೆಯನ್ನು ಜೋಡಿಸುವ ಕುಲಶೇಖರ ಕಣ್ಣಗುಡ್ಡೆ ರಸ್ತೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆಯಲ್ಲದೆ, ಈ ಸಂಬಂಧ ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮನಪಾ ವಿಪಕ್ಷ ನಾಯಕ ವಿನಯ ರಾಜ್ ಆರೋಪಿಸಿದ್ದಾರೆ.   ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಿರಿದಾದ ಆ ರಸ್ತೆಯನ್ನು ಅಗಲೀಕರಿಸುವ ಕುರಿತಂತೆ ಹಿಂದಿನ ಶಾಸಕ

ಮನೆಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ : ಏಳು ಮಂದಿ ಆರೋಪಿಗಳ ಬಂಧನ

ಶಕ್ತಿನಗರ ಸಮೀಪದ ಸರಿಪಲ್ಲದ ಮನೆಯೊಂದಕ್ಕೆ ಮಾರಕಾಸ್ತ್ರದೊಂದಿಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ 7 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ  ಮನೆಯೊಂದಕ್ಕೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ  ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿತ್ (21), ಹೇಮಂತ್ (19), ಧನುಷ್ (19) ಹಾಗೂ ಯತಿರಾಜ್ (23)

ದ.ಕ. ಜಿಲ್ಲೆಯ ಲಸಿಕಾ ಕೇಂದ್ರದಲ್ಲಿ ಅಧಿಕಾರಿಗಳನ್ನು ನೇಮಿಸಿ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಕೇಂದ್ರಗಳಲ್ಲಿ ಬಿಜೆಪಿಯ ಕಾರ್ಯಕರ್ತರು ದರ್ಬಾರು ನಡೆಸುತ್ತಿದ್ದು, ಇದರಿಂದ ಲಸಿಕೆಗಾಗಿ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನು ಸರಪಡಿಸಲು ವಿವಿಧ ಇಲಾಖೆಗಳಲ್ಲಿ ರಜೆಯಲ್ಲಿರುವ ಅಧಿಕಾರಿಗಳನ್ನು

ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾ ಸಂದೇಶ ರವಾನೆ ಪ್ರಕರಣ : ನಾಲ್ವರ ಬಂಧನ

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ದೂರಿನ ಕುರಿತಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು. ಬಂಧಿತರನ್ನು ಸುಳ್ಯ ಕಸಬಾ ತಾಲೂಕಿನ ಭವಾನಿ ಶಂಕರ್ (32), ಬಜಾಲ್‍ನ ನೌಶಾದ್ (27), ಕಾವೂರಿನ ರವಿ ಅಲಿಯಾಸ್ ಟಿಕ್ಕಿ ರವಿ (38), ಹಾಗೂ ಮೂಡಬಿದ್ರೆಯ ಜಯಕುಮಾರ್ (33) ಎಂದು

ಪಟ್ಲ ಫೌಂಡೇಶನ್ ಟ್ರಸ್ಟ್‍ನಿಂದ ಆಹಾರ ಕಿಟ್ ವಿತರಣೆ

 ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರಿಗೆ ಸಹಾಯ ಹಸ್ತ ನೀಡುತ್ತಿರುವುದು ಶ್ಲಾಘನೀಯ ಕೆಲಸ ಎಂದು ಬಿಜೆಪಿ

ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪ ಇಬ್ಬರ ಬಂಧನ

ಮಂಗಳೂರಿನ ಖಾಸಗಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರ ಬಂಧವಾಗಿದ್ದು, ಇತರ ಕೆಲ ಆರೋಪಿಗಳ ಪತ್ತೆಯಾಗಬೇಕಿದೆ. ಈ ನಡುವೆ, ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯಲ್ಲಿ ವೈದ್ಯರಿಂದ ಕಿರಿಕಿರಿ, ತೊಂದರೆ ಆಗಿರುವ ಕುರಿತಂತೆ ದೂರು ನೀಡಲಾಗಿದ್ದು, ಈ ಬಗ್ಗೆಯೂ ಸೂಕ್ತ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ತವ್ಯ ನಿರತ ವೈದ್ಯರ ಮೇಲೆ