ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಸುಳ್ಯದ ಪ್ರೆಸ್ ಕ್ಲಬ್ ಆವರಣದಲ್ಲಿ ಆದಿತ್ಯವಾರ ನಡೆಯಿತು.ಸುಳ್ಯ ತಾಲೂಕು ನಿವೃತ್ತ ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮಗೆ
ದುಬೈ: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ ಒಂಬತ್ತು ದಿನಗಳು ಕಳೆದಿದ್ದು, ಪರಿಸ್ಥಿತಿ ಕ್ಷಣಕ್ಷಣಕ್ಕೂ ಭೀಕರ ಸ್ವರೂಪ ಪಡೆಯುತ್ತಿದೆ. ಭಾನುವಾರ ಬೆಳ್ಳಂಬೆಳಗ್ಗೆ ಇರಾನ್ ಮತ್ತು ಇಸ್ರೇಲ್ ನಡುವೆ ನಡೆದ ಪರಸ್ಪರ ವಾಯುದಾಳಿಗಳಿಂದ ಗಲ್ಫ್ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅರಬ್ ರಾಷ್ಟ್ರವೊಂದರ ಕುಡಿಯುವ ನೀರಿನ ಮೂಲದ ಮೇಲೆ ಇರಾನ್ ದಾಳಿ ನಡೆಸಿದೆ. ಬಹ್ರೇನ್ನ ಪ್ರಮುಖ ಜಲಶುದ್ಧೀಕರಣ (Desalination) ಘಟಕವೊಂದರ
ಸಿಟಿ ಸೆಂಟರ್ ಮಾಲ್ ಮತ್ತು ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಂದ ಸೀರೆ ಓಟ ಹಮ್ಮಿಕೊಂಡಿದ್ದು, ರಸ್ತೆಯಲ್ಲೇ ಸಾವಿರಾರು ನಾರಿಯರ ರನ್ನಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಈ ರನ್ನಿಂಗ್ ಸ್ಪರ್ಧೆಯನ್ನು ಮಂಗಳೂರು ಎಸಿಪಿ ಗೀತಾ ಡಿ ಕುಲಕರ್ಣಿ ಅವರು ಚಾಲನೆ ನೀಡಿದರು. ಭಾನುವಾರ ಮುಂಜಾನೆ ವೇಳೆಗೆ ಮಂಗಳೂರು ನಗರದ ಸಿಟಿ ಸೆಂಟರ್ನಲ್ಲಿ ಮಾತ್ರ ಬಣ್ಣಬಣ್ಣದ ಆಕರ್ಷಕ ಸೀರೆಗಳನ್ನುಟ್ಟ ಹೆಚ್ಚಿನ ಸಂಖ್ಯೆಯಲ್ಲಿ ನಾರಿಯರು ಬೀದಿಗಳಲ್ಲಿ ತುಂಬಿದ್ದರು.
ತಮಿಳಗ ವೆಟ್ರಿ ಕಳಗಂ ರಾಜಕೀಯ ಪಕ್ಷ ಸ್ಥಾಪಕ ನಟ ವಿಜಯ್ ಮಡದಿ ಸಂಗೀತಾ ಅವರು ಮದುವೆ ಮುರಿಗಡೆ ಕೋರಿ ಕೋರ್ಟು ಮೆಟ್ಟಿಲೇರಿದ್ದಾರೆ.ದಲಿತ ಕ್ರಿಶ್ಚಿಯನ್ ನಟ ವಿಜಯ್ ಅವರು ಯಶಸ್ವೀ ತಮಿಳು ನಾಯಕ ನಟನಾಗಿ ಮೆರೆದವರು. ಮೂರ್ನಾಲ್ಕು ತಿಂಗಳ ಹಿಂದೆ ಟಿವಿಕೆ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿ ಇನ್ನೇನು ನಡೆಯಲಿರುವ ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಹು ಹಿಂದೆಯೇ ಸಂಗೀತಾ ಅವರು ನನ್ನ ಗಂಡ ನನ್ನನ್ನು ವಂಚಿಸುತ್ತಿದ್ದಾರೆ; ಹಲವು ನಟಿಯರ
ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿಗೆ ಚಿನ್ನದ ಪದಕ ಹಾಗೂ ಪ್ರಥಮ್ ಪೂಜಾರಿಗೆ ಬೆಳ್ಳಿಯ ಪದಕ ಆಂಧ್ರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ದೇಹದಾರ್ಢ್ಯ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿ, 90 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಹಾಗೂ ಪ್ರಥಮ್ 65 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಸಾಧನೆ ಮೆರೆದಿದ್ದಾರೆ. ಈ ಗಮನಾರ್ಹ ಸಾಧನೆಯಿಂದ
ರಾಮಶಂಕರ್ ಮಗಳು ರುಚಿ ಸಿಂಗ್ ಯಶಸ್ಸು|ಐಪಿಎಸ್ ಅಧಿಕಾರಿಯಾಗಲು ಬಂದ ಮಗಳು | ಇನ್ಸ್ಪೆಕ್ಟರ್ ತಂದೆಯಿಂದ ಸೆಲ್ಯೂಟ್ ವಂದನೆ
ಪೋಲೀಸ್ ಇನ್ಸ್ಪೆಕ್ಟರ್ ಆಗಿರುವ ರಾಮಶಂಕರ್ ಸಿಂಗ್ ಅವರ ಮಗಳು ಐಪಿಎಸ್ ಪಾಸಾಗಿ ಬಂದುದನ್ನು ಕಂಡು ಮಗಳಿಗೆ ಧನ್ಯತೆಯಿಂದ ಸೆಲ್ಯೂಟ್ ಹೊಡೆದಿದ್ದಾರೆ. ಬಿಹಾರ ರಾಜ್ಯದ ಬೇಗುಸರಾಯ್ ಜಿಲ್ಲೆಯ ಮತಿಹನಿ ಹೋಬಳಿಯ ಮಹೇಂದ್ರಪುರ ಗ್ರಾಮದವರು ರಾಮಶಂಕರ್ ಸಿಂಗ್. ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅವರ ಮಗಳು ರುಚಿ ಸಿಂಗ್ 171 ನೇ ರ್ಯಾಂಕ್ ಪಡೆದು ಐಪಿಎಸ್- ಇಂಡಿಯನ್ ಪೋಲೀಸ್ ಸರ್ವಿಸ್ ಸೇವೆಗೆ ಬಂದಿದ್ದಾರೆ. ಆಕೆಯ ಯಶಸ್ಸನ್ನು ಕಂಡು ಇಡೀ ಗ್ರಾಮವು ತುದಿ
ಉಡುಪಿಯ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸವಿತಾ ಭಂಡಾರಿಯವರು ಮಾತನಾಡಿ ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ ಮುನ್ನುಗಿದರೆ ಯಶಸ್ಸು ಕಂಡುಕೊಳ್ಳಲು ಸಾಧ್ಯ. ಮುಂದಿನ ದಿನಗಳಲ್ಲಿ ನಮ್ಮ ನೇತ್ರ ಜ್ಯೋತಿ
ಮೂಡುಬಿದಿರೆ : ಕರಾವಳಿಯ ಸಮಗ್ರ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನ ವಕ್ತಾರ ರಾಜೇಶ್ ಕಡಲಕೆರೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಬಲಪಡಿಸಲು sea plane , Heli taxi , joy ride , River Cruise ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಯೋಜನೆ ರೂಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಮೂಲಕ
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕೋಟೆಬಾಗಿಲಿನಲ್ಲಿ ಮಹಿಳೆಯೋವ೯ರ ಮೇಲೆ ಹಲ್ಲೆ ನಡೆಸಿ , ಜಾತಿ ನಿಂದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಪಡುಕೊಣಾಜೆ ನಿವಾಸಿ ಪವಿತ್ರ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಾರ್ಚ್ 5ರಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕೋಟೆಬಾಗಿಲು ಮಾರಿಗುಡಿ ಸಮೀಪ ಈ ಘಟನೆ ನಡೆದಿದೆ
ಅಂತರ್ ಕಾಲೇಜು ಫೆಸ್ಟ್ಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ ಮುಖ್ಯ ವ್ಯವಸ್ಥಾಪಕ ಡಾ. ಪಿ. ಬಾಲಮುರಗನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಕುಎಂಪು ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾದ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕದ ಜ್ಞಾನಕ್ಕಷ್ಟೇ ಸೀಮಿತವಾಗದೇ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ,




























