Home Blog Left SidebarPage 1003

ಶ್ರೀನಿವಾಸ್ ವಿವಿಯಲ್ಲಿ ಜೂನ್ 26ರಂದು ವರ್ಚುವಲ್ ಸಮ್ಮೇಳನ

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಯು ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ‘ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆ: ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತು ಆನ್ಲೈನ್ ವೇದಿಕೆ ಮೂಲಕ ಜೂನ್ 26 ರ ಶನಿವಾರದಂದು ವರ್ಚುವಲ್ ಸಮ್ಮೇಳನವನ್ನು ಆಯೋಜಿಸುತ್ತಿದೆ.ಶೆರಾಟನ್ ಗ್ರ್ಯಾಂಡ್ ಬೆಂಗಳೂರು- ಮ್ಯಾರಿಯಟ್ ಇಂಟರ್ನ್ಯಾಷನಲ್ ನ

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರುಗಳ ಪದಗ್ರಹಣ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನವಾಗಿ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರುಗಳಾಗಿ ನೇಮಕರಾದ 15 ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಘಟಕಗಳ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ರವರ ನೇತೃತ್ವದಲ್ಲಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಸಂಘಟನೆಗಳು ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ

ಕೋವಿಡ್ ಪ್ಯಾಕೇಜ್‌ಗೆ ಆಗ್ರಹಿಸಿ ತುಳುನಾಡ ದೈವಾರಾಧಕರ ಮನವಿ

ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ ) ಉಡುಪಿ ಜಿಲ್ಲೆಯ ಸರ್ವ ಸದಸ್ಯರುಗಳು ಸೇರಿ ಕೋಟ ಶ್ರೀನಿವಾಸ ಪೂಜಾರಿ ಧಾರ್ಮಿಕ ದತ್ತಿ ಇಲಾಖೆ ಸಚಿವರಿಗೆ ಭೇಟಿ ಮಾಡಿ ಮನವಿ ಕೊಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಗೌರವ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ದೈವ ಚಾಕ್ರಿ ವರ್ಗದವರ ಸಮಸ್ಯೆಗಳನ್ನು ಹೇಳಿದರು. ಈಗಾಗಲೇ ಸರ್ಕಾರದ ಮೂರು ಬಾರಿಯ ಕೋವಿಡ್ ಪ್ಯಾಕೇಜಿನಲ್ಲಿ ಸರ್ಕಾರ ನಮ್ಮ ಕರಾವಳಿಯ ದೈವಾರಾಧನೆ ಕ್ಷೇತ್ರದಲ್ಲಿ ದುಡಿಯುವವರಿಗೆ ಈ ಲಾಕ್ ಡೌನ್ ತುತ್ತು

ಬಿಜೆಪಿ ದಕ್ಷಿಣ ಮಂಡಲದ ವತಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿ

ಜನ ಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯ ಕಾರ್ಯಕ್ರಮವು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ವೈಶ್ಯ ಎಜುಕೇಷನ್ ಸೊಸೈಟಿ ಸಭಾಂಗಣದಲ್ಲಿ ಮಂಡಲದ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ. ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಜರಗಿತು. ಮೂಡ ಅಧ್ಯಕ್ಷರಾದ ಶ್ರೀ ರವಿ ಶಂಕರ್ ಮಿಜಾರ್ ಅವರು ಶ್ರೀ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ಚರಿತ್ರೆ ಬಗ್ಗೆ

ಮಂಗಳೂರು : ಬಿಜೆಪಿ ಸರ್ಕಾರ ಲಸಿಕೆ ಮಾರಾಟ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಹೆಲ್ಪ್‌ಲೈನ್‌ನ ವತಿಯಿಂದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯ ಹತ್ತಿರ ಬಿಜೆಪಿ ಸರಕಾರದ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದ ಹೋಲ್ಡಿಂಗ್ ನ ಮುಂಭಾಗ, ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ

ಬೈಂದೂರಿನ ನಾಡಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ

ಬೈಂದೂರು ತಾಲೂಕು ನಾಡ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಪ್ರಾಥಮಿಕ ಶಾಲೆ ಹೆಮ್ಮುಂಜೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಲಸಿಕೆ ಹಾಕಿಸಿಕೊಳ್ಳಲು ದೂರದಿಂದ ಬರಲು ಸಾರಿಗೆ ವ್ಯವಸ್ಥೆ ಇಲ್ಲದೆ ಇರುವ ವ್ಯಕ್ತಿಗಳಿಗೆ ಲಸಿಕೆ ದೊರಕುವಂತೆ ಮಾಡುವಲ್ಲಿ ಪಂಚಾಯತ್ ಸಹಯೋಗದೊಂದಿಗೆ ಸಮೀಪದ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ನೀಡುವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಲಸಿಕೆ ನೀಡುವುದರೊಂದಿಗೆ ಲಸಿಕೆ ಮಹತ್ವವನ್ನು ತಿಳಿಸಿದರು. ನಾಡಾ

ಮಣಿಪಾಲದಲ್ಲಿ ಸಿಲಿಂಡರ್ ಸ್ಪೋಟ

ಅಡುಗೆಗೆ ಬಳಸುವ ಸಿಲಿಂಡರ್ ಸ್ಪೋಟಗೊಂಡ ಘಟನೆ ಮಣಿಪಾಲದ ಸೋನಿಯಾ ಕ್ಲಿನಿಕ್ ಬಳಿ ನಡೆದಿದೆ. ಮನೆಗೆ ಬಳಸುವ ಸಿಲಿಂಡರ್‌ನಲ್ಲಿ ಅಡುಗೆ ಅನಿಲ ಸೋರುತ್ತಿರುವುದು ಮನೆಯವರ ಗಮನಕ್ಕೆ ಬಂದಿದ್ದು, ಅದನ್ನು ತಡೆಯುವ ಪ್ರಯತ್ನ ಮಾಡಿದರೂ ಸಫಲವಾಗದೇ ಸಿಲಿಂಡರ್ ಸ್ಪೋಟಗೊಂಡಿದೆ. ಅದೃಷ್ಟವಶತ್ ಮನೆಯವರು ಹೊರ ಓಡಿದ್ದು ಅಡುಗೆ ಮನೆಯ ಮೇಲ್ಚಾವಣೆಗಳು ಸ್ಪೋಟದ ರಭಸಕ್ಕೆ ಹಾರಿ ಹೋಗಿವೆ. ಅಡುಗೆ ಕೋಣೆಯೊಳಗಡೆಯೂ ಹಾನಿ ಉಂಟಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ತಂಡ ತಕ್ಷಣ ತಲುಪಿ

ವಾಪಸ್ ಬಂದರೆ ಕ್ಷಮೆ ಇದೆ: ಬರಲಿಲ್ಲ ಅಂದ್ರೆ ನೋಟಿಸ್ ಕೊಡ್ತೀವಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ 

ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಗೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಇದರ ಜೊತೆಗೆ ಅರಸೀಕೆರೆಯ ಮಾಜಿ ನಗರಸಭಾ ಅಧ್ಯಕ್ಷ ಸಮೀವುಲ್ಲಾ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ನೀಡಿ ಆಪರೇಷನ್ ಕಮಲಕ್ಕೆ ಸಿಲುಕಿ ಪಕ್ಷಾಂತರ ಮಾಡಿದ ಏಳು ಮಂದಿಗೆ ಈಗ ಜೆಡಿಎಸ್ ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ನೋಟಿಸ್ ಜಾರಿ ಮಾಡಲು ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು.   ಅವರು ಹಾಸನದಲ್ಲಿ ಸುದ್ದಿಗೋಷ್ಠಿ

ಬೇಲೂರಿನಲ್ಲಿ ವಲಯ ಅರಣ್ಯಾಧಿಕಾರಿಗಳಿಂದ ದಾಳಿ

ಬೇಲೂರು ವಲಯ ಅರಣ್ಯಾಧಿಕಾರಿ ಯಶ್ಮ ಮಾಚಮ್ಮ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕಾಡುಪ್ರಾಣಿ ಬೇಟೆಯಾಡಲು ಬಳಸಿದ್ದ 3 ಬಂಧೂಕು, 3 ದ್ವಿಚಕ್ರ ವಾಹನ ಹಾಗೂ ಒಂದು ಆಲ್ಟೋ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬೇಲೂರು ವಲಯ ಕಲ್ಲಳ್ಳಿ ಅರಣ್ಯ ಮೀಸಲು ಪ್ರದೇಶದಲ್ಲಿ ಕಾಡುಪ್ರಾಣಿ ಬೇಟೆಯಾಡಲು ಸಂಚುರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದರು. ಬೇಟೆಯಾಡಲು ಬಳಸಿದ್ದ ಬಂಧೂಕು ಹಾಗೂ ವಾಹನಗಳನ್ನು