Home Blog Left SidebarPage 102

ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮ

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13.06.2025 ರಂದು ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮವನ್ನು ಸೋಣoಗೇರಿಯಲ್ಲಿರುವ ಕೆ ವಿ ಜಿ ಆಯುರ್ವೇದ ಮೂಲಿಕಾ ಉದ್ಯಾನವನದಲ್ಲಿ ಕಾಲೇಜಿನ ದ್ರವ್ಯಗುಣ, ಸ್ವಸ್ಥವೃತ್ತ ವಿಭಾಗ ಹಾಗು ಎನ್ ಎಸ್ ಎಸ್ ವಿಭಾಗದ

ದೇರಳಕಟ್ಟೆ: ಯುವಕ ಹೃದಯಾಘಾತದಿಂದ ಮೃತ್ಯು

ಉಳ್ಳಾಲ : ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಕಾನೆಕೆರೆ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ದೇರಳಕಟ್ಟೆ ಕಾನೆಕೆರೆ ನಿವಾಸಿ ಶಿವಾನಂದ ರೆಡ್ಡಿ ಎಂಬವರ ಪುತ್ರ ವಿನಯ್ ಕುಮಾರ್ (25) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದವರು. ನಸುಕಿನ ಜಾವ ಹೃದಯ ಭಾಗದಲ್ಲಿ ನೋವುಂಟಾಗಿದ್ದು, ಕೆಲ ಕ್ಷಣಗಳಲ್ಲೇ ವಿನಯ್ ಸಾವನ್ನಪ್ಪಿದ್ದಾರೆ.ನಡುಪದವು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿನಯ್ ಉದ್ಯೋಗದಲ್ಲಿದ್ದರು. ಶಬರಿಮಲೆ ಯಾತ್ರೆಗೆ ತೆರಳುವ ಸಂದರ್ಭ

ಬೆಳ್ತಂಗಡಿಗೆಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು: ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ. ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ. ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಸಚಿವರಾದ ಎಚ್ ಕೆ ಪಾಟೀಲ್ ರವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ,ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಹಾಗೂ ಅನುದಾನಕ್ಕೆ ಸಹಕರಿಸಿದ

ಕರಾವಳಿ ಭಾಗದಲ್ಲಿ ಘಟನಾವಳಿ ಆಧಾರದಲ್ಲಿ ಕಾರ್ಯಪಡೆ ರಚನೆ : ಡಾ. ಜಿ ಪರಮೇಶ್ವರ್

ಉಡುಪಿ: ಕರಾವಳಿ ಭಾಗದಲ್ಲಿ ನಡೆದಿರುವ, ನಡೆಯುತ್ತಿರುವ ಘಟನಾವಳಿಗಳ ಆಧಾರದಲ್ಲಿ ಕೋಮು ಸಂಘರ್ಷಗಳ ತಡೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ. ಯಾವುದೇ ಜಿಲ್ಲೆಯನ್ನ ಕೋಮು ಸೂಕ್ಷ್ಮ ಪ್ರದೇಶ ಎಂದು ಬಿಂಬಿಸಲು ನಾವು ಇದನ್ನು ಮಾಡಿಲ್ಲ. ಇದರ ಅಗತ್ಯವೂ ಎಲ್ಲೂ ಬರಬಾರದೆಂದು ಈಗಾಗಲೇ ಹೇಳಿದ್ದೇನೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಶುಕ್ರವಾರ ಸಂಜೆ ಕೊಲ್ಲೂರಿನಲ್ಲಿ ವಾಸ್ತವ್ಯ ಮಾಡಿದ್ದ ಡಾ.ಪರಮೇಶ್ವರ್ ಇಂದು ಬೆಳಗ್ಗೆ ಮೂಕಾಂಬಿಕಾ

ಮಂಗಳೂರು: ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರದಲ್ಲಿ ಯೋಗ ತರಬೇತಿ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ಹಾಗೂ ಆವಿಷ್ಕಾರ ಯೋಗ ಮಂಗಳೂರು ಇದರ ಸಹಯೋಗದಲ್ಲಿ ಜೂನ್ 17 ರಿಂದ 21ರ ವರೆಗೆ ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರ ಬಿಜೈ ಮತ್ತು ಬಂಟ್ಸ್ ಹಾಸ್ಟೆಲ್‌ನಲ್ಲಿ ಯೋಗ ದಿನದ ಸಾಮಾನ್ಯ ಪ್ರೊಟೋಕಾಲ್‌ನ ಯೋಗ ತರಬೇತಿಯು ನಡೆಯಲಿದೆ. ಈ ಶಿಬಿರ ಉಚಿತವಾಗಿದ್ದು ಸಾರ್ವಜನಿಕರು ತರಬೇತಿಗೆ ಭಾಗವಹಿಸಬಹುದು. ತರಬೇತಿ ಸಿಗುವ ಸಮಯ ಬೆಳಿಗ್ಗೆ 6 ರಿಂದ 7 ಕ್ಕೆ, 11ರಿಂದ 12ರವರೆಗೆ ಹಾಗೂ ಸಂಜೆ 6 ರಿಂದ 7ಕ್ಕೆ. ಹೆಸರು ನೊಂದಾಯಿಸಲು ಸಂಪರ್ಕಿಸಿ

ಮಂಗಳೂರು:ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಗೆ ಚಾಲನೆ

ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯ ಪಡೆ ಕಚೇರಿ ಕಾರ್ಯಾಚರಣೆ ನಡೆಸಲಿದೆ. ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ‌ಐವನ್ ಡಿ’ಸೊಜಾ ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ‌ಮಹಾ‌

ಕುಂದಾಪುರ: ಬೃಹತ್ ಅರಳಿಮರ ಬಿದ್ದು ಮನೆಗೆ ಹಾನಿ: ವಾಹನಗಳು ಜಖಂ

ಕುಂದಾಪುರ: ಶುಕ್ರವಾರ ನಸುಕಿನ ಜಾವ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಅರಳಿ ಮರ ಮನೆಯೊಂದರ ಮೇಲೆ ಬಿದ್ದು ಮನೆ ಹಾನಿಯಾದ ಘಟನೆ ಕುಂದಾಪುರ ಪುರಸಭಾ ವ್ಯಾಪ್ತಿಯ ಭಗತ್ ಸಿಂಗ್ ರಸ್ತೆಯಲ್ಲಿನ ಮಠದಬೆಟ್ಟುವಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ವಸಂತಿ ದೇವಾಡಿಗ ಮನೆ ಮೇಲೆ ಮರ ಬಿದ್ದಿದ್ದು, ಮನೆಯ ಸ್ಲ್ಯಾಬ್ ಗೆ ಹಾನಿಯಾಗಿದೆ. ಪಕ್ಕದಲ್ಲೇ ಯಕ್ಷೇಶ್ವರಿ ದೇವಸ್ಥಾನವಿದ್ದು, ದೇವಸ್ಥಾನಕ್ಕೆ ತಾಗಿಕೊಂಡೆ ಮರ ಬಿದ್ದಿದೆ. ಸ್ಲ್ಯಾಬ್ ಮನೆಯಾದ್ದರಿಂದ ಮನೆಯಲ್ಲಿ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ – ಸಿಬ್ಬಂದಿ ವರ್ಗ ದವರಿಗೆ ತರಬೇತಿ ಕಾರ್ಯಾಗಾರ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಯ ವತಿಯಿಂದ ದಿನಾಂಕ 12.06 2025ರಂದು ಸಿಬ್ಬಂದಿಗಳಿಗೆ ಅಗ್ನಿನಿವಾರಣೆ ಕ್ರಮ ಮತ್ತು ಅಗ್ನಿಶಮನದ ಬಗ್ಗೆ ತಮ್ಮ ಇಲಾಖೆಯಿಂದ ಒಂದು ದಿನದ ತರಬೇತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರವನ್ನು ನಡೆಸಲಾಯಿತು. ತರಬೇತಿ ಕಾರ್ಯಾಗಾರದಲ್ಲಿ ಅಗ್ನಿಶಾಮಕ ಇಲಾಖೆಯ ಮಾಹಿತಿ, ಬೇರೆ ಬೇರೆ ವಿಧಗಳ ಅಗ್ನಿ ಅವಘಡಗಳು, ನಿವಾರಣಾ ಹಾಗೂ ಮುನ್ನೆಚ್ಚರಿಕಾ ಕ್ರಮ, ಪ್ರಥಮ

ಕುತ್ತಾರು: 12 ನೇ ಮಹಡಿಯಿಂದ ಬಿದ್ದುಬಾಲಕಿ ಮೃತ್ಯು

ಉಳ್ಳಾಲ: 12 ನೇ ಮಹಡಿಯಿಂದ ಬಿದ್ದು ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ.ವೈದ್ಯರಾಗಿರುವ ಡಾ. ಮಮ್ತಾಝ್ ಅಹಮ್ಮದ್ ಎಂಬವರ ಪುತ್ರಿ ಹಿಬಾ(15) ಸಾವನ್ನಪ್ಪಿರುವ ಬಾಲಕಿ. 18ನೇ ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12 ಮಹಡಿಯಲ್ಲಿ ವೈದ್ಯ ದಂಪತಿ ವಾಸವಿದ್ದರು. ತಡರಾತ್ರಿ ಏಕಾಏಕಿ ಬಾಲಕಿ ಹಿಬಾ ಮೇಲಿಂದ ಕೆಳಬಿದ್ದು ಸಾವನ್ನಪ್ಪಿದ್ದಾಳೆ.

ಬೈಂದೂರು: ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಲವರಿಮಠ, ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣೆ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಲವರಿಮಠ ಬೈಂದೂರು ವಲಯ ಉಡುಪಿ ಜಿಲ್ಲೆ. ಇಂದು ಶಾಲೆಯಲ್ಲಿ ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 21 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.