Home Blog Left SidebarPage 110

ಮಂಗಳೂರು : ಅಸ್ತ್ರ ಗ್ರೂಪ್ ವತಿಯಿಂದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳ ಹಸ್ತಾಂತರ

ಅಸ್ತ್ರ ಗ್ರೂಪ್ ವತಿಯಿಂದ ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಲಾಯಿತು.ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಹಾಗೂ ವಿಶೇಷ ಸಹಾಯವನ್ನು ಮಾಡುತ್ತಿರುವ ಅಸ್ತ್ರ ಗ್ರೂಪ್‌ನ ಸಿಇಒ ಲಂಚುಲಾಲ್ ಕೆ.ಎಸ್ ಅವರು ಟ್ರಾಫಿಕ್ ಸಿಬ್ಬಂದಿಗಳಿಗೆ ಮಳೆಗಾಲದಲ್ಲಿ ಅನುಕೂಲವಾಗಲೆಂದು

ಜೂನ್ 7ರಂದು ರೋಹನ್ ಕಾರ್ಪೊರೇಷನ್ ಅರ್ಪಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮ

ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಜೂನ್ 7ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಮೇ 24ರಂದು ಆಯೋಜಿಸಲೆಂದು ತೀರ್ಮಾನಿಸಲಾಗಿತ್ತು. ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ ಜೂನ್ 7ರಂದು ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮ ನಡೆಸಲು

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಪೂಜಾರಿ ನೇಮಕ

ಬೆಳ್ತಂಗಡಿ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ಇವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಕರ್ತವ್ಯ ನಿರ್ವಹಿಸಿದ್ದಾರೆ.

ಮೂಡುಬಿದಿರೆ : ಕಡಂದಲೆಯಲ್ಲಿ ಮನೆಯ ಮೇಲೆ ಬಿದ್ದ ಮರ

ಪಾಲಡ್ಕ ಗ್ರಾ. ಪಂ. ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಭಾರೀ ಮಳೆ, ಬೀಸಿದ ಗಾಳಿಗೆ ಕಡಂದಲೆ ಬಿಟಿ ರೋಡ್ ನಲ್ಲಿ ಯಶೋದಾ ಪಾಂಡು ಗೌಡ ಅವರ ಮನೆ ಮೇಲೆ ಸಂಜೆ 6 ಗಂಟೆ ಸುಮಾರಿಗೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ.ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು. ಗ್ರಾ.ಪಂ. ಪಿಡಿಓ ರಕ್ಷಿತಾ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಯಿತು. ಗ್ರಾಮ ಸಹಾಯಕ ರೀತೇಶ್,

ಉಡುಪಿ :918 ಕನ್ನಡ ಕಿರುಚಿತ್ರದ ಪೋಸ್ಟರ್ ಬಿಡುಗಡೆ

ಉಡುಪಿ ಮಣಿಪಾಲದ ಪ್ರತಿಭಾವಂತ ಯುವ ಕಲಾವಿದರು ಅಭಿನಯಿಸಿರುವ ಶ್ರೀ ತುಕಾರಾಮ ಬಾಯಾರು ನಿರ್ದೇಶನದ ವಿಭಿನ್ನ ಶೈಲಿಯ ಪ್ರೇಮಕಥೆಯುಳ್ಳ 918 ಎಂಬ ಕನ್ನಡ ಕಿರುಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಉದಯಕುಮಾರ್ ಆಚಾರ್ಯ ಬಾಯಾರು ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ನಾಯಕ ನಟರಾಗಿ ಸಂದೇಶ್ ಆಚಾರ್ಯ, ನಾಯಕಿ ಕವಿತಾ, ಗಿರೀಶ್ ಆಚಾರ್ಯ ಉಡುಪಿ, ಸೂರಜ್ ಆಚಾರ್ಯ ಉಡುಪಿ, ಗುರುಪ್ರಸಾದ್ ಆಚಾರ್ಯ ಹೊಸನಗರ, ವರ್ಷಿಣಿ ವೈ ಅಮೀನ್ ಮಣಿಪಾಲ, ವೈಷ್ಣವಿ ಖಾರ್ವಿ ಮುಂತಾದವರು

ಮೇ.24ರಂದು ರೋಹನ್ ಕಾರ್ಪೊರೇಷನ್ ಅರ್ಪಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮ

ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ರೋಹನ್ ಕಾರ್ಪೊರೇಷನ್ ಆಡಳಿತ ನಿರ್ದೇಶಕ ರೋಹನ್ ಮೊಂತೇರೋ, ಪಾಲೇಮಾರ್

ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿರುವ ಆರೋಪಿಗಳ ಬಗ್ಗೆ ಕಡಿವಾಣ ಹಾಕಲು ಹಾಗೂ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಪದೇ ಪದೇ ಪ್ರಕರಣಗಳಲ್ಲಿ ಭಾಗಿಯಾಗಿರುವ ಜಿಲ್ಲೆಯ ಹಲವು ಠಾಣೆಯಲ್ಲಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ದ ಪಿಟ್ ಎನ್.ಡಿ.ಪಿ.ಎಸ್ ಕಾಯಿದೆ ಅಡಿಯಲ್ಲಿ ಕೃಷ್ಣ ಆಚಾರಿ @ ಕೃಷ್ಣ(43), ಕೊಳಲಗಿರಿ ಉಪ್ಪೂರು ಗ್ರಾಮ, ಬ್ರಹ್ಮಾವರದ ಅಬ್ದುಲ್‌ ಜಬ್ಬಾರ್‌ @ ಜಬ್ಬಾರ್‌ (27),

ಪುತ್ತೂರು ತಾಲ್ಲೂಕು ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರು ತಾಲ್ಲೂಕು ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಬೂತ್ ಅಧ್ಯಕ್ಷರಾಗಿ ಪ್ರಸ್ತುತ ಒಳಮೊಗ್ರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷರಾಗಿ, ಪುತ್ತೂರು ಶ್ರೀ

ಮಂಗಳೂರು: ಬ್ಯಾಷ್ಠಿಸ್ಟ್ ಡಿ’ಕುನ್ಹಾ ನಿಧನ

ಮಂಗಳೂರು: ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ,ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ

ಸುಳ್ಯ :ಮಾಜಿ ಸೈನಿಕರ ಸಂಘದಿಂದ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ ಯಂತ್ರ ಹಸ್ತಾಂತರ

ಸುಳ್ಯ ತಾಲೂಕಿನ ಮಾಜಿ ಸೈನಿಕರ ಸಂಘ(Ex Servicemen Association Sullia) ದ ವತಿಯಿಂದ ಪಶು ಸಂಗೋಪನ ಇಲಾಖೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ (Electric Autoclave) ಯಂತ್ರವನ್ನು 2024 25 ನೇ ಸಾಲಿನ ಕೊಡುಗೆಯಾಗಿ ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ನಿತಿನ್ ಪ್ರಭು ಕೆ ಇವರಿಗೆ ಹಸ್ತಾಂತರಿಸಿದರು. ಈ ಉಪಕರಣವನ್ನು ದಿನನಿತ್ಯ ನಡೆಯುವ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಶುದ್ಧೀಕರಣ ಮತ್ತು ನಂಜು ಮುಕ್ತಗೊಳಿಸುವುದಕ್ಕಾಗಿ