Home Blog Left SidebarPage 126

ಹೆಮ್ಮಾಡಿ ಸೇವಂತಿಗೆಗೆ ಸರಕುಗಳ ಭೌಗೋಳಿಕ ಮಾನ್ಯತೆ ದೊರಕಿಸಲು ತಳಿ ವೈಶಿಷ್ಟ್ಯ ತೆ ಅಧ್ಯಯನ ಕ್ರಮದ ಪರಿಶೀಲನೆ:ಶಾಸಕ ಗಂಟಿಹೊಳೆಯವರ ಪ್ರಶ್ನೆಗೆ ತೋಟಗಾರಿಕಾ ಸಚಿವ ಉತ್ತರ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದ ರೈತರಿಗೆ ಸಂಕಷ್ಟ ಉಂಟಾಗಿರುವ ವಿಚಾರ ಹಾಗೂ ಹೆಮ್ಮಾಡಿ ಸೇವಂತಿಗೆ ಬೆಳೆಗಾರರ ಸಂಕಷ್ಟ ನಿವಾರಣೆಗೆ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ

ಹೆಮ್ಮಾಡಿ : ಸ್ಕೂಟಿಗೆ ಕಾರು ಡಿಕ್ಕಿ- ಮಕ್ಕಳಿಬ್ಬರು ಪಾರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆರಾಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಹೆಮ್ಮಾಡಿ ಹೇಮಾಪುರ ಮಠದ ಸಮಿಪ ಅದೆ ಮಾರ್ಗದಲ್ಲಿಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದು ಕೊಂಡ ಸ್ಕೂಟಿ ಪಲ್ಟಿಯಾಗಿ ಹೆದ್ದಾರಿ ಬದಿಯಲ್ಲಿ ನಿಂತು ಕೊಂಡಿದ್ದ ಲಾರಿ ಅಡಿಗೆ ಸಿಲುಕಿದ ಘಟನೆ ನಡೆದಿದೆ. ಅಪಘಾತದಲ್ಲಿ ಸ್ಕೂಟಿಯಲ್ಲಿ ಚಲಿಸುತ್ತಿದ್ದ ಮಹಿಳೆ ಸಹಿತ ಮಕ್ಕಳಿಬ್ಬರಿಗೆ ಗಾಯವಾಗಿದ್ದು ಪಾರಾಗಿದ್ದಾರೆ.

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆಯ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆಯ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ದಿನಾಂಕ 15 .03.2025 ರಂದು ಪದ್ಮಾವತಿ ಲಾನ್ ಎಸ್ ಕೋಡಿ,‌ ತೋಕೂರು ಇಲ್ಲಿ ನೆರವೇರಿಸಲಾಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗೋವಿಂದ ದಾಸ್ ಪದವಿಪೂರ್ವ ಕಾಲೇಜು ಸುರತ್ಕಲ್ ಇಲ್ಲಿನ ಉಪನ್ಯಾಸಕರಾದ ಶ್ರೀಮತಿ ಪಲ್ಲವಿ ರಾಜೇಶ್ ರವರು ದೀಪ ಪ್ರಜ್ವಲನೆಗೊಳಿಸಿ ನೆರವೇರಿಸಿದರು. “ಸಮಾಜದಲ್ಲಿ

ಮಂಗಳೂರು : ತುಳು, ಕನ್ನಡ ವಿದ್ವಾಂಸ ಡಾ. ವಾಮನ ನಂದಾವರ ವಿಧಿವಶ

ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಅವರು ಮಾ.15ರ ಶನಿವಾರ ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಹೆಸರಾಂತ ಜಾನಪದ ವಿದ್ವಾಂಸರಾಗಿದ್ದರು. ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ ಇವರು ಹಲವಾರು

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಶ್ರೀರಾಮ್ ಗೆ ಬಿ. ಸಿ. ಎ. ವಿಭಾಗದಲ್ಲಿ 9ನೇ ರ್‍ಯಾಂಕ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ ಪರೀಕ್ಷೆಯ ಬಿ.ಸಿ.ಎ. ವಿಭಾಗದಲ್ಲಿ ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಶ್ರೀರಾಮ್ ಇವರು 9ನೇ ರ್‍ಯಾಂಕ್ ಗಳಿಸಿರುತ್ತಾರೆ.ಇವರ ಸಾಧನೆಗೆ ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ಮತ್ತು ಸರ್ವ ಸದಸ್ಯರು, ಪ್ರಾಂಶುಪಾಲರು, ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುಬ್ರಹ್ಮಣ್ಯ : ಚಲನಚಿತ್ರ ನಟ ಪ್ರಭುದೇವ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿ ಯವರನ್ನು ಶಾಲು ಹೊಂದಿಸಿ

ಕುದ್ರೋಳಿ ಗಣೇಶ್ ಅವರಿಗೆ ಗೋಲ್ಡನ್ ಮ್ಯಾಜಿಷಿಯನ್ ರಾಷ್ಟ್ರೀಯ ಜಾದೂ ಪ್ರಶಸ್ತಿ

ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ರವರಿಗೆ ಪ್ರತಿಷ್ಟಿತ ” ಗೋಲ್ಡನ್ ಮ್ಯಾಜಿಷಿಯನ್ ” ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ. ಕುದ್ರೋಳಿ ಗಣೇಶ್ ರವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ ಸಂದಾಯವಾಗಿದೆ. ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಜಾದೂ ದಿನಾಚರಣೆಯ ನೆನಪಿಗಾಗಿ ನಡೆದ ಅದ್ದೂರಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಭೇಟಿ

ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.

ಮಂಗಳೂರು : ತುಳು ರಂಗಭೂಮಿ, ತುಳು ಚಿತ್ರ ನಟ ವಿವೇಕ್ ಮಾಡೂರು ನಿಧನ

ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಅವರನ್ನು ಇಂದು ಬೆಳಿಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಮಾಡೂರಿನ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ

ಮಾಸ್‌ ಲಿಮಿಟೆಡ್‌’ನ ಸುಳ್ಯ ಶಾಖೆಯಲ್ಲಿ ಅಡಿಕೆ ಸಂಸ್ಕರಣಾ ಘಟಕ ಉದ್ಘಾಟನೆ

ಸುಳ್ಯ:ಸುಳ್ಯದಲ್ಲಿ ಕೃಷಿಯ ಜೊತೆಗೆ ಕೈಗಾರಿಕೆಗಳು ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಸುಳ್ಯದಲ್ಲಿ ಕೈಗಾರಿಕಾ ವಲಯ ಸ್ಥಾಪನೆ‌ ಮಾಡಬೇಕು ಎಂದು ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ -‘ಮಾಸ್‌ ಲಿಮಿಟೆಡ್‌’ನ ಸುಳ್ಯ ಶಾಖೆಯಲ್ಲಿ ಅಡಿಕೆ ಸಂಸ್ಕರಣಾ ಘಟಕವನ್ನು ಉದ್ಘಾಟಿಸಿ ಎಪಿಎಂಸಿ ಸಮುದಾಯ ಭವನದಲ್ಲಿ ನಡೆದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಳದಿ ರೋಗ,