Home Blog Left SidebarPage 130

ಪುತ್ತೂರು: ಸಾಲಗಾರರ ಕಿರುಕುಳ : ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ

ಪುತ್ತೂರು: ಆಟೋ ರಿಕ್ಷಾ ಚಾಲಕ ಪೆರಿಯತ್ತೋಡಿ ನಿವಾಸಿಯೊಬ್ಬರು ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40ವ.)ರವರು ಆತ್ಮಹತ್ಯೆ ಮಾಡಿಕೊಂಡವರು. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಅವರಿಗೆ ಸಾಲ ವಸೂಲಿಗಾರರ ಕರೆ ಬಂದಿತ್ತು.

ಮಂಗಳೂರು: ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಯತ್ನ :ಡಿ.ಕೆ ಶಿವಕುಮಾರ್

ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಆಯೋಜಿಸಿರುವ ಅಮ್ಮನ ಪ್ರತಿಷ್ಠಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ‘ಸಂಸತ್ತಿನಲ್ಲಿ

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಡಿಸಿಎಂ ಡಿಕೆಶಿ ಭೇಟಿ

ಉಡುಪಿ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಿಯ ಪ್ರತಿಷ್ಠೆಯಾದ ಬಳಿಕ ಮೊದಲ ಪ್ರಸಾದವನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಯಿತು.ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಮಾನವೀಯತೆಗೆ ತಲೆ ಬಾಗಿ , ನಮ್ಮ ನಮ್ಮ ಧರ್ಮವನ್ನು ಉಳಿಸಿಕೊಳ್ಳಬೇಕು. ಇನ್ನೊಂದು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಯಾವ

ಸುಳ್ಯ: ಸಜ್ಜನ ಪ್ರತಿಷ್ಠಾನದ ವತಿಯಿಂದ ಪತ್ರಕರ್ತರಿಗೆ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

ಸುಳ್ಯ: ಸದಾ ಒತ್ತಡದಲ್ಲಿ ಕೆಲಸ ಮಾಡುವುದರಿಂದ ಆರೋಗ್ಯದ  ಮೇಲೆ ಪರಿಣಾಮ ಬೀರುತ್ತದೆ. ಆದುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿ ದೇಹ ಮತ್ತು ಮನಸ್ಸು ಸದಾ ಉಲ್ಲಸಿತವಾಗಿರಿಸಲು ಕ್ರೀಡೆ ಸಹಕಾರಿ ಎಂದು ಬೀಜದಕಟ್ಟೆ ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಉಮ್ಮರ್ ಬೀಜದಕಟ್ಟೆ ಹೇಳಿದ್ದಾರೆ. ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಸುಳ್ಯ ಪ್ರೆಸ್ ಕ್ಲಬ್ ಸದಸ್ಯರಿಗಾಗಿ ಹಮ್ಮಿಕೊಂಡ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಉದ್ಘಾಟಿಸಿ ಅವರು

ಮೂಡುಬಿದರೆ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಮೂಡುಬಿದಿರೆ: ತಾಲೂಕಿನ ಹೊಸಬೆಟ್ಟು ಗ್ರಾಮದ ಬಿರಾವು  ಶಾಂತಿ ನಿವಾಸ ವಿಲಿಯಮ್ ಕುಟ್ಟಿನ್ಹ  ಎಂಬುವರ ಮನೆಯ  ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಮೇಲಕ್ಕೆತ್ತಿ  ರಕ್ಷಿಸಿದ ಘಟನೆ ನಡೆದಿದೆ. ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ ಅವರ ನಿರ್ದೇಶನದಂತೆ,ಮೂಡುಬಿದಿರೆ ವಲಯ ಅರಣ್ಯಾಧಿಕಾರಿ  ಕಿರಣ್ ಕುಮಾರ್ ಜಿ. ರವರ ಮಾರ್ಗದರ್ಶನದಲ್ಲಿ  ಅರವಳಿಕೆ ತಜ್ಞರಾದ  ಡಾ. ಮೇಘನಾ  ಅವರು ಬೋನ್

ಕಟಪಾಡಿ: ಗ್ರಾಹಕರನ್ನು ಆಕರ್ಷಿಸುತ್ತಿರುವ  ರಾಸಾಯನಿಕ ಮುಕ್ತ ಕಲ್ಲಂಗಡಿ ಹಣ್ಣುಗಳು..!!

ಕೃಷಿಯನ್ನೇ ನಂಬಿ ಜೀವನ ನಡೆಸುವ ಕಟಪಾಡಿಯ ಅಂಬಾಡಿ ಬೈಲು ಕೋಟೆ ಮಟ್ಟುವಿನ ರವಿ ಶೇರಿಗಾರ್ ಐದು ಬಗೆಯ ಕಲ್ಲಂಗಡಿ ಹಣ್ಣು ಸಹಿತ ವಿವಿಧ ಬಗೆಯ ಕೃಷಿ ಉತ್ಪನ್ನಗಳನ್ನು ನಡೆಸಿ ತನ್ನ ಮನೆಯನ್ನೇ ಮಾರುಕಟ್ಟೆಯನ್ನಾಗಿಸಿ ಯಶಸ್ವಿ ಕೃಷಿಕರಾಗಿದ್ದಾರೆ. ರವಿ ಶೇರಿಗಾರ್ ಕಳೆದ ಸುಮಾರು ಹತ್ತು ವರ್ಷಗಳಿಂದ  ಐದು ಎಕರೆ ಗದ್ದೆಯಲ್ಲಿ ಕಲ್ಲಂಗಡಿ ಹಣ್ಣು, ಮಟ್ಟುಗುಳ್ಳ, ಸೌತೆಕಾಯಿ, ಮುಳ್ಳುಸೌತೆ, ಹೀರೇಕಾಯಿ ಹಾಗೂ ಕಪ್ಪು ಹೆಸರು ಇವುಗಳನ್ನು ಬೆಳೆಸಿ ಉತ್ತಮ ಪಸಲು

ಪುತ್ತೂರು : ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸಾಧನೆಗೈದ ಸವಿತಾ ಈಶ್ವರಮಂಗಲ

ಪುತ್ತೂರು : ವಿಶ್ವ ಕನ್ನಡ ಸಂಸ್ಥೆ ಇದರ ವತಿಯಿಂದ ವಿಶ್ವ ಕನ್ನಡ 6 ನೇ ರಾಜ್ಯ ಸಮ್ಮೇಳನದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ದಾಖಲಿಸುವ ಸಾವಿರ ಕವಿಗಳ ಸಮ್ಮೇಳನ ಕವಿಗೋಷ್ಠಿ ಬೆಂಗಳೂರಿನ ಹೆಸರಘಟ್ಟ ಮುಖ್ಯ ರಸ್ತೆ 73 ರಲ್ಲಿರುವ ಅಸೆಂಟ್ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.ಸಮ್ಮೇಳನದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ ಮಾಡುವ ಮೂಲಕ ಯುವ ಸಾಹಿತಿ ಸವಿತಾ ಈಶ್ವರಮಂಗಲ ಇವರ ಹೆಸರು ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಯಿತು‌.

ರೂ.1200 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ
ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಉದ್ಘಾಟನೆ

113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭವಾಗಿರುತ್ತದೆ. ಕಳೆದ

ಮಡಿಕೇರಿ: ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಗೌರವ ಪ್ರಶಸ್ತಿ ಪ್ರದಾನ: ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಿಕ್ಷಣ ತಜ್ಞರಾದ ಪ್ರೊ. ಕೆ.ಇ. ರಾಧಾಕೃಷ್ಣ ಅವರು ಮಾತನಾಡಿ, ಒಂದು ಸಣ್ಣ ಅಕಾಡೆಮಿಯ ಮೂಲಕ

ಮಂಗಳೂರು : ಎ.ಜೆ.ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಅಪರೂಪದ ಗಾಲಿಯಂ-68 ಟ್ರೈವಿಹೆಕ್ಸಿನ್ PET-CT ಸ್ಕ್ಯಾನ್ ಯಶಸ್ವಿ ನಿರ್ವಹಣೆ

ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ದಕ್ಷಿಣ ಕನ್ನಡದಲ್ಲಿ ಪ್ರಥಮ ಬಾರಿಗೆ ಅಪರೂಪದ ಮತ್ತು ಸುಧಾರಿತ PET-CT ಸ್ಕ್ಯಾನ್  (Gallium-68 Trivehexin) ಯಶಸ್ವಿಯಾಗಿ ನಡೆಸಿರುವುದನ್ನು ಘೋಷಿಸುತ್ತದೆ. ಇದು ನಿರ್ಧಾರಾತ್ಮಕ ಇಮೇಜಿಂಗ್ ಕ್ಷೇತ್ರದಲ್ಲಿ  ಮಹತ್ವದ ಮೈಲಿಗಲ್ಲಾಗಿದೆ. Gallium-68 Trivehexin ಸ್ಕ್ಯಾನ್ ಅನ್ನು ಪ್ರಾಥಮಿಕ ಹೈಪರ್‌ಪ್ಯಾರಾಥೈರಾಯಿಡಿಸಂ (PHPT) ಕಾಯಿಲೆಯಿಂದ ಪೀಡಿತ ರೋಗಿಗಳಲ್ಲಿ ಹೈಪರ್‌ಫಂಕ್ಷನಿಂಗ್