Home Blog Left SidebarPage 133

ಫೆ.18ರಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ, ಸಂವಿಧಾನ ಜಾಗೃತಿ ಸಮಾವೇಶ

ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಕಾರ್ಯಕ್ರಮ ಹಾಗೂ ಸಂವಿಧಾನ ಜಾಗೃತಿ ಸಮಾವೇಶ ಫೆ.18ರಂದು ನಗರದ ಊರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ

ಮಹಾ ಕುಂಭ ಮೇಳದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅನಾವರಣ

ದಕ್ಷಿಣ ಕನ್ನಡ ಜಿಲ್ಲೆಯ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಸಂಚಾಲಕರಾದ ಡಾ. ರವಿಕಕ್ಕೆಪದವು ನೇತೃತ್ವದಲ್ಲಿ ಮಹಾ ಕುಂಭ ಮೇಳಕ್ಕೆ ತೆರಳಿದ 42 ಮಂದಿ ಸೇರಿ ಅಲ್ಲಿನ ಸ್ವಾಮಿಗಳ ನೇತೃತ್ವದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪವಿತ್ರ ಧಾರ್ಮಿಕ ಸ್ಥಳವಾದ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮವಾದ ಮಹಾ ಕುಂಭ ಮೇಳದಲ್ಲಿ ಅನಾವರಣ ಗೊಳಿಸಲಾಯಿತು. ಈ ಸಂಧರ್ಭದಲ್ಲಿ ಜಾತ್ರಾ ಮಹೋತ್ಸವ ಯಶಸ್ವಿಯಾಗಬೇಕು ಸಮಾಜಕ್ಕೆ

ನಾಲ್ಕೂರು : ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ಮಂಜೂರು ಆದ ರೂ. 30,000/- ಅನುದಾನದ ಮಂಜೂರಾತಿ ಪತ್ರ ವಿತರಣೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಲ್ಕೂರು ಗ್ರಾಮದ ಹಾಲೆಮಜಲಿನ ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ರೂ. 30,000/- ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಸೇವಾಪ್ರತಿನಿಧಿ

ದೇವಚಳ್ಳ : ಶಾಲಾ ರಂಗ ಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ಮಂಜೂರಾದ ರೂ 1,50,000/- ಅನುದಾನದ ಮಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಗ್ರಾಮದ ದ ಕ ಜಿ ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ರೂ. 1,50,000/ ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಯೋಜನಾಧಿಕಾರಿರವರು ಮಾತನಾಡುತ್ತ, ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಮೂಡುಬಿದಿರೆ: ಲಾಡಿ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿದ ಬ್ಯಾನರ್ ಗೆ ಹಾನಿ – ಇಬ್ಬರ ಬಂಧನ

ಮೂಡುಬಿದಿರೆ: ಲಾಡಿ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪುರಸಭಾ ಸದಸ್ಯ ಇಕ್ಬಾಲ್ ಕರೀಂ ಅವರು ಲಾಡಿ ಶ್ರೀ ಚತುಮು೯ಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ ಬ್ಯಾನರ್ ನ್ನು ಹರಿದು ಹಾನಿಗೊಳಿಸಿದ್ದು ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಗೆ ಕರೀಂ ಅವರು ದೂರು

ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ

ಪಾವಂಜೆ: ತುಳುನಾಡಿನ ಸಾಂಪ್ರದಾಯಿಕ ಕೆಡ್ಡಸ ಆಚರಣೆ: ನಂದಿನಿ ಕ್ರಿಕೆಟರ್ಸ್ ಅರಂದ್‌ದ ವಾರ್ಷಿಕೋತ್ಸವ

ನಂದಿನಿ ಕ್ರಿಕೆಟರ್ಸ್ ಅರಂದ್ ವತಿಯಿಂದ ತುಳುನಾಡಿನ ಸಾಂಪ್ರದಾಯಿಕ ಆಚರಣೆ, ಕೆಡ್ಡಸ ಹಾಗೂ ಸಂಘಟನೆಯ ವಾರ್ಷಿಕೋತ್ಸವವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಮೇಶ್ ಪೂಜಾರಿ ಚೇಳಾಯರುರವರು ವಹಿಸಿ ಹಿರಿಯರು ನಡೆಸುತ್ತಾ ಬಂದ ಸಂಸ್ಕೃತಿ ಸಂಸ್ಕಾರಗಳನ್ನು ಉಳಿಸಿಕೊಳ್ಳುವ ಯುವ ಸಂಘಟನೆಯ ಪಾತ್ರ ನಿಜಕ್ಕೂ ಶ್ಲಾಘನೀಯ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ದೇವಿ ದಯಾಳ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಮಾಲೀಕರಾದ ಶ್ರೀ ದೇವಿ ದಯಾಳ್ ಶೆಟ್ಟಿಯವರು

ಬಿಜೆಪಿಯಿಂದ “ಸಮಪ೯ಣಾ ದಿನ” ಆಚರಣೆ

ಮೂಡುಬಿದಿರೆ: ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ತಮ್ಮ ಜೀವನವನ್ನು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿಸಿ ದೇಶದ ಯುವಜನತೆಗೆ ಮಾರ್ಗದರ್ಶಿಯಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯ “ಸಮರ್ಪಣಾ ದಿನವನ್ನು” ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲ ಹಾಗೂ ಮೂಡುಬಿದಿರೆ ಮಹಾಶಕ್ತಿಕೇಂದ್ರದ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮೂಡುಬಿದಿರೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಮಂಡಲ ಪ್ರಧಾನ

ಮೂಡುಬಿದಿರೆ:ಪುರಸಭೆಯ ಪೌರಕಾಮಿ೯ಕೆ ಆತ್ಮಹತ್ಯೆ

ಮೂಡುಬಿದಿರೆ : ಇಲ್ಲಿನ ಪುರಸಭೆಯ ಪೌರ ಕಾಮಿ೯ಕೆಯೋವ೯ರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭಾ ವ್ಯಾಪ್ತಿಯ ಬಿರಾವಿನಲ್ಲಿ ಮಂಗಳವಾರ ನಡೆದಿದೆ.ಬಿರಾವು ಅರಂತ ಕಂಪೌಂಡ್ ನ ನಿವಾಸಿ ದಿ. ಚಂದ್ರಹಾಸ್ ಅವರ ಪತ್ನಿ ಯಶೋಧ (43ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಕಳೆದ ಕೆಲವು ವರುಷಗಳಿಂದ ಪೌರಕಾಮಿ೯ಕೆಯಾಗಿ ಪುರಸಭೆಯಲ್ಲಿ ದುಡಿಯುತ್ತಿದ್ದು ಎರಡು ವಷ೯ಗಳ ಹಿಂದೆ ಹುದ್ದೆ ಖಾಯಂ ಆಗಿತ್ತು.ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು ಓವ೯ ಕಾಲೇಜು

ಮೂಡುಬಿದಿರೆ: ಗುತ್ತಿಗೆದಾರ ಜಯ ಮೇಸ್ತ್ರಿ ನಿಧನ

ಮೂಡುಬಿದಿರೆ: ಇಲ್ಲಿನ ಪ್ರಸಿದ್ಧ ಕಟ್ಟಡಗಳ ಹಾಗೂ ಹಲವಾರು ಖ್ಯಾತನಾಮರ ಮನೆಗಳ ಕೆಲಸಗಳನ್ನು ಎಂಜಿನಿಯರ್ ನಂತೆ ಅಚ್ಚುಕಟ್ಟಾಗಿ ನಿಮಿ೯ಸಿ ಕೊಟ್ಟು ಜಯ ಮೇಸ್ತ್ರಿ ಎಂದೇ ಮೂಡುಬಿದಿರೆ ಪರಿಸರದಲ್ಲಿ ಖ್ಯಾತರಾಗಿದ್ದ ಸಂಪಿಗೆ ಕೋಂಟಡ್ಕ ನಿವಾಸಿ ಜಯ ಗೌಡ (68) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಮೂಡುಬಿದಿರೆ ಕನ್ನಡಭವನದಲ್ಲಿ ನಡೆದಿದ್ದ ‘ತುಳುವೆರ್ ಬೆದ್ರ’ ಸಂಘಟನೆಯ ನಾಟಕ ಪ್ರದರ್ಶನ ವೇಳೆ ಜಯ ಮೇಸ್ತ್ರಿ ಅವರನ್ನು