Home Blog Left SidebarPage 149

ಬೈಂದೂರು : ಸದನದಲ್ಲಿ ಕಾರ್ಮಿಕರ ಪರ ಧ್ವನಿ ಎತ್ತಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಪ್ರಸ್ತುತ ರಾಜ್ಯದಲ್ಲಿ ಕೆಂಪು ಕಲ್ಲು ಲಭ್ಯತೆ ಇಲ್ಲದೆ ಅಥವಾ ಪೂರಕ ದಾಸ್ತಾನು ಇಲ್ಲದೇ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ತೊಡಕಾಗುತ್ತಿರುವುದು ಸರಕಾರದ ಗಮನದಲ್ಲಿದೆ. ಸಮರ್ಪಕವಾಗಿ ಜನಸಾಮಾನ್ಯರಿಗೆ ಕೆಂಪು ಕಲ್ಲು ಪೂರೈಕೆಗೆ ಸಹಕಾರಿ ಆಗುವಂತೆ ನಿಯಮದಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್‌.ಎಸ್‌.

ಬೆಳ್ಳಾರೆ: ಜೇಸಿಐ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಸಮುದಾಯ ಅಭಿವೃದ್ಧಿಯ ಗುರಿಯೊಂದಿಗೆ ಯುವಕರಲ್ಲಿ ನಾಯಕತ್ವ ಗುಣ ತುಂಬಿಸಿ ಜೇಸಿ ಸಂಸ್ಥೆಯು ಸಮಾಜಮುಖಿ ಚಿಂತನೆ ಬೆಳೆಸುವ ಕಾರ್ಯ ಮಾಡುತ್ತಿದೆ ಎಂದು ಜೇಸಿಐ ವಲಯ 15ರ ಪೂರ್ವ ವಲಯಾಧ್ಯಕ್ಷ ಚಂದ್ರಹಾಸ ರೈ ಹೇಳಿದರು.ಅವರು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಜೇಸಿಐ ಬೆಳ್ಳಾರೆ ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಬೆಳ್ಳಾರೆ ಜೇಸಿಐ ಘಟಕದ 2025ನೇ

ಪತ್ರಕರ್ತನಿಗೆ ದೂರವಾಣಿ ಮೂಲಕ ಬೆದರಿಕೆ- ಸುಳ್ಯ ಪ್ರೆಸ್ ಕ್ಲಬ್ ಖಂಡನೆ: ಪತ್ರಕರ್ತನಿಂದ ಪೊಲೀಸ್‌ ದೂರು

ಸುಳ್ಯ :ಸುಳ್ಯದ ಸ್ಥಳೀಯ ಅಮರಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿಯಲ್ಲಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಘಟನೆಯನ್ನು ಸುಳ್ಯ ಪ್ರೆಸ್ ಕ್ಲಬ್ ಖಂಡಿಸಿದೆ.ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಘಟನೆಯನ್ನು ಖಂಡಿಸಲಾಯಿತು ಮತ್ತು ಪೋಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು. ಪ್ರೆಸ್ ಕ್ಲಬ್‌ ಪದಾಧಿಕಾರಿಗಳು ಮತ್ತುಸದಸ್ಯರು

ಸುಳ್ಯ : ಪ್ರತಿಷ್ಠಿತ “ಚೈತನ್ಯ ಶ್ರೀ-2024” ಮಹಿಳಾ ಸಾಧಕಿ ಪ್ರಶಸ್ತಿಗೆ ಬಹುಮುಖ ಸಾಧಕಿ ಡಾ.ಅನುರಾಧಾ ಕುರುಂಜಿ ಆಯ್ಕೆ

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ವತಿಯಿಂದ ನೀಡುವ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿ ತರಬೇತುದಾರಳು, ಸಂಘಟಕಿ ಹಾಗೂ ಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ.ಅನುರಾಧಾ

ದುಬೈ : “ಮಿಡ್ಲ್ ಕ್ಲಾಸ್ ಫ್ಯಾಮಿಲಿ ” ತುಳು ಚಿತ್ರದ ಪ್ರೀಮಿಯರ್ ಟಿಕೆಟ್ ಬಿಡುಗಡೆ ಕಾರ್ಯಕ್ರಮ

ದುಬೈ : ಯುವ ನಟ – ನಿರ್ದೇಶಕ ರಾಹುಲ್ ಅಮೀನ್ ನಿರ್ದೇಶಿಸಿ, ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಯುಎಇ ರಾಷ್ಟ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು. ಡಿಸೆಂಬರ್ .8 ರಂದು ದುಬೈನ ಮಾರ್ಕೊ ಪೋಲೊ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಟಿಕೆಟ್ ಬಿಡುಗಡೆ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ,

ಮಂಗಳೂರು : ಡಿ.14ರಂದು ಉಚಿತ ವೃತ್ತಿ ಜಾಗೃತಿ ಕಾರ್ಯಾಗಾರ

ಭಾರತದ ಟ್ರೆಂಡಿಂಗ್ ಕೆರಿಯರ್ ಗೈಡೆನ್ಸ್ ಪ್ಲಾಟ್ಫಾರ್ಮ್ ಮತ್ತು ಮಂಗಳೂರಿನ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ಸಹಯೋಗದೊಂದಿಗೆ “ಡ್ರಾ ಮೈ ಕೆರಿಯರ್” ವೃತ್ತಿ ಜಾಗೃತಿ ಕಾರ್ಯಾಗಾರವು ಡಿ.14 ರಂದು ನಗರದ ಐಎಂಎ ಸಭಾಂಗಣದಲ್ಲಿ ನಡೆಸುತ್ತಿದೆ.ಕಾರ್ಯಾಗಾರವು 9,10, ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಅಭಿರುಚಿಯನ್ನು ಅರ್ಥಮಾಡಿಕೊಳ್ಳಲು ಮತ್ತು ವೃತ್ತಿ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುವ ಗುರಿಯನ್ನು ಹೊಂದಿದೆ.ಐಐಎಂ

ಮಾಜೀ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನ

ಕರ್ನಾಟಕದ ಮಾಜೀ ಮುಖ್ಯಮಂತ್ರಿ ಹಾಗೂ ಭಾರತದ ವಿದೇಶಾಂಗ ಸಚಿವರಾಗಿದ್ದ ಸೋಮನಹಳ್ಳಿ ಮಲ್ಲಪ್ಪ ಕೃಷ್ಣ ಅವರು ಮುಂಜಾವ ಎರಡೂವರೆ ಗಂಟೆಗೆ ಬೆಂಗಳೂರು ಸದಾಶಿವನಗರದ ಸ್ವಗೃಹದಲ್ಲಿ ನಿಧನರಾದರು. ಕೃಷ್ಣರ ತಂದೆ ಸೋಮನಹಳ್ಳಿ ಮಲ್ಲಪ್ಪನವರು ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಶಾಸನ ಸಭೆಯ ಸದಸ್ಯರಿದ್ದರು. ವಿದೇಶದಲ್ಲಿ ಶಿಕ್ಷಣ ಮುಗಿಸಿದ ಕೃಷ್ಣ ಅವರು ದೇಶಕ್ಕೆ ಹಿಂತಿರುಗಿ ಮದ್ದೂರು ವಿಧಾನ ಸಭಾ ಕ್ಷೇತ್ರದಿಂದ ಮೊದಲು ಗೆದ್ದುದು ಪ್ರಜಾ ಸಮಾಜವಾದಿ ಪಕ್ಷದಿಂದ. ಮುಂದೆ

ವಿಟ್ಲ: ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿ ಸಾವು

ವಿಟ್ಲ: ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಇದೊಂದು ಆತ್ಮಹತ್ಯೆ ಎಂದು ತಿಳಿದು ಬಂದಿದೆ ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೇರಾ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿನಿ ಮಡಲ ನಿವಾಸಿ ಕಿಶೋರ್ ರವರ ಪುತ್ರಿ ತೀರ್ಥಶ್ರೀ (8) ಮೃತಪಟ್ಟ ಬಾಲಕಿ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ವಿಟ್ಲ ಪೊಲೀಸರು ಬಾಲಕಿಯ