ಪುತ್ತೂರಿನ ಪ್ರತಿಷ್ಠಿತ ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ಮಹಾ ಸದಸ್ಯತ್ವ ಅಭಿಯಾನದ ಅಂಗವಾಗಿ ಭೇಟಿ ನೀಡಿದರು. ಅವರನ್ನು ಸಂಸ್ಥೆಯ ಪ್ರಮುಖರಾದ ಸುಧನ್ವ ಆಚಾರ್ಯ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಕುಮಾರ್, ಜಾಗತಿಕ ಮಟ್ಟದಲ್ಲಿ ಬಿಜೆಪಿ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ನಾಲ್ಕು ಸ್ಥಾಯೀ ಸಮಿತಿಗಳ ಅಧ್ಯಕ್ಷರ ಚುನಾವಣೆವು ನಗರದ ಪಾಲಿಕೆ ಕಚೇರಿಯಲ್ಲಿ ನಡೆಯಿತು. ಪಟ್ಟಣ ಯೋಜನೆ ಹಾಗೂಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವೀಣಾ ಮಂಗಳ, ತೆರಿಗೆ ನಿರ್ಧರಣೆ , ಹಣಕಾಸು ಹಾಗೂ ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಕದ್ರಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಮಿತ್ರ, ಲೆಕ್ಕ ಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರಿತಾ ಶಶಿಧರ್ ಅವರನ್ನು
ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈದಿನಗಳಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ ಎಂದು ಸಂಸ್ಥೆಯ
ಮಂಗಳೂರು: ಲಾಟರಿ, ಬೆಟ್ಟಿಂಗ್, ಮಟ್ಕಾ ಮುಂತಾದ ಅನಧಿದಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ರಚಿಸಲಾಗಿರುವ ಫ್ಲೈಯಿಂಗ್ ಸ್ಕ್ಯಾಡ್ ತಂಡವು ನಿರಂತರವಾಗಿ ಕಾರ್ಯಾಚರಣೆ ನಡೆಸಿ ಅಕ್ರಮ ತಡೆಗಟ್ಟಲು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಟರಿ ಹಾವಳಿಯನ್ನು ನಿಯಂತ್ರಣ ಸಂಬಂಧ ಫ್ಲೈಯಿಂಗ್ ಸ್ಕ್ಯಾಡ್ ತ್ರೈಮಾಸಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ತಪಾಸಣಾ ತಂಡಗಳು ಮುತುವರ್ಜಿಯಿಂದ ಕೆಲಸ
ಮೂಡುಬಿದಿರೆ : ‘ಜಯ-ವಿಜಯ’ ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಕಂಬಳವು ನ. 9ರಂದು ಶನಿವಾರ ನಡೆಯಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಚೌಟ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಂಬಳದ ಜಿಲ್ಲಾ ತೀರ್ಪುಗಾರರ ಸಂಚಾಲಕ ವಿಜಯ್ ಕುಮಾರ್ ಜೈನ್ ಕಂಗಿನಮನೆ ಮಾತನಾಡಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಳೆದ 14 ವರ್ಷಗಳಿಂದ ಜೂನಿಯರ್
ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು.ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಆಗಮಿಸಿತು.ನಗರದ ಪುರಭವನ ಆವರಣಕ್ಕೆ ಕನ್ನಡ ರಥ ಆಗಮಿಸಿದಾಗ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತಿದೊಡ್ಡ ನುಡಿಹಬ್ಬವಾಗಿದೆ. ಶ್ರೀಮಂತ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯು ಸಾಹಿತ್ಯ
ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಅಂತಿಮವಾಗಿ ಪಡುಬಿದ್ರಿ ಪೊಲೀಸರ ಅಥಿತಿಯಾಗಿದ್ದಾರೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ ಕಾರೊಂದಕ್ಕೆ ಡಿಕ್ಕಿಯಾಗಿ ನಿಲ್ಲಿಸದೆ ಮುಂದೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಹೆಜಮಾಡಿ
ಮೂಡುಬಿದಿರೆ: ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವರು ಕೊಡಮಾಡುವ 2023-24 ನೇ ಸಾಲಿನ ” ಶಿವರಾಮ ಕಾರಂತ ಪ್ರಶಸ್ತಿ-2024 ” ಪ್ರಶಸ್ತಿಗೆ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ಆಯ್ಕೆಯಾಗಿರುತ್ತದೆ. ಪ್ರಶಸ್ತಿಯನ್ನು ನ.10 ರಂದು ಕೋಟದ ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಹಾಯಕ ನಿರ್ದೇಶಕರು(ಪ್ರಭಾರ) ಸಾಯೀಶ ಚೌಟ ಮತ್ತು ಸದಸ್ಯರು ಮೇಘಾಲಯದ
ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸ. ಊ. ಹಿ ಪ್ರಾ ಶಾಲೆಕೋಲ್ಚಾರು ಇದರ ಶಾಲಾಭಿವ್ರದ್ದಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು ಶಾಲೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಗಾಟಿಸಿ ಶಾಲಾ ಪೂರ್ವ




























