Home Blog Left SidebarPage 171

ಬೈಂದೂರು ತಾಲೂಕು ಘಟಕದಿಂದ ಹಳೆ ಪಿಂಚಣಿ ಜಾರಿಗಾಗಿ ಮನವಿ

ಎನ್‌.ಪಿ.ಎಸ್ ಮತ್ತು ಯು.ಪಿ.ಎಸ್ ಯೋಜನೆಯನ್ನು ವಿರೋಧಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿಗಾಗಿ ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮಾನ್ಯ ತಹೀಲ್ದಾರ್ ರ ಮೂಲಕ ಮನವಿಯನ್ನು ಬೈಂದೂರು ತಹಸೀಲ್ದಾರರಾದ ಶ್ರೀ ಪ್ರದೀಪ್ ಇವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಎನ್‌.ಪಿ.ಎಸ್ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಜಿ ಕಾರ್ಯದರ್ಶಿಯವರಾದ ಶ್ರೀ ಉದಯ್

ಮೂಡುಬಿದಿರೆ: ವಿದ್ಯಾರ್ಥಿಗೆ ಕಾರು ಢಿಕ್ಕಿ – ಸಾವು

ಮೂಡುಬಿದಿರೆ: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಬನ್ನಡ್ಕದಲ್ಲಿ ಸಂಭವಿಸಿದೆ.ಪಡುಮಾರ್ನಾಡು ಗ್ರಾ.ಪಂ.ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಆದಿತ್ಯ ಮೃತಪಟ್ಟ ದುರ್ದೈವಿ.ವಿದ್ಯಾರ್ಥಿ ಆದಿತ್ಯ ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಡನೆ ಮನೆಗೆ

ಬೈಂದೂರು: ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ ನಿಧನ

ಬೈಂದೂರು : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾದರು. ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ ನುಡಿಯ ಜೊತೆಗೆ ಕ್ಷೇತ್ರದ ಅಭೀವ್ರದ್ದಿಗೆ ವಿಶೇಷ ಆದ್ಯತೆ ನೀಡಿದ್ದರು. ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಮ್ರತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಪತ್ನಿ ಕೆಲವು

ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಕನಕರಾಜು ನಿಧನ

ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ

ಖಾಲಿಯ ರಫೀಕ್ ಕೊಲೆ ಪ್ರಕರಣ: ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಮಂಜೇಶ್ವರ : ಉಪ್ಪಳ ಹಿದಾಯತ್ ನಗರದಲ್ಲಿ 2017ರ ಫೆಬ್ರವರಿ 14ರಂದು ನಡೆದ ಶಾಲಿಯ ರಫೀಕ್‌ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಮಂಗಳೂರು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆ ಗೊಳಿಸಿ ತೀರ್ಪಿತ್ತಿದೆ. ಅಂದಿನ ದಿನ ಹಿದಾಯತ್ ನಗರದ ಕ್ಲಬ್‌ವೊಂದರಲ್ಲಿ 1ರಿಂದ 9ನೇ ಆರೋಪಿಗಳು ಒಟ್ಟಾಗಿ ಒಳಸಂಚು ರೂಪಿಸಿಕೊಂಡು, ಟಿಪ್ಪರ್ ಲಾರಿ ಬಳಸಿ ರಫೀಕ್ ಮತ್ತು ಅವನ ಸ್ನೇಹಿತರು ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ಪೆಟ್ರೋಲ್ ಪಂಪ್

ಪೌಷ್ಟಿಕ ಮಾಸಾಚರಣೆ -24 : ಆಯುಷ್ಮಾನ್ ಆರೋಗ್ಯ ಮಂದಿರ ಕಾಲ್ತೋಡು

“ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ ಬೆಳೆಯುವ ಸೊಪ್ಪು ತರಕಾರಿಗಳು ಪೋಷಕಾಂಶಗಳ ಆಗರವಾಗಿದೆ. ದಿನನಿತ್ಯದ ಆಹಾರದಲ್ಲಿ ಇದನ್ನ ಉಪಯೋಗಿಸುವುದರಿಂದ ನಮಗೆ ಪೌಷ್ಟಿಕಾಂಶಗಳ ಕೊರತೆ ಉಂಟಾಗದು ಈ ನಿಟ್ಟಿನಲ್ಲಿ ವಿವಿಧ ಆಹಾರ ಪದಾರ್ಥಗಳು ಆಹಾರಗಳನ್ನ ಪ್ರದರ್ಶನಕ್ಕೆ ಇಟ್ಟು ಆಯೋಜಿಸಲಾದ ಈ ಪೌಷ್ಧಿಕ ಮಾಸ ಆಚರಣೆ ಅರ್ಥ ಪೂರ್ಣವಾದದ್ದು ಎಂದು ಜಿಲ್ಲಾ ಪಂಚಾಯತ್ ಉಡುಪಿ ಆಯುಷ್ ಇಲಾಖೆ ಉಡುಪಿ ಗ್ರಾಮ ಪಂಚಾಯತ್ ಕಾಲ್ತೋಡು ಆಯುಷ್ಮಾನ್ ಆರೋಗ್ಯ

ಉಡುಪಿ: ಕಾಣೆಯಾಗಿದ್ದ ಇಬ್ಬರು ಹೈಸ್ಕೂಲ್ ವಿದ್ಯಾರ್ಥಿಗಳು ಶವವಾಗಿ ಪತ್ತೆ

ಶಿರೂರು : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನ್ ಮುಹಮ್ಮದ್ ಶಫಾನ್ (13) ‌ ಮೃತ ವಿದ್ಯಾರ್ಥಿಗಳು. ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಇಬ್ಬರು ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದಾರೆ. ಇಬ್ಬರಿಗೂ ಅಷ್ಟೇನು ಈಜಲು ಬಾರದ ಕಾರಣ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪಡುಬಿದ್ರಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೋರ್ವರು ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಮೂಳೂರು ರಾಜಮನೆ ನಿವಾಸಿ ಸುಭಾಷ್ ಚಂದ್ರ ಪೂಜಾರಿ(68), ಈ ಭಾಗದ ಬಿಲ್ಲವ ಸಮಾಜದ ಒಂದನೇ ಗುರಿಕಾರರಾಗಿದ್ದು, ಕುಟುಂಬದ ದೈವದ ಆರಾಧಕರಾಗಿ ಸೇವೆ ನಡೆಸುತ್ತಿದ್ದ ಇವರು ಪಿಗ್ಮಿ ಸಂಗ್ರಹ ವೃತ್ತಿ ನಡೆಸಿ ಗೌರವಯುತವಾಗಿ ಜೀವನ ನಡೆಸುತ್ತಿದ್ದರು. ಕಳೆದ ಕೆಲ ದಿನಗಳಿಂದ ಕೈ ನಡುಕ ಸಮಸ್ಯೆ ಅವರನ್ನು ಬಾಧಿಸುತ್ತಿದ್ದು ಪಿಗ್ಮಿ ಸಂಗ್ರಹ

ಅಂತರ್ ಶಾಲಾ ಪುಟ್ಬಾಲ್ ಪಂದ್ಯಾಟ ಗೊನ್ಝಾಗ ಶಾಲೆಗೆ ಪ್ರಥಮ ಸ್ಥಾನ

ಮಂಗಳೂರಿನ ಎಸ್.ಡಿ.ಎಂ ಶಾಲೆಯ ಆಶ್ರಯದಲ್ಲಿ ನಡೆದ ಐಕ್ಸ್ ಅಂತರ್ ಶಾಲಾ ಫುಟ್ಬಾಲ್ ಪಂದ್ಯಾಟದಲ್ಲಿಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಜೂನಿಯರ್ ಫುಟ್ಬಾಲ್ ತಂಡವು ಪ್ರಥಮ ಸ್ಥಾನ ಗಳಿಸಿದೆ .ಆಗಸ್ಟ್ 30 ಮತ್ತು 31ರಂದು ನಡೆದ ಈ ಪಂದ್ಯಾಟದಲ್ಲಿ 33 ತಂಡಗಳು ಭಾಗವಹಿಸಿದ್ದವು. ಈ ವಿಜಯವು ತಂಡದ ಕೌಶಲ ಹಾಗೂ ಸಂಘಟಿತಪ್ರಯತ್ನವನ್ನು ಪ್ರತಿಬಿಂಬಿಸುತ್ತದೆ. ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ. ಮೆಲ್ವಿನ್ ಅನಿಲ್ ಲೋಬೊ ಹಾಗೂ ಸಿಬ್ಬಂದಿ ವರ್ಗವಿಜೇತ ತಂಡವನ್ನು ಅಭಿನಂದಿಸಿದ್ದಾರೆ.