Home Blog Left SidebarPage 175

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ ತಂಡ ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ

ಸೆ.14ರಂದು ಅರ್ಬನ್ ಕ್ಲಾಡ್ ಇಂಡಿಯಾ ವತಿಯಿಂದ ಎಕ್ಸ್‌ಪೀರಿಯನ್ಸ್ ಸೆಂಟರ್ ಸ್ಪಲ್ವಾ ಕೇಂದ್ರ ಉದ್ಘಾಟನೆ

ಎಂ.ಕೆ ಗ್ಲಾಜಿಂಗ್ ಸಿಸ್ಟಮ್ ಮತ್ತು ಎಸ್‌ಎಟಿ ಗ್ಲೋಬಲ್ ಗ್ರೂಪ್ ವೆಂಚರ್‌ನ ಅರ್ಬನ್ ಕ್ಲಾಡ್ ಇಂಡಿಯಾದ ವತಿಯಿಂದ ನೂತನ ಭವ್ಯವಾದ ಎಕ್ಸ್‌ಪೀರಿಯನ್ಸ್ ಸೆಂಟರ್ ಸ್ಪಲ್ವಾ ಇದರ ಉದ್ಘಾಟನಾ ಕಾರ್ಯಕ್ರಮವು ಸೆ.14ರಂದು ನಡೆಯಲಿದೆ. ಮಂಗಳೂರಿನ ಕೊಟ್ಟಾರದ ನೂತನ ಭವ್ಯವಾದ ಎಕ್ಸ್‌ಪೀರಿಯನ್ಸ್ ಸೆಂಟರ್ ಸ್ಪಲ್ವಾ ಶುಭಾರಂಭಗೊಳ್ಳಲಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ನೂತನ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಸೆಪ್ಟಂಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ

ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ ಬಿಜೆಪಿಗರ ವರ್ತನೆ ಖಂಡನೀಯ. ಪ್ರಸಾದ್ ರಾಜ್ ಕಾಂಚನ್ ಆಕ್ರೋಶ

ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ,ಚಪ್ಪಲಿಯಿಂದ ಹೊಡೆದು ಅವಮಾನಿಸುವ ಬಿಜೆಪಿಗರ ವರ್ತನೆ ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಒಂದು ಗೌರವದ ಹುದ್ದೆಯಲ್ಲಿದ್ದಾಗ ಅವರ ಪ್ರತಿಕೃತಿ ರಚಿಸಿ ಚಪ್ಪಲಿಯಿಂದ ಹೊಡೆದು ಅವಮಾನಿಸುವುದು ಸರಿಯಾದ ಕ್ರಮವಲ್ಲ. ಸ್ಥಳದಲ್ಲಿ ಉಪಸ್ಥಿತರಿದ್ದ ಶಾಸಕರು ಇದನ್ನು ಕಂಡು ಕುರುಡರಂತೆ ವರ್ತಿಸುವ ಬದಲು ತಡೆಯುವ ಕೆಲಸ ಮಾಡಬೇಕಾಗಿತ್ತು

ತುಳು ಲಿಪಿ ಯುನಿಕೋಡಿಗೆ ಸೇರ್ಪಡೆ ವಿಚಾರ: ತಪ್ಪು ಮಾಹಿತಿಯನ್ನು ಪರಿಷ್ಕರಿಸಿ: ದಯಾನಂದ ಜಿ ಕತ್ತಲ್ ಸಾರ್

ತುಳು ಲಿಪಿ ಯನ್ನು ಯುನಿಕೋಡಿಗೆ ಸೇರಿಸಲಾಗಿದೆ ಎಂದು ಹೆಚ್ಚಿನ ಮಾಧ್ಯಮಗಳಲ್ಲಿ ವರದಿ ಬಂದಿದೆ, ಇದು ಮಾಧ್ಯಮಗಳಿಗೆ ಸಿಕ್ಕಿರುವ ತಪ್ಪು ಮಾಹಿತಿ  ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷರು ದಯಾನಂದ ಜಿ ಕತ್ತಲ್ ಸಾರ್ ಹೇಳಿದರು. ಗೌರವಾನ್ವಿತ  ವೆಂಕಟರಾಜ ಪುಣಿಚಿತ್ತಾಯರು  1100 ವರ್ಷ ಇತಿಹಾಸವುಳ್ಳ ತುಳು ಲಿಪಿಯ ಬಗ್ಗೆ ಬೆಳಕು ಚೆಲ್ಲಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2001 ರಲ್ಲಿ “ತುಳು

ಸೋತವರೂ ಮುಖ್ಯಮಂತ್ರಿ ಪದವಿ ಆಕಾಂಕ್ಷಿಗಳಾಗಿದ್ದಾರೆ : ಅಭಯಚಂದ್ರ ಜೈನ್

ಮೂಡುಬಿದಿರೆ: ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಹಲವು ಬಾರಿ ಸೋತವರೂ ತಾವು ಮುಖ್ಯಮಂತ್ರಿ ಪದವಿಗೆ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿರುವುದರಿಂದ ರಾಜಕೀಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.’ಪ್ರಾಸಿಕ್ಯೂಷನ್ ಆದೇಶದ ಸಂದರ್ಭದಲ್ಲಿ ಸಿದ್ಧರಾಮಯ್ಯ ಅವರ ಬೆಂಬಲಕ್ಕೆ

ಮಧೂರು: ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಗಾಗಿ ಭತ್ತ ನಾಟಿಗೆ ಚಾಲನೆ

ಇತಿಹಾಸ ಪ್ರಸಿದ್ಧ ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಯನ್ನು ಸಾವಯವ ಕೃಷಿಯ ಮೂಲಕ ತಯಾರಿಸಲು ಭತ್ತದ ನಾಟಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ವೇಣುಗೋಪಾಲ ಕಲ್ಲೂರಾಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಏರಿಕ್ಕಳ ಬಯಲಿನಲ್ಲಿ ಶ್ರೀ

ತುಳು ಲಿಪಿಗೆ ಯುನಿಕೋಡ್ ಮಾನ್ಯತೆ : ಹೆಮ್ಮೆಯ ವಿಚಾರ

ಮಂಗಳೂರು : ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ. ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017 ರಲ್ಲಿ ಅಂದಿನ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅವರು ವಿಷಯ ಸಮನ್ವಯತೆಗಾಗಿ ತಜ್ಞರ ಸಮಿತಿ ರಚಿಸಿ ಅಕಾಡೆಮಿ ವತಿಯಿಂದ ಸಹಕಾರ

ಕೆದಿಂಜೆ : 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೆದಿಂಜೆ-ಮಂಜರಪಲ್ಕೆಇದರ 14 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಕೆದಿಂಜೆ ಶ್ರೀ ವಿಠೋಭ ಭಜನಾ ಮಂದಿರದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ಭಟ್, ಅಧ್ಯಕ್ಷರಾದ ಸುಧಾಕರ ಸಾಲ್ಯಾನ್ ಕಾರ್ಯದರ್ಶಿ ದಯಾನಂದ ಆಚಾರ್ಯ ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

ಶಿರ್ವ : 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಿರ್ವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶಿರ್ವ – ಮಂಚಕಲ್ ಬಸ್ ನಿಲ್ದಾಣ ಬಳಿಯ ವೇದಿಕೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜರುಗಿತು. ಆ ಪ್ರಯುಕ್ತ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ವಿಠಲ ಬಿ. ಅಂಚನ್ ಉಪಾಧ್ಯಕ್ಷರಾದ ಗೋವಿಂದ ಜಿ. ಕುಂದರ್, ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ, ಜತೆ

ಕರಾವಳಿಯಲ್ಲಿ ತೆನೆ ಹಬ್ಬದ ಸಂಭ್ರಮ..!

ಏಸು ಕ್ರಿಸ್ತರಿಗೆ ಜನ್ಮ ನೀಡಿದ ಮಹಾ ಮಾತೆ ಪವಿತ್ರ ಮೇರಿ ಮಾತೆಯ ಜನ್ಮ ದಿನವಾಗಿರೋ ಇಂದು ಕರಾವಳಿಯ ಕೊಂಕಣಿ ಕ್ರೈಸ್ತರಿಗೆ ವಿಶೇಷ ದಿನ. ಮೇರಿ ಮಾತೆಯ ಹುಟ್ಟು ಹಬ್ಬವನ್ನ ವಿಶೇಷ ರೀತಿಯಲ್ಲಿ ಆಚರಿಸೋ ಕ್ರೈಸ್ತರು ಇದನ್ನ ತೆನೆ ಹಬ್ಬ ಅಥವಾ ಬೆಳೆ ಹಬ್ಬ ಅಂತ ಆಚರಿಸ್ತಾರೆ. ಈ ಸಂಧರ್ಭದಲ್ಲಿ ವಿಶೇಷವಾಗಿ ಹೂವುಗಳನ್ನ ಎಸೆದು ಹೊಸ ಪೈರುಗಳನ್ನ ಹಿಡಿದು ಮೇರಿ ಮಾತೆಗೆ ಸ್ವಾಗತ ನೀಡ್ತಾರೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿಯ ಫಾತಿಮಾ ಮಾತೆಯ ದೇವಾಲಯದಲ್ಲಿ