Home Blog Left SidebarPage 177

ಹೆತ್ತ ತಾಯಿ, ಹೊತ್ತ ಭೂಮಿ ಮತ್ತು ವಿದ್ಯೆ ಕಲಿಸಿದ ಗುರುಗಳನ್ನು ಗೌರವಿಸುವುದನ್ನು ರೂಡಿಸಿಕೊಳ್ಳಿ: ಚಂದ್ರಶೇಖರ ಪೇರಾಲು

ಶಿಕ್ಷಕ ವೃತ್ತಿಯು ಅತ್ಯಂತ ಗೌರವಯುತವಾದುದು. ಹಿಂದೆ ಸಮಾಜದಲ್ಲಿ ಪ್ರತಿ ಸಭೆ ಸಮಾರಂಭಗಳಲ್ಲಿ ಶಿಕ್ಷಕರ ಉಪಸ್ಥಿತಿ ಅತ್ಯಂತ ಅಗತ್ಯವಾಗಿತ್ತು ಹಾಗೂ ಅವರೇ ಯಾವುದೇ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದ್ದರು. ಅಂತೆಯೇ ಹೆಚ್ಚಿನ ಸ್ಥಾನಮಾನಗಳನ್ನು ಪಡೆದುಕೊಳ್ಳುತ್ತಿದ್ದರು. ಹೆತ್ತ ತಾಯಿ, ಹೊತ್ತ ಭೂಮಿ, ವಿದ್ಯೆ ಕಲಿಸಿದ ಗುರುಗಳನ್ನು ಗೌರವದಿಂದ ಕಂಡರೆ ಬದುಕಿನಲ್ಲಿ

ಸುಳ್ಯ:ಗೂನಡ್ಕ ತೆಕ್ಕಿಲ್ ಪ್ರೌಢಶಾಲೆಗೆ ಅಭಿನಂದನಾ ಸ್ಮರಣಕ್ಕೆ ನೀಡಿ ಗೌರವ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು,ಶಿಕ್ಷಣಾಧಿಕಾರಿ ಹಾಗೂ ಪದನಿಮಿತ್ತ ತಾಲೂಕು ಯೋಜನಾಧಿಕಾರಿ ಕಚೇರಿ ಸುಳ್ಯ. ಸುಳ್ಯ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ “ಶಿಕ್ಷಕರ ದಿನಾಚರಣೆ 2024” ರ ಈ ಸಮಾರಂಭದಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ ತೆಕ್ಕಿಲ್ ಪ್ರೌಢಶಾಲೆ ಗೂನಡ್ಕ ಬೀಜದಕಟ್ಟೆ, ಸಂಸ್ಥೆಗೆ ಅಭಿನಂದನಾ ಸ್ಮರಣಕ್ಕೆ

ಮೂಡುಬಿದಿರೆ: ಪೊಲೀಸ್ ವಸತಿಗೃಹಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ

ಮೂಡುಬಿದಿರೆ: ತಾಲೂಕಿನ ಪೊಲೀಸ್ ಠಾಣೆಯ ಆವರಣದಲ್ಲಿ ಸುಮಾರು ನಾಲ್ಕು ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪೊಲೀಸ್ ವಸತಿಗೃಹಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಕೋಟ್ಯಾನ್ ಅವರು ನಾಲ್ಕು ಕೋ.ವೆಚ್ಚದ ಮೂರು ಅಂತಸ್ತಿನಲ್ಲಿ ಒಟ್ಟು 12 ವಸತಿಗೃಹಗಳು ನಿರ್ಮಾಣವಾಗಲಿದ್ದು ಪೊಲೀಸ್ ಕುಟುಂಬಕ್ಕೆ ಸಹಕಾರಿಯಾಗಲಿದೆ,ಮುಂದೆ ಹಂತಹಂತವಾಗಿ ಪೊಲೀಸರ ಬೇಡಿಕೆಯಂತೆ ವಸತಿಗೃಹಗಳಿಗೆ ಆದ್ಯತೆ

ಮಂಗಳೂರು: ಭಂಡಾರಿ ಫೌಂಡೇಶನ್ ವತಿಯಿಂದ “ಗುರುವಂದನೆ”

ಮಂಗಳೂರು: “ಶಿಕ್ಷಕರು ಸಮಾಜದಲ್ಲಿ ನಂಬಿಕೆ ಮತ್ತು ಅತ್ಯಂತ ಹೆಚ್ಚು ಗೌರವದ ಸ್ಥಾನಮಾನಕ್ಕೆ ಅರ್ಹರಾಗಿದವರು. ಆ ಸ್ಥಾನಮಾನ ಮುಂದೆಯೂ ಉಳಿಯುವಂತಾಗಲಿ“ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.ಅವರು ಗುರುವಾರ ಸಂಜೆ ಅಡ್ಯಾರ್ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಭಂಡಾರಿ ಫೌಂಡೇಶನ್ ವತಿಯಿಂದ ಜರುಗಿದ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.“ಶಿಕ್ಷಕ ವೃತ್ತಿ ಎನ್ನುವುದು ಸನ್ಯಾಸತ್ವ ಸ್ವೀಕಾರ

ಬೈಂದೂರು ಉತ್ಸವ ಪೂರ್ವ ಭಾವಿ ಸಭೆ

ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಸ್ಥಳೀಯ ಸಂಸ್ಕೃತಿ, ಆಚಾರ, ವಿಚಾರಳನ್ನು ಬಿಂಬಿಸುವ ಹಾಗೂ ಇಡೀ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಮತ್ತು ಜಾಗತಿ ಮಟ್ಟದಲ್ಲಿ ಗುರತಿಸುವ ಮೂಲಕ ಜಾಗತಿಕ ಹೂಡಿಕೆದಾರರನ್ನು ಸೆಳೆದು ಹೆಚ್ಚೆಚ್ಚು ಉದ್ಯೋಗ ಸೃಷ್ಟಿಗೆ ಪೂರಕವಾಗುವಂತೆ ಜನರಿಗೆ ಬೈಂದೂರು ಕ್ಷೇತ್ರದ ಬಗ್ಗೆ ಹೊಸ ಚಿಂತನೆಯನ್ನು ಸೃಷ್ಟಿಸುವ ಸಲುವಾಗಿ ಬೈಂದೂರು ಉತ್ಸವ ಆಚರಿಸಲು ಚಿಂತಿಸಲಾಗಿದೆ ಎಂದು ಶಾಸಕ ಗುರುರಾಜ್ ಗಟಿಹೊಳೆ ಹೇಳಿದರು. ಅವರು ಉಪ್ಪುಂದ

ಬೈಂದೂರು: ಬಿಜೂರಿನಲ್ಲಿ ಗಮನ ಸೆಳೆದ ಗ್ರಾಮ ಸಂವಾದ

ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆಯವರ ಗ್ರಾಮ ಸಂವಾದ ಕಾರ್ಯಕ್ರಮ ಮುಂದುವರೆಯುತ್ತಿದ್ದು ವ್ಯಾಪಕ ಸ್ಪಂದನೆ ದೊರೆಯುತ್ತಿದೆ. ಬಿಜೂರು ಗ್ರಾಮದಲ್ಲಿ ಗ್ರಾಮ ಸಂವಾದ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆಯವರಿಗೆ ತಮ್ಮ ಸ್ವಕ್ಷೇತ್ರದ ಮತದಾರರು ಸಮಸ್ಯೆಗಳ ಮಹಾಪೂರವನ್ನೇ ಕಣ್ಮುಂದೆ ವಿವರಿಸಿದರು. ಜೆಜೆಎಂ ಪೈಪ್ ಲೈನ್ ಅವ್ಯವಸ್ಥೆ, ಶಾಲಾ ಮಕ್ಕಳಿಗೆ ಕಾಲುಸಂಕಗಳು, ತೆರೆದ ಅಪಾಯಕಾರಿ ಚರಂಡಿ, ದಾರಿದೀಪದ ಸಮಸ್ಯೆ, ಗ್ರಾಮಕರಣಿಕರ ಅಲಭ್ಯತೆ, ಹೀಗೇ ಹಲವು ಸಮಸ್ಯೆಗಳನ್ನು

ಸುಳ್ಯ ಪೊಲೀಸ್‌ ಠಾಣೆಗೆ ನೂತನ ಉಪ ನಿರೀಕ್ಷಕರಾಗಿ ಸಂತೋಷ್ ಅಧಿಕಾರ ಸ್ವೀಕಾರ

ಸುಳ್ಯ ಪೊಲೀಸ್‌ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಸಂತೋಷ್ ರವರು ಸೆ. 5ರಂದು ಅಧಿಕಾರ ಸ್ವೀಕರಿಸಿದರು. ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ರವರು ಸುಳ್ಯಕ್ಕೆ ವರ್ಗಾವಣೆಗೊಂಡಿದ್ದರು.

ಪಿಲಿಕುಳ ನಿಸರ್ಗಧಾಮದಲ್ಲಿ “ಪಿಲಿಕುಳೋತ್ಸವ” ಅಯೋಜನೆ ಮತ್ತು ಅಭಿವೃದ್ಧಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ

ಮಂಗಳೂರು: ಮುಂದಿನ ನವೆಂಬರ್ 14ರಿಂದ 18ರವರೆಗೆ ಪಿಲಿಕುಳ ನಿಸರ್ಗಧಾಮದಲ್ಲಿ “ಪಿಲಿಕುಳೋತ್ಸವ” ಅಥವಾ “ತುಳುನಾಡೋತ್ಸವ” ಹೆಸರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳ ಹಾಗೂ ಮಕ್ಕಳ ಹಬ್ಬ, ಕೃಷಿ ಮತ್ತು ಜಾನುವಾರು ಮೇಳ, ಕೆಸರುಗದ್ದೆಯಲ್ಲಿ ಜಿಲ್ಲಾಮಟ್ಟದ ಜಾನಪದ ಕ್ರೀಡೆ ಹಾಗೂ ಕಂಬಳ ಮತ್ತು ಸಾಂಸ್ಕೃತಿಕ

ಸುರತ್ಕಲ್: ರಸ್ತೆ ಮಧ್ಯೆ ಬೆಂಕಿಗಾಹುತಿಯಾದ ಕಾರು

ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ. ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಕುಂದಾಪುರ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದು

ಸಮಾಜದ ಸ್ವಾಸ್ತ್ಯ ಕಾಪಾಡುವ ಅತ್ಯ0ತ ಗುರುತರ ಜವಾಬ್ದಾರಿ ಇರುವ ವೃತ್ತಿ ಶಿಕ್ಷಕ ವೃತ್ತಿ: ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಲೀಲಾವತಿ ರಾಘವ ಗೌಡ ಮತ್ತು ಜಾನಕಿ ವೆಂಕಪ್ಪ ಗೌಡ ಇವರುಗಳನ್ನು ಅವರ ನಿವಾಸದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ. ಬಿ. ಕೆ. ಮಾಜಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಬಾಳಿಲ,ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಸುವರ್ಣ, ಮಹಿಳಾ ಮೋರ್ಚಾ ಸದಸ್ಯೆ ಮತ್ತು ಮುರುಳ್ಯ ಗ್ರಾಮ