Home Blog Left SidebarPage 20

ಕಲೆಯ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಅಭಿರುಚಿ ಶ್ಲಾಘನೀಯ : ರಾಜೇಶ್ ಶೆಟ್ಟಿ

ಮಂಗಳೂರು : ವಿವಿಧ ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಭಾಷೆಯ ಬಗ್ಗೆ ಅಭಿರುಚಿ ಅಭಿಮಾನ ಮೂಡಿಸುವ ಕಾರ್ಯ ಶ್ಲಾಘನೀಯ ಎಂದು ಕೆ.ಎಸ್.ಆರ್ .ಟಿ.ಸಿ. ಮಂಗಳೂರು ವಿಭಾಗೀಯ ನಿಯಂತ್ರಾಣಾಧಿಕಾರಿ ರಾಜೇಶ್ ಶೆಟ್ಟಿ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಂಡ ‘ಜೋಕ್ಲೆ ಕಲಾ

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು ತಾಲೂಕು ಪಣಂಬೂರು ಠಾಣಾ ವ್ಯಾಪ್ತಿಯ ಪಣಂಬೂರು ಕಡಲ ಕಿನಾರೆ ಬ್ರೇಕ್ ವಾಟರ್ ಬಳಿ ಸಮುದ್ರದ ದಡದಲ್ಲಿ ಜ.೧೬ರಂದು ಬೆಳಿಗ್ಗೆ ೬.೩೦ಕ್ಕೆ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ಮೃತರ ವಾರಿಸುದಾರರು ಪತ್ತೆಯಾಗದೆ ಇರುವುದರಿಂದ ಮೃತದೇಹವನ್ನು ಮಂಗಳೂರಿನ ಸರ್ಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಗಂಡಸಿನ ಪ್ರಾಯ ಸುಮಾರು55-60 ವರುಷ. ಎತ್ತರ ಸುಮಾರು 5.5 ಅಡಿ. ಮೈಯಲ್ಲಿ ಯಾವುದೇ ಬಟ್ಟೆಗಳು ಇರುವುದಿಲ್ಲದೃಡಕಾಯ ಶರೀರ, 3

ಡಾ. ಬಿ. ವಿ. ಮಂಜುನಾಥ್ ಅವರಿಗೆ ಗೌರವಾನ್ವಿತ FRCP (ಗ್ಲಾಸ್ಗೋ–ಯುಕೆ) ಪ್ರಶಸ್ತಿ

ಎ. ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹೆಮ್ಮೆಯಿಂದ ತಿಳಿಸುವುದೇನೆಂದರೆ, ಯುನೈಟೆಡ್ ಕಿಂಗ್ಡಮ್‌ನ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್ ಆಫ್ ಗ್ಲಾಸ್ಗೋ ಸಂಸ್ಥೆಯು ಹೃದಯರೋಗ ಕ್ಷೇತ್ರದಲ್ಲಿ ಅವರ ವಿಶಿಷ್ಟ ವೈದ್ಯಕೀಯ ಮತ್ತು ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ, ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕರಾಗಿಯೂ ಮುಖ್ಯಸ್ಥರಾಗಿರುವ ಹಾಗೂ ಮುಖ್ಯ ಇಂಟರ್ವೆನ್ಶನಲ್ ಕಾರ್ಡಿಯಾಲಜಿಸ್ಟ್ ಆಗಿರುವ ಡಾ. ಬಿ. ವಿ. ಮಂಜುನಾಥ್ ಅವರಿಗೆ ಅತ್ಯಂತ

ಮಂಜೇಶ್ವರ: ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿ ಬಂಧನ

ಮಂಜೇಶ್ವರ: ಬದಿಯಡ್ಕ ಸಮೀಪದ ಕುಂದ್ಲಾಜೆ ಪಂಚಾಯತಿನ ಮವ್ವಾರು ಆಜಿಲ ಎಂಬಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧ ಮಹಿಳೆಯ ಸಾವು ಕೊಲೆಯಾಗಿದೆಂಬ ಮರಣೋತ್ತರ ಪರೀಕ್ಷಾ ವರದಿ ಬಂದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಜಿಲ ನಿವಾಸಿ ಪುಷ್ಪಲತಾ ವಿ. ಶೆಟ್ಟಿ (65) ಗುರುವಾರ ಸಾವನ್ನಪ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರ ಮುಖದಲ್ಲಿ ಉಗುರಿನಿಂದ ಪರಚಿದ ಗಾಯಗಳಿತ್ತು. ಅಲ್ಲದೇ ಮಹಿಳೆಯನ್ನು ಕತ್ತು ಹಿಡಿದು ಉಸಿರುಗಟ್ಟಿಸಿ

ಪರಂಪರಾಗತ ಕೃಷಿ ವಿಕಾಸ ಯೋಜನೆ ಮಾಹಿತಿ ಕಾರ್ಯಗಾರ

ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಸುಳ್ಯ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇವರ ಸಹಯೋಗ ದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಗುಚ್ಛ ದ ರೈತರಿಗೆ ಸಾವಯವ ಕೃಷಿ, ಪಿ ಜಿ ಎಸ್ ದೃಡೀಕರಣ ಹಾಗೂ ಬೆಳೆ ರೋಗ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರ ಪಂಜ ಲಯನ್ಸ್ ಸಭಾಭವನ ದಲ್ಲಿ ಜ.13 ರಂದು ನಡೆಯಿತು. ಪರಿವಾರ ಪಂಜ ರೈತ ಉತ್ಪಾದಕ ಕಂಪನಿ […]

20 ಅಡಿ ಆಳದ ಸುರಂಗದೊಳಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಕಾಕ೯ಳ ಅಗ್ನಿಶಾಮಕದ ಸಿಬ್ಬಂದಿ

ಮೂಡುಬಿದಿರೆ : ಪುತ್ತಿಗೆ ಗ್ರಾ. ಪಂಚಾಯತ್ ವ್ಯಾಪ್ತಿಯ ಬಂಗ್ಲೆ ಎಂಬಲ್ಲಿರುವ 30 ಅಡಿ ಆಳದ ಬಾವಿಯಲ್ಲಿರುವ ಸುಮಾರು 20 ಅಡಿ ಆಳದ ಸುರಂಗದೊಳಗೆ ಆಕಸ್ಮಿಕವಾಗಿ ಬಿದ್ದು ಸಿಲುಕಿಕೊಂಡ ವ್ಯಕ್ತಿಯನ್ನು ಕಾಕ೯ಳದ ಅಗ್ನಿಶಾಮಕ ಇಲಾಖೆಯ ಸಿಬಂಧಿಗಳು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಸುಮಾರು 38 ವರ್ಷ ಪ್ರಾಯದ ರಾಧಾಕೃಷ್ಣ (ಜಾಣಪ್ಪ ಗೌಡರ ಮಗ)ಬಾವಿಯ ಸುರಂಗದೊಳಗೆ ಬಿದ್ದ ವ್ಯಕ್ತಿ. ಕಾರ್ಕಳದ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಚಂದ್ರಶೇಖರ್ ಇವರ

ತುಳು ಸಾಹಿತ್ಯ ಅನುವಾದ ವ್ಯಾಪಿಸಲಿ : ಪ್ರೊ.ವಿವೇಕ ರೈ

ಅಮೃತ ಸೋಮೇಶ್ವರ ಅವರಂತಹ ಮೇರು ಬರಹಗಾರರ ತುಳು ಕೃತಿಗಳು ಇಂಗ್ಲೀಷ್ ಹಾಗೂ ಇತರ ಭಾಷೆಗಳಿಗೆ ಅನುವಾದಗೊಂಡಾಗ ತುಳುವಿನ ಸತ್ವ ಹಾಗೂ ಕಂಪು ತುಳುನಾಡಿನ ಆಚೆಗೂ ಪಸರಿಸುವುದು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅವರು ಹೇಳಿದರು.ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಇಂಗ್ಲಿಷ್, ಕನ್ನಡ ಹಾಗೂ ತುಳು ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿದ ಅಮೃತ ಸೋಮೇಶ್ವರ ಅವರ ಇಂಗ್ಲಿಷ್ ಗೆ ಅನುವಾದಗೊಂಡ ಗೋಂದೋಳು ಮತ್ತು

ಕಾಪು :ಉಚಿತ ನೇತ್ರ ತಪಾಸಣಾ ಶಿಬಿರದ ಉಚಿತ ಕನ್ನಡದ ವಿತರಣೆ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ನಡೆದ ಉಚಿತ ನೇತ್ರ ತಪಾಸಣಾ ಶಿಬಿರದ ಉಚಿತ ಕನ್ನಡದ ವಿತರಣೆ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ ಕನ್ನಡಕ ವಿತರಣೆ ಮಾಡಿ ಅವರು ಮಾತನಾಡಿದರು. ಅಟರ್ ಜನ್ಮ ಶತಾಬ್ದಿ ಪ್ರಯುಕ್ತ ನಡೆದ ಉಚಿತ ನೇತ್ರ ತಪಾಸಣೆ ಶಿಬಿರದಿಂದ ಒಟ್ಟು 139 ಜನರಿಗೆ

ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್ 2026:ಅಂತರ್ ರಾಜ್ಯ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್. ಜಗದೀಶ್ವಂದ್ರ ಅಂಚನ್ ಸೂಟರ್ ಪೇಟೆ ಆಯ್ಕೆ

ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡುವ ಪ್ರತಿಷ್ಠಿತ ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್ 2026 ಅಂತರ್ ರಾಜ್ಯ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್. ಜಗದೀಶ್ವಂದ್ರ ಅಂಚನ್ ಸೂಟರ್ ಪೇಟೆ ಆಯ್ಕೆಗೊಂಡಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ ಬರವಣಿಗೆ ಹಾಗೂ ಕ್ರೀಡಾ ಅಂಕಣಕಾರರಾಗಿ ಗುರುತಿಸಿಕೊಂಡಿರುವ ಎಸ್. ಜಗದೀಶ್ಚಂದ್ರ ಅಂಚನ್ ಇದುವರೆಗೆ ಸುಮಾರು ೪೫೦೦ಕ್ಕೂ ಹೆಚ್ಚು ಕ್ರೀಡಾ ಲೇಖನ, ಅಂಕಣ ಬರಹಗಳನ್ನು ಬರೆದಿದ್ದು, ಇದು

ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ರೋಹನ್ ಕಾರ್ಪೊರೇಷನ್‌ಗೆ 32 ವರ್ಷಗಳ ಸಂಭ್ರಮ

ಮಂಗಳೂರು: ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು