Home Blog Left SidebarPage 21

ದಿ ಒರಿಜಿನಲ್‌ ಆಭರಣ, ಉಡುಪಿ ಪಾರಂಪರಿಕ ಸ್ವರ್ಣ ಲೇಪಿತ ಬೆಳ್ಳಿ ಆಭರಣಗಳ “ಉತ್ಸವ್ ಸೆಲೆಬ್ರಂಟ್ ಸಂಗ್ರಹ ಬಿಡುಗಡೆ”.

ಉಡುಪಿಯ ಪ್ರಸಿದ್ಧ ಚಿನ್ನಾಭರಣ ಸಂಸ್ಥೆ ದಿ ಒರಿಜಿನಲ್ ಆಭರಣ ಜ್ಯುವೆಲ್ಲರ್ಸ್ ನಲ್ಲಿ ಸಂಕ್ರಾಂತಿ ಹಬ್ಬದ ಈ ಶುಭದಿನದಂದು “ಉತ್ಸವ್ ಸೆಲೆಬ್ರಂಟ್ ಸಿಲ್ವ‌ರ್ ” ಸಂಗ್ರಹವನ್ನು ಬೆಂಗಳೂರಿನ ಜಯನಗರ ಮತ್ತು ಉಡುಪಿ ಶಾಖೆಯಲ್ಲಿ ಬಿಡುಗಡೆಗೊಳಿಸಲಾಯಿತು. 92.5 ಶುದ್ಧತೆಯ ಬೆಳ್ಳಿಯಿಂದ ತಯಾರಿಸಿದ ಪಾರಂಪರಿಕ ಶೈಲಿಯ ವಿನೂತನ ಬೆಳ್ಳಿಯ ಆಭರಣಗಳ ಪ್ರದರ್ಶನ

ಮಂಗಳೂರಿನಲ್ಲಿ 8 ನೇ ಅಂತರ್ ರಾಷ್ಟ್ರೀಯ ಗಾಳಿಪಟ ಉತ್ಸವ

ಕರಾವಳಿ ಉತ್ಸವದ ಅಂಗವಾಗಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ ಟೀಮ್ ಮಂಗಳೂರು ‘ ಹವ್ಯಾಸಿ ಗಾಳಿಪಟ ತಂಡವು ಮಂಗಳೂರಿನ ತಣ್ಣೀರುಬಾವಿಯ ಹೊಸತನದೊಂದಿಗೆ ನವೀಕರಣಗೊಂಡ ಬ್ಲೂ ಬೇ ಬೀಚ್ ನಲ್ಲಿ ಪ್ರಥಮ ಕಾರ್ಯಕ್ರಮವಾಗಿ 8 ನೇ ಅಂತರ್ ರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಓ ಯನ್ ಜಿ ಸಿ – ಎಮ್ ಆರ್ ಪಿ ಎಲ್ ಪ್ರಾಯೋಜಕತ್ವದಲ್ಲಿ ಜನವರಿ 17 ಮತ್ತು 18 ರಂದು ಆಯೋಜಿಸುತ್ತಿದೆ.ಈ ಉತ್ಸವದ ಪೂರ್ವ ಭಾವಿ ಕಾರ್ಯಕ್ರಮದ ಸಲುವಾಗಿ ಜನವರಿ 10 ರಂದು

ಕಡಬ ತಾಲೂಕು ರೆಡ್ ಕ್ರಾಸ್ ಘಟಕಕ್ಕೆ ಉಪಾಧ್ಯಕ್ಷ ಭಾಸ್ಕರ ರಾವ್ ಭೇಟಿ – ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಡಬ: ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಬೆಂಗಳೂರು ಇದರ ಉಪಾಧ್ಯಕ್ಷರಾದ ಶ್ರೀ ಭಾಸ್ಕರ ರಾವ್ ಅವರು ಇಂದು ಭಾನುವಾರ ದಿನಾಂಕ 11/೦1/2026 ರಂದು ಕಡಬ ತಾಲೂಕು ರೆಡ್ ಕ್ರಾಸ್ ಘಟಕಕ್ಕೆ ಭೇಟಿ ನೀಡಿ ಘಟಕದ ಕಾರ್ಯಚಟುವಟಿಕೆಗಳ ಕುರಿತು ಸಮಾಲೋಚನಾ ಸಭೆ ನಡೆಸಿದರು.ಸಭೆಯಲ್ಲಿ ಮಾತನಾಡಿದ ಅವರು, ರೆಡ್ ಕ್ರಾಸ್ ಸಂಸ್ಥೆಯು ಮಾನವೀಯ ಸೇವೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಗ್ರಾಮೀಣ ಮಟ್ಟದಲ್ಲಿಯೂ ಅದರ ಚಟುವಟಿಕೆಗಳು ಇನ್ನಷ್ಟು ಬಲಿಷ್ಠವಾಗಬೇಕೆಂದು ಹೇಳಿದರು.

ಮುಲ್ಕಿ ತಾಲೂಕು ಸೌಧವನ್ನು ತಕ್ಷಣ ಉದ್ಘಾಟಿಸಿ ಕೇಂದ್ರ ಸಚಿವ ಎಚ್. ಡಿ. ಕೆಗೆ ಮನವಿ

ಮುಲ್ಕಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್‌ನ ಸಂಸ್ಥಾಪಕ ಅಧ್ಯಕ್ಷರಾದ Er.ಮುಲ್ಕಿ ಜೀವನ್ ಕೆ. ಶೆಟ್ಟಿ ಅವರು, ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಮುಲ್ಕಿ ಜನತೆಯ ಬಹುದಿನಗಳ ಕನಸಾದ ಮುಲ್ಕಿ ತಾಲೂಕು ಸೌಧವನ್ನು ತಕ್ಷಣ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಅರ್ಪಿಸುವಂತೆ, ಆಯ್ಕೆಯಾದ ಜನಪ್ರತಿನಿಧಿಗಳು ಮತ್ತು ಜಿಲ್ಲಾ ಆಡಳಿತದೊಂದಿಗೆ ಸಮನ್ವಯ ಸಾಧಿಸಿ

ತುಳು ಯಕ್ಷಗಾನ ಪ್ರಸಂಗ : ಬಂಗಾಡಿಯವರು ಅಗ್ರಗಣ್ಯರು; ಕೊಳ್ತಿಗೆ ನಾರಾಯಣ ಗೌಡ

ಮಂಗಳೂರು: ತನ್ನ ಅಮೂಲ್ಯ ತುಳು ಪ್ರಸಂಗಗಳ ಮೂಲಕ ಯಕ್ಷಗಾನ ರಂಗಕ್ಕೆ ಹೊಸ ನೆಲೆ ತೋರಿಸಿ ಆ ಮೂಲಕ ಅಪಾರ ತುಳು ಪ್ರೇಕ್ಷಕ ವರ್ಗದ ಸೃಷ್ಟಿಗೆ ಕಾರಣವಾದವರು ಅನಂತರಾಮ ಬಂಗಾಡಿಯವರು ಎಂದು ಹಿರಿಯ ಯಕ್ಷಗಾನ ಕಲಾವಿದ ಕೊಳ್ತಿಗೆ ನಾರಾಯಣ ಗೌಡ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಯಕ್ಷ ಪ್ರತಿಭೆ ಮಂಗಳೂರು ಸಹಯೋಗದಲ್ಲಿ ಮಂಗಳೂರಿನ ತುಳು ಭವನದಲ್ಲಿ ಆಯೋಜಿಸಲಾದ ಕೆ.ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಕನ್ನಡದಲ್ಲಷ್ಟೇ

4 ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ

ಕಡಬ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಶಿವಪ್ರಸಾದ್ (55), ಕುಟ್ರುಪ್ಪಾಡಿ ಗ್ರಾಮ, ಕಡಬ ತಾಲೂಕು. ಅವರ ಹಿರಿಯ ಮಗಳು ಶಿಲ್ಪಾ (28) 4 ತಿಂಗಳ ಹಿಂದೆ ಮನೋಜ್‌ ಎಂಬಾತನೊಂದಿಗೆ ರೆಜಿಸ್ಟರ್‌ ಮದುವೆಯಾಗಿದ್ದಳು. ಮದುವೆಯ ನಂತರ ದಂಪತಿ ರಾಮಕುಂಜ ಗ್ರಾಮದಲ್ಲಿ ವಾಸವಿದ್ದು, ಶಿಲ್ಪಾ ಕೆಲಸಕ್ಕೆ ಕಡಬಕ್ಕೆ ಬರುತ್ತಿದ್ದಳು. 08.01.2026 ರಂದು ಸಂಜೆ ಶಿಲ್ಪಾ ವಿಷ ಸೇವಿಸಿದ್ದಾಗಿ ಮಾಹಿತಿ ಬಂದಿದ್ದು, ಚಿಕಿತ್ಸೆಗೆ ಕಡಬ ಸರಕಾರಿ ಆಸ್ಪತ್ರೆ, ವೆನ್ಲಾಕ್‌ ಹಾಗೂ ಎನೆಪೋಯ

ಶ್ರೀ ಗುರುಪರಾಶಕ್ತಿ ಮಠ, ಮರಕಡ ಮಡ್ಯಾರು ಕ್ಷೇತ್ರದಲ್ಲಿ ಸೋಮವಾರ ಮಹಾ ಆರಾಧನೋತ್ಸವ

ಮಂಗಳೂರು: ಮಡುಗಟ್ಟಿದ ಹೃದಯದೊಳಗೆ ‘ತಾಯಿ’ಋ ಎಂಬ ಎರಡಕ್ಷರದಿ ನಿತ್ಯ ಸಂಚಲನ ಮೂಡಿಸಿ, ಭಾವ ಪರವಶತೆಯ ಉತ್ತುಂಗತೆಯತ್ತ ಕೊಂಡೊಯ್ದು,ಅನಂತತೆಯ ಹೂರಣವೇ ತಾನಾದರೂ ನಮ್ಮನೊಡನಾಡಿಗಳಾಗಿಸಿ, ಮಾಯಾತೀತನೇ ತಾನಾಗಿ ಮಾಯೆಯೊಳಗಿನ ಸೊಗಡ ಬಿತ್ತರಿಸಿ, ಸಂಘತ್ವದೊಳಗೆ ನಿತ್ಯ ನಿರಂತರ ಪ್ರೀತಿಯ ಹೊನಲನ್ನೇ ಹರಿಸಿದ ಸ್ವಾಮಿ,ಆರಾಧ್ಯ ದೈವತ ಪರಮಪೂಜ್ಯ ಶ್ರೀ ಶ್ರೀ ನರೇಂದ್ರನಾಥ ಯೋಗೇಶ್ವರೇಶ್ವರ ಮಹಾಸ್ವಾಮಿಯವರ ದಿವ್ಯ ಸಾನಿಧ್ಯ ನೆಲೆಗೊಂಡಿರುವ ಮಡ್ಯಾರು ಶ್ರೀ

ಬಂಟ್ವಾಳ: ಅಪಘಾತದಲ್ಲಿ ಅಯ್ಯಪ್ಪ ವೃತಧಾರಿ ಬಾಲಕ ಮೃತ್ಯು

ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸು ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ಅಯ್ಯಪ್ಪ ವೃತಧಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಷ್ಮೀಶ ಪೂಜಾರಿ(15) ಅಪಘಾತದಲ್ಲಿ ಮೃತಪಟ್ಟ ಬಾಲಕ.ಕುರಿಯಾಳ ಗ್ರಾಮದ ದುರ್ಗಾನಗರ ನಿವಾಸಿಗಳಾದ ಅಶೋಕ್ ಪೂಜಾರಿ,

ಶಿರಾಡಿ: ಮದ್ಯಪಾನ ವ್ಯಸನ ವ್ಯಕ್ತಿ ಪ್ಲಾಸ್ಟಿಕ್ ಬೆಲ್ಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

ನೆಲ್ಯಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಬರೆಮೇಲು ಎಂಬಲ್ಲಿ ಅಮಲು ಪದಾರ್ಥಗಳ ವ್ಯಸನಕ್ಕೆ ಮತ್ತೊಂದು ಜೀವ ಬಲಿಯಾದ ದುರ್ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ವಿಪರೀತ ಮದ್ಯಪಾನ ಹಾಗೂ ಅಮಲು ಪದಾರ್ಥ ಸೇವನೆಯ ಚಟಕ್ಕೆ ಒಳಗಾಗಿದ್ದ ಮಂಜು ನಾಯ್ಕ (49) ಎಂಬವರು ಪ್ಲಾಸ್ಟಿಕ್ ಬೆಲ್ಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಂಜು ನಾಯ್ಕ ಅವರು ಮನೆಯ ಮೇಲ್ಭಾಗದ ಸಿಮೆಂಟ್ ಕಿಟಕಿಯ ತೂತಿಗೆ ಪ್ಲಾಸ್ಟಿಕ್ ಬೆಲ್ಟ್‌ನ ಒಂದು ತುದಿಯನ್ನು ಕಟ್ಟಿ,