Home Blog Left SidebarPage 218

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿಲ್ಲ, ಅಲ್ಟ್ರಾ ಎಕ್ಸ್ಟ್ರೀಮ್ ಎಡಪಂಥೀಯರು ಆಡಳಿತ ನಡೆಸುತ್ತಿದ್ದಾರೆ : ಉಡುಪಿಯಲ್ಲಿ ಬಿ.ಎಲ್ ಸಂತೋಷ್ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿಲ್ಲ. ಅಲ್ಟ್ರಾ ಎಕ್ಸ್ಟ್ರೀಮ್ ಎಡಪಂಥೀಯರು ಆಡಳಿತ ನಡೆಸುತ್ತಿದ್ದಾರೆ. ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಸಮಿತಿಯಲ್ಲಿ ಹಿಂದು ವಿರೋಧಿಗಳನ್ನೇ ತುಂಬಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಹೋಟೆಲ್ ಕಿದಿಯೂರಿನ

ಮಂಗಳೂರು : ಶ್ಯಾಮಲಾ ಎಜುಕೇಶನ್ ಟ್ರಸ್ಟ್‌ನ ಶ್ಯಾಮ್ ಇನ್‌ಸ್ಟಿಟ್ಯೂಟ್ ಉದ್ಘಾಟನೆ

ಶ್ಯಾಮಲಾ ಎಜುಕೇಶನ್ ಟ್ರಸ್ಟ್‌ನ ಶ್ಯಾಮ್ ಇನ್‌ಸ್ಟಿಟ್ಯೂಟ್ ಕಂಕನಾಡಿಯ ಮಂಗಳೂರು ಗೇಟ್ ಕಾಂಪ್ಲೆಕ್ಸ್ ಪಕ್ಕದ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಎಸೆಸೆಲ್ಸಿ, ಪಿಯುಸಿ, ಪದವಿಯಲ್ಲಿ ಉತ್ತೀರ್ಣ ಮತ್ತು ಅನುತ್ತೀರ್ಣ ಶಿಕ್ಷಣವನ್ನು ಅರ್ಧದಲ್ಲಿ ತೊರೆದ ವಿದ್ಯಾರ್ಥಿಗಳಿಗೆ ವಾಯುಮಾನ ಕ್ಷೇತ್ರದಲ್ಲಿ ಕೌಶಲ ಅಭಿವೃದ್ಧಿ ಉದ್ಯೋಗ ಅಧಾರಿತ ಕೋರ್ಸ್‌ಗಳೊಂದಿಗೆ ಉದ್ಯೋವಕಾಶವನ್ನು ಒದಗಿಸುವ ಧ್ಯೈಯವನ್ನು ಇಟ್ಟುಕೊಂಡು ಶ್ಯಾಮ್ ಶಿಕ್ಷಣ ಸಂಸ್ಥೆ ಸ್ಥಾಪನೆಗೊಂಡಿದೆ. ನೂತನ ಶಿಕ್ಷಣ

ತುಂಬೆ : ಗ್ಯಾಸ್ ಟ್ಯಾಂಕರ್ ಪಲ್ಟಿ, ತಪ್ಪಿದ ಭಾರೀ ಅನಾಹುತ

ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೆÇಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

ಪಡುಬಿದ್ರಿ: ಎರಡು ತಂಡಗಳ ಮಧ್ಯೆ ವಾಗ್ವಾದ – ಚೂರಿಯಿಂದ ಇರಿತ

ಕೆಲ ಸಮಯದ ವಿರಾಮದ ಬಳಿಕ ಮತ್ತೆ ತಂಡಗಳ ಮಧ್ಯೆ ವಾಗ್ವಾದ ನಡೆದು ಚೂರಿಯಿಂದ ಇರಿದ ಘಟನೆ ತಡರಾತ್ರಿ ಪಡುಬಿದ್ರಿ ಪೇಟೆ ಸಮೀಪದ ದುರ್ಗಾ ಜುವ್ಯೆಲ್ಲರಿ ಬಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.ಸೂರಜ್, ಶರತ್, ತನುಜ್, ಅನೀಷ್ ಆರೋಪಿಗಳು.ಚೂರಿ ಇರಿತಕ್ಕೊಳಗಾದವರು ಸುಜಿತ್, ಗಾಯಾಳುವಿನ ಸಹೋದರ ಅಜಿತ್ ಹಾಗೂ ಸ್ನೇಹಿತ ಕರಣ್ ರೊಂದಿಗೆ ಪಕ್ಕದ ಪ್ರಣವ್ ಎಂಬವರ ಹೋಟೆಲ್ ಗೆ ಬಂದಿದ್ದು, ರಸ್ತೆಯಂಚಿನಲ್ಲಿ ಕಾರು ಇಲ್ಲಿಸಿದ್ದು , ಇನೋವ ಕಾರಿನಲ್ಲಿ ಸ್ಥಳಕ್ಕೆ ಬಂದ ಆರೋಪಿಗಳು

ಶಿವ ಮಂದಿರ ಒಡೆಯಲು ದಿಲ್ಲಿ ಹೈಕೋರ್ಟ್ ಆದೇಶ

ಯಮುನಾ ನದಿಯ ದಡದಲ್ಲಿ ತಾಜ್ ಎನ್‍ಕ್ಲೇವ್ ಗೀತಾ ಕಾಲೋನಿಯಲ್ಲಿ ಅಕ್ರಮವಾಗಿ ಕಟ್ಟಿರುವ ಶಿವ ಮಂದಿರವನ್ನು ಕೆಡವಲು ದಿಲ್ಲಿ ಉಚ್ಚ ನ್ಯಾಯಾಲಯವು ಕಟ್ಟಳೆ ಇಟ್ಟಿತು. ಯಮುನಾ ನದಿಯ ದಡದಲ್ಲಿನ ಅಕ್ರಮ ಕಟ್ಟುಗೆಗಳನ್ನು ತೆರವುಗೊಳಿಸಿದರೆ ಶಿವನೂ ಸಂತೋಷ ಪಡುತ್ತಾನೆ. ಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ. ನಮಗೆ ಶಿವನ ರಕ್ಷಣೆ ಆಶೀರ್ವಾದ ಬೇಕು ಅಷ್ಟೆ. ಮೊದಲು ಅಕ್ರಮ ಕಟ್ಟಡಗಳು ತೆರವಾಗಲಿ ಎಂದು ದಿಲ್ಲಿ ಉಚ್ಚ ನ್ಯಾಯಾಲಯದ ಜಸ್ಟಿಸ್ ಧರ್ಮೇಶ್ ಶರ್ಮಾ ಮಂದಿರ ಒಡೆಯಲು

ಮ್ಯೂನಿಕ್‍ನಿಂದ ವಾಪಾಸು ಬಂದ ಸಂಸದ ಪ್ರಜ್ವಲ್ : ಕೋರ್ಟಿಗೆ ಹಾಜರುಪಡಿಸಿ ವಶಕ್ಕೆ ಪಡೆಯುವ ಪ್ರಕ್ರಿಯೆ

ಜರ್ಮನಿಯ ಮ್ಯೂನಿಕ್‍ನಿಂದ ಹಿಂತಿರುಗಿದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಶುಕ್ರವಾರ ಆರಂಭವಾದ ಗಂಟೆ 12.50 ನಿಮಿಷಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದರು. ಸಿಐಎಸ್‍ಎಫ್- ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಮತ್ತು ವಲಸೆ ಅಧಿಕಾರಿಗಳ ನೆರವಿನಿಂದ ವಿಮಾನದಿಂದ ಇಳಿದು ಬರುವಾಗಲೆ ಎಸ್‍ಐಟಿ- ವಿಶೇಷ ತನಿಖಾ ದಳದವರು ಪ್ರಜ್ವಲ್‍ರನ್ನು ಬಂಧಿಸಿದರು. ಪಕ್ಕದ ಭದ್ರತಾ ಕೊಠಡಿಗೆ

ಶಿವಮೊಗ್ಗ: ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಭರ್ಜರಿ ಪ್ರಚಾರ

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಅವರು ಶಿವಮೊಗ್ಗದ ವಿವಿಧೆಡೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದರು. ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಖ್ಯಾತ ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರು ಹಾಗೂ ಸೇವಾ ಮನೋಭಾವನೆಯುಳ್ಳ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದಾರೆ.

ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ : ವಿಧಾನ ಪರಿಷತ್ ಸದಸ್ಯ ಪ್ರತಾಪ್‍ಸಿಂಹ ನಾಯಕ್ ಹೇಳಿಕೆ

ಬಂಟ್ವಾಳ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದ್ದು ಮುಂದೆ ನಡೆಯುವ ವಿಧಾನ ಪರಿಷತ್ ಚುನಾವಣೆ ಸರಕಾರದ ಬಗ್ಗೆ ಜನಾಭಿಪ್ರಾಯ ತಿಳಿಸುವ ಚುನಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ವ್ಯಾಖ್ಯಾನಿಸಿದರು. ಅವರು ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್‍ನ ಚುನಾವಣೆಯ ಮೌಲ್ಯಮಾಪನವನ್ನು ಮಾಡಲಿದ್ದು

ಅಡಿಕೆ ಅಡಮಾನ ಯೋಜನೆಗೆ ಸಂಕಷ್ಟ, ಪುತ್ತೂರು ಎಪಿಎಂಸಿ ಆಡಳಿತ ಸುಧಾರಣೆಗೆ ತಕ್ಷಣ ಕ್ರಮ : ತಹಶೀಲ್ದಾರ್ ಕುಂಞ ಅಹಮ್ಮದ್ ಹೇಳಿಕೆ

ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ರೈತರಿಗೆ ನೀಡಲಾಗುವ ಅಡಕೆ ಅಡಮಾನ ಯೋಜನೆಗೆ ಪ್ರಸ್ತುತ ಕಂಟಕವೊಂದು ನಿರ್ಮಾಣವಾಗಿದೆ. ಪುತ್ತೂರು ಎಪಿಎಂಸಿಯಲ್ಲಿ ಆಡಳಿತ ಮಂಡಳಿ ಇಲ್ಲ. ಹಾಗಾಗಿ ಇಲ್ಲಿ ಅಧಿಕಾರಿಗಳ ಕಾರುಬಾರು. ಹಲವು ವರ್ಷಗಳಿಂದ ಪುತ್ತೂರು ಎಪಿಎಂಸಿಗೆ ಕಾರ್ಯದರ್ಶಿಯೇ ಇರಲಿಲ್ಲ. ಇದೀಗ ಹಲವು ಸಮಯದ ಹಿಂದೆ ಕಾರ್ಯದರ್ಶಿ ಹುದ್ದೆಗೆ ಖಾಯಂ ಅಧಿಕಾರಿಯೊಬ್ಬರು ಬಂದಿದ್ದಾರೆ. ಆದರೆ ಆಡಳಿತ ವ್ಯವಸ್ಥೆ ಇಲ್ಲದ ಕಾರಣ ಪುತ್ತೂರು ತಹಶೀಲ್ದಾರ್ ಕುಂಞ

ಮೀನುಗಾರಿಕೆಗೆಂದು ಹಾಕಿದ್ದ ಬಲೆಗೆ ಹಾನಿ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಸಮುದ್ರವೂ ಪ್ರಕ್ಷುಬ್ದಗೊಂಡಿದ್ದು, ದೊಡ್ಡ ದೊಡ್ಡ ಸಮುದ್ರದ ಅಲೆಗಳು ದಡಕ್ಕಪ್ಪಳಿಸುತ್ತಿದ್ದು, ಮೊಗವೀರಪಟ್ಟಣದಲ್ಲಿ ಮೀನುಗಾರಿಕೆಗೆಂದು ಹಾಕಿದ್ದ ಬಲೆ ಕಡಲ್ಕೊರೆತದ ಶಾಶ್ವತ ಕಾಮಗಾರಿಯ ಕಲ್ಲಿಗೆ ಸಿಲುಕಿ ಹಾನಿಯಾಗಿದೆ. ಕಳೆದ ಕೆಲವು ದಿನಗಳಿಂದ ಸಮುದ್ರ ಪ್ರಕ್ಷುಬ್ದಗೊಂಡಿತ್ತು. ಈ ನಡುವೆ ಸ್ಥಳೀಯ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಲಿದ್ದ ಕೆಲವು ದೋನಿಗಳು ಸಮುದ್ರದ ಅಲೆಗಳ ಕಾರಣದಿಂದ ಸಮುದ್ರದದ ದಡಕ್ಕೆ