ರಥ ಯಾತ್ರೆಯ ಮೂಲಕ ಬಿಜೆಪಿಯನ್ನು ರಾಷ್ಟ್ರ ಮಟ್ಟಕ್ಕೆ ಏರಿಸಿದ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಲ್ಲುತ್ತಿರುವುದಾಗಿ ಇಂದು ಪ್ರಧಾನಿ ಮೋದಿಯವರು ಅಡ್ವಾಣಿಯವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ತಿಳಿಸಿದರು.ರಾಮ ಮಂದಿರ ಹೋರಾಟದ ಮುಖ್ಯ ರೂವಾರಿಯಾಗಿದ್ದರು ಅಡ್ವಾಣಿ. 1977ರ ಜನತಾ ಸರಕಾರದಲ್ಲಿ ಮತ್ತು ವಾಜಪೇಯಿಯವರ ಸಂಪುಟದಲ್ಲಿ
ತಮಿಳು ನಟ ವಿಜಯ್ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಆ ಹೆಸರಿನ ಅರ್ಥ ತಮಿಳುನಾಡು ವಿಜಯ ಸಂಘಟನೆ. ವಿಜಯ್ ಎಂದರೆ ಗೆಲುವು, ವೆಟ್ರಿ ಎಂದೇ ಅರ್ಥ. ನಟಿಸುತ್ತಿರುವ ಎರಡು ಸಿನಿಮಾ ಮುಗಿಸಿ ಚಿತ್ರ ರಂಗಕ್ಕೆ ವಿದಾಯ ಹೇಳುವುದಾಗಿ ಸಹ ವಿಜಯ್ ಹೇಳಿದ್ದಾರೆ. ಕ್ರಿಶ್ಚಿಯನ್ ತಂದೆ ಎಸ್. ಎ. ಚಂದ್ರಶೇಖರ್, ಹಿಂದೂ ತಾಯಿ ಶೋಭಾ ಪುತ್ರ ವಿಜಯ್ರ ಮಡದಿ ಶ್ರೀಲಂಕಾ ತಮಿಳದಿ. ಹುಟ್ಟು ಹೆಸರು ಜೋಸೆಫ್ ವಿಜಯ್ ಚಂದ್ರಶೇಖರ್. ವಿಜಯ್ ರಾಜಕೀಯ ಪಕ್ಷ
ಬಜಪೆ: ಗುರುಪುರ ಫಲ್ಗುಣಿ ನದಿಯ ಸೇತುವೆ ಸಮೀಪದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ ( 27) ಎಂದು ತಿಳಿದು ಬಂದಿದೆ. ಗುರುವಾರ ಸಂಜೆಯಿಂದ ಗುರುಪುರ ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್ ವೊಂದು ನಿಲ್ಲಿಸಿವ ಕುರಿತು ಬಜ್ಪೆ ಪೊಲೀಸರಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬೈಕ್ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದಾಗ
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ಜಿಲ್ಲೆಯ ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ರಾಘವೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ವಾಸು ಪೂಜಾರಿ,ಗಣೇಶ್ ಪೂಜಾರಿ,ಉಪಾಧ್ಯಕ್ಷರಾದ ಸತೀಶ್
ಚುನಾವಣಾ ಪೂರ್ವ ಮಧ್ಯಾವಧಿ ಆಯವ್ಯಯ ಮಂಡನೆ ಆಗಿದೆ. ಸಂಸದ ಶಶಿ ತರೂರ್ ಪ್ರಕಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಅಂಕಿ ಅಂಶಗಳಿಗಿಂತ ಹೆಚ್ಚಾಗಿ ಗಿಲೀಟಿನ ಮಾಮೂಲಿ ಶಬ್ದಗಳದ್ದಾಗಿದೆ. ಈ ಮಾತನ್ನು ನಿರ್ಮಲಾರ ಗಂಡ ಪರಕಾಲ ಪ್ರಭಾಕರ್ ಅವರು ಬಿಜೆಪಿ ಸರಕಾರದ ಒಟ್ಟಾರೆ ಶಬ್ದಗಳ ಕಸರತ್ತು ಗಮನಿಸಿ ಹಿಂದೆಯೇ ಟೀಕಿಸಿದ್ದಾರೆ. ಬಜೆಟ್ ಮಂಡನೆ ವೇಳೆ ಸಂಸದರ ಹಾಜರಾತಿ ಕಡಿಮೆ ಇತ್ತು. ಗ್ಯಾಲರಿಯಲ್ಲಿ ನಿರ್ಮಲಾರ ಮಗಳು ವಂಗಮಯಿ ಪರಕಾಲ ಕುಳಿತಿದ್ದರು.
ಪುತ್ತೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸುಧೀರ್ಘ 33 ವರ್ಷ ಸೇವೆ ಸಲ್ಲಿಸಿದ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ವಿದ್ಯಾಧರ ಎನ್. ನಿವೃತ್ತಿ ಹೊಂದಿ ಫೆ. 3 ರಂದು ಹುಟ್ಟೂರಿಗೆ ಆಗಮಿಸುತ್ತಿದ್ದಾರೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ದಿ. ಮಹಾಲಿಂಗ ಪಾಟಾಳಿ ಮತ್ತು ಗಿರಿಜಾ ದಂಪತಿ ಪುತ್ರನಾದ ವಿದ್ಯಾಧರ ಎನ್. ಅವರು ಪ್ರಾಥಮಿಕ ಶಿಕ್ಷಣವನ್ನು ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢಶಿಕ್ಷಣವನ್ನು ಶ್ರೀ
ಉಳ್ಳಾಲ: ಮೇಲ್ತೆನೆ’ ಸಂಘಟನೆ ಪ್ರಕಟಿಸಿದ ಕವಿ ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಉಳ್ಳಾಲ ಪ್ರೆಸ್ಕ್ಲಬ್ನಲ್ಲಿ ನಡೆಯಿತು. ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸ್ಥಾಪಕಾಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನ ಬಿಡುಗಡೆಗೊಸಿದರು. ಬಳಿಕ ಮಾತನಾಡಿದ ಅವರು, ಪ್ರಸಕ್ತ ದಿನಗಳಲ್ಲಿ ಅಧಿಕ
ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ನಾಪತ್ತೆಯಾದವರು. ಕೊಣಾಜೆ ಕಕ್ಕೆಮಜಲು ನಿವಾಸಿ ಕುಟುಂಬವೊಂದು ಅನಾರೋಗ್ಯದಲ್ಲಿರುವ ಪ್ರಾಯಸ್ತರನ್ನು ನೋಡಿಕೊಳ್ಳಲು ಖಾಸಗಿ ಏಜೆನ್ಸಿ ಮೂಲಕ ಕೆಲಸಕ್ಕೆ ಇಟ್ಟುಕೊಂಡಿದ್ದು, ತಿಂಗಳಿಗೆ 20,000 ರೂ ಏಜೆನ್ಸಿಗೆ ಪಾವತಿಸುತ್ತಿದ್ದರು. ಫೆ.1 ರಂದು ಸಂಜೆ 3 ಕ್ಕೆ ಮನೆಯಿಂದ ಹೊರಹೋದಾಕೆ ನಂತರ
ಸುಳ್ಯದ ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ ವತಿಯಿಂದ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರನ್ನು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಇವರು ಮೈಸೂರು ಪೇಟ ತೊಡಿಸಿ ಶಾಲು, ಹಾರ ಮತ್ತು ಸ್ಮರಣಿಕೆ, ತೆಕ್ಕಿಲ್ ದಶದೀವಿಕೆ ಹಾಗು ಬೆಳಕಿನೆಡೆಗೆ 10 ಮುಸ್ಲಿಂ ಕತೆಗಳ ಪುಸ್ತಕ ನೀಡಿ ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ಇವರು ಶಾಲೆಯ ಶಿಕ್ಷಕ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರು ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕ ಮೋಹಿಯುದ್ದಿನ್ ಜುಮಾ ಮಸೀದಿಗೆ ಭೇಟಿ ನೀಡಿ ಮಸೀದಿ ಇತಿಹಾಸ ಕೇಳಿ ಹಳೆಯ ಮಸೀದಿ ಮತ್ತು ಪೇರಡ್ಕ ದರ್ಗಾದ ಬಗ್ಗೆ ಸಂತಸ ವ್ಯಕ್ತಪಡಿಸಿ ಈ ಭಾಗದಲ್ಲಿ ಮುಸ್ಲಿಮರು ಮಸೀದಿ ಹಾಗೂ ದರ್ಗಾದಲ್ಲಿ ಭಯ ಭಕ್ತಿ ಶಿಸ್ತು ಉಳ್ಳವರು ಹಾಗೂ ಧಾರ್ಮಿಕ ತಿಳುವಳಿಕೆ ಉಳ್ಳವರು ಎಂದು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪೇರಡ್ಕ ಜುಮಾ ಮಸೀದಿ ಅಧ್ಯಕ್ಷರಾದ ಟಿ. ಎಂ




























