Home Blog Left SidebarPage 305

ದೆಹಲಿ: ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ಚಿಂತನ್ ಎಸ್. ಶೆಟ್ಟಿಗೆ 1 ಚಿನ್ನ, 4 ಬೆಳ್ಳಿ ಪದಕ

ದೆಹಲಿಯಲ್ಲಿ ನಡೆದ 67ನೇ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2023-24ರ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್‌ನ ಚಿಂತನ್ ಎಸ್. ಶೆಟ್ಟಿ ಅವರು, 1 ಚಿನ್ನ ಹಾಗೂ 4 ಬೆಳ್ಳಿ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜನವರಿ 3ರಿಂದ 9ರ ವರೆಗೆ ದೆಹಲಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಈಜು

ಬಂಟ್ವಾಳ: ಮನೆಯೊಂದಕ್ಕೆ ನುಗ್ಗಿ ನಗ, ನಗದು ದರೋಡೆ

ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಘಟನೆ ಶುಕ್ರವಾರ ಮುಂಜಾನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಮಾತ್ರ ಇದ್ದು ಇದ್ದು, ಕಪಾಟಿನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ

ಪುತ್ತೂರು: ಅಂದ್ರಟ್ಟ ಸೇತುವೆ ಕಾಮಗಾರಿಗೆ ಎರೆಡೆರಡು ಬಾರಿ ಶಿಲಾನ್ಯಾಸ

ಪುತ್ತೂರು: ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ಅಂದ್ರಟ್ಟದ ಸಂಪರ್ಕ ಸೇತುವೆಗೆ 2023 ರ ಮಾರ್ಚ್ 19ರಂದು ಆಗಿನ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದ್ದರು. ಇದೀಗ ಅದೇ ಕಾಮಗಾರಿಗೆ ಈಗಿನ ಶಾಸಕ ಅಶೋಕ್ ಕುಮಾರ್ ರೈ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ ಎಂದು ಶಾಂತಿಗೋಡು ಶಕ್ತಿ ಕೇಂದ್ರದ ಅಧ್ಯಕ್ಷ ಶ್ಯಾಂ ಭಟ್ ಮತ್ತು ಚಿಕ್ಕಮುಡ್ನೂರು ಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದ್ರಟ್ಟದಲ್ಲಿ 2ನೇ

ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ನುಡಿನಮನ

ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ವತಿಯಿಂದ ಇತ್ತೀಚೆಗೆ ನಿಧನರಾದ ಪ್ರೊ.ಅಮೃತ ಸೋಮೇಶ್ವರರವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಹಾಗೂ ಸಮಿತಿಯ ಸ್ವಾಗತಾಧ್ಯಕ್ಷ ಕೆ.ಜಯರಾಮ ಶೆಟ್ಟಿ ಮಾತನಾಡಿ, ಅಮೃತರು ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದರು. ಸಾಹಿತ್ಯ ಲೋಕದ ದಿಗ್ಗಜರೂ, ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಹಾಗೂ ಸಮಿತಿಯ ಗೌರವ ಸಲಹೆಗಾರರಾಗಿದ್ದು ಸಮಿತಿಗೆ ಮಾರ್ಗದರ್ಶಕರಾಗಿದ್ದರು ಎಂದು ಹೇಳಿದರು. ಸಮಿತಿಯ ಅಧ್ಯಕ್ಷರಾದ ದಿನಕರ

ವಿಟ್ಲ: ಜ.13ರಂದು ಕನ್ಯಾನ ದೇಲಂತಬೆಟ್ಟು ಶಾಲೆಯ ಅಮೃತ ಮಹೋತ್ಸವ

ಕನ್ಯಾನ ಗ್ರಾಮದ ದೇಲಂತಬೆಟ್ಟು ದ.ಕ.ಜಿ.ಪಂ.ಉನ್ನತ ಹಿ.ಪ್ರಾ.ಶಾಲೆಯ ಅಮೃತ ಮಹೋತ್ಸವ ಸಮಾರಂಭ ಅಮೃತ ಸಿಂಚನ ಕಾರ್ಯಕ್ರಮ ಜ.13ರಂದು ನಡೆಯಲಿದೆ. 1948 ಜೂ.1ರಂದು ಆರಂಭವಾದ ಈ ಶಾಲೆಗೆ 75 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಅಮೃತ ಮಹೋತ್ಸವ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ಜತೆಗೂಡಿ ಅಮೃತ ಮಹೋತ್ಸವವವನ್ನು ಆಚರಿಸಲಿದೆ ಎಂದು ಅಧ್ಯಕ್ಷ ಡಿ.ಶ್ರೀನಿವಾಸ್ ಹೇಳಿದರು.ಅವರು ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.13ರಂದು ಬೆಳಗ್ಗೆ 9 ಗಂಟೆಗೆ

ಉಡುಪಿ: ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷರಾಗಿ ಡಾ. ಗಣೇಶ್ ಗಂಗೊಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆ

ಉಡುಪಿ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಆಕಾಶವಾಣಿ ಮತ್ತು ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಹಾಗೂ ಜಿಲ್ಲಾ ಪ್ರದಾನ ಕಾರ್ಯದರ್ಶಿಯಾಗಿ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ. ಕನ್ನಡ ಜಾನಪದ ಪರಿಷತ್ ರಾಜ್ಯ ಸಮಿತಿಯ ನಿರ್ಣಯದಂತೆ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಅವರು ಉಡುಪಿ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಆದೇಶ ನೀಡಿರುತ್ತಾರೆ. ಕಾರ್ಯಾಧ್ಯಕ್ಷರಾಗಿ ಉದಯಕುಮಾರ್ ಬಿ ಹೈಕಾಡಿ, ಖಜಾಂಚಿಯಾಗಿ ಸ್ಮಿತಾ

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶ್ರೀಶೈಲೇಂದ್ರ ಸುವರ್ಣ

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಮಂಗಳೂರಿನಲ್ಲಿ ನಡೆಯಿತು. ಫೆಬ್ರವರಿ ತಾರೀಕು 25 ರಿಂದ 28 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಬೇಕಾದರೆ ಆಮಂತ್ರಣ ಪತ್ರಿಕೆಯನ್ನು ಪ್ರತಿಯೊಂದು ಕ್ಷೇತ್ರಕ್ಕೂ ಕಳುಹಿಸಿಕೊಡಬೇಕು ಎಂಬುದಾಗಿ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಈ ಸಮಯದಲ್ಲಿ ಪ್ರತಿಷ್ಠಿತ ಕಂಪೆನಿಯಾದ ಎಸ್.ಆರ್.ಆರ್ ಮಸಾಲೆಯ ಮಾಲಕರಾದ ಶ್ರೀಶೈಲೇಂದ್ರ ಸುವರ್ಣ ರವರನ್ನು ಸಮಿತಿಯ

ಮಂಗಳೂರು: ಟೋನಿ & ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್‌ಲೇಟ್ ಶುಭಾರಂಭ

ಹೆವನ್ ರೋಸ್‌ನ ಮಾಲಕರಾದ ಮುಸ್ತಫಾ ಪ್ರೇಮಿ ಅವರ ಫ್ರಾಂಚೈಸ್‌ಯ ಟೋನಿ ಆಂಡ್ ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್ ಲೇಟ್‌ನ ಮಂಗಳೂರಿನ ಸಿಟಿಸೆಂಟರ್‌ನ ಮೂರನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ಈಗಾಗಲೇ ವಿವಿಧ ಕಡೆಗಳಲ್ಲಿ ಗ್ರಾಹಕರಿಗೆ ಸೇವೆಯನ್ನು ನೀಡಿ, ಗ್ರಾಹಕರ ಮೆಚ್ಚುಗೆ ಪಾತ್ರವಾಗಿರುವ ಹೆವನ್ ರೋಸ್‌ನ ಮಾಲಕರಾದ ಮುಸ್ತಫಾ ಪ್ರೇಮಿ ಅವರ ಫ್ರಾಂಚೈಸ್‌ಯ ಟೋನಿ ಆಂಡ್ ಗೈ ಹೇರ್ ಡ್ರೆಸ್ಸಿಂಗ್‌ನ ನೂತನ ಔಟ್ ಲೇಟ್ ಉದ್ಘಾಟನೆಗೊಂಡಿತು. ಮುಸ್ತಫಾ ಪ್ರೇಮಿಯ ಅವರ ತಂದೆ

ಪೆರುವಾಜೆ: ಶ್ರೀ ಜಲದುರ್ಗಾದೇವಿ ದೇವರ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ

ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರ ತನಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ದಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಸದಸ್ಯರಾದ

ಮಂಜೇಶ್ವರ: ಶ್ರೀಮತ್ ಅನಂತೇಶ್ವರ ಹೈಯರ್ ಸೆಕೆಂಡರಿ ಶಾಲೆ ವಿದ್ಯಾರ್ಥಿನಿ ಅಪರ್ಣಾಳ ಸಾಧನೆ

ಮಂಜೇಶ್ವರದ ಶ್ರೀಮತ್ ಅನಂತೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅಪರ್ಣಾ .ಪಿ ಅವರು ಕೊಲ್ಲಂನಲ್ಲಿ ಜರುಗಿದ ಕೇರಳ ಶಾಲಾ ಕಲೋತ್ಸವದಲ್ಲಿ ಕಥಕ್ಕಳಿ ಸಂಗೀತ ಹುಡುಗಿಯರ ವಿಭಾಗದಲ್ಲಿ, ಇಂಗ್ಲೀಷ್ ಕಥಾರಚನೆಯಲ್ಲಿ ಎ ಗ್ರೇಡ್ ನೊಂದಿಗೆ ಶಾಲೆಗೆ ಹಾಗೂ ಕಾಸರಗೋಡು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾಳೆ. ಸತತ ಪ್ರಯತ್ನ, ಕಲಿಯಬೇಕೆಂಬ ಹಠ, ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮಲಯಾಳಂ ಕಥಕ್ಕಳಿ ಸಂಗೀತವನ್ನು ನಿರರ್ಗಳವಾಗಿ ಹಾಡಿ